Blog Archive

ಕೈರಂಗಳದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

Tuesday, February 2nd, 2021
Rape

ಕೊಣಾಜೆ :  ಹದಿನೆಂಟರ ಹರೆಯದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳದಲ್ಲಿ ನಡೆದಿದೆ. ಕೈರಂಗಳ‌ ಗ್ರಾಮದಲ್ಲಿ ಹದಿನೆಂಟರ ಹರೆಯದ ಮೂಗಿ ಯುವತಿಯೊಬ್ಬಳ ಮೇಲೆ ಯಾರು ಇಲ್ಲದೆ ಇರುವುದನ್ನು ಗಮನಿಸಿ ದುಷ್ಕರ್ಮಿಯೊಬ್ಬ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಮನೆ ಮಂದಿ ರವಿವಾರ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವಕನೊಬ್ಬ ಮನೆಗೆ ನುಗ್ಗಿ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಯುವತಿಯನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು, ಆರೋಪಿಯನ್ನು […]

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಎಸ್‌ಡಿಪಿಐ ಮುಖಂಡನ ಬಂಧನ

Sunday, January 24th, 2021
sdpi

ಉಳ್ಳಾಲ : ಅಪ್ರಾಪ್ತ ಬಾಲಕಿಯ ಮೇಲೆ  ಅತ್ಯಾಚಾರ ಯತ್ನ ನಡೆಸಿದ್ದಕ್ಕಾಗಿ ಉಳ್ಳಾಲ ವಲಯದ  ಎಸ್‌ಡಿಪಿಐ ಅಧ್ಯಕ್ಷ ನೊಬ್ಬನನ್ನು ಪೋಕ್ಸೊ ಕಾಯಿದೆಯಡಿ ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿ ತಲೆಮರೆಸಿಕೊಂಡಿದ್ದ ಎಸ್‌ಡಿಪಿಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಸಿದ್ದೀಖ್ ಉಳ್ಳಾಲ್ (43)  ಬಂಧಿತ ಆರೋಪಿ. ಸಹಾಯದ ನೆಪದಲ್ಲಿ ಮಹಿಳೆಯ  ಮನೆಗೆ ಭೇಟಿ ನೀಡುತ್ತಿದ್ದ ಸಿದ್ದೀಖ್ 15ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ. ಮಹಿಳೆಯ ಪತಿ ತೊರೆದಿದ್ದು, ಆಕೆಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಈ ಬಗ್ಗೆ ಮಹಿಳೆ ಜ.19 ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ […]

ಕೈರಂಗಳದಲ್ಲಿ ಸೊಸೆಯ ಮೇಲೆಯೇ ಅತ್ಯಾಚಾರ ನಡೆಸಿದ ಮಾವ

Saturday, January 2nd, 2021
Lakshmi Narayana

ವಿಟ್ಲ : ಮುಡಿಪು ಸಮೀಪದ ಕೈರಂಗಳ ನಿವಾಸಿ ಹವ್ಯಕ ವಲಯದ ಗುರಿಕ್ಕಾರನೊಬ್ಬ ತನ್ನ ಮಗನ ಹೆಂಡತಿ(ಸೊಸೆ)ಯ ಮೇಲೆಯೇ ಅತ್ಯಾಚಾರ ನಡೆಸಿ ಜೀವಬೆದರಿಕೆ ಹಾಕಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ಮೂಲತ: ವಿಟ್ಲ ಸಮೀಪದ ಕಾಂತಿಲ ನಿವಾಸಿಯಾಗಿದ್ದು ಇದೀಗ ಮುಡಿಪು ಸಮೀಪದ ಬಾಳೆಪುಣಿ ಗ್ರಾಮದ ಕೈರಂಗಳ ನಿವಾಸಿ ಹವ್ಯಕ ವಲಯದ ಗುರಿಕ್ಕಾರ ಲಕ್ಮಿನಾರಾಯಣ ಭಟ್ಟ(60)ಪ್ರಾಣಿಗಿಂತಲೂ ಕೀಳಾಗಿ ವರ್ತಿಸಿದ ವಿಕೃತ ಕಾಮುಕ. ಆರು ವರ್ಷಗಳ ಹಿಂದೆ ಈತನ ಪುತ್ರ ಎಸ್.ಜಿ.ಆರ್. ಅರ್ಥ್‌ಮೂವರ್‍ಸ್ ಮಾಲಿಕ ಶಿವರಂಜನ್ ವಿಟ್ಲ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಯುವತಿಯನ್ನು […]

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ, ಐವರು ವಶಕ್ಕೆ

Friday, October 9th, 2020
Kusuma

ಮಂಗಳೂರು : ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಮಂಗಳೂರು ದಕ್ಷಿಣ ಎಸಿಪಿ ನೇತೃತ್ವದ ಪೊಲೀಸ್ ತಂಡ ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಕಣಂತೂರು ಬೆಳ್ಳೇರಿ ಸಮೀಪ  ಸೆ. 25ರಂದು 50 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗ್ಯಾಸ್ ಸ್ಟೌವ್ ತೆರೆದ ಸ್ಥಿತಿಯಲ್ಲಿ ಮತ್ತು ಮನೆಯ ಕರ್ಟೈನ್ಗೆ ಬೆಂಕಿ ಹಾಕಿರುವ ದುಷ್ಕರ್ಮಿಗಳು, ಪ್ರಕರಣ ತಿರುಚುವ ಪ್ರಯತ್ನ ಮಾಡಿದ್ದರು. ಇದರಿಂದಾಗಿ ಪೊಲೀಸರ ತನಿಖೆಗೆ […]

ಉತ್ತರ ಪ್ರದೇಶದ ಬಲ ರಾಮ್ ಪುರ ಗ್ರಾಮದಲ್ಲಿ ಮತ್ತೊಂದು ದಲಿತ ಯುವತಿಯ ಅತ್ಯಾಚಾರ

Friday, October 2nd, 2020
Shahid-and-Sahil

ಲಖನೌ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ ಯುವತಿ ಮೇಲೆ ಕಾಮುಕರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಆಕೆ ಲಖನೌನ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. […]

ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ದೌರ್ಜನ್ಯ ನಡೆಸಿ, ಅತ್ಯಾಚಾರ ಯುವ ಕಾಂಗ್ರೆಸ್ ಪ್ರತಿಭಟನೆ

Friday, October 2nd, 2020
congress Protest

ಮಂಗಳೂರು : ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ದೌರ್ಜನ್ಯ ನಡೆಸಿ , ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಮತ್ತು ಕೇಂದ್ರ ಸರಕಾರವನ್ನು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಎದುರು ಗುರುವಾರ ಮೊಂಬತ್ತಿ ಪ್ರತಿಭಟನೆ, ಪ್ರತಿಕ್ರತಿ ದಹನ ನಡೆಯಿತು. ಪೊಲೀಸರು ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಸುಟ್ಟು ಹಾಕಿದ ಪ್ರಕರಣವನ್ನು ಖಂಡಿಸಿ, ಅತ್ಯಾಚಾರಿ ಠಾಕೂರು ಸಮುದಾಯಕ್ಕೆ ಸೇರಿದ ನಾಲ್ವರು ಕೊಲೆಗಡುಕರಿಗೆ ಶೀಘ್ರ ಮರಣ ದಂಡನೆಯನ್ನು ವಿಧಿಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ […]

20ರ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿ, ನಾಲಗೆಯನ್ನು ಕತ್ತರಿಸಿದ ಭಯಾನಕ ಕಾಮುಕರು

Tuesday, September 29th, 2020
UPrape

ನವದೆಹಲಿ: ನಾಲ್ವರು ಕಾಮುಕರು 20 ವರ್ಷದ ಯುವತಿಯೊಬ್ಬಳನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಕೃತ್ಯವನ್ನು ಬೇರೆಯವರಿಗೆ ತಿಳಿಸದಂತೆ ಆಕೆಯ ನಾಲಗೆಯನ್ನು ಕತ್ತರಿಸಿ ಚಿತ್ರಹಿಂಸೆ ನೀಡಿದ್ದರು. ಆದರೆ ಕಾಮುಕರ ಪೈಶಾಚಿಕ ಕೃತ್ಯಕ್ಕೆ ಒಳಗಾದ ಯುವತಿ  ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು ದೆಹಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ ನಿವಾಸಿ 20 ವರ್ಷದ ದಲಿತ ಯುವತಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ದುಪ್ಪಟ್ಟಾದಿಂದ ಹೊಲಕ್ಕೆ ಎಳೆದುಕೊಂಡು ಹೋಗಲಾಗಿತ್ತು. ಅಲ್ಲದೇ ಆಕೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ನಂತರ […]

ಅವಿವಾಹಿತ ಮಹಿಳೆಯ ಸಂಶಯಾಸ್ಪದ ಸಾವು, ಅತ್ಯಾಚಾರವೆಸಗಿ ಕೊಲೆ ಶಂಕೆ

Saturday, September 26th, 2020
Kusuma

ಕೊಣಾಜೆ :  ಅವಿವಾಹಿತ ಮಹಿಳೆಯೊಬ್ಬರು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹೂ ಹಾಕುವ ಕಲ್ಲು ಸಮೀಪದ ಬೆಳ್ಳೇರಿಯ ದಲ್ಲಿ ಶನಿವಾರ ವರದಿಯಾಗಿದೆ. ಇಲ್ಲಿನ ನಿವಾಸಿ ಕುಸುಮ (53) ಮೃತರು ಎಂದು ಗುರುತಿಸಲಾಗಿದ್ದು ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಸ್ಥಳೀಯರ ಪ್ರಕಾರ ಮಹಿಳೆ ಹೆಚ್ಚಾಗಿ ಯಾರ ಜೊತೆಗೂ ಬೆರೆಯುತ್ತಿರಲಿಲ್ಲ. ಮನೆಯ ಸಿಟ್ ಔಟ್ ನಲ್ಲಿ ಮೊಬೈಲ್ ಮತ್ತು ಕನ್ನಡಕ ಇತ್ತೆನ್ನಲಾಗಿದ್ದು, ಕಿಟಕಿ ಬಾಗಿಲು ತೆರೆದಿದ್ದು ಅಡುಗೆ ಕೋಣೆ ಬಳಿಯ ಬಾಗಿಲು […]

ಮದುವೆ ಮಾತುಕತೆಗೆ ಕರೆಸಿ ಅತ್ಯಾಚಾರ ಎಸಗಿದ ಪೊಲೀಸ್

Thursday, September 3rd, 2020
police Rape

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ಅತ್ಯಾಚಾರ ಎಸಗಿರುವುದಾಗಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿ ಸಾಯಬಣ್ಣ ಮದುವೆಯಾಗುವುದಾಗಿ ನಂಬಿಸಿ  ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈತನ ಜೊತೆಗೆ ಬೆಂಗಳೂರಿನ ರಮೇಶ್ ಗೌಡ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 […]

25 ವರ್ಷದ ಮಹಿಳೆಯ ಮೇಲೆ 139 ಮಂದಿ ಅತ್ಯಾಚಾರ

Sunday, August 23rd, 2020
rape

ಹೈದರಾಬಾದ್: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಸದಸ್ಯರು, ಸಿನಿಮಾ ಕ್ಷೇತ್ರದವರು, ಪತ್ರಕರ್ತರು, ವೈದ್ಯರು ಸೇರಿದಂತೆ 139 ಮಂದಿ ನನ್ನ ಮೇಲೆ 5000ಕ್ಕೂ ಹೆಚ್ಚು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು 25 ವರ್ಷದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಇವರ ಪೈಕಿ ಹಲವರು ಅಮೆರಿಕಾ ಮತ್ತು ಬೆಂಗಳೂರಿನಲ್ಲಿ ಇರುವುದಾಗಿ ಹೈದರಾಬಾದ್ ನ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಗಂಡನ ಮನೆಯವರಿಂದ 2009ರಲ್ಲಿ ಲೈಂಗಿಕ ದೌರ್ಜನ್ಯ, ಹಿಂಸೆ ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆ 2010ರಲ್ಲಿ ಗಂಡನಿಗೆ ವಿಚ್ಛೇದನ […]