ಮಂಗಳೂರು : ನೀರುಮಾರ್ಗದ 40 ವಯಸ್ಸಿನ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆ

Wednesday, May 20th, 2020
neermarga covid

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಿದ ನೀರುಮಾರ್ಗದ  40  ವಯಸ್ಸಿನ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ ಈ ಮಹಿಳೆ ನೀರುಮಾರ್ಗದ  ಕುಟ್ಟಿಕಲದ ನಿವಾಸಿಯಾಗಿದ್ದರೆ.  ಅವರು  ಮೇ.10 ರಂದು ಕಾರಿನಲ್ಲಿ ತನ್ನ ಮಗನೊಂದಿಗೆ ಬೆಂಗಳೂರಿನ ರಾಜಾಜಿನಗರದಿಂದ ಮಂಗಳೂರಿಗೆ ಬಂದಿದ್ದು ಅಸ್ತಮ ಮತ್ತು ಬಿಪಿಯಿಂದಾಗಿ ಮೇ.17 ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ದ.ಕ. ಜಿಲ್ಲೆಯಲ್ಲಿ ಈವರೆಗೆ 55 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 33 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 11 ಮಂದಿ ಗುಣಮುಖರಾಗಿದ್ದಾರೆ. 5 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಉಡುಪಿ: ಪೇಜಾವರ ಸ್ವಾಮೀಜಿಯ ಸಹೋದರ ಎಂದ ಕ್ರಿಶ್ಚಿಯನ್ ಧರ್ಮದ ನಕಲಿ ಪ್ರಚಾರಕನ ವಿರುದ್ಧ ದೂರು

Friday, August 16th, 2019
pejaavara

ಉಡುಪಿ : ಕ್ರೈಸ್ತ ಧರ್ಮದ ಪ್ರಚಾರಕ ಎಂದು ಹೇಳಲಾದ ವ್ಯಕ್ತಿಯೊಬ್ಬರು ಪೇಜಾವರ ಶ್ರೀಗಳ ಸ್ವಾಮೀಜಿ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಂಸ್ಕಾರ ಭಾರತಿ ಉಡುಪಿ ಜಿಲ್ಲಾ ಸಂಚಾಲಕ ವಾಸುದೇವ ಭಟ್ ಪೆರಂಪಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ಚರ್ಚ್‌ನಲ್ಲಿ ಧಾರ್ಮಿಕ ವಿಷಯಗಳನ್ನು ಒಳಗೊಂಡ ಕರಪತ್ರಗಳನ್ನು ಪ್ರಚಾರದ ರೂಪದಲ್ಲಿ ವಿತರಿಸಿದ್ದು, ಆ ವ್ಯಕ್ತಿಯೂ ಕರಪತ್ರದಲ್ಲಿ ತಾನು ಪೇಜಾವರ ಮಠದ ಶ್ರೀ ಶ್ರೀವಿಶ್ವೇಶತೀರ್ಥ ಸ್ವಾಮೀಜಿಯ ಸಹೋದರ ಪಾಸ್ಟರ್ ವಸಂತ ಆರ್ . ಪೈ ಎಂದು ಉಲ್ಲೇಖಿಸಿದ್ದಾನೆ ಎಂದು ಅವರು ಹೇಳಿದ್ದಾರೆ. ಮಾತ್ರವಲ್ಲದೆ, […]