ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

Thursday, October 12th, 2023
ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

ಬಂಟ್ವಾಳ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ. ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

ರೈಲ್ವೆ ಹಳಿಯಲ್ಲಿ ಯುವಕನ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ

Thursday, April 15th, 2021
savanuru Rail

ಕಡಬ: ಸವಣೂರು ರೈಲ್ವೆ ಗೇಟ್ ಬಳಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಯುವಕ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಬಿ.ಸಿ.ರೋಡು ಯುವಕನ ಕೊಲೆಯತ್ನ ಪ್ರಕರಣ, ನೈಜ ಆರೋಪಿಗಳ ಪತ್ತೆಗೆ ಪೋಷಕರ ಆಗ್ರಹ

Wednesday, April 7th, 2021
Ajjibettu

ಬಂಟ್ವಾಳ:  ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಬಳಿ ಇದೇ 4ರಂದು ರಾತ್ರಿ ಸುಮಾರು 7.30 ಗಂಟೆಗೆ ಅಪರಿಚಿತ ದುಷ್ಕರ್ಮಿಗಳಿಂದ ತಲೆಗೆ ಸೇರಿದಂತೆ ಕೆನ್ನೆ ಮತ್ತು ಕೈಗಳಿಗೆ ಹರಿತವಾದ ಕತ್ತಿಯಿಂದ ಹಲ್ಲೆಗೀಡಾದ ಮನೋಜ್ ಗಾಣಿಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು, ಈ ಕೃತ್ಯದ ಹಿಂದಿರುವ ನೈಜ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು ಗಾಯಾಳುವಿನ ತಂದೆ ಭೋಜ ಸಪಲ್ಯ ಬ್ರಹ್ಮರಕೂಟ್ಲು ಇವರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ ಕಳೆದ 10 ವರ್ಷಗಳಿಂದ ವಿದೇಶದಲ್ಲಿ ಎಂಜಿನಿಯರ್ […]

ಯುವತಿಯೊಂದಿಗಿದ್ದ ಅನ್ಯ ಕೋಮಿನ ಯುವಕನಿಗೆ ಹಲ್ಲೆ : ಎಂಟು ಶಂಕಿತರು ವಶಕ್ಕೆ

Friday, April 2nd, 2021
Shashikumar

ಮಂಗಳೂರು : ಬೆಂಗಳೂರಿಗೆ ಕೆಲಸ ಹುಡುಕಲು ಅನ್ಯ ಕೋಮಿನ ಯುವಕನೊಂದಿಗೆ ಗುರುವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಯುವತಿಯೊಂದಿಗಿದ್ದ ಇದ್ದ ಯುವಕನ ಮೇಲೆ ಹಿಂದೂ ಸಂಘಟನೆಗಳು ಹಲ್ಲೆ ನಡೆಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಎನ್.ಶಶಿಕುಮಾರ್,  ಕಂಕನಾಡಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ತಡೆದು ಅದರಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,  ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 8 ಶಂಕಿತರನ್ನು ವಿಚಾರಣೆಗಾಗಿ […]

ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಲವಾರು ದಾಳಿ

Wednesday, December 16th, 2020
Tajuddin

ಮಂಗಳೂರು: ಮೂವರು ದುಷ್ಕರ್ಮಿಗಳ ತಂಡ ಯುವಕನೋರ್ವನ‌ ಮೇಲೆ ಅಡ್ಡೂರಿನಲ್ಲಿ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, ಕೈ ಸಹಿತ ವಿವಿಧೆಡೆ ಗಾಯಗಳಾಗಿವೆ. ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಗಾಯಾಳುವನ್ನು […]

ಯುವಕನ ಅಶ್ಲೀಲ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಯುವತಿಯಿಂದ ಬೆದರಿಕೆ

Friday, November 13th, 2020
Sakshi

ಮಂಗಳೂರು :  ಯುವತಿಯೊಬ್ಬಳ ಮಾತಿಗೆ ಮರುಳಾಗಿ ಮಂಗಳೂರಿನ ಯುವಕನೊಬ್ಬ ತನ್ನ ಅಶ್ಲೀಲ ಭಂಗಿಯ ಚಿತ್ರಗಳನ್ನು ಆಕೆಗೆ ಕಳುಹಿಸಿದ್ದು, ಆಕೆ ಹಣ ಕೊಡದಿದ್ದರೆ ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ . ಸಾಕ್ಷಿರಾಜ್ ಎಂಬ ಯುವತಿ ಮಂಗಳೂರಿನ ಯುವಕನೋರ್ವನಿಗೆ ಇದೇ ವರ್ಷದ ಆಗಸ್ಟ್ನಲ್ಲಿ ಪರಿಚಯವಾಗಿದ್ದಳು. ಪರಿಚಯವಾದ ಇವರಿಬ್ಬರು ಮೆಸೆಂಜರ್ನಲ್ಲಿ ಸಂಪರ್ಕದಲ್ಲಿದ್ದು, ಆಕೆ ಈತನಿಗೆ ಅಶ್ಲೀಲ ಭಂಗಿಯ ಫೋಟೊ ಕಳುಹಿಸುತ್ತಿದ್ದಳಂತೆ. ಜೊತೆಗೆ ಖರ್ಚಿಗೆಂದು ಈತನ ಬಳಿ ಹಣ ಕೇಳಿ ಫೋನ್ ಪೇ ಮೂಲಕ ಪಡೆಯುತ್ತಿದ್ದಳಂತೆ. ಇತ್ತೀಚೆಗೆ ಈಕೆ ತನ್ನದೇ ಅಶ್ಲೀಲ ಭಂಗಿಯನ್ನು […]

ಕುಕ್ಕೆ ಸುಬ್ರಹ್ಮಣ್ಯ ಮಠದ ಬಳಿ ಬೆಂಗಳೂರು ಮೂಲದ ಯುವಕ ಆತ್ಮಹತ್ಯೆ

Sunday, October 18th, 2020
Ranganath

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮದ್ಯಾಹ್ನ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆಂಗಳೂರು ಮೂಲದ ರಂಗನಾಥ್ (25) ಎಂದು ಗುರುತಿಸಲಾಗಿದೆ. ಈತ ವಾರದ ಹಿಂದೆ ಮನೆ ಬಿಟ್ಟು ಸುಬ್ರಹ್ಮಣ್ಯಕ್ಕೆ ಬಂದಿದ್ದ ಎಂದು ತಿಳಿದು ಬಂದಿದೆ. ಈತನ ಆತ್ಮಹತ್ಯೆ ಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲಿಸರು ಭೇಟಿ ನೀಡಿ […]

65 ವರ್ಷದ ದಲಿತ ವೃದ್ಧನ ಮೇಲೆ ಹಲ್ಲೆಗೈದು, ಮೂತ್ರ ಕುಡಿಸಿ ವಿಕೃತಿ ಮೆರೆದ ಯುವಕ

Tuesday, October 13th, 2020
amar

ಲಕ್ನೋ: ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದಕ್ಕೆ ಪೊಲೀಸರಿಗೆ ದೂರು ನೀಡಿದ 65 ವರ್ಷದ ದಲಿತ ವೃದ್ಧನ ಮೇಲೆ ಹಲ್ಲೆಗೈದು, ಬಲವಂತವಾಗಿ ಮೂತ್ರ ಕುಡಿಸಿ ವಿಕೃತಿ ಮೆರೆದ ಘಟನೆ ಉತ್ತರಪ್ರದೇಶದ ಲಲಿತಪುರ ಗ್ರಾಮದ ರೊಡಾ ಎಂಬಲ್ಲಿ ನಡೆದಿದೆ. ಮೂತ್ರ ಕುಡಿಸಿದ  ಆರೋಪಿಯನ್ನು ಸೋನು ಯಾದವ್ ಎಂದು ಗುರುತಿಸಲಾಗಿದೆ. ಈತ ಕೆಲ ದಿನಗಳ ಹಿಂದೆ ವೃದ್ಧನ ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದನು. ಹೀಗಾಗಿ ತಂದೆ- ಮಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಸೋನು ವಿರುದ್ಧ ದೂರು ದಾಖಲಿಸಿದ್ದರು. ದೂರು ದಾಖಲಾಲಾದ  […]

ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕ, ಆತ್ಮಹತ್ಯೆಗೆ ಶರಣು

Thursday, October 8th, 2020
Youth Hangs

ಬೆಂಗಳೂರು : ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕನೊರ್ವ ಕನಸು ಈಡೇರುವುದಿಲ್ಲ ಎಂದು ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಯನಗರದ 4ನೇ ಹಂತದಲ್ಲಿ ಬುಧವಾರ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಶಾಂಕ್‌ (22) ಮೃತ ದುರ್ದೈವಿ. ತನ್ನ ಬಾಡಿಗೆ ಕೊಠಡಿಯಲ್ಲಿ ಬೆಳಗ್ಗೆ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ತನ್ನೂರಿನಿಂದ ಉದ್ಯೋಗ […]

ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದು ಯುವಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Sunday, August 30th, 2020
wall colapse

ಬಂಟ್ವಾಳ : ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿದ್ದ ಯುವಕ ಮೃತಪಟ್ಟು, ಬಾಲಕ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಮುಂಜೆ ಎಂಬಲ್ಲಿ ನಡೆದಿದೆ. ಅಮ್ಮುಂಜೆ ಗ್ರಾಮದ ಮಾದಕೋಡಿ ಎಂಬಲ್ಲಿ ಘಟನೆ ನಡೆದಿದ್ದು, ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಗುಡ್ಡೆ ಮನೆ ನಿಲಯ್ಯ ಪೂಜಾರಿ ಎಂಬವರ ಪುತ್ರ ಜನಾರ್ಧನ ಅಂಚನ್ (35) ಮೃತಪಟ್ಟಿದ್ದಾರೆ. ಉಳಿದಂತೆ ಬಾಲಕ ವೃಷಭ (11) ಹಾಗೂ ಸೂರಜ್ (20) ಘಟನೆ ಯಲ್ಲಿ ಅಲ್ಪಸ್ವಲ್ಪ ಗಾಯಗೊಂಡು […]