ಮಂಗಳೂರು ಮೆಸ್ಕಾಂ ಇಂಜಿನಿಯರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Wednesday, January 31st, 2024
Shanthakumar

ಮಂಗಳೂರು: ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದಡಿ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಐದಾರು ವರ್ಷಗಳಿಂದ ಅತ್ತಾವರ ವಿಭಾಗದ ಮೆಸ್ಕಾಂ ಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್‌ ಮೃತ್ಯು

Friday, January 5th, 2024
Raghu-MR

ಕಡಬ : ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಮೃತರು ಎಂದು ಗುರುತಿಸಲಾಗಿದೆ. ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೋಲಿಸರು […]

ಮೆಸ್ಕಾಂ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ

Wednesday, March 16th, 2022
ACB

ಮಂಗಳೂರು  : ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮಂಗಳೂರಿನ ಮಲ್ಲಿಕಟ್ಟೆ ಬಳಿಯ ಮನೆ ಮತ್ತು ಕುಲಶೇಖರ ಕಚೇರಿ ಮೇಲೆ ದಾಳಿ ನಡೆದಿದೆ. ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಸಂಪತ್ತು ಹೊಂದಿರುವ ಆರೋಪದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ಮೆಸ್ಕಾಂ ಸಹಾಯವಾಣಿ 1912

Wednesday, November 3rd, 2021
Mescom 2021 Diwali

ಜಿಲ್ಲೆಯ ಹಲವೆಡೆ ಪೆಟ್ರೋಲ್ ಬಂಕ್ ಕಳವು​​​​ ಮಾಡುತ್ತಿದ್ದ ಮೂವರ ಬಂಧನ

Saturday, October 3rd, 2020
Petrol Pump Robers

ಮಂಗಳೂರು : ಪಂಪ್ ವೆಲ್ ಉಜ್ಜೋಡಿಯಲ್ಲಿರುವ ಪೆಟ್ರೋಲ್ ಬಂಕ್ ಕಳವು ಸೇರಿದಂತೆ ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಕಂಕನಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕೆ. ಸಿ. ರೋಡ್ನ ಮುಹಮ್ಮದ್ ಸುಹೈಲ್ ಯಾನೆ ಅಶ್ರಫ್ (19), ಆಶಿಕ್ (19) ಮತ್ತು ಮಂಗಳೂರಿನ ಫಳ್ನೀರ್ನ ಮುಹಮ್ಮದ್ ಅರ್ಫಾನ್ (20) ಬಂಧಿತ ಆರೋಪಿಗಳು. ಬಂಧಿತರಿಂದ ನಗದು, ಮಾರಕಾಯುಧ, ಹೆಲ್ಮೆಟ್ ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸೆ.20ರ ರಾತ್ರಿ ಪಂಪ್ ವೆಲ್ ಉಜ್ಜೋಡಿಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಕಳವು ನಡೆಸಿದ್ದರು‌. ಈ […]

ಮಂಗಳೂರು ವಿದ್ಯುತ್ ಸರಬರಾಜು ನಿಗಮದ ನಿರ್ದೇಶಕಿ ಸ್ನೇಹಲ್ ಆರ್. ವರ್ಗಾವಣೆ

Thursday, September 3rd, 2020
snehal

ಮಂಗಳೂರು : ಮಂಗಳೂರು ವಿದ್ಯುತ್ ಸರಬರಾಜು ನಿಗಮ(ಮೆಸ್ಕಾಂ) ನಿರ್ದೇಶಕಿ ಸ್ನೇಹಲ್ ಆರ್. ಅವರನ್ನು ಬೆಂಗಳೂರು ಪಿಯು ಶಿಕ್ಷಣ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ವಿದ್ಯುತ್ ಸರಬರಾಜು ನಿಗಮ ನೂತನ ನಿರ್ದೇಶಕರಾಗಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಪ್ರಶಾಂತ್ ಮಿಶ್ರಾ, 2014ರಲ್ಲಿ ಐಎಎಸ್ ಉತ್ತೀರ್ಣರಾಗಿದ್ದರು. ಈ ಹಿಂದಿನ ನಿರ್ದೇಶಕಿ ಸ್ನೇಹಲ್ ಆರ್. ಅವರನ್ನು ಬೆಂಗಳೂರು ಪಿಯು ಶಿಕ್ಷಣ ನಿರ್ದೇಶಕರಾಗಿ ನೇಮಕ ಮಾಡಿ ಸರಕಾರ ಆದೇಶ ನೀಡಿದೆ. ಸ್ನೇಹಲ್, 2013ನೇ ಐಎಎಸ್ ಬ್ಯಾಚ್ ನವರಾಗಿದ್ದಾರೆ. ಸ್ನೇಹಲ್ ಅವರು ನಿರ್ದೇಶಕಿಯಾಗಿದ್ದ […]

ಮೆಸ್ಕಾಂ ನಿಂದ ವಿದ್ಯುತ್ ಬಿಲ್ಲಿನ ಬಗ್ಗೆ ಸ್ಪಷ್ಟೀಕರಣ

Friday, May 15th, 2020
Mescom

ಮಂಗಳೂರು  : ಮೇ 2020 ರ ಮಾಹೆಯಲ್ಲಿ, 2 ತಿಂಗಳ ಬಿಲ್ಲನ್ನು ಒಟ್ಟಿಗೆ ಹೆಚ್ಚಿನ ಮೊತ್ತಕ್ಕೆ ನೀಡಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿ ಬಂದಿರುತ್ತದೆ. ವಿದ್ಯುತ್ ಬಿಲ್‌ಗಳ ಬಗ್ಗೆ ಗ್ರಾಹಕರಿಗೆ ಉಂಟಾಗಿರುವ ಗೊಂದಲದ ಕುರಿತು ಕೆಳಕಂಡಂತೆ ಸ್ಪಷ್ಟೀಕರಣ ನೀಡಿದೆ. ಗ್ರಾಹಕರಿಗೆ ಬಳಕೆ ಮತ್ತು ಸ್ಲ್ಯಾಬ್ ದರಗಳನ್ನು ಮಾಸಿಕ ಬಿಲ್ಲಿಗೆ ಅನ್ವಯಿಸುವಂತೆ ಕರಾರುವಕ್ಕಾಗಿ ಹಾಗೂ ಯಾವುದೇ ಹೆಚ್ಚುವರಿ ಆಗದಂತೆ ಎರಡು ತಿಂಗಳಿಗೂ ಸಮಾನವಾಗಿ ಯುನಿಟ್ ಬಳಕೆಯನ್ನು, ಸ್ಲ್ಯಾಬ್‌ಗಳನ್ನು ದುಪ್ಪಟ್ಟುಗೊಳಿಸಿ ಕನಿಷ್ಟ ಸ್ಲ್ಯಾಬ್‌ನಿಂದ ಅನ್ವಯಿಸುವಂತೆ ಬಿಲ್ಲಿನಲ್ಲಿ ತೋರಿಸಲಾಗಿದೆ. ಕೋವಿದ್-19 ಲಾಕ್‌ಡೌನ್ ಸಮಯದಲ್ಲಿ ಬಹುತೇಕ ಜನರು […]

ವಿದ್ಯುತ್ ಬಿಲ್ ಪಾವತಿಗೆ ಒತ್ತಡ ಬೇಡ: ಮೆಸ್ಕಾಂಗೆ ಸಚಿವರ ಸೂಚನೆ

Tuesday, May 12th, 2020
corona-meeting

ಮಂಗಳೂರು :  ಜಿಲ್ಲೆಯಲ್ಲಿ ವಿದ್ಯುತ್ ಬಿಲ್‍ಗಳ ಬಗ್ಗೆ ಜನರು ಹಲವು ದೂರುಗಳನ್ನು ನೀಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮನೆ ಮತ್ತು ಸಣ್ಣ ಉದ್ಯಮಕ್ಕೆ ಕಡಿಮೆ ಸರಾಸರಿ ಇರುವ ತಿಂಗಳ ಬಿಲ್ ಆಧಾರದಲ್ಲಿ ಬಿಲ್ ನೀಡಬೇಕು . ಜೂನ್ ತಿಂಗಳಿನವರೆಗೂ ಕಡ್ಡಾಯವಾಗಿ ಬಿಲ್ ಪಾವತಿಸುವಂತೆ ಒತ್ತಡ ಹೇರುವಂತಿಲ್ಲ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತಿವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಲಾಕ್ […]

ವಿದ್ಯುತ್ ಅವಘಡದಿಂದ ಯುವಕ ಸಾವು : ತಪ್ಪಿತಸ್ಥರ ವಿರುದ್ದ ಪ್ರಕರಣ ದಾಖಲಿಸಲು ದ.ಕ.ದಲಿತ ಸೇವಾ ಸಮಿತಿ ಆಗ್ರಹ

Friday, February 14th, 2020
puttur

ಪುತ್ತೂರು : ಪೈಂಟ್ ಕೆಲಸ ಮಾಡುತ್ತಿದ್ದ ಯುವಕ ವಿದ್ಯುತ್ ಅವಘಡದಿಂದ ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೇವಲ ಗುತ್ತಿಗೆದಾರರ ವಿರುದ್ಧ ಮಾತ್ರವಲ್ಲ. ನಿರ್ಲಕ್ಷ್ಯ ವಹಿಸಿದ ಮೆಸ್ಕಾಂ ಮತ್ತು ಆಸ್ಪತ್ರೆಯ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ದ.ಕ.ದಲಿತ ಸೇವಾ ಸಮಿತಿ ಆಗ್ರಹಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ.ದಲಿತ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು , ಫೆ.6ಕ್ಕೆ ಪ್ರಗತಿ ಆಸ್ಪತ್ರೆಯಲ್ಲಿ ಪೈಂಟಿಂಗ್ ಕೆಲಸ ಮಾಡುವ ಸಮಯ ಬಪ್ಪಳಿಗೆ ದಿ.ಬಾಬು ಆದಿದ್ರಾವಿಡ ಎಂಬವರ ಪುತ್ರ ದೀಕ್ಷಿತ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿತ್ತು. ಗಂಭೀರ ಸ್ಥಿತಿಯಲ್ಲಿದ್ದ […]

ಮೆಸ್ಕಾಂ ಹೊರಗುತ್ತಿಗೆ ಗ್ಯಾಂಗ್‌ಮ್ಯಾನ್ ಗಳನ್ನು ಖಾಯಂಗೊಳಿಸುವಂತೆ ಜಯಕರ್ನಾಟಕ ಸಂಘಟನೆ ಮನವಿ

Friday, October 18th, 2019
Jayakarnataka

ಮಂಗಳೂರು : ಮೆಸ್ಕಾಂನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಗ್ಯಾಂಗ್‌ಮ್ಯಾನ್ ಗಳಿಗೆ ಕೆಲಸ ಖಾಯಂಗೊಳಿಸುವಂತೆ ಜಯಕರ್ನಾಟಕ ಸಂಘಟನೆ ಕರ್ನಾಟಕ ಸರಕಾರದ ಉಸ್ತುವಾರಿ ಸಚಿವರಿಗೆ ಗುರುವಾರ ಮಂಗಳೂರು ಜಿಲ್ಲಾಧಿಕಾರಿ ಕಛೇರಿಯ ಸಚಿವರ ಕಛೇರಿಯಲ್ಲಿ ಮನವಿ ಮಾಡಿತು. 2010 ರಿಂದ 2019 ಸೆಪ್ಟೆಂಬರ್ 30 ರ ತನಕ ಮಂಗಳೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು 679 ಗ್ಯಾಂಗ್‌ಮ್ಯಾನ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಕೆಪಿಟಿಸಿಯಲ್ ಗ್ಯಾಂಗ್‌ಮ್ಯಾನ್ ಗಳನ್ನು ಸ್ಥಳೀಯವಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಮಾಡಿದ್ದು ಕೆಲಸಗಾರರಿಗೆ ಸೇವಾಭದ್ರತೆ ಇಲ್ಲದೆ ದುಡಿಯುತ್ತಿದ್ದಾರೆ, ಅವರ ವೇತನದ ಬಗ್ಗೆ ಯಾವುದೇ […]