Blog Archive

ಧಾರವಾಡ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Tuesday, August 11th, 2020
karave

ಧಾರವಾಡ : ಜಿಲ್ಲೆಯ ಬೇಗೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಸಾವು ಧಾರವಾಡ ಜಿಲ್ಲೆ ಜನತೆಗೆ ಹೆಣ್ಣು ಮಕ್ಕಳನ್ನು ಕಾಪಾಡುವ ಭಯದ ವಾತಾವರಣ ಬಂದಿದೆ, ಆರೋಪಿಗೆ ಶೀಘ್ರವೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ನೇಹ ಬಳಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದೆ. ಅಪರಾಧಿಯನ್ನು ಮಾತ್ರ ಬಂಧಿಸಿದ್ದೀರಿ ಆದರೆ ಅಪರಾಧಿ ಬಶೀರ ನ ಸಂಬಂಧಿಕರು ಪೂಜಾಳಾ ಕುಟುಂಬಕ್ಕೆ ಜೀವ ಬೆದರಿಕೆ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. […]

ಸುಳ್ಯ ಮೂಲದ ಮದರಸ ಶಿಕ್ಷಕನಿಂದ ತನ್ನ16ರ ಮಗಳ ನಿರಂತರ ಅತ್ಯಾಚಾರ, 6 ಮಂದಿ ಗೆಳೆಯರು ಕೃತ್ಯದಲ್ಲಿ ಭಾಗಿ

Tuesday, July 21st, 2020
muslim girl

ಕಾಸರಗೋಡು: ಕಳೆದ ಮೂರು ವರ್ಷಗಳಲ್ಲಿ ತನ್ನ 16 ವರ್ಷದ ಮಗಳನ್ನು ಪದೇ ಪದೇ ಲೈಂಗಿಕ ಕಿರುಕುಳ ನೀಡಿದ 50 ವರ್ಷದ ಮದರಸಾ ಶಿಕ್ಷಕನನ್ನು ನಿಲೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇತರ ಆರು ಮಂದಿಯ ಮೇಲೂ ಆರೋಪ ಹೊರಿಸಲಾಗಿದೆ. ಆರೋಪಿಗಳಾದ ರಿಯಾಸ್ (19), ಇಜಾಜ್ (20), ಮತ್ತು ಮೊಹಮ್ಮದ್ ಅಲಿ (20) ಅವರನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ಇತರ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಸಂತ್ರಸ್ತೆಯ ಮಾವ ನಿಲೇಶ್ವರಂ ಪೊಲೀಸ್ ಠಾಣೆಯಲ್ಲಿ […]

ಮದ್ಯ ಕುಡಿಸಿ ಮಾಡೆಲಿಂಗ್ ಮಾಡುವಂತೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಪಾಪಿ !

Sunday, July 12th, 2020
sudent Rape

ಬೆಂಗಳೂರು: ಮಾಡೆಲಿಂಗ್ ಮಾಡುವಂತೆ, ಬೆತ್ತಲೆ ಮಾಡಿಸಿ  ಫೋಟೋ ತೆಗೆಸಿ ವಿದ್ಯಾರ್ಥಿನಿ ಮೇಲೆ ಮಲತಂದೆಯೇ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಅರಕೆರೆಯ ಸಾಮ್ರಾಟ್ ಲೇಔಟ್ ನಿಂದ ವರದಿಯಾಗಿದೆ. ರೂಪದರ್ಶಿ ಮಾಡಲು ಬೆತ್ತಲೆ ಫೋಟೋ ತೆಗೆದುಕೊಳ್ಳುವಂತೆ, ಮಲತಂದೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೀಡಿಸುತ್ತಿದ್ದು, ಇದರಿಂದ ನೊಂದ 20 ವರ್ಷದ ವಿದ್ಯಾರ್ಥಿನಿ ಹುಳಿಮಾವು ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅರಕೆರೆಯ ಸಾಮ್ರಾಟ್ ಲೇಔಟ್ ನಿವಾಸಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ವಿದ್ಯಾರ್ಥಿನಿಯ ತಾಯಿ ಹಲವು ವರ್ಷಗಳ ಹಿಂದೆ ಗಂಡನಿಂದ ಡೈವೋರ್ಸ್ ಪಡೆದುಕೊಂಡಿದ್ದು ನಂತರ ಆರೋಪಿ […]

ಮಡಿಕೇರಿ : 5 ವರ್ಷದ ಮಗುವಿನ ಮೇಲೆ 14 ವರ್ಷದ ಬಾಲಕನಿಂದ ಅತ್ಯಾಚಾರ

Wednesday, June 3rd, 2020
minor-girl

ಮಡಿಕೇರಿ : ನೆರೆಮನೆಯ 14 ವರ್ಷದ  ಬಾಲಕ  5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿರುವಂತಹ ಆಘಾತಕಾರಿ ಘಟನೆ ಮಡಿಕೇರಿಯ ಹೊರವಲಯದ ಗ್ರಾಮವೊಂದರಲ್ಲಿ ನಡೆದಿದೆ. ನೋವಿನಿಂದ ಬಳಲುತ್ತಿದ್ದ ಮಗುವನ್ನು ಆರೋಗ್ಯ ತಪಾಸಣೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ. ಬಾಲಕನನ್ನು ವಶಕ್ಕೆ ಪಡೆದಿದ್ದು, ಬಾಲಮಂದಿರಕ್ಕೆ ರವಾನೆ ಮಾಡಲಾಗಿದೆ. ಮಗುವಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಡಿಕೇರಿಯಲ್ಲಿ  ನಡೆದಿರುವ  ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಸಣ್ಣ ಮಗುವಿನ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಡಿಕೇರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ […]

ಸೆಕ್ಯುರಿಟಿ ಗಾರ್ಡ್ ಯುವತಿಯನ್ನು ಬೈಕಿನಲ್ಲಿ ಕರೆದೊಯ್ದುಅರಣ್ಯ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನ

Sunday, May 3rd, 2020
Security Guard

ಉಡುಪಿ : ಸೆಕ್ಯುರಿಟಿ ಗಾರ್ಡ್ ಮಹಿಳೆಯೊಬ್ಬರನ್ನು ಸಹಾಯ ನೀಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ  ಘಟನೆ ಮೇ 2 ರ ಶನಿವಾರ ಉಡುಪಿ ಸಂತೆಕಟ್ಟೆ ಯಲ್ಲಿ ನಡೆದಿದೆ. ಬ್ರಹ್ಮಾವರದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ, ಸಂತೆಕಟ್ಟೆ ಯಲ್ಲಿರುವ ತನ್ನ ಮನೆಯ ಕಡೆಗೆ ಹೋಗುತ್ತಿದ್ದಾಗ ಮೋಟಾರ್ ಬೈಕಿನಲ್ಲಿ  ಬಂದ ವ್ಯಕ್ತಿ ನನಗೆ ಸಹಾಯ ಮಾಡಲು ಮುಂದಾದರು, ನಾನು ಅದ್ಕಕೆ ಒಪ್ಪಿ ಅವರ ಬೈಕಿನಲ್ಲಿ ಹಿಂಬದಿ ಸವಾರಳಾಗಿ  ಹೋದೆ ಆದರೆ ಆ ವ್ಯಕ್ತಿ ಬೇರೆ ಮಾರ್ಗದಲ್ಲಿ ಕರೆದೊಯ್ದ ಅತ್ಯಾಚಾರಕ್ಕೆ ಯತ್ನಿಸಿದರು ಎಂದು ದೂರು […]

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲು ಶಿಕ್ಷೆ

Saturday, March 14th, 2020
yakapura

ಕಲಬುರ್ಗಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾಕಾಪುರದ ಯಲ್ಲಾಲಿಂಗ(35) ಮರಣದಂಡನೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯ ಕುಟುಂಬಕ್ಕೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ ನೀಡಿದೆ. ಚಾಕಲೆಟ್ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಗಲ್ಲು […]

ಮಂಗಳೂರು : 19ನೇ ಯುವತಿಯ ಕೊಲೆ ಪ್ರಕರಣ ಸಾಬೀತು; ಫೆ.15 ರಂದು ಸೈನೈಡ್​ ಮೋಹನ್‌ಗೆ ಶಿಕ್ಷೆ ಪ್ರಕಟ

Thursday, February 13th, 2020
mohan

ಮಂಗಳೂರು : ಮದುವೆ ಆಗುವ ಭರವಸೆ ನೀಡಿ, ಬಳಿಕ ಅತ್ಯಾಚಾರ ಎಸಗಿ ಸೈನೈಡ್ ಬಳಕೆ ಮಾಡಿಕೊಂಡು ಹತ್ಯೆ ಮಾಡಿರುವ 19ನೇ ಯುವತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯರ ಸರಣಿ ಹಂತಕ ಸೈನೈಡ್ ಮೋಹನ್‌ ಮೇಲಿನ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ. 2006ರಲ್ಲಿ ಮೋಹನ್ ಸಂಬಂಧಿಕರೊಬ್ಬರ ಮದುವೆಗೆ ತೆರಳಿದ್ದ ಸಂದರ್ಭ ಕೇರಳ ರಾಜ್ಯದ ಕಾಸರಗೋಡಿನ 23 ವರ್ಷದ ಯುವತಿಯ ಪರಿಚಯ ಆಗಿತ್ತು. ಆ ವೇಳೆ ಆತ ತನ್ನನ್ನು ಶಿಕ್ಷಕ ಹಾಗೂ ಆಕೆಯದ್ದೇ ಜಾತಿಯವನು […]

ಮಾರಕ ಕರೊನಾ ಸೋಂಕಿಗೆ 490 ಜನ ಬಲಿ : 24 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢ

Thursday, February 6th, 2020
virus

ಬೀಜಿಂಗ್ : ಮಾರಕ ಕರೊನಾ ಸೋಂಕಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ 490ಕ್ಕೆ ಏರಿದೆ. ಸೋಂಕಿನ ಕೇಂದ್ರ ಬಿಂದು ವುಹಾನ್ನಲ್ಲಿ ಸೋಂಕಿತರ ಸಂಖ್ಯೆಯಲ್ಲಿ 3,887 ಹೆಚ್ಚಳವಾಗಿದ್ದು, ಒಟ್ಟಾರೆ ಚೀನಾದಲ್ಲಿ 24,324 ಮಂದಿಗೆ ವೈರಸ್ ತಗುಲಿರುವುದು ದೃಢಪಟ್ಟಿದೆ. ಹಾಂಕಾಂಗ್ ಮತ್ತಿತರ ಕಡೆಗಳಲ್ಲಿ ಕರೊನಾ ವೈರಸ್ನಿಂದ ಆತಂಕ ಹೆಚ್ಚಿದೆ. ಈ ಮಧ್ಯೆ, ಜಪಾನ್ನ ಜಹಜಿನಲ್ಲಿ 10 ಮಂದಿಯಲ್ಲಿ ಮಾರಣಾಂತಿಕ ವೈರಸ್ ಕಾಣಿಸಿಕೊಂಡಿದೆ. ಈ ಮೂಲಕ ಜಪಾನ್ನಲ್ಲಿ ಸೋಂಕು ಪೀಡಿತರ ಸಂಖ್ಯೆ 33ಕ್ಕೆ ಏರಿದೆ. ಹಾಂಕಾಂಗ್ನಲ್ಲಿ ಸೋಂಕು ತಗುಲಿರುವ ನಾಲ್ಕು ಪ್ರಕರಣಗಳು ಪತ್ತೆಯಾಗಿದ್ದು, […]

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಬಂಧನ

Friday, December 27th, 2019
veersh

ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗ್ರಾಮದಲ್ಲಿ ನಡೆದಿದೆ. ವೀರೇಶ್ (24) ಬಂಧಿತ ಆರೋಪಿಯಾಗಿದ್ದು, ನಿನ್ನೆ ಬೆಳಗ್ಗೆ ಬಾಲಕಿ ಮನೆಯಿಂದ ಹೊರ ಬಂದ ವೇಳೆ ಕೃತ್ಯಕ್ಕೆ ಮುಂದಾಗಿದ್ದಾನೆ. ಆದರೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ನೆರವಿಂದ ಬಾಲಕಿ ಪಾರಾಗಿದ್ದಾಳೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ (ಪೋಕ್ಸೋ) ಕಾಯ್ದೆ […]

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು

Wednesday, December 11th, 2019
vhp-putturu

ಪುತ್ತೂರು: ಕೆಯ್ಯೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿಎಚ್‍ಪಿ ಮತ್ತು ಬಜರಂಗದಳ ವತಿಯಿಂದ ಪುತ್ತೂರು ವಿಧಾನಸೌಧ ಮುಂಭಾಗದ ಮಂಗಳವಾರ  ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ ಮಾತನಾಡಿ, ಕೆಯ್ಯೂರು ಗ್ರಾಮದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕು. ಕಾನೂನು ಹಿಡಿತದಿಂದ ತಪ್ಪಿಸಿಕೊಳ್ಳುವ ಇಂತಹ ವ್ಯಕ್ತಿಗಳಿಗೆ ಗಡಿಪಾರಿನಂತಹ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ […]