Blog Archive

ಮೂಡಬಿದಿರೆಯಲ್ಲಿ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆ

Wednesday, July 4th, 2018
minor girl

ಮೂಡಬಿದರೆ :  ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ತಂದೆಯನ್ನು ಮೂಡಬಿದಿರೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಲ್ಲಿಯ ಪುಚ್ಚೆಮೊಗರು ಎಂಬಲ್ಲಿನ ಗಿರಣಿಯೊಂದರಲ್ಲಿ ಕೆಲಸಕ್ಕಿದ್ದ ಈತ, ಜಾರ್ಖಂಡ್ ಮೂಲದ ಪತ್ನಿ ಹಾಗು ಮಗಳೊಂದಿಗೆ ಅಲ್ಲಿಯೇ ಸಮೀಪದ ಮನೆಯೊಂದರಲ್ಲಿ ವಾಸವಾಗಿದ್ದ. ಈತನ 14 ವರ್ಷದ ಮಗಳು ಇತ್ತೀಚೆಗೆ ರಾತ್ರಿ ಮನೆಯ ಹೊರಗೆ ಮಲಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಕುರಿತು ಮೂಡಬಿದಿರೆ ಪೊಲೀಸರು ಬಾಲಕಿಯ ವಿಚಾರಣೆ ನಡೆಸಿದಾಗ ಸರಿಯಾದ ಕಾರಣ ತಿಳಿಸಿರಲಿಲ್ಲ. ಪರಿಣಾಮ ಆಕೆಯನ್ನು ಮಂಗಳೂರಿನ […]

ಉಪ್ಪಿನಂಗಡಿಯಲ್ಲಿ ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್

Saturday, February 17th, 2018
gang-rape

ಮಂಗಳೂರು: ದಲಿತ ಯುವತಿಯ ಮೇಲೆ ಯುವಕರಿಬ್ಬರು ಅತ್ಯಾಚಾರ ನಡೆಸಿದ ಪೈಶಾಚಿಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಈ ಘಟನೆ ನಡೆದಿದೆ. ಗುರುವಾರ ತಡ ರಾತ್ರಿ ಈ ಘಟನೆ ನಡೆದಿದ್ದು ದಲಿತ ಯುವತಿಯ ಮೇಲೆ ಕಾಮುಕರು ನೆಲ್ಯಾಡಿ ಎಂಬಲ್ಲಿ ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಗುರುವಾರ ರಾತ್ರಿ ಬೆಟ್ಟಂಪಾಡಿಯ ಯುವತಿಯೋರ್ವಳನ್ನು ಕರೆತಂದು ನೆಲ್ಯಾಡಿ ಬಳಿಯ ಖಾಲಿ ಮನೆಯೊಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು […]

ಉಚ್ಚಿಲ: ವೃದ್ಧ ಕಾಮುಕನೋರ್ವ, ಬಾಲಕಿ ಮೇಲೆ ಅತ್ಯಾಚಾರ

Thursday, November 2nd, 2017
rape case

ಮಂಗಳೂರು:  60 ವರ್ಷದ ವೃದ್ಧ ಕಾಮುಕನೋರ್ವ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ದುಷ್ಕೃತ್ಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ರಝಾಕ್ (60) ಅತ್ಯಾಚಾರವೆಸಗಿರುವ ಆರೋಪಿ. ಉಳ್ಳಾಲ ಪೊಲೀಸರು ಈತನನ್ನು ಬಂಧಿಸಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಒಬ್ಬನ ಬಂಧನ

Wednesday, February 8th, 2017
arrested

ಮಂಗಳೂರು: ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೊಣಾಜೆ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಬಂಧಿತನ್ನು ಬೊಳಿಯಾರ್ ನಿವಾಸಿ ಮಹಮ್ಮದ್ ಮುಸ್ತಾಫ (23) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ಆಶ್ರಫ್ ತಲೆಮರೆಸಿಕೊಂಡಿದ್ದಾನೆ. ಕೆಲ ತಿಂಗಳ ಹಿಂದೆ ಇಬ್ಬರು ಆರೋಪಿಗಳು ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ತ ಯುವತಿ ಕೊಣಾಜೆ ಠಾಣೆಗೆ ದೂರು ನೀಡಿದ್ದಳು. ಬಂಧಿತ ಮುಸ್ತಾಫನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ನಾಲ್ಕನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್‌‌

Wednesday, December 28th, 2016
Umesh

ಮಂಗಳೂರು: ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಕೃತ್ಯ ಎಸಗಿರುವ ಆರೋಪಿ ಉಮೇಶ್ ಬಜರಂಗದಳದ ಕಾರ್ಯಕರ್ತ ಎನ್ನಲಾಗುತ್ತಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿಯ ಪ್ರತಿಭಟನೆ

Friday, December 23rd, 2016
Hindu-jagarana-vedike

ಮಂಗಳೂರು: ಶಿವಮೊಗ್ಗದ ಸಕ್ರೆಬೈಲು ಬಳಿ ಅಪ್ರಾಪ್ತ ಬಾಲಕಿಯ ಮೇಲೆ 45 ದಿನಗಳ ಕಾಲ ನಿರಂತರ ಅತ್ಯಾಚಾರವೆಸಗಿದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣದ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಯಿತು. ಈ ಹಿಂದೆಯೂ ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಪೂಜಾರಿ ಮೇಲೆ ಧರ್ಮಾಂಧರು ಸಾಮೂಹಿಕ ಅತ್ಯಾಚಾರ ಮಾಡಿ ಆಕೆಯನ್ನು ಹತ್ಯೆಗೈದಿದ್ದರು. ಪೊಲೀಸ್ ವರದಿಯ ಪ್ರಕಾರ ಶಿವಮೊಗ್ಗ ವಲಯದಲ್ಲಿ ಕಳೆದ ಮೂರು ವರ್ಷದಲ್ಲಿ 86 […]

ಬಾಲಕಿಯನ್ನು ಶಿಕ್ಷಣ ನೀಡುವುದಾಗಿ ಕರೆದುಕೊಂಡು ಹೋಗಿ ಅತ್ಯಾಚಾರ: ಆರೋಪಿಗಳ ಬಂಧನ

Friday, December 23rd, 2016
Thokkottu

ಮಂಗಳೂರು: ಬಾಲಕಿಯನ್ನು ಶಿಕ್ಷಣ ನೀಡುವುದಾಗಿ ಕರೆದುಕೊಂಡು ಹೋಗಿ ಗೆಳೆಯನ ಮನೆಯಲ್ಲಿರಿಸಿ ನಿರಂತರ ಅತ್ಯಾಚಾರವೆಸಗಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರವೆಸಗಿದ ಆರೋಪಿ ಡಾವರ್ನ್‌ ಡಿಸೋಜ (42) ಹಾಗೂ ಮನೆಯ ಯಜಮಾನ ಮೆಲ್ವಿನ್ ಎಂಬಿಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಯಾದ ಬಾಲಕಿಯನ್ನು ಅವಳ ಪರಿಚಿತನೊಬ್ಬ ಆಕೆಗೆ ಶಿಕ್ಷಣ ನೀಡುವುದಾಗಿ ಆಕೆಯ ತಾಯಿಯ ಮನವೊಲಿಸಿ ತೊಕ್ಕೊಟ್ಟಿನ ಅಡಂಕುದ್ರು ಬಳಿಯಿರುವ ತನ್ನ ಗೆಳೆಯ ಮೆಲ್ವಿನ್ ಮನೆಯಲ್ಲಿರಿಸಿದ್ದ. ಬಳಿಕ ಹಲವು ದಿನಗಳಿಂದ ನಿರಂತರ ಅತ್ಯಾಚಾರ […]

ಯುವಕನಿಂದ ಆದಿವಾಸಿ ಯುವತಿಯೋರ್ವಳ ಮೇಲೆ ಅತ್ಯಾಚಾರ: ಆರೋಪಿ ಬಂಧನ

Monday, October 3rd, 2016
lokesh-bangera

ಮಂಗಳೂರು: ಆದಿವಾಸಿ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಗೇರುಕಟ್ಟೆ ನಿವಾಸಿ ಲೋಕೇಶ್ ಬಂಗೇರ (23) ಎಂಬಾತ ಬಂಧಿತ ಆರೋಪಿ. ಆರು ತಿಂಗಳ ಹಿಂದೆ ಇಲ್ಲಿನ ರೆಂಕೆದಗುತ್ತು ಸಮೀಪದ ಮನೆಯಿಂದ ಪೇಟೆ ಕಡೆ ಹೋಗುತ್ತಿದ್ದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ತಡೆದ ಈತ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಹೆದರಿದ ಯುವತಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎನ್ನಲಾಗಿದೆ. ಇದೀಗ ಯುವತಿ ಗರ್ಭಿಣಿಯಾಗಿದ್ದು ದೂರು ನೀಡಿದ್ದಾಳೆ. ಯುವತಿಗೆ ಬೆಳ್ತಂಗಡಿ ಸರ್ಕಾರಿ […]

ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಯತ್ನ-ಆರೋಪಿ ಪೋಲೀಸ್ ವಶಕ್ಕೆ

Monday, December 21st, 2015
Haneefa

ಉಪ್ಪಳ: ಬಾಡಿಗೆ ಕ್ವಾರ್ಟ್ರಸ್ ನಲ್ಲಿ ವಾಸವಿರುವ ಕರ್ನಾಟಕ ಮೂಲದ ದಂಪತಿಗಳ ಕುರುಡಿ ಅಪ್ರಾಪ್ತ ಬಾಲಕಿಯೋರ್ವೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಸೋಮವಾರ ಅಪರಾಹ್ನ ಉಪ್ಪಳ ಹಿದಾಯತ್ ನಗರದಲ್ಲಿ ನಡೆದಿದ್ದು, ಪೋಲೀಸರ ಸಕಾಲಿಕ ಕಾರ್ಯಾಚರಣೆಯಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಉಪ್ಪಳದ ಹಿದಾಯತ್ ನಗರದ ಬಾಡಿಗೆ ಕೊಠಡಿಯಲ್ಲಿ ವಾಸಿಸುವ ಕರ್ನಾಟಕ ಮೂಲದ ಕಲಂದರ್ ಹಾಗೂ ಅಫ್ರಿದಾಬಾನು ದಂಪತಿಗಳ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿಯನ್ನು ನೆರೆಮನೆಯ ವ್ಯಕ್ತಿಯಾದ ಮೊಹಮ್ಮದ್ ಹನೀಫಾ(50)ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ದೂರಲಾಗಿದೆ. ಸೋಮವಾರ ಅಪರಾಹ್ನ ದಂಪತಿಗಳು ತಮ್ಮ ಇಬ್ಬರ ಮಕ್ಕಳ ಪೈಕಿ […]

ರಾಘವೇಶ್ವರ ಶ್ರೀಗಳಿಗೆ ನಿರೀಕ್ಷಣಾ ಜಾಮೀನು

Thursday, October 9th, 2014
Raghaweshwara Swami

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ಮಠಾಧೀಶ ರಾಘವೇಶ್ವರ ಶ್ರೀಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಮಠದ ಕಲಾವಿದರು ನೀಡಿದ್ದ ಅತ್ಯಾಚಾರ ದೂರಿನಿಂದಾಗಿ ಬಂಧನ ಭೀತಿ ಎದುರಿಸುತ್ತಿದ್ದ ರಾಮಚಂದ್ರಾಪುರ ಮಠದ ಮಠಾಧೀಶ ರಾಘವೇಶ್ವರ ಶ್ರೀಗಳಿಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯದ ತೀರ್ಪು ತಾತ್ಕಾಲಿಕ ನೆಮ್ಮದಿ ನೀಡಿದ್ದು, 30 ದಿನಗಳ ಅವಧಿಗಾಗಿ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ, 2 ಲಕ್ಷ ರು. […]