ದ.ಕ. ಜಿಲ್ಲೆಯಲ್ಲಿ ಜುಲೈ 19 ರಂದು ರೆಡ್ ಅಲರ್ಟ್, 20ರಿಂದ 22ರವರೆಗೆ ಆರೆಂಜ್ ಅಲರ್ಟ್
Sunday, July 18th, 2021ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಜುಲೈ 19 ರಂದು ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ 22ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿಯ ಉಪ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರವಿವಾರವೂ ದ.ಕ. ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಬಾರಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.