Blog Archive

ಮಂಗಳೂರಿನಿಂದ ಚೆನ್ನೈ ರೈಲಿನಲ್ಲಿ ಜರ್ಮನ್‌ ಮಹಿಳೆಯ ಅತ್ಯಾಚಾರ

Tuesday, January 14th, 2014
German woman

ಮಂಗಳೂರು : ಮಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಜರ್ಮನ್‌ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ವಿದೇಶಿಯರ ಮೇಲೆ ನಡೆದ ಆತ್ಯಾಚಾರಕ್ಕೆ ಇನ್ನೊಂದು ಪ್ರಕರಣ ಸೇರಿದೆ. ಅತ್ಯಾಚಾರ ನಡೆಸಿದ ಆರೋಪಿ ಮಂಗಳೂರಿಗೆ ಬಂದಿದ್ದು ಈತನ ಪತ್ತೆಗಾಗಿ ಪೊಲೀಸ್‌ ಆಧಿಕಾರಿಗಳು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ ಎಫ್ಐಆರ್‌ ದಾಖಲಿಸಿರುವ ರೈಲ್ವೆ ಪೊಲೀಸರು ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ದ.ಕ ಜಿಲ್ಲೆಯಲ್ಲಾದ ಮಹಿಳೆಯರ ಅಸಹಜ ಸಾವುಗಳ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Thursday, October 10th, 2013
Protest

ಮಂಗಳೂರು : ದ.ಕ ಜಿಲ್ಲೆಯಲ್ಲಾದ ಮಹಿಳೆಯರ ಅಸಹಜ ಸಾವುಗಳ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿ‌ಐ ತನಿಖೆಗೆ ಒತ್ತಾಯಿಸುವಂತೆ ವಿವಿಧ ಸಂಘಟನೆಗಳ ವತಿಯಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಯಿತು. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಟಿ.ಎನ್.ಸೀಮಾ ಅವರು ಪ್ರತಿಭಟನೆಯನ್ನುದ್ದೇಶಿಸಿ ,  ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿಯಾದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೊಳಗಾಗಿ ಒಂದು ವರ್ಷವಾಗಿದೆ. ಇಲ್ಲಿಯವರೆಗೂ ನಿಜವಾದ ಅಪರಾಧಿಗಳನ್ನು ಬಂಧಿಸಲು […]

15 ಹರೆಯದ ಬುದ್ಧಿ ಮಾಂಧ್ಯ ಯುವತಿಯ ಅತ್ಯಾಚಾರಗೈದ ಕೂಲಿ ಕಾರ್ಮಿಕ

Saturday, August 24th, 2013
moodabidire-rape-case

ಮೂಡುಬಿದರೆ: ಅಪ್ರಾಪ್ತ ಬುದ್ಧಿ ಮಾಂಧ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭವತಿಯನ್ನಾಗಿ ಮಾಢಿದ ಕೂಲಿ ಕಾರ್ಮಿಕನೊಬ್ಬನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಪ್ಪೆಪದವು ಗ್ರಾಮದ ಕಲ್ಲಾಡಿ ಜಾರಿಗೆಕಟ್ಟೆಯಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ. ಕುಪ್ಪೆಪದವು-ಇರುವೈಲು ಗಡಿಭಾಗದಲ್ಲಿರುವ ಕಲ್ಲಾಡಿ ಜಾರಿಗೆಕಟ್ಟೆಯ ನಿವಾಸಿ, ಕಲ್ಲಾಡಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷನಾಗಿದ್ದ ಕೂಲಿ ಕಾರ್ಮಿಕ ದಲಿತ ವ್ಯಕ್ತಿ ಸುಂದರ್(55) ಎಂಬಾತ ತನ್ನ ಪಕ್ಕದಮನೆಯ 15 ಹರೆಯದ ಬುದ್ಧಿಮಾಂದ್ಯ ಹುಡುಗಿಯನ್ನು ತನ್ನ ಲೈಂಗಿಕ ತೃಷೆಗೆ ಬಳಸಿದ್ದಾನೆ. ಆರೋಪಿಗೆ ಮೂವರು […]

ಉಡುಪಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Tuesday, July 30th, 2013
udupi rape accused

ಉಡುಪಿ : ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಯೋಗೇಶ, ಹರಿಪ್ರಸಾದ್ ಮತ್ತು ಆನಂದನನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರಿಗೆ ನ್ಯಾಯಾಧೀಶರು ಆಗಸ್ಟ್ 12 ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ. ಈ ಮೂವರೂ ಆರೋಪಿಗಳನ್ನು  ಜುಲೈ 15 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ನ್ಯಾಯಾಧೀಶರ ತೀರ್ಪಿನಂತೆ ಜುಲೈ 29 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು . ಕಾನೂನಿನಂತೆ ಆರೋಪಿಗಳನ್ನು ಪ್ರತೀ 15 ದಿವಸಗಳಿಗೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ನ್ಯಾಯಾಧೀಶರು ಸೂಚಿಸುತ್ತಾರೆ. ಅವರನ್ನು ಇಂದು ಈ […]

ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಇಬ್ಬರು ಆರೋಪಿಗಳ ಬಂಧನ

Monday, July 22nd, 2013
Kerala Rapist

ಕಾಸರಗೋಡು:  ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಗೆ ಬಿಡುವುದಾಗಿ ಹೇಳಿ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ ಇಬ್ಬರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಾರಡ್ಕ ನಿವಾಸಿ ಆಟೋರಿಕ್ಷಾ ಚಾಲಕ ಇಬ್ರಾಹಿಂ ಬಾಲಕಿಯನ್ನು ಜು.17ರಂದು ಬಲವಂತವಾಗಿ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ತನ್ನ ಗೆಳೆಯ ಖಾಲಿದ್ ನೊಂದಿಗೆ ಜನವಾಸವಿಲ್ಲದ ಮನೆಯಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಲಭಿಸಿದ ದೂರಿನನ್ವಯ ತನಿಖೆ ನಡೆಸಿದಾಗ ಆರೋಪಿಗಳ ಹೆಸರು ಬಹಿರಂಗವಾಗಿದೆ.

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮೂರನೇ ಆರೋಪಿ ಸೆರೆ

Thursday, June 27th, 2013
Manipal Rapist

ಉಡುಪಿ: ಮಣಿಪಾಲದಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯ ಪ್ರಕರಣಕ್ಕೆ ಸಂಭಂದಿಸಿದಂತೆ  ಪೊಲೀಸರು ಮೂರನೇ ಆರೋಪಿಯಾದ ಆನಂದನನ್ನು ಇಂದು ಸಂಜೆ ಪರ್ಕಲದ ಬಡಗಬೆಟ್ಟುವಿನಿಂದ ಬಂಧಿಸಿದ್ದಾರೆ, ಪ್ರಮುಖ ಆರೋಪಿ ಆನಂದ ತನ್ನ ಸ್ನೆಹಿತರ ಬಂಧನದ ಸುದ್ದಿ ತಿಳಿದು ತಾನು ಬಂಧನದಿಂದ ತಪ್ಪಿಸಲು ಮನೆಯ ಸಮೀಪದ ಕಾಡಿನಲ್ಲಿ ಮರವೊಂದಕ್ಕೆ ನೇಣು ಹಾಕಲು ಪ್ರಯತ್ನಿಸುವಾಗ ಸ್ಥಳಿಯರು ಗಮನಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಮಣಿಪಾಲ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಿ […]

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಕೆ.ಜೆ.ಜಾರ್ಜ್

Sunday, June 23rd, 2013
Home Minister KJ George

ಉಡುಪಿ:  ಮಣಿಪಾಲದಲ್ಲಿ ಜೂನ್ 20 ರಂದು ನಡೆದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವ ಕೆ.ಜೆ.ಜಾರ್ಜ್  ಮಣಿಪಾಲ ಆಸ್ಪತ್ರೆಗೆ ಇಂದು ಬೆಳಿಗ್ಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾಗಿರುವ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದು, ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದರು. ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ. ಎಂಟು […]

ಮಣಿಪಾಲದಲ್ಲಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಖಂಡಿಸಿ ಅಭಾವಿಪದಿಂದ ಬೃಹತ್ ಪ್ರತಿಭಟನೆ

Sunday, June 23rd, 2013
abvp students protest

ಮಂಗಳೂರು : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮಂಗಳೂರು ಅಭಾವಿಪವು ಬೆಸೆಂಟ್ ಕಾಲೇಜು ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನಾ ಸಭೆಯನ್ನು ನಡೆಸಿತು. ನೂರಾರು ವಿದ್ಯಾರ್ಥಿ/ ವಿದ್ಯಾರ್ಥಿನಿಯರು  ಪ್ರತಿಭಟನೆಯಲ್ಲಿ ಭಾಗವಹಿಸಿ ಅತ್ಯಾಚಾರ ಪ್ರಕರಣದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಅಭಾವಿಪದ ಮಾಜಿ ರಾಜ್ಯ ಕಾರ್ಯದರ್ಶಿ ರವಿಚಂದ್ರ ಪಿ.ಎಂ. ಇದೊಂದು ಹೇಯ ಕೃತ್ಯವಾಗಿದ್ದು, ಸರಕಾರ 24 ತಾಸೊಳಗೆ ಆರೋಪಿಗಳನ್ನು […]

ಮಣಿಪಾಲದಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ

Friday, June 21st, 2013
Manipal Rape

ಉಡುಪಿ  : ಮಣಿಪಾಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯನ್ನು ಮೂವರು ಕಾಮಾಂಧರು ಅಪಹರಿಸಿ, ಅತ್ಯಾಚಾರ ಮಾಡಿದ್ದಾರೆ. ವಿದ್ಯಾರ್ಥಿನಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ರಾತ್ರಿ 11.30ರ ಸುಮಾರಿಗೆ ರಾತ್ರಿ ಲೈಬ್ರರಿಯಿಂದ ಹಾಸ್ಟೆಲ್ ಗೆ ಹೋಗಲು ವಿದ್ಯಾರ್ಥಿನಿ ತೆರಳುತ್ತಿದ್ದ ಕೇರಳ ಮೂಲದ 22 ವರ್ಷ ಪ್ರಾಯದ ಮಣಿಪಾಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯನ್ನು ಆಟೋರಿಕ್ಷಾದಲ್ಲಿ ಅಪಹರಿಸಿದ, ದುಷ್ಕರ್ಮಿಗಳು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ನಂತರ ಆಕೆಯನ್ನು ಮಣಿಪಾಲದ ಮಾಂಡವಿ ಪ್ಲಾಜಾದ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಆಟೋದಲ್ಲಿ ಬಂದ […]

ಯುವತಿಯ ನಗ್ನ ಫೋಟೊ ಫೇಸ್ ಬುಕ್ ಗೆ ಅಪ್ ಲೋಡ್ ಮಾಡಿದ ಪ್ರಿಯಕರ

Friday, June 21st, 2013
Kusumadhara

ಸುಳ್ಯ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟೀ ಸ್ಟಾಲ್ ಹೊಂದಿರುವ ಅಲೆಟ್ಟಿ ಗ್ರಾಮದ ಮೊರಂಗಲ್ಲು ನಿವಾಸಿ ಕುಸುಮಾಧರ(26) ಎಂಬಾತ ಸಂಬಂಧಿ ಯುವತಿಯೊಬ್ಬಳನ್ನು  ಅತ್ಯಾಚಾರ ಮಾಡಿ ಆಕೆಯ ನಗ್ನ ಚಿತ್ರಗಳನ್ನು ಫೇಸ್ ಬುಕ್ ಗೆ ಅಪಲೋಡ್ ಮಾಡಿ ಸಿಕ್ಕಿಬಿದ್ದಿದ್ದಾನೆ. ಸುಳ್ಯ ಅರಣ್ಯ ಇಲಾಖೆಯಲ್ಲಿ ಗುಮಾಸ್ತೆಯಾಗಿರುವ ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಯುವತಿ ಈ ಬಗ್ಗೆ ದೂರು ನೀಡಿದ್ದು,  ಸುಳ್ಯ ಪೊಲೀಸರು ಕುಸುಮಾಧರನನ್ನು ಆತನ ಟೀ ಸ್ಟಾಲ್ ನಿಂದ ಗುರುವಾರ ಬಂಧಿಸಿದ್ದಾರೆ.  ಈತನ ವಿರುದ್ಧ ಅತ್ಯಾಚಾರ ಮತ್ತು ಜೀವ ಬೆದರಿಕೆ ದೂರು ದಾಖಲು ಮಾಡಲಾಗಿದೆ. […]