ದೀಪಗಳ ಸಾಲು, ಹೊಸ ಬಟ್ಟೆಬರೆ, ಬಗೆ-ಬಗೆಯ ತಿಂಡಿ-ತಿನಿಸು, ರಂಗೋಲಿಗಳ ಹಬ್ಬ ದೀಪಾವಳಿ

Wednesday, November 8th, 2023
ದೀಪಗಳ ಸಾಲು, ಹೊಸ ಬಟ್ಟೆಬರೆ, ಬಗೆ-ಬಗೆಯ ತಿಂಡಿ-ತಿನಿಸು, ರಂಗೋಲಿಗಳ ಹಬ್ಬ ದೀಪಾವಳಿ

ಮಂಗಳೂರು : ದೀಪಾವಳಿ ಎಂದರೆ ದೀಪಗಳ ಸಾಲು, ಹೊಸ ಬಟ್ಟೆಬರೆ, ಬಗೆ-ಬಗೆಯ ತಿಂಡಿ-ತಿನಿಸು, ರಂಗೋಲಿಗಳು ಇವೇ ಕಣ್ಮುಂದೆ ಕಾಣಿಸುತ್ತವೆ. ದೀಪಾವಳಿಯಂತಹ ಹಬ್ಬವನ್ನು ಆಚರಿಸುವಾಗ, ಶಾಸ್ತ್ರವನ್ನರಿತು ಆಚರಿಸಿದರೆ, ಆನಂದದೊಂದಿಗೆ ಚೈತನ್ಯದ ಅನುಭೂತಿಯನ್ನೂ ಪಡೆಯಬಹುದು. ಶ್ರೀ ಲಕ್ಷ್ಮೀದೇವಿ, ಶ್ರೀಕೃಷ್ಣ, ಶ್ರೀರಾಮ, ಧನ್ವಂತರಿ ದೇವತೆ, ಯಮದೇವತೆ ಮುಂತಾದ ದೇವತೆಗಳನ್ನು ಸ್ಮರಿಸುವ ಈ ದೀಪೋತ್ಸವವನ್ನು ಶಾಸ್ತ್ರಕ್ಕನುಸಾರ ಆಚರಿಸೋಣ ಹಾಗೂ ಆನಂದವನ್ನು ದ್ವಿಗುಣಗೊಳಿಸೋಣ ದೀಪಾವಳಿ – ವಿವಿಧ ದಿನಗಳ ಮಹತ್ವ ಧನತ್ರಯೋದಶಿ (10.11.2023)ಸಾಧನೆಗಾಗಿ ಅನುಕೂಲ ಪರಿಸ್ಥಿತಿ ಮತ್ತು ಐಶ್ವರ್ಯವನ್ನು ಪಡೆಯಲು ಈ ದಿನ ಧನಲಕ್ಷ್ಮೀಯನ್ನು […]

ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?

Saturday, August 28th, 2021
Astami

ಮಂಗಳೂರು  : ಪ್ರತಿ ವರ್ಷ ಭಾರತ ಮಾತ್ರವಲ್ಲ ವಿಶ್ವದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಈ ವರ್ಷ ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಒಟ್ಟಿಗೆ ಸೇರುವುದು ಸಮಂಜಸವಲ್ಲ. ಆದುದರಿಂದ ನಾವೆಲ್ಲರೂ ನಮ್ಮ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ. 1. ಶ್ರೀಕೃಷ್ಣನಿಗೆ ಯಾವ ಸಮಯದಲ್ಲಿ ಪೂಜೆ ಮಾಡಬೇಡು ? ಶ್ರೀಕೃಷ್ಣನ ಜನ್ಮವು ಮಧ್ಯರಾತ್ರಿ 12 ಗಂಟೆಗೆ ಆಯಿತು. ಆದುದರಿಂದ ಅದಕ್ಕಿಂತ ಮೊದಲೇ ಪೂಜೆಯ ತಯಾರಿಯನ್ನು ಮಾಡಿಟ್ಟುಕೊಳ್ಳಿ. ರಾತ್ರಿ […]

ಚಾತುರ್ಮಾಸದ ವೈಶಿಷ್ಟ್ಯಗಳು ಮತ್ತು ಮಹತ್ವ

Thursday, August 5th, 2021
chaturmasya

ಮಂಗಳೂರು  : ಹಿಂದೂ ಧರ್ಮದಲ್ಲಿ ಆಚರಿಸುವ ಪ್ರತಿಯೊಂದು ಹಬ್ಬ, ಧಾರ್ಮಿಕ ಉತ್ಸವಗಳಿಗೆ ಒಂದೊಂದು ವಿಶೇಷ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ. ಹಿಂದೂ ಧರ್ಮದಲ್ಲಿ ಬರುವ ಹಬ್ಬಗಳ ಸಾಲು ಎಂದರೆ ಆಷಾಢ ಮಾಸದಿಂದ ಕಾರ್ತಿಕ ಮಾಸದ ಈ ನಾಲ್ಕು ತಿಂಗಳು ಬೇರೆ ಬೇರೆ ಹಬ್ಬಗಳ ಆಚರಣೆ ಮಾಡುತ್ತೇವೆ ಈ ನಾಲ್ಕು ತಿಂಗಳ ಅಂದರೆ ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿಯವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ. ಚಾತುರ್ಮಾಸದ ಕಾಲ […]

ಆಪತ್ಕಾಲದಲ್ಲಿ ಜೀವಂತವಾಗಿರಲಿಕ್ಕಾದರೂ ಸಾಧನೆ ಮಾಡಿ ! – ಪೂ. ರಮಾನಂದ ಗೌಡ

Sunday, July 25th, 2021
Guru Poornima

ಮಂಗಳೂರು : ಅಡಚಣೆಯ ಸಮಯದಲ್ಲಿ ನಮಗೆ ಸಹಾಯವಾಗಬೇಕು; ಅದಕ್ಕಾಗಿ ನಾವು ಬ್ಯಾಂಕಿನಲ್ಲಿ ಹಣ ಇಡುತ್ತೇವೆ. ಅದರಂತೆ ಆಪತ್ಕಾಲದ ಸಮಯದಲ್ಲಿ ಸಹಾಯವಾಗಬೇಕೆಂದು ಸಾಧನೆಯ ಸಂಗ್ರಹವು ನಮ್ಮ ಸಂಗ್ರಹದಲ್ಲಿರುವುದು ಅಗತ್ಯವಿದೆ. ಇದರಿಂದಲೇ ಆಪತ್ಕಾಲದ ಸಮಯದಲ್ಲಿ ನಮಗೆ ಸಹಾಯವಾಗುತ್ತದೆ. ಭಗವಾನ ಶ್ರೀಕೃಷ್ಣನು ‘ನ ಮೆ ಭಕ್ತಃ ಪ್ರಣಶ್ಯತಿ’, ಅಂದರೆ ‘ನನ್ನ ಭಕ್ತರ ನಾಶ ಎಂದಿಗೂ ಆಗುವುದಿಲ್ಲ’, ಎಂಬ ವಚನವನ್ನು ಭಕ್ತರಿಗೆ ನೀಡಿದ್ದಾರೆ. ಆದ್ದರಿಂದ ನಾವು ಸಾಧನೆಯನ್ನು ಹೆಚ್ಚಿಸಿ ದೇವರ ಭಕ್ತರಾಗಬೇಕು. ಈ ಹಿಂದೆ ಆನಂದಪ್ರಾಪ್ತಿಗಾಗಿ ಸಾಧನೆಯನ್ನು ಮಾಡಿ, ಎಂದು ನಾವು ಹೇಳುತ್ತಿದ್ದೆವು; ಆದರೆ […]

ಕೊರೋನಾ ಮಹಾಮಾರಿಯ ಭಯ ಮತ್ತು ಚಿಂತೆಯನ್ನು ದೂರಮಾಡಲು ‘ಮನಸ್ಸಿಗೆ ಸ್ವಯಂಸೂಚನೆ’ಗಳನ್ನು ನೀಡಿ ಮತ್ತು ನಿಶ್ಚಿಂತೆಯಿಂದಿರಿ !

Saturday, May 22nd, 2021
dyana

ಇಂದು ಇಡೀ ದೇಶ ಕೊರೋನಾ ಮಹಾಮಾರಿಯ 2ನೇಯ ಅಲೆಯಿಂದ ತತ್ತರಿಸಿ ಹೋಗಿದೆ. ವರ್ತಮಾನ ಪತ್ರಿಕೆ, ಟಿವಿ ಚಾನೆಲ್ ಗಳ ಕೊರೋನಾ ವಾರ್ತೆ, ಸಾಮಾಜಿಕ ಜಾಲತಾಣಗಳ ಕೊರೋನಾ ಘಟನೆಗಳ ವಿಡಿಯೋ ನೋಡಿ, ಅಥವಾ ಆಕ್ಸಿಜನ್ ಕೊರತೆ, ಬೆಡ್ ಸಿಗದೇ, ನರಳಿ ಸಾಯುವ ವಿಚಾರಗಳು, ಅಥವಾ ನೆಚ್ಚಿನ ಕುಟುಂಬದವರು, ಸ್ನೇಹಿತರ ಅಗಲಿಕೆಯಿಂದ ಜನಸಾಮಾನ್ಯರಲ್ಲಿ ಭಯ, ಚಿಂತೆ, ನಿರಾಶೆ, ಆತ್ಮಹತ್ಯೆಯ ವಿಚಾರಗಳು ಇಂದು ಹೆಚ್ಚಾಗಿದೆ. ಪರಿಣಾಮವಾಗಿ ಕೊರೋನಾ ಸೋಂಕಿನ ಜೊತೆಗೆ ಅದರ ಭಯದಿಂದಲೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರ […]

ಅಧಿಕ ಅಥವಾ ‘ಪುರುಷೋತ್ತಮ ಮಾಸದ ಮಹತ್ವ

Tuesday, September 15th, 2020
prajaksha

‘ಈ ವರ್ಷ 18.9.2020 ರಿಂದ 16.10.2020 ಈ ಕಾಲಾವಧಿಯಲ್ಲಿ ಅಧಿಕ ಮಾಸವಿದೆ. ಈ ಅಧಿಕ ಮಾಸ ‘ಅಧಿಕ ಆಶ್ವಯುಜ ಮಾಸವಾಗಿದೆ. ಅಧಿಕ ಮಾಸಕ್ಕೆ ಮುಂದಿನ ಮಾಸದ ಹೆಸರನ್ನು ಕೊಡುತ್ತಾರೆ, ಉದಾ. ಆಶ್ವಯುಜ ಮಾಸದ ಮೊದಲು ಬರುವ ಅಧಿಕ ಮಾಸಕ್ಕೆ ‘ಆಶ್ವಯುಜ ಅಧಿಕ ಮಾಸ ಎಂದು ಕರೆಯಲಾಗುತ್ತದೆ ಮತ್ತು ತದನಂತರ ಬರುವ ಮಾಸಕ್ಕೆ ‘ನಿಜ ಆಶ್ವಯುಜ ಮಾಸ ಎನ್ನುತ್ತಾರೆ. ಅಧಿಕ ಮಾಸ ಒಂದು ದೊಡ್ಡ ಹಬ್ಬದಂತೆ ಇರುತ್ತದೆ. ಆದುದರಿಂದ ಈ ಮಾಸದಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಾರೆ. ಮತ್ತು ‘ಅಧಿಕ […]

‘ಕೊರೋನಾ ದಂತಹ ಆಪತ್ಕಾಲದಲ್ಲಿ ‘ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ರಾತ್ರಿ 12 ಗಂಟೆಗೆ ಹೇಗೆ ಮಾಡಬೇಕು ?

Tuesday, August 11th, 2020
krishnanshtami

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ ವರ್ಷ ಕೊರೋನಾ ವಿಷಾಣುಗಳ ಸಂಕಟದಿಂದಾಗಿ ಸಂಚಾರ ಸಾರಿಗೆ ನಿರ್ಬಂಧವಿದ್ದುದರಿಂದ ಮನೆಯಿಂದ ಹೊರಗೆ ಬರಲು ಅನೇಕ ಬಂಧನಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಎಲ್ಲರೂ ಸೇರಿ ಈ ಉತ್ಸವವನ್ನು ಆಚರಿಸುವಲ್ಲಿ ಮಿತಿ ಬಂದಿದೆ. ಕೊರೋನಾ ವೈರಾಣುಗಳ ಹರಡುವಿಕೆಯಿಂದಾಗಿ […]

ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ಪ್ರತಿಯೊಬ್ಬರು ಸಕ್ಷಮರಾಗುವುದು ಆವಶ್ಯಕವಾಗಿದೆ ! – ಪೂ. ರಮಾನಂದ ಗೌಡ

Sunday, July 5th, 2020
Guru poornima

ಮಂಗಳೂರು :  ‘ಕೊರೋನಾ ಮಹಾಮಾರಿಯ ಹಾವಳಿ ಮುಗಿದ ನಂತರ ಜೀವನ ಕೂಡಲೇ ಮುಂಚಿ ನಂತಾಗುವುದು’, ಎಂಬ ಭ್ರಮೆಯಲ್ಲಿರದೇ ಜನರು ವಾಸ್ತವಿಕತೆಯನ್ನು ಎದುರಿಸಬೇಕು. ಇಂದು ಪ್ರಗತಿ ಹೊಂದಿದ ಅಮೇರಿಕಾ ಸಹಿತ ಅನೇಕ ರಾಷ್ಟ್ರಗಳು ಆರ್ಥಿಕ ಮುಗ್ಗಟ್ಟನ್ನು ಅನುಭವಿಸುತ್ತಿದೆ. ಅನೇಕ ತಜ್ಞರು ಮುಂದೆ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ಇವುಗಳು ಎದುರಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಚೀನಾದ ವಿಸ್ತಾರವಾದ ಮತ್ತು ಪಾಕಿಸ್ತಾನದ ಜಿಹಾದಿ ಭಯೋತ್ಪಾದನೆಯು ಭಾರತದ ಮೇಲೆ ಯುದ್ಧ ಸಾರಲು ಪ್ರಯತ್ನಿಸುತ್ತಿದೆ. ಅನೇಕ ಮುಸಲ್ಮಾನ ರಾಷ್ಟ್ರಗಳಲ್ಲಿ ಗೃಹಯುದ್ಧಗಳು ನಡೆಯುತ್ತಿವೆ. ರಾಜಧಾನಿ ದೆಹಲಿಯಲ್ಲಿ ನಿರಂತರ […]

ಗುರುಕೃಪಾಯೋಗಾನುಸಾರ ಸಾಧನೆ ಮಾಡುವಾಗ ಪ್ರತಿಭಾಶಕ್ತಿಯು ಬೇಗನೇ ಜಾಗೃತವಾಗುವುದು

Tuesday, June 30th, 2020
Guru Poornima

ಅ.ಅರ್ಥ ಕೃಪೆ ಶಬ್ದವು ‘ಕೃಪ್’ ಧಾತುವಿನಿಂದ ನಿರ್ಮಾಣವಾಗಿದೆ. ‘ಕೃಪ್’ ಎಂದರೆ ದಯೆ ತೋರಿಸುವುದು ಮತ್ತು ಕೃಪೆ ಎಂದರೆ ದಯೆ, ಕರುಣೆ, ಅನುಗ್ರಹ ಅಥವಾ ಪ್ರಸಾದ. ಗುರುಕೃಪೆಯ ಮಾಧ್ಯಮದಿಂದ ಜೀವವು ಶಿವನೊಂದಿಗೆ ಏಕರೂಪವಾಗುವುದಕ್ಕೆ, ಅಂದರೆ ಜೀವಕ್ಕೆ ಈಶ್ವರಪ್ರಾಪ್ತಿಯಾಗುವುದಕ್ಕೆ ‘ಗುರುಕೃಪಾಯೋಗ’ ಎಂದು ಹೇಳುತ್ತಾರೆ. ಆ.ಮಹತ್ವ ಬೇರೆಬೇರೆ ಯೋಗಮಾರ್ಗಗಳಿಂದ ಸಾಧನೆ ಮಾಡುವುದರಲ್ಲಿ ಅನೇಕ ವರ್ಷಗಳನ್ನು ವ್ಯರ್ಥಗೊಳಿಸದೇ, ಅಂದರೆ ಈ ಎಲ್ಲಾ ಮಾರ್ಗಗಳನ್ನು ಬದಿಗಿರಿಸಿ, ಗುರುಕೃಪೆಯನ್ನು ಬೇಗನೇ ಹೇಗೆ ಪಡೆಯುವುದು ಎಂಬುದನ್ನು ಗುರುಕೃಪಾಯೋಗವು ಕಲಿಸುತ್ತದೆ. ಆದುದರಿಂದ ಸಹಜವಾಗಿಯೇ ಈ ಮಾರ್ಗದಿಂದ ಆಧ್ಯಾತ್ಮಿಕ ಉನ್ನತಿಯು […]

ಜೂನ್ 5 ರಂದು ವಟಪೂರ್ಣಿಮೆ: ಅದರ ಮಹತ್ವ ಹಾಗೂ ಆ ವ್ರತವನ್ನು ಹೇಗೆ ಆಚರಿಸಬೇಕು ?

Thursday, June 4th, 2020
vata poornima

ಪತಿಗೆ ದೀರ್ಘಾಯುಷ್ಯ ಲಭಿಸಬೇಕೆಂದು ಹಾಗೂ ಏಳು ಜನ್ಮವೂ ಅವರ ಪ್ರಾಪ್ತಿಗಾಗಿ ಹಿಂದೂ ಸ್ತ್ರೀಯರು ವಟಪೂರ್ಣಿಮೆಯ ವ್ರತವನ್ನು ಮಾಡುತ್ತಾರೆ. ಶಾಸ್ತ್ರಚರ್ಚೆಯಲ್ಲಿ ಯಮನನ್ನು ಸೋಲಿಸಿ ಹರಣವಾದ ಅವಳ ಪತಿಯ ಪ್ರಾಣವನ್ನು ಹಿಂದೆ ಪಡೆಯುವ ಸಾವಿತ್ರಿಯ ಪಾತಿವ್ರತ್ಯದ ಪ್ರತೀಕವೆಂದು ಈ ವ್ರತವನ್ನು ಮಾಡಲಾಗುತ್ತದೆ. ಸಾವಿತ್ರಿ ಮತ್ತು ಯಮನ ಸಂಭಾಷಣೆಯು ವಟವೃಕ್ಷದ ಕೆಳಗೆ ಆದುದರಿಂದ ಆ ದಿನ ವಟವೃಕ್ಷಕ್ಕೆ ಮಹತ್ವ ಲಭಿಸಿತು. ವಟವೃಕ್ಷ ಹಾಗೂ ವಟಪೂರ್ಣಿಮೆಯ ಮಹತ್ವವು ಸನಾತನ ಸಂಸ್ಥೆಯ ವತಿಯಿಂದ ಸಂಕಲನ ಮಾಡಿದ ಈ ಲೇಖನದಿಂದ ತಿಳಿದುಕೊಳ್ಳೋಣ. ಅದರೊಂದಿಗೆ ಸದ್ಯ ಕೊರೋನಾದಿಂದಾಗಿ […]