ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಆರು ತಿಂಗಳ ನಂತರ : ಕೆ.ಎಸ್ ಈಶ್ವರಪ್ಪ

Saturday, June 19th, 2021
ks-Eswarappa

ದಾವಣಗೆರೆ : ಕರೊನಾ ಅಲೆ ಸಂಪೂರ್ಣವಾಗಿ ಮುಗಿದಿಲ್ಲ. ಡಿಸೆಂಬರ್‌ವರೆಗೆ ಯಾವುದೇ ಚುನಾವಣೆ ನಡೆಯಲ್ಲ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯನ್ನೂ ಮಾಡಲ್ಲ. ಚುನಾವಣೆ ಬೇಡ ಎಂದು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು. ಕರೊನಾ ಉಲ್ಬಣಿಸದಿದ್ದಲ್ಲಿ ರಾಜ್ಯದಲ್ಲಿ ಇಷ್ಟೊತ್ತಿಗೆ ತಾಪಂ ಮತ್ತು ಜಿಪಂ ಚುನಾವಣೆ ರಂಗೇರುತ್ತಿತ್ತು. 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದಂತೆ ಇನ್ನೂ 6 ತಿಂಗಳ ಕಾಲ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಯಲ್ಲ ಎಂದು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ ಎಂದರು. ಸದ್ಯ ಲಾಕ್ಡೌನ್ […]

ಅನ್ ಲಾಕ್ ಆದರೆ ಬಸ್ ಸಂಚಾರ

Thursday, June 3rd, 2021
vayuvyasarige

ಹುಬ್ಬಳ್ಳಿ: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿತ್ತು. ಅದರಂತೆ ಬಸ್ ಸೇವೆಗಳನ್ನು ಸಹ ಸ್ಥಗಿತಗೊಳಿಸಿತ್ತು. ಈಗ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಸರ್ಕಾರ ಅನ್ ಲಾಕ್ ಮಾಡುವ ನಿರ್ಧಾರಕ್ಕೆ ಬಂದರೆ. ಬಸ್‌ಗಳ ಚಾಲನೆಯನ್ನು ಮಾಡುವುದಾದರೆ ಈಗ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗ ಯಾವ ರೀತಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣ ವಿಭಾಗದ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಜೂನ್ 7 ರ ವರೆಗೆ […]

ಯಾಸ್ ಚಂಡುಮಾರುತದ ಹಾನಿಯನ್ನು ಪರಿಶೀಲಿಸಲು ಬಂದ ಮೋದಿಯನ್ನು ಅರ್ಧ ಗಂಟೆಗೂ ಹೆಚ್ಚು ಕಾಯಿಸಿದ ಮಮತಾ ಬ್ಯಾನರ್ಜಿ

Friday, May 28th, 2021
modi Banarji

ನವದೆಹಲಿ: ಯಾಸ್ ಚಂಡುಮಾರುತದಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲು ಕಲಾಯಿಕುಂಡ್ ವಾಯುನೆಲೆಗೆ ಪ್ರಧಾನಿ ಆಗಮಿಸಿದಾಗ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಮತ್ತು ರಾಜ್ಯಪಾಲ ಜಗದೀಪ್ ಧಾಂಕರ್ ಅವರನ್ನು ಅರ್ಧ ಗಂಟೆಗಳ ಕಾಲ ಕಾಯಿಸಿದ್ದಾರೆ ಎಂದು ಸರ್ಕಾರ ಆರೋಪಿಸಿದೆ. ವಾಯುನೆಲೆಯಲ್ಲಿ ಪ್ರಧಾನಿಯೊಂದಿಗೆ ತರಾತುರಿಯಲ್ಲಿ 15 ನಿಮಿಷ ಸಂವಾದ ನಡೆಸಿ, ಪ್ರಧಾನಿ ಯೊಂದಿಗಿನ ಚಂಡಮಾರುತ ಹಾನಿ ಪರಾಮರ್ಶನಾ ಸಭೆಯಲ್ಲಿ ಮಮತಾ ಪಾಲ್ಗೊಳ್ಳದೆ  ಕೇವಲ ಹಾನಿಯ ವರದಿ ಕೊಟ್ಟು ಹೋದ ಘಟನೆ ನಡೆದಿದೆ. ನೀವು ನನ್ನನ್ನು ಭೇಟಿಯಾಗಲು ಬಯಸಿದ್ದರಿಂದ ಇಂದು ಬಂದೆ. ನಾನು ಮತ್ತು ನನ್ನ […]

ಬಿಜೆಪಿ ಮೂರು ಪಕ್ಷದ ಸರ್ಕಾರ ಎಂದು ಯೋಗೇಶ್ವರ್ ಹೇಳಿಕೆ ನೀಡುವುದು ಸರಿಯಲ್ಲ: ಕೆ.ಎಸ್.ಈಶ್ವರಪ್ಪ

Friday, May 28th, 2021
eshwarappa

ಶಿವಮೊಗ್ಗ: ಬಿಜೆಪಿ ಮೂರು ಪಕ್ಷದ ಸರ್ಕಾರ ಎಂದು ಸಿ.ಪಿ.ಯೋಗೇಶ್ವರ್  ಹೇಳಿಕೆ ನೀಡುವುದು ಸರಿಯಲ್ಲ. ಹೋದ ಕಡೆಯಲ್ಲೆಲ್ಲಾ ಮಾಧ್ಯಮವರು ಕೇಳುತ್ತಾರೆ. ಸರ್ಕಾರದಲ್ಲಿ ಇರಲು ಮನಸ್ಸಿಲ್ಲದಿದ್ದರೆ ಸಂಪುಟದಿಂದ ಹೊರ ಹೋಗಬಹುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದರು. ಯಾವುದೇ ಸಮಸ್ಯೆಗಳಿದ್ದರೆ ನಾಲ್ಕು ಗೋಡೆಯ ಮಧ್ಯೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲಿ. ಅದು ಬಿಟ್ಟು ದೆಹಲಿಗೆ ಹೋಗುವುದು, ಸಿಎಂ ವಿರುದ್ಧ ದೂರು ಹೇಳುವುದು ಸರಿಯಲ್ಲ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಅವರಿಗೆ ಅಗತ್ಯ ಸ್ಥಾನಮಾನ ನೀಡಿದೆ. ಯೋಗೀಶ್ವರ್ ನನ್ನ ಒಳ್ಳೆಯ ಸ್ನೇಹಿತ. ಆದರೂ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ […]

ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ :  ಸಿದ್ದರಾಮಯ್ಯ 

Friday, May 28th, 2021
siddaramaiah

ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೋವಿಡ್ ಸೋಂಕು ನಿರ್ವಹಣೆಗೆ ಸರ್ಕಾರ ಸರಿಯಾಗಿ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಆಕ್ಸಿಜನ್ ಬೆಡ್, ಐಸಿಯು ಬೆಡ್‍ಗಳು ಸಿಗದೆ ಸೋಂಕಿತರು ಪರದಾಡುವಂತಾಗಿದೆ. ಇದರಿಂದ ಸಾವುನೋವುಗಳು ಹೆಚ್ಚಾಗಿವೆ. ಇನ್ನೂ ಹೆಚ್ಚುತ್ತಲೇ ಇವೆ. ಯಾವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕೋ ಆ ವ್ಯವಸ್ಥೆಯನ್ನೇ ಸರಿಯಾಗಿ ಮಾಡಿಲ್ಲ ಎಂದು ಸರ್ಕಾರವನ್ನು ದೂರಿದರು. ಚಾಮರಾಜನಗರದ ಸಾವಿನ ಅಂಕಿ ಸಂಖ್ಯೆಯಲ್ಲಿ ಮೊದಲು ಸುಳ್ಳು ಹೇಳಿದ್ದಾರೆ. ಸಂಬಂಧಪಟ್ಟ ಸಚಿವರು ಏಕೆ ಸುಳ್ಳು ಹೇಳಿದರು […]

ಸರ್ಕಾರದ ಜನ ಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮಉದ್ದೇಶ : ಕೋಟ ಶ್ರೀನಿವಾಸ ಪೂಜಾರಿ

Saturday, August 15th, 2020
independence day

ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿ  ಸ್ವಾತಂತ್ರ್ಯೋತ್ಸದ  ಸಂದೇಶ ನೀಡಿದರು. ಗೌರವವಂದನೇ ಸ್ವೀಕರಿಸಿದ ಬಳಿಕ ಮಾತನಾಡಿದ ಉಸ್ತುವಾರಿ ಸಚಿವರು  ಸುಮಾರು 5 ಕೋಟಿ ಜನರು ಆಯುಷ್ಮಾನ್ ಭಾರತ್, ಕಿಸಾನ್‌‌‌ ಸಮ್ಮಾನ್‌‌ ಮುಂತಾದ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡಿದ್ದಾರೆ. ಬಿ.ಎಸ್‌‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಾವು ರೈತರ ಬೆಳೆ ಸಮೀಕ್ಷೆ […]

ಕೊರೊನಾ ರೋಗಿಯ ಚಿಕಿತ್ಸೆಗೆ ಇಂಡಿಯಾನ ಆಸ್ಪತ್ರೆಯ ಬಿಲ್ 1,98,664 ರೂಪಾಯಿ

Thursday, July 16th, 2020
indiana Hospital

ಮಂಗಳೂರು : ಬಡವರನ್ನ ಹಿಂಡಿ ಹಿಪ್ಪೆ ಮಾಡುವ ಆಸ್ಪತ್ರೆಗಳು ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿವೆ. ಉಸಿರಾಟ ದ ತೊಂದರೆಯಿಂದ ಇಲ್ಲಿನ ಆಸ್ಪತ್ರೆಗಳಿಗೆ ದಾಖಲಾಗ ಬೇಕಾದರೆ ಕನಿಷ್ಠ ಒಂದು ಲಕ್ಷ ಡೆಪಾಸಿಟ್ ಇಡಬೇಕು, ಮತ್ತೆ ರೋಗಿ ಗುಣ ಮುಖನಾಗಿ ಹೊರಬರಬೇಕಾದರೆ  ಬಿಲ್ ಕಟ್ಟಲು ತನ್ನ ಅಸ್ತಿಯನ್ನೇ ಮಾರಬೇಕಾದ ಪರಿಸ್ಥಿತಿ ಬರಬಹುದು. ಮಂಗಳೂರಿನ ಪಂಪ್ ವೆಲ್ ನಲ್ಲಿರುವ ಇಂಡಿಯಾನ ಆಸ್ಪತ್ರೆಯು ಕೊರೊನಾ ರೋಗಿಗಳಿಂದ ಅಧಿಕ ಮೊತ್ತದ ಹಣವನ್ನು ಪಡೆಯುತ್ತಿರುವುದಾಗಿ ಆರೋಪ ಕೇಳಿಬಂದಿತ್ತು. ಕೊರೊನಾ ರೋಗಿಗೆ 1,98,664 ರೂಪಾಯಿ ಬಿಲ್ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ […]

ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ರಾಜ್ಯದಲ್ಲಿ ಪೂರ್ವ ಸಿದ್ಧತೆ

Wednesday, June 3rd, 2020
school

ಬೆಂಗಳೂರು:   ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಪೂರ್ವ ಪ್ರಾಥಮಿಕ (ಪ್ರಿಕೆಜಿ, ಎಲ್’ಕೆಜಿ, ಯುಕೆಜಿ) ಹಂತವೂ ಸೇರಿದಂತೆ ಶಾಲೆಗಳ ಆರಂಭಕ್ಕೆ ಕರಡು ವೇಳಾಪಟ್ಟಿ ಕೂಡ ಪ್ರಕಟಿಸಿದ್ದು, ಈ ಪ್ರಕಾರ ಜುಲೈ.1ರಿಂದ ಜುಲೈ20ರವರೆಗೆ 3 ಹಂತಗಳಲ್ಲಿ ಮಕ್ಕಳಿಗೆ ಶಾಲೆ ಆರಂಭಿಸುವ ಚಿಂತನೆ ನಡೆಸಿದೆ. ಜುಲೈ.1ರಿಂದ 4-7 ತರಗತಿ, 1-3 ಜುಲೈ 15 ಮತ್ತು 8-10 ತರಗತಿ ಜುಲೈ 15ರಿಂದ, ಪೂರ್ವ ಪ್ರಾಥಮಿಕ ಶಾಲೆಯನ್ನು ಜುಲೈ 20ರಿಂದ ಆರಂಭಿಸಲು ನಿರ್ಧರಿಸಿದೆ. […]

ಜೂನ್ 1ರಿಂದ ರಾಜ್ಯದ ದೇವಸ್ಥಾನ ತೆರೆಯಲು ಸರ್ಕಾರ ಸಮ್ಮತಿ

Tuesday, May 26th, 2020
Srinivas poojary

ಮಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜೂನ್ 1ರಿಂದ ರಾಜ್ಯದ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನ ಗಳನ್ನು ತೆರೆಯುವುದರ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ. ಇನ್ನು ಸದ್ಯಕ್ಕೆ ಜಾತ್ರೆ, ಸಮಾರಂಭಗಳಿಗೆ ಅವಕಾಶ ಇಲ್ಲ ನೀಡಲಾಗಿಲ್ಲ. ದೇವಸ್ಥಾನಗಳಲ್ಲಿ ಭಕ್ತರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದರು. ನಾಳೆಯಿಂದ ರಾಜ್ಯ 52 ದೇವಸ್ತಾನಗಳ ಆನ್ ಲೈನ್ ಸೇವೆಗೆ […]

ಸರ್ಕಾರ ಸಂತ್ರಸ್ತರ ಕುಟುಂಬಕ್ಕಲ್ಲ, ಅಪರಾಧಿಗಳಿಗೆ ಸಹಾಯ ಮಾಡುತ್ತಿದೆ : ನಿರ್ಭಯಾ ತಾಯಿಯಿಂದ ಗಂಭೀರ ಆರೋಪ

Friday, January 17th, 2020
nirbhaya-taayi

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಮತ್ತೆ ವಿಳಂಬವಾಗುತ್ತಿರುವ ಬಗ್ಗೆ ಸಂತ್ರಸ್ತೆಯ ತಾಯಿ ಆಶಾ ದೇವಿ ಕಣ್ಣೀರಿಟ್ಟಿದ್ದಾರೆ. ಸರ್ಕಾರ ಸಂತ್ರಸ್ತ ಕುಟುಂಬಕ್ಕಲ್ಲ, ಆರೋಪಿಗಳಿಗೆ ಸಹಾಯ ಮಾಡುತ್ತಿದೆ ಎನ್ನುವ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಜನವರಿ 22ರಂದು ತಿಹಾರ್ ಜೈಲಿನಲ್ಲಿ ನಾಲ್ವರು ದೋಷಿಗಳನ್ನು ನೇಣಿಗೆ ಹಾಕಬೇಕಿತ್ತು. ಆದರೆ, ಅಪರಾಧಿಗಳ ಕ್ಷಮಾದಾನ ಅರ್ಜಿ ಇತ್ಯರ್ಥವಾಗಿಲ್ಲದ ಕಾರಣ ಗಲ್ಲುಶಿಕ್ಷೆ ಮುಂದೂಡಬೇಕು ಹಾಗೂ ಮತ್ತೊಂದು ಡೆತ್ ವಾರೆಂಟ್ ನೀಡಬೇಕೆಂದು ಹೈಕೋರ್ಟ್ಗೆ ತಿಹಾರ್ ಜೈಲಿನ ಅಧಿಕಾರಿಗಳು […]