ಪ್ರವಾಹದ ಸಂದರ್ಭದಲ್ಲಿ ಮುಖ್ಯಮಂತ್ರಿಯನ್ನು ಹೆದರಿಸಿ ರಾಜೀನಾಮೆ ಕೊಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

Tuesday, July 27th, 2021
siddaramaiah

ಬೆಳಗಾವಿ : ರಾಜ್ಯದಲ್ಲಿ ಪ್ರವಾಹ ಸಂದರ್ಭದಲ್ಲೇ  ‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಸೋಮವಾರ ರಾತ್ರಿ ಪ್ರವಾಸಿಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದ್ದಾರೆ. ‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ಇಲ್ಲ. ಇದು ಕರ್ನಾಟಕದ ದುರ್ದೈವವೆ ಸರಿ ಎಂದರು. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. […]

ಹುಬ್ಬಳ್ಳಿ: ಸಿದ್ಯರಾಮಯ್ಯರಿಂದ ಕೊರೊನಾ ರೂಲ್ಸ್ ಬ್ರೇಕ್ !

Friday, May 28th, 2021
sidhramahia

ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವತ್ತು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ಗೆ ಆಗಮಿಸಿದ್ದರು. ಮೂರು ತಿಂಗಳು ಕಳೆದ ಮೇಲೆ ಸಿದ್ದರಾಮಯ್ಯ ಹುಬ್ಬಳ್ಳಿ ಗೆ ಆಗಮಿಸಿದ್ದರು. ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಕ್ಕೆ ತೆರಳಲು ಇವತ್ತು ಹುಬ್ಬಳ್ಳಿ ಗೆ ಆಗಮಿಸಿದ್ದರು.. ರಸ್ತೆ ಮುಖಾಂತರ ಹುಬ್ಬಳ್ಳಿ ಗೆ ತೆರಳಿದರು..ಕೊರೊನಾ ಕೊವಿಡ19 ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಹಾಗೂ ಮಾಸ್ಕ ಹಾಕಿಕೊಳ್ಳುವಂತೆ ಸರಕಾರ ಆದೇಶ ನೀಡಿದೆ..ಆದರೆ ಸಿದ್ದರಾಮಯ್ಯನವರ ವಾಹನದಲ್ಲಿ ಮಾತ್ರ ಸಾಮಾಜಿಕ ಅಂತರ ಕಾಣಲಿಲ್ಲ. ಹೌದು, […]