ಉಡುಪಿ ಬೈಲಕೆರೆಯ ಬಳಿ ನಿಲ್ಲಿಸಿದ್ದ ಸ್ಕೂಟರ್ ಕಳವು ಮಾಡಿದ ಚಾಲಾಕಿ ಕಳ್ಳ

Monday, January 31st, 2022
Scooter-Thief

ಉಡುಪಿ : ಉಡುಪಿ ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ವಸತಿ ಸಮುಚ್ಚಯದ ಬಳಿ ಕಳ್ಳನೊಬ್ಬ ಪಾರ್ಸೆಲ್ ವಸ್ತುವಿನೊಂದಿಗೆ ಸ್ಕೂಟರ್ ಅನ್ನು ಕಳವು ಮಾಡಿರುವ ಘಟನೆ ಸೋಮವಾರ ನಡೆದಿದೆ. ಸ್ಕೂಟರ್ ಕಳ್ಳತನ ಮಾಡಿರುವ ವ್ಯಕ್ತಿಯನ್ನು ಸಾಲಿಗ್ರಾಮ ಸಾಸ್ತಾನ ವ್ಯಾಪ್ತಿಯ ಯುವಕ ಸ್ಕೂಟರ್ ಸಂಖ್ಯೆ KA20 EV6577 ನ್ನು ಈತ ಕಳವು ಮಾಡಿದ್ದಾನೆ. ಬೈಕ್ ಮಾಲೀಕರು ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ಬಳಿ ಹೋಂಡಾ ಡಿಯೋ‌ ಸ್ಕೂಟರ್ ಅನ್ನು ನಿಲ್ಲಿಸಿ ಕರ್ಮಷಿಯಲ್ ಪಾರ್ಸೆಲ್ ಕೊಡಲು ಹೋಗಿದ್ದರು. ಈ ವೇಳೆ ಅದೇ ದಾರಿಯಲ್ಲಿ ಬಂದ […]

ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದು, ಸ್ಥಳದಲ್ಲೇ ಸಾವು

Thursday, July 29th, 2021
Mudipu-Accident

ಕೊಣಾಜೆ: ಮುಡಿಪು ಬಳಿ ಸ್ಕೂಟರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಉಪ್ಪಳ ಮೂಲದ ಜೌಹಾರ್ (20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು, ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಬಾಳೆಪುಣಿ ಕಡೆಯಿಂದ ಮುಡಿಪು ಕಡೆಗೆ ಹೋಗುತ್ತಿದ್ದ ವೇಳೆ ಮುಡಿಪು ಪೆಟ್ರೋಲ್ ಪಂಪು ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ […]

ಗಾಯಗೊಂಡ ಮಹಿಳಾ ಹೋಮ್ ಗಾರ್ಡ್ ನ್ನು ತಮ್ಮ ಕಾರ್ ನಲ್ಲಿ ಆಸ್ಪತ್ರೆಗೆ ಸೇರಿಸಿದ ಸಚಿವ ಶ್ರೀನಿವಾಸ್ ಪೂಜಾರಿ

Wednesday, June 23rd, 2021
mulki Home guard

ಮಂಗಳೂರು: ಮುಲ್ಕಿ ಠಾಣೆಯ ಮಹಿಳಾ  ಹೋಮ್ ಗಾರ್ಡ್ ಒಬ್ಬರು ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಗಾಯಗೊಂಡ ಘಟನೆ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಬುಧವಾರ  ಮಧ್ಯಾಹ್ನ 12.20ರ ಸಮಯಕ್ಕೆ ರೇಣುಕಾ ಎಂಬವರು ಠಾಣೆಯಿಂದ ತಮ್ಮ ಹೊಂಡಾ ಆ್ಯಕ್ಟೀವಾ ವಾಹನದಲ್ಲಿ ಊಟಕ್ಕೆ ಮನೆಗೆ ಹೋಗುತ್ತಿರುವಾಗ ಈ ಅಪಘಾತವಾಗಿದೆ. ಪರಿಣಾಮವಾಗಿ ರೇಣುಕಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ […]

ಮಂಗಳೂರು : ಸ್ಕೂಟರ್ ಅಡ್ಡಗಟ್ಟಿ ಸರಕಾರಿ ಬಸ್ ಚಾಲಕನಿಗೆ ತಲವಾರಿನಿಂದ ತಿವಿದು ಕೊಲೆ ಯತ್ನ

Friday, March 5th, 2021
Shohif

ಮಂಗಳೂರು : ಸ್ಕೂಟರ್ ಅಡ್ಡವಿಟ್ಟು ಸರಕಾರಿ ಬಸ್ ಚಾಲಕನಿಗೆ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ಶುಕ್ರವಾರ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಡ್ಯಾರ್ ಕಣ್ಣೂರಿನ ಕುಂಡಾಲದ  ಆರೋಪಿ ಸೊಹೀಫ್ (19) ತಂದೆ ಅಬ್ದುಲ್ ಶರೀಪ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರು ಡಿಪೋ ಕೆಎಸ್ಸಾರ್ಟಿಸಿ ಬಸ್ ಚಾಲಕನಾಗಿದ್ದ ರಾಜು ಗಜಕೋಶ ಅವರನ್ನು ತಡೆದ ಆರೋಪಿಯು ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಮಂಗಳೂರು ಕಡೆಗೆ ಬಸ್ […]

ಬಜಾಲ್ : ಬಾವಿಗೆ ಬಿದ್ದ ಸ್ಕೂಟರ್ ಸವಾರರು, ಓರ್ವ ಮೃತ್ಯು

Monday, January 4th, 2021
Ajith

ಮಂಗಳೂರು : ಬಜಾಲ್ ಸಮೀಪದ  ಪಕ್ಕಲಡ್ಕ ಎಂಬಲ್ಲಿ ಬಾವಿಯ ತಡೆಗೋಡೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರರು ಬಿದ್ದು ಓರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಇಬ್ಬರು ಸವಾರರ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದ್ದು ಆತನನ್ನು  ಎಮ್ಮೆಕೆರೆ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ. ಅಜಿತ್ ಸೋಮವಾರ ಬಜಾಲ್ನ ಉಲ್ಲಾಸ್ ನಗರದ ತನ್ನ ಸಂಬಂಧಿಕರ ಮನೆಗೆ ಬರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ರಾತ್ರಿ ವೇಳೆಗೆ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡು  ರಸ್ತೆ ಪಕ್ಕದಲ್ಲೇ ಇದ್ದ ಬಾವಿ ಆವರಣಕ್ಕೆ ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿದ್ದ ಇಬ್ಬರು ಬಿದ್ದಿದದ್ದಾರೆ ಎನ್ನಲಾಗಿದೆ. […]

ಸ್ಕೂಟರ್ ಮತ್ತು ಟ್ಯಾಂಕರ್ ಡಿಕ್ಕಿ- ತಂದೆ ಮಗಳು ಸಾವು

Tuesday, September 29th, 2020
Karawar Accident

ಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಮಂಗಳವಾರ  ನಡೆದಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ. ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ವಿನೋದ್ ಕಿಂದಳಕರ್ ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳನ್ನು ಯಲ್ಲಾಪುರದಿಂದ ತಮ್ಮ […]

ಸ್ಕೂಟರಿಗೆ ಅಪರಿಚಿತ ದ್ವಿಚಕ್ರ ವಾಹನ ಹಿಟ್ ಎಂಡ್ ರನ್, ತಲೆಗೆ ಗಾಯಗೊಂಡಿದ್ದ ಸವಾರ ಸಾವು

Tuesday, September 1st, 2020
Scooter hit

ಬಂಟ್ವಾಳ: ಬಿ.ಸಿ.ರೋಡು ಸರ್ಕಲ್ ಬಳಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಹನವನ್ನು ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಕೆ.ವಿ.ನೇತೃತ್ವದ ತಂಡ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾಹನ ಚಾಲಕನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸೋಮವಾರ ಸಂಜೆ ನಡೆದ ಹಿಟ್ ಎಂಡ್ ರನ್ ಪ್ರಕರಣದಲ್ಲಿ ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಆರ್. ಚೌಟ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಬಿ.ಸಿ.ರೋಡು […]

ಕಾಪು : ಪಾಂಗಾಳ ಸಮೀಪ ಕಾರು ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

Tuesday, March 10th, 2020
car

ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 9:45ರ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉದ್ಯಾವರ ನಿವಾಸಿ, ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಧಾಕರ್(40) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ಇನ್ನೊಂದು ಬದಿಯ ರಸ್ತೆಗೆ ಪಲ್ಟಿಯಾಗಿ ಇದ್ದಿದ್ದು, ಇದೇ ವೇಳೆ ಉಡುಪಿ ಕಡೆಯಿಂದ ಕಾಪು […]

ಬಸ್, ಸ್ಕೂಟರ್ ನಡುವೆ ಡಿಕ್ಕಿ : ಮಗು ಸ್ಥಳದಲ್ಲೇ ಸಾವು

Tuesday, December 17th, 2019
Pratwi

ಮಡಿಕೇರಿ : ಕೆಎಸ್ ಆರ್ ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಮೂರು ವರ್ಷದ ಗಂಡು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಬೈಚೇನಹಳ್ಳಿಯಲ್ಲಿ ನಡೆದಿದೆ. ಗೊಂದಿಬಸವನಹಳ್ಳಿ ನಿವಾಸಿಗಳಾದ ಪರಮೇಶ್ವರ ಹಾಗೂ ಗೀತಾ ದಂಪತಿಗಳ ಪುತ್ರ ಪ್ರಥ್ವಿ (3) ಮೃತ ದುರ್ದೈವಿ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಬಸ್ ದೇವಾಲಯದಿಂದ ಮರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಪ್ರಥ್ವಿ ಮೇಲೆ ಬಸ್ ಚಕ್ರ ಹರಿದು ಸಾವು ಸಂಭವಿಸಿದೆ. ಕುಶಾಲನಗರ ಪೊಲೀಸರು […]

ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಸವಾರ ಲಾರಿಯ ಅಡಿಗೆ ಬಿದ್ದು ಸಾವು

Saturday, August 4th, 2018
Raveendra Nayak

ಹಳೆಯಂಗಡಿ : ಪಾವಂಜೆ ಬಳಿ ಶನಿವಾರ ಬೆಳಗ್ಗೆ 8.30ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಲ್ನಾಡು ನಿವಾಸಿ ರವೀಂದ್ರ ನಾಯಕ್ ( 45 ) ಸಾವನ್ನಪ್ಪಿದ ದುರ್ದೈವಿ. ರವೀಂದ್ರ ನಾಯಕ್ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ರವೀಂದ್ರ ನಾಯಕ್ ಸಮೀಪದಲ್ಲಿ ಚಲಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೋಲಿಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಸುರತ್ಕಲ್ ನ […]