ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿ ಮೃತ್ಯು

Sunday, January 10th, 2021
Ruthik

ಕಾಸರಗೋಡು : ಮನೆಯಲ್ಲಿ ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿದ ಪರಿಣಾಮ ಮೃತಪಟ್ಟ ದಾರುಣ ಘಟನೆ ಉದುಮದಲ್ಲಿ ನಡೆದಿದೆ. ಉದುಮ ಏರೋಲ್‌ನ ದಾಸ್ ಮತ್ತು ರೇಣುಕಾ ದಂಪತಿ ಪುತ್ರ ಋತಿಕ್ ಮೃತಪಟ್ಟ ಮಗು. ಬಾಟಲಿಯಲ್ಲಿದ್ದ ಸೀಮೆಎಣ್ಣೆಯನ್ನು ಸೇವಿಸಿದ್ದು , ಮಗು ಅಸ್ವಸ್ಥವಾಗಿ ಬಿದ್ದಿದ್ದು ಸಮೀಪ ಸೀಮೆ ಎಣ್ಣೆ ತುಂಬಿದ್ದ ಬಾಟಲಿ ಪತ್ತೆಯಾಗಿತ್ತು. ತಕ್ಷಣ ಮಗುವನ್ನು ಉದುಮದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ದಸರಾ ಸ್ವಾಗತಿಸಲು ಮೈಸೂರು ನಗರಕ್ಕೆ ದೀಪಾಲಂಕಾರ!

Sunday, October 18th, 2020
Mysuru Dasara

ಮೈಸೂರು: ಮೈಸೂರು ಅರಮನೆಯಲ್ಲಿ ಈ ಬಾರಿ ದಸರಾ ಸರಳವಾಗಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಇದುವರೆಗೆ ಕಾಣುತ್ತಿದ್ದ ಸಂಭ್ರಮವೂ ಇಲ್ಲದಾಗಿದೆ. ಆದರೆ ದಸರಾ ನಡೆಯುತ್ತಿದೆ ಎಂಬುದನ್ನು ನಗರಕ್ಕೆ ಮಾಡಿರುವ ದೀಪಾಲಂಕಾರಗಳು ಮಾತ್ರ ಹೇಳುತ್ತಿವೆ. ಮೈಸೂರಿಗೂ ದೀಪಾಲಂಕಾರಕ್ಕೂ ಬಿಡಿಸಲಾರದ ನಂಟಿದೆ. ಮೈಸೂರಿಗೆ ವಿದ್ಯುದ್ದೀಪಗಳು ಬರುವ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಸ್ಥಳಗಳಲ್ಲಿ ಹರಳೆಣ್ಣೆ ಮತ್ತು ಸೀಮೆ ಎಣ್ಣೆಯ ಬುಡ್ಡಿದೀಪಗಳನ್ನು ಹಚ್ಚಲಾಗುತ್ತಿತ್ತು. ಬೀದಿಯಲ್ಲಿರುವ ಮರ ಅಥವಾ ಕಲ್ಲಿನ ಕಂಬಗಳಲ್ಲಿ ಇಡಲಾಗುತಿದ್ದ ದೀಪಕ್ಕೆ ಅದರ ಉಸ್ತುವಾರಿಗೆ ನೇಮಿಸಿದ್ದ ನೌಕರ […]