ಭಾರತದ ಸೆಕ್ಯೂಲರ್ ಗಳು ನೇಪಾಳದ ಮುಸಲ್ಮಾನರನ್ನ ನೋಡಿ ಕಲಿಯುವುದು ಬಹಳಷ್ಟಿದೆ !

Friday, March 19th, 2021
Nepal

ಕಾಟ್ಮಾಂಡು : ಭಾರತವನ್ನೇನಾದರೂ ಹಿಂದೂ ರಾಷ್ಟ್ರವೆಂದು ಘೋಷಿಸುವ ಬಗ್ಗೆ ಮಾತನಾಡಿದರೆ ಸಾಕು ಭಾರತದಲ್ಲಿ ಭೂಕಂಪವಾಗಿ ಲಕ್ಷಾಂತರ, ಕೋಟ್ಯಾಂತರ ಜನ ಸತ್ತೇ ಹೋಗಿಬಿಡುತ್ತಾರೆ ಅನ್ನೋ ರೀತಿಯಲ್ಲಿ ಭಾರತದ ಬುದ್ಧಿಜೀವಿಗಳು, ಸೆಕ್ಯೂಲರ್ ಗಳು ಬೊಬ್ಬೆಯಿಡೋಕೆ ಶುರು ಮಾಡುತ್ತಾರೆ. ಆದರೆ ನೇಪಾಳದ ಮುಸಲ್ಮಾನರ ಪ್ರಕಾರ ಅವರಿಗೆ ಹಿಂದೂ ರಾಷ್ಟ್ರವೇ ಹೆಚ್ಚು ಸುರಕ್ಷಿತವೆಂಬ ಭಾವನೆ ಮೂಡಿತ್ತಿದೆಯಂತೆ. ನೇಪಾಳದ ಮುಸಲ್ಮಾನರು ಕೇವಲ ಹಿಂದೂ ರಾಷ್ಟ್ರಕ್ಕಾಗಿ ಸಮರ್ಥನೆಯನ್ನಷ್ಟೇ ನೀಡಿದ್ದಲ್ಲದೆ ನೇಪಾಳವನ್ನ ಮತ್ತೆ ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಹಿಂದೂ ರಾಷ್ಟ್ರಕ್ಕೆ ಸಂಬಂಧಿಸಿದ ಅಭಿಯಾನದ ಕುರಿತಾಗಿ ಅವರು […]

ಸರಕಾರಕ್ಕೆ ಹಿಂದೂ ದೇವಾಲಯಗಳ ಆದಾಯ ಬೇಕಿದ್ದರೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಿ : ಎಂ. ನಾಗೇಶ್ವರ ರಾವ್

Sunday, January 10th, 2021
sanathana

ಮಂಗಳೂರು  : 2020 ರಲ್ಲಿ ಆಂಧ್ರಪ್ರದೇಶದಲ್ಲಿ 228 ದೇವಾಲಯಗಳಲ್ಲಿ ವಿಧ್ವಂಸದ ಘಟನೆಗಳು ನಡೆದಿವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. ಈ ಹಿಂದೂವಿರೋಧಿ ಘಟನೆಗಳ ಹಿಂದೆ ಯೋಜಿತ ಪಿತೂರಿ ಇದೆ. ವಾಸ್ತವದಲ್ಲಿ ಸರಕಾರವು ಎಲ್ಲಾ ಧರ್ಮಗಳಿಗೆ ಭದ್ರತೆಯನ್ನು ಒದಗಿಸಬೇಕು; ಆದರೆ ಸರ್ಕಾರ ಒಂದು ನಿರ್ದಿಷ್ಟ ಧರ್ಮದತ್ತ ವಾಲುತ್ತಿದೆ. ಇದು ಜಾತ್ಯತೀತತೆಯ ಲಕ್ಷಣವಲ್ಲ. ಹಿಂದೂ ಸಮುದಾಯವು ಒಗ್ಗೂಡಿ ಆಂಧ್ರಪ್ರದೇಶ ಸರಕಾರವು ಆಕ್ರಮಿಸಿಕೊಂಡಿರುವ 24,632 ದೇವಾಲಯಗಳ ರಕ್ಷಣೆಗಾಗಿ ‘ಶ್ಯಾಡೋ ಕ್ಯಾಬಿನೆಟ್’ನಂತಹ ‘ಶ್ಯಾಡೋ’ ಟ್ರಸ್ಟ್‌ಗಳನ್ನು ಪ್ರತಿಯೊಂದು ದೇವಾಲಯಗಳಲ್ಲಿ ಸ್ಥಾಪಿಸುವ ಮೂಲಕ ಹೋರಾಡಬೇಕು. […]

ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ದೇಶವಿರೋಧಿ ಸಂಚು : ಕಪಿಲ ಮಿಶ್ರಾ

Monday, August 3rd, 2020
KapilMisra

ಮುಂಬೈ  : ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್‌ಜಿ’ಯ ಅನೇಕ ಬಸ್‌ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ […]

ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ವಹಿಸುತ್ತಲಿವೆ : ಚಾರುದತ್ತ ಪಿಂಗಳೆ

Saturday, August 1st, 2020
pingale

ಮಂಗಳೂರು  :  ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲ ಮಹಾತ್ಮೆ ಗನುಸಾರ ಮುಂಬರುವ ಕಾಲವು ಹಿಂದುತ್ವನಿಷ್ಠರಿಗೆ ಅನುಕೂಲಕರ ಕಾಲವಾಗಿರಲಿದೆ. ಅದಕ್ಕಾಗಿ ನಾವು ನಿರಂತರವಾಗಿ ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುತ್ತಿರಬೇಕು. ಕೊರೋನಾ ಮಹಾಮಾರಿಯ ಕಾಲದಲ್ಲಿ ತಬ್ಲಿಗೀ ಜಮಾತವು ‘ಕೊರೋನಾ ವಾಹಕ’ದ ಪಾತ್ರ ನಿರ್ವಹಿಸಿದರೆ, ಅನೇಕ ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ನಿರ್ವಹಿಸಿದವು. ಪ್ರಸಕ್ತ ಕಾಲದಲ್ಲಿ ರಾಜಕಾರಣ, ಶಿಕ್ಷಣಕ್ಷೇತ್ರ, ಪ್ರಸಾರ ಮಾಧ್ಯಮಗಳು, ಕಲಾಕ್ಷೇತ್ರ ಇತ್ಯಾದಿ ಎಲ್ಲ ಕ್ಷೇತ್ರಗಳಲ್ಲಿ ‘ದೇಶಭಕ್ತ ಹಾಗೂ ಧರ್ಮಪ್ರೇಮಿ’ಗಳ ವಿರುದ್ಧ ‘ದೇಶದ್ರೋಹಿ […]

ಜುಲೈ 30 ರಿಂದ ಆನ್‌ಲೈನ್ ಮೂಲಕ 9ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

Wednesday, July 29th, 2020
Sanathana

ಮಂಗಳೂರು  : ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿಗೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿರುವ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦ ರಂದು ಆಯೋಜಿಸಲಾಗಿರುವ ರಾಮಮಂದಿರದ ಭೂಮಿಪೂಜೆ ಮುಂತಾದ ಸಕಾರಾತ್ಮಕ ವಿಷಯಗಳು ಘಟಿಸುತ್ತಿವೆ. ಇದರಲ್ಲಿ ಪೌರತ್ವ ತಿದ್ದುಪಡಿ ಕಾನೂನು ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಫಲಶ್ರುತಿಯಾಗಿದೆ. ೨೦೧೪ ನೇ ಇಸವಿಯಲ್ಲಿ ‘ಹಿಂದೂ ರಾಷ್ಟ್ರ ಅಧಿವೇಶನದಲ್ಲಿ […]

ಕುಳಾಯಿಯಲ್ಲಿ ಹಿಂದೂ ರಾಷ್ಟ್ರದ ರಣಕಹಳೆ ಮೊಳಗಿಸಿದ ಹಿಂದೂ ಜನಜಾಗೃತಿ ಸಮಿತಿ

Monday, January 27th, 2020
Hindurastra

ಕುಳಾಯಿ : ಶ್ರೀ‌ ವಿಷ್ಣು ಮೂರ್ತಿ ದೇವಸ್ಥಾನ ಕುಳಾಯಿ ಇದರ ಸಭಾಗೃಹದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಭಾವಪೂರ್ಣ ವಾತಾವರಣದಲ್ಲಿ ಜರುಗಿತು. ಸಭೆಯನ್ನು ಹಿಂದುತ್ವವಾದಿಗಳಾದ ಶ್ರೀ. ಮಂಜುನಾಥ್ ಮಾನ್ಯ್ ಇವರು ದೀಪಪಲಪ್ರಜ್ವಲನೆ ಮಾಡಿ ಸಭೆಗೆ ಚಾಲನೆ ನೀಡಿದರು. ಈ‌ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ, ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ಚಂದ್ರ ಮೊಗೇರ್ ಇವರು ಸಭೆಯ ಮುಖ್ಯ ವಕ್ತಾರರಾಗಿ ಪಾಲ್ಗೊಂಡರು. ಶ್ರೀ ಮಂಜುನಾಥ ಇವರು ‘ಹಿಂದೂ ರಾಷ್ಟ್ರದ ಜೊತೆ ಬೆಳಗಬೇಕಾದರೆ […]