ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕೆ ಬಾಳೆ ಮುಹೂರ್ತ

Monday, November 30th, 2020
Balemuhurtha

ಉಡುಪಿ :  ಶ್ರೀಕೃಷ್ಣ ಮಠದ  251ನೇ ಪರ್ಯಾಯಕ್ಕೆ ಕೃಷ್ಣಾಪುರ ಮಠದ ಯತಿಗಳಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ಬಾಳೆ ಮುಹೂರ್ತದ ಸಾಂಪ್ರದಾಯಿಕ ವಿಧಿವಿಧಾನಗಳು ನಡೆದವು. ಜನಪ್ರತಿನಿಧಿಗಳು ಸೇರಿದಂತೆ ಅನೇಕ ಮಂದಿ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ಮುಂದೆ ನಡೆಯುವ ಕೃಷ್ಣಾಪುರ ಮಠದ ಪರ್ಯಾಯ ಶ್ರೀಕೃಷ್ಣ ಮಠದ ಇತಿಹಾಸದ 251ನೇ ಪರ್ಯಾಯವಾಗಿದೆ. ಉಡುಪಿಯಲ್ಲಿರುವ ಅಷ್ಟಮಠಗಳ ನಡುವೆ ಶ್ರೀಕೃಷ್ಣನ ಪೂಜೆಗೆ ದ್ವೆವಾರ್ಷಿಕ ಪರ್ಯಾಯ ಸಂಪ್ರದಾಯ ಪ್ರಾರಂಗೊಂಡ ನಂತರ ಈಗ ನಡೆದಿರುವ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರ […]

ಮುಂದೆ ಗಲಾಟೆ ನಡೆಯುತ್ತಿದೆ ಎಂದು ಚಿನ್ನಾಭರಣ ದರೋಡೆ ಮಾಡುತ್ತಿದ್ದ ನಾಲ್ವರ ಬಂಧನ

Thursday, October 22nd, 2020
chain snatchers

ಉಡುಪಿ : ಉಡುಪಿ ಡಿಸಿಐಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜಪ್ಪ ಡಿ.ಆರ್. ನೇತೃತ್ವದಲ್ಲಿ  ನಾಲ್ವರು ಅಂತರ್ ‌ರಾಜ್ಯ ಸರ ಕಳವು ಆರೋಪಿಗಳನ್ನು ಪೊಲೀಸರು ಉಡುಪಿ ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳದ ಬಳಿ ಬಂಧಿಸಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಆರೋಪಿಗಳು ಕಳವು ಮಾಡುತಿದ್ದರು. ಬಂಧಿತರನ್ನು ಇರಾನಿ ಗ್ಯಾಂಗ್‌ಗೆ ಸೇರಿದ ಅಂತಾರಾಜ್ಯ ವಂಚಕರಾದ ಮಹಾರಾಷ್ಟ್ರ ರಾಜ್ಯದ ಅಹ್ಮದ್‌ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ […]

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ, ಶ್ರೀಕೃಷ್ಣ ಲೀಲೋತ್ಸವ

Friday, September 11th, 2020
vitla pindi

ಉಡುಪಿ: ಸಂಪ್ರದಾಯದಂತೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋವಿಡ್ ನಿಯಮಾವಳಿಯಂತೆ ಭಕ್ತರಿಗೆ ರಥಬೀದಿಗೆ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಮಠದ ವೈದಿಕರು, ಗೊಲ್ಲರು, ಸಿಬ್ಬಂದಿಗಳು ಮಾತ್ರ ಸರಳವಾಗಿ ಸಾಂಪ್ರದಾಯಿಕವಾಗಿ ಆಚರಣೆ ನಡೆಸಿದರು. ಪರ್ಯಾಯ ಅದಮಾರು ಮಠಾಧೀಶರು ಕಡಗೋಲು ಕೃಷ್ಣನ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಪ್ರದಕ್ಷಿಣೆ ತರುವಾಗ ಮಠದ ಗೊಲ್ಲರು ಮೊಸರುಕುಡಿಕೆಗಳನ್ನು ಒಡೆಯುತ್ತಾ ಸಾಗಿದರು. ರಥಬೀದಿಯ ನಾಲ್ಕೂ ಪ್ರವೇಶ ದ್ವಾರಗಳನ್ನು ಪೊಲೀಸರು ಬಂದ್ ಮಾಡುವ ಮೂಲಕ ಪ್ರವೇಸಕ್ಕೆ ನಿರಾಕರಣೆ ಮಾಡಿದ್ದರು.    

ಶ್ರೀಕೃಷ್ಣ ಮಠದ ಸುವರ್ಣ ಗೋಪುರಕ್ಕೆ 1008 ಕಲಶಗಳ ಅಭಿಷೇಕ

Friday, June 7th, 2019
Udupi-math gopur

ಉಡುಪಿ: ಶ್ರೀಕೃಷ್ಣ ಮಠದ ಸುವರ್ಣ ಗೋಪುರದ ಸಮರ್ಪಣೋತ್ಸವದ ಅಂಗವಾಗಿ ಗುರುವಾರ ಮೂರು ಸ್ವರ್ಣ ಶಿಖರಗಳ ಪ್ರತಿಷ್ಠೆ, 1008 ಕಲಶಗಳ ಅಭಿಷೇಕ ನಡೆಯಿತು. ಸ್ವರ್ಣ ಗೋಪುರಕ್ಕೆ ಅಟ್ಟಳಿಗೆ ಕಟ್ಟಿ ಅಲ್ಲಿ ನಿಂತು ವಿವಿಧ ಮಠಾಧೀಶರು ಮೂರೂ ಶಿಖರಗಳಿಗೆ ಅಭಿಷೇಕ ಮಾಡಿದರು. ಪರ್ಯಾಯ ಶ್ರೀ ಪಲಿಮಾರು ಮಠದ ಹಿರಿಯ, ಕಿರಿಯ, ಶ್ರೀ ಪೇಜಾವರ ಮಠದ ಹಿರಿಯ, ಕಿರಿಯ, ಶ್ರೀ ಅದಮಾರು ಮಠದ ಹಿರಿಯ, ಕಿರಿಯ, ಶ್ರೀ ಕೃಷ್ಣಾಪುರ, ಶ್ರೀ ಕಾಣಿಯೂರು, ಶ್ರೀ ಸೋದೆ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗೋಶಾಲೆ ಎದುರು […]

ಚಂದ್ರಗ್ರಹಣ: ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಇಲ್ಲ

Tuesday, January 30th, 2018
dharmastala

ಉಡುಪಿ: ಖಗ್ರಾಸ ಚಂದ್ರ ಗ್ರಹಣ ನಿಮಿತ್ತ ಜ. 31ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಧ್ಯಾಹ್ನ 2.30 ಗಂಟೆಯಿಂದ ರಾತ್ರಿ 9ರ ವರೆಗೆ ಶ್ರೀ ಮಂಜುನಾಥ ದೇವರ ದರ್ಶನ ಹಾಗೂ ಪೂಜಾದಿ ಸೇವೆಗಳು ಇರುವುದಿಲ್ಲ. ರಾತ್ರಿ 9.30ರಿಂದ 10.30ರ ವರೆಗೆ ಭಕ್ತರಿಗೆ ಹೊರಾಂಗಣದಿಂದ ದೇವರ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 31ರಂದು ಚಂದ್ರ ಗ್ರಹಣ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು […]

ಆಮಂತ್ರಣ ಪತ್ರಿಕೆಯಲ್ಲಿ ಶ್ರೀಕೃಷ್ಣ ಮಠ ವೈಭವ ಅನಾವರಣ

Thursday, January 11th, 2018
Paryaya

ಉಡುಪಿ: ನವಗ್ರಹ ಕಿಂಡಿಯಲ್ಲಿ ಶ್ರೀಕೃಷ್ಣನನ್ನು ನೋಡಬಹುದು, ಜಯ ವಿಜಯ ದೇವರ ಸುಂದರ ಮೂರ್ತಿ ಯನ್ನು ಕಣ್ತುಂಬಿಸಿ ಕೊಳ್ಳಬಹುದು, ಮೂರು ಕಲಶಗಳ ಸಹಿತ ಚಿನ್ನದ ಹೊದಿಕೆಯ ಗರ್ಭಗುಡಿಯ ಅಪೂರ್ವ ಬಿಂಬವನ್ನೇ ನೋಡಿ ಧನ್ಯರಾಗ ಬಹುದು. ಮಾತ್ರವಲ್ಲ ಗರ್ಭಗುಡಿಯ ಹಿಂಭಾಗದ ಸುಂದರ ಚಿತ್ರಣವನ್ನು ಕೂಡ ನೋಡಬಹುದು. ಹೌದು. ಇದಕ್ಕೆ ಶ್ರೀಕೃಷ್ಣನ ಸನ್ನಿಧಾನಕ್ಕೆ ತೆರಳಬೇಕಾಗಿಲ್ಲ. ಈ ಬಾರಿಯ ಸರ್ವಜ್ಞ ಪೀಠವೇರಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಂಡರೆ ಸಾಕು. ಹಲವು ವೈಶಿಷ್ಟ, ಆಕರ್ಷಣೆಗಳಿಂದ ಭಕ್ತ […]

ಉಡುಪಿ ಶ್ರೀಕೃಷ್ಣ ಮಠದ ನೂತನ ಬ್ರಹ್ಮರಥ ಶ್ರೀಕೃಷ್ಣನ ಸೇವೆಗೆ ಅರ್ಪಣೆ

Tuesday, January 15th, 2013
Brahmaratha Sri Krishna Mutt

ಉಡುಪಿ : ಶ್ರೀಕೃಷ್ಣ ಇಹಲೋಕ ತ್ಯಜಿಸಿದ ಬಳಿಕ ಅರ್ಜುನನ ಮೇಲೆ ಇತರರು ಆಕ್ರಮಣ ನಡೆಸಿದರು. ಆಗ ಅರ್ಜುನ ಸೋತು ಹೋಗುತ್ತಾನೆ. ಕಾರಣವೆಂದರೆ ಕೃಷ್ಣ ಇಲ್ಲದೆ ಇರುವುದು. ಇಲ್ಲಿಯೂ ರಥ ನಿರ್ಮಿಸಿರಬಹುದು. ಅದರಲ್ಲಿ ಶ್ರೀಕೃಷ್ಣ ಪ್ರತಿಷ್ಠೆ ಆದರೆ ಮಾತ್ರ ಶೋಭೆ’ ಎಂದು ಶ್ರೀಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭತೀರ್ಥರು ಹೇಳಿದರು. ಅವರು ಉಡುಪಿ ಶ್ರೀಕೃಷ್ಣ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ರಥವನ್ನು ಶ್ರೀಕೃಷ್ಣನ ಸೇವೆಗೆ ಅರ್ಪಿಸಿದರು. ಉಡುಪಿ ಶ್ರೀಕೃಷ್ಣ ಮಠದಲ್ಲಿ ನಿರ್ಮಿಸಲಾದ ನೂತನ ಬ್ರಹ್ಮರಥ ಶ್ರೀಕೃಷ್ಣನ ಸೇವೆಗೆ ಸೋಮವಾರ ಮಕರ ಸಂಕ್ರಮಣ […]