ಸ್ಕೂಟರ್ ಮತ್ತು ಟ್ಯಾಂಕರ್ ಡಿಕ್ಕಿ- ತಂದೆ ಮಗಳು ಸಾವು

Tuesday, September 29th, 2020
Karawar Accident

ಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಮಂಗಳವಾರ  ನಡೆದಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ. ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ವಿನೋದ್ ಕಿಂದಳಕರ್ ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳನ್ನು ಯಲ್ಲಾಪುರದಿಂದ ತಮ್ಮ […]

ಮರದ ಮೇಲಿದ್ದ ಮೃತ್ಯು ಬೈಕ್ ಮೇಲೆರಗಿದಾಗ ಏನಾಯ್ತು ನೋಡಿ

Sunday, July 15th, 2018
Yellapura accident

ಕಾರವಾರ : ರಾಷ್ಟ್ರೀಯ ಹೆದ್ದಾರಿ 63ರ ಬಿರಗದ್ದೆ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ  ಶನಿವಾರ ನಡೆದಿದೆ. ಮೃತ್ಯು ಈ ಅಮಾಯಕ ಬೈಕ್ ಸವಾರರನ್ನೇ ಕಾಯುತಿತ್ತೆನೋ. ಅಂಕೋಲಾ ತಾಲೂಕಿನ ಕನಕನಹಳ್ಳಿ ಗ್ರಾಮದ ಸುಭಾಶ್ ಚಿಪ್ಕರ್ (50) ಹಾಗೂ ನಾಗರಾಜ್ ಸಲಗಾವ್ಕರ್(25) ಯಲ್ಲಾಪುರದಿಂದ‌ ಅಂಕೋಲಾ ಕಡೆಗೆ ತೆರಳುತಿದ್ದಾಗ ಬೈಕ್ ಮೇಲೆ ಮರ ಬಿದ್ದಿದೆ.  ಸಾವು ಸಮೀಪ ವಿದ್ದರೂ ಅವರಿಗೆ […]