Blog Archive

ಪತಿಯನ್ನ ಕೊಂದು ಸಹಜ ಸಾವೆಂದು ನಾಟಕವಾಡಿದ್ದ ಪತ್ನಿ ಅರೆಸ್ಟ್

Tuesday, June 5th, 2018
murdered

ಹುಬ್ಬಳ್ಳಿ: ಪತಿಯನ್ನು ಕೊಂದು ಸಹಜ ಸಾವು ಎಂದು ನಾಟಕವಾಡಿದ್ದ ಪತ್ನಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾವ್ಯ ಅಲಿಯಾಸ್ ಭಾರತಿ(40) ಬಂಧಿತ ಮಹಿಳೆ. ಮೇ 2 ರಂದು ಓಂ ನಗರದಲ್ಲಿ ನಿವಾಸದಲ್ಲಿ ಪತಿ ಶಿವಯೋಗಿ ಹಳೆಮನೆಯನ್ನ ಪತ್ನಿ ಕಾವ್ಯ ಕೊಲೆ ಮಾಡಿದ್ದಳು. ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿದ್ದಳು. ಬಳಿಕ ಮಂಚದ ಮೇಲಿಂದ ಬಿದ್ದು ಸತ್ತಿದ್ದಾರೆಂದು ಎಂದು ಕಥೆ ಕಟ್ಟಿದ್ದಳು. ಆದ್ರೆ ಶಿವಯೋಗಿ ಸಹೋದರಿ ರಾಜೇಶ್ವರಿ ಅವರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ವಿದ್ಯಾನಗರ ಪೊಲೀಸರಿಗೆ ದೂರು ನೀಡಿದ್ದರು. […]

ಜಾತಿ, ಮತ, ಪಂಥ ಎಲ್ಲವನ್ನು ಒಗ್ಗೂಡಿಸಲು ಕಲೆಯಿಂದ ಸಾಧ್ಯ: ನಳಿನ್ ಕುಮಾರ್

Saturday, January 20th, 2018
nalin-kumar

ಮಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅದ್ಭುತವಾದ ಕಲಾಪ್ರಕಾರಗಳು, ಹತ್ತಾರು ಕಲಾ ಸಂಸ್ಕೃತಿ ಒಕ್ಕೂಟಗಳಿರುವ ದೇಶ ಭಾರತ. ಕಲೆಯಲ್ಲಿ ದೇವರನ್ನು ಕಂಡ ಏಕೈಕ ದೇಶ ಭಾರತ. ಕಲಾವಿದರನ್ನು ಸಂತರೆಂದು ಪೂಜಿಸುತ್ತೇವೆ. ಜಾತಿ, ಮತ, ಪಂಥ ಎಲ್ಲವನ್ನು ಒಗ್ಗೂಡಿಸಲು ಕಲೆಯಿಂದ ಮಾತ್ರ ಸಾಧ್ಯ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬೇರೆ ಬೇರೆ ರಾಜ್ಯಗಳಿಗೆ, […]