Blog Archive

ಕೊಡಗನ್ನು ಅಪರಾಧ, ಅಪಘಾತ ಮುಕ್ತ ಜಿಲ್ಲೆಯಾಗಿಸಲು ಪೊಲೀಸರೊಂದಿಗೆ ಸಹಕರಿಸಿ : ದಿನೇಶ್ ಕುಮಾರ್

Thursday, January 23rd, 2020
dinesh-kumar

ಮಡಿಕೇರಿ : ಕೊಡಗು ಜಿಲ್ಲೆಯನ್ನು ಅಪರಾಧ ಮತ್ತು ಅಪಘಾತ ಮುಕ್ತ ಜಿಲ್ಲೆಯನ್ನಾಗಿಸಲು ಪೊಲೀಸರು ಸಕಲ ಪ್ರಯತ್ನ ಕೈಗೊಳ್ಳುತ್ತಿದ್ದು ಪೊಲೀಸರೊಂದಿಗೆ ಈ ನಿಟ್ಟಿನಲ್ಲಿ ನಾಗರಿಕರ ಸಹಕಾರ ಕೂಡ ಅತ್ಯಗತ್ಯ ಎಂದು ಮಡಿಕೇರಿ ವಿಭಾಗದ ಡಿವೈಎಸ್ಪಿ ಬಾರಿಕೆ ದಿನೇಶ್ ಕುಮಾರ್ ಮನವಿ ಮಾಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಆಯೋಜಿಸಿದ್ದ ಕಾನೂನು ಪರಿಪಾಲನೆ ವಿಚಾರ ಕುರಿತ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ವಿಭಾಗದ ಪೊಲೀಸ್ ಉಪ ಅಧೀಕ್ಷಕ ದಿನೇಶ್ ಕುಮಾರ್, ಪೊಲೀಸರು ಎಂದರೆ ಜನರಲ್ಲಿರುವ ಭಯದ ಭಾವನೆ ಇನ್ನೂ ಹೋಗಿಲ್ಲ. […]

ಮಡಿಕೇರಿ : ಬೈಕ್ – ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

Saturday, January 11th, 2020
madikeri

ಮಡಿಕೇರಿ : ಬೈಕ್ -ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮಡಿಕೇರಿ ಹೊರವಲಯದ ಮಂಗಳೂರು ಹೆದ್ದಾರಿಯ ಕೊಯನಾಡು ದೇವರಕೊಲ್ಲಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಇಂದು ಬೆಳಿಗ್ಗೆ8.30 ಘಂಟೆಗೆ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತಿದ್ದ ಬಸ್‌ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ನಲ್ಲಿದ್ದ ಇಬ್ಬರು ಪ್ರವಾಸಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರ ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಕೊಡಗು ಎಸ್ಪಿ, ಸುಮನ್‌ ಪನ್ನೇಕರ್‌ ಭೇಟಿ ನೀಡಿದ್ದರು. ಮಡಿಕೇರಿ‌ […]

ಸುಳ್ಯ : ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Tuesday, October 1st, 2019
sulya

ಸುಳ್ಯ : ಇಲ್ಲಿನ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನ ಕಟ್ಟೆ ಸಮೀಪ ಇಂದು ಸಂಜೆ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಮಡಿಕೇರಿಯ ಮೊಣ್ಣಂಗೇರಿಯವರೆಂದು ತಿಳಿದುಬಂದಿದೆ. ಅಪಘಾತಕ್ಕೀಡಾದ ಕಾರು ಪುತ್ತೂರಿನಿಂದ ಮಡಿಕೇರಿ ಕಡೆಗೆ ಸಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಕಾರು ಅಡ್ಕಾರು ಮಾವಿನಕಟ್ಟೆ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಈಚರ್ ಲಾರಿ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬರು […]

ರಿಕ್ಷಾ – ಲಾರಿ ನಡುವೆ ನಡೆದ ಅಪಘಾತ, ಆಟೊ ಚಾಲಕ ಮೃತ

Saturday, November 11th, 2017
kiran

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಆಟೊ ರಿಕ್ಷಾ – ಲಾರಿ ನಡುವೆ ನಡೆದ ಅಪಘಾತದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕುಂಬಳೆ ಶಾಂತಿಪಳ್ಳದ ಕಿರಣ್ ( 29) ಎಂದು ಗುರುತಿಸಲಾಗಿದೆ. ಕಾಸರಗೋಡು ಕಡೆಯಿಂದ ಮಂಗಳೂರು ನತ್ತ ತೆರಳುತ್ತಿದ್ದ ಲಾರಿ ಮತ್ತು ಕುಂಬಳೆ ಕಡೆಗೆ ಹೋಗುತ್ತಿದ್ದ ರಿಕ್ಷಾ ನಡುವೆ ಅಪಘಾತ ನಡೆದಿದೆ. ಅಪಘಾತದಿಂದ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ಕಿರಣ್ ರನ್ನು ಕುಂಬಳೆ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.

ಬೈಕ್ ಮತ್ತು ಲಾರಿ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Saturday, November 4th, 2017
accident

ಕುಂದಾಪುರ: ಕೋಟ ಠಾಣಾ ವ್ಯಾಪ್ತಿಯ ಬಿದ್ಕಲ್ ಕಟ್ಟೆ ಸಮೀಪದ ಗಾವಳಿ ಎಂಬಲ್ಲಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಹಾಲಾಡಿಯ ಶಂಕರ್ ಕುಲಾಲ್‌ ಎಂಬವರ ಪುತ್ರ ಶಬರೀಶ್ (20) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಮನೆಯಿಂದ ಮಣಿಪಾಲಕ್ಕೆ ವೈಯಕ್ತಿಕ ಕೆಲಸಕ್ಕೆ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಬಾರ್ಕೂರುನಿಂದ ಹಾಲಾಡಿಗೆ ಬರುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ, ಶಬರೀಶ್ ಆಸ್ಪತ್ರೆಗೆ ಸಾಗಿಸುವ ಮಧ್ಯೆ […]

ಕಾರು ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಸಹೋದರ, ಸಹೋದರಿ ಸಾವು

Tuesday, November 8th, 2016
Car- bike Accident

ಮಂಗಳೂರು: ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರ ಹಾಗೂ ಸಹೋದರಿ ಸಾವನ್ನಪ್ಪಿರುವ ಘಟನೆ ಬಜತ್ತೂರು ಗ್ರಾಮದ ಬೆದ್ರೋಡಿ ಬಳಿ ನಡೆದಿದೆ. ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ನೀರಪಾದೆ ಜನಾರ್ದನ ಆಚಾರ್ಯ ಎಂಬುವರ ಮಗ ಶಿವಾನಂದ (19) ಹಾಗೂ ಆತನ ಅಕ್ಕ ಅಕ್ಷತಾ (25) ಮೃತರು. ಇನ್ನು, ಅಪಘಾತದಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಹಾಸನ ಮೂಲದ ಹರ್ಷ (30), ಅವರ ಪತ್ನಿ […]

ಸಮುದ್ರದಲ್ಲಿ 2 ದೋಣಿಗಳು ಅಪಘಾತಕ್ಕೀಡಾಗಿ 12 ಮಂದಿ ಗಾಯ: ಲಕ್ಷಾಂತರ ರೂ.ಗಳ ನಷ್ಟ

Friday, August 26th, 2016
12-injured

ಕಾಸರಗೋಡು: ಕೀಯೂರು ಅಳಿವೆಬಾಗಿಲಿನಲ್ಲಿ ಇಂದು ಬೆಳಿಗ್ಗೆ ಎರಡು ದೋಣಿಗಳು ಅಪಘಾತಕ್ಕೀಡಾಗಿ 12 ಮಂದಿ ಗಾಯಗೊಂಡಿದ್ದಾರೆ. ದೋಣಿಗಳು ವ್ಯಾಪಕ ಹಾನಿಗೊಂಡಿದ್ದು, ಇಂಜಿನ್, ಬಲೆಗಳು ಪೂರ್ಣವಾಗಿ ನಾಶಗೊಂಡಿದೆ. ಸುಮಾರು 12 ಲಕ್ಷ ರೂ.ಗಳ ನಷ್ಟ ಅಂದಾಜಿಸಲಾಗಿದೆ. ಅಪಘಾತದಲ್ಲಿ ಕೀಯೂರು ನಿಲಾಸಿಗಳಾದ ಉಮೇಶನ್ (35), ಅಬ್ದುಲ್ ಖಾದರ್ (31), ರಂಜಿತ್ (43), ವಿಜೇಶ್ (30), ಅಶೋಕನ್ 36), ಲಾಲು (30), ಸಾಯಿಬಾಬು (42), ಚಂದ್ರನ್ (40), ಶಶಿ (40), ಸಾಬಿತ್ (೩೫), ಬಿನು (35), ಕಾಸರಗೋಡು ಕಸಬ ಕಡಪ್ಪುರದ ಬಾಲನ್ (49) ಎಂಬಿವರು ಗಾಯಗೊಂಡಿದ್ದಾರೆ. […]

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು: ಕಾರಲ್ಲಿದ್ದವರು ಪರಾರಿ

Friday, August 12th, 2016
Cattle

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರಿನಲ್ಲಿ ದನ ಕಟ್ಟುವ ಹಗ್ಗ, ಸಗಣಿ, ಚೂರಿ ಪತ್ತೆಯಾದ ಘಟನೆ ಕೃಷ್ಣಾಪುರ ಸಮೀಪದ ನೈತಂಗಡಿ ಯುವಕ ಮಂಡಲದ ಬಳಿ ನಡೆದಿದ್ದು ಸ್ಥಳೀಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಪಘಾತ ನಡೆದ ತಕ್ಷಣ ಕಾರಿನಲ್ಲಿ ಮೂವರು ಕಾರನ್ನು ಬಿಟ್ಟು ಪರಾರಿಯಾಗಿದ್ದರಾದರೂ ಈ ಮೂವರ ಫೊಟೋವನ್ನು ಸ್ಥಳೀಯರು ತೆಗೆದಿದ್ದು ಅದನ್ನು ಪೊಲೀಸರಿಗೆ ನೀಡಿದ್ದಾರೆ. ಅಪಘಾತ ನಡೆದ ಕೂಡಲೇ ಕಾರಲ್ಲಿದ್ದವರು ಪರಾರಿಯಾದ ಕಾರಣ ಶಂಕೆಗೊಂಡ ಸ್ಥಳೀಯರು ಕಾರು ಪರಿಶೀಲಿಸಿದಾಗ ಅದರಲ್ಲಿ ದನ […]

ಅಪಘಾತಕ್ಕೊಳಗಾದ ಮೃತನ ಅಂಗಾಂಗ ದಾನ ಮಾಡುವ ಮೂಲಕ ಹೃದಯವಂತಿಕೆ ಮೆರೆದ ಪೋಷಕರು

Wednesday, August 10th, 2016
Hardik raj Kottary

ಮಂಗಳೂರು: ಅಪಘಾತಕ್ಕೊಳಗಾಗಿ ಮೆದುಳು ನಿಷ್ಕ್ರಿಯವಾಗಿದ್ದ ಯುವಕನೋರ್ವನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮೃತನ ಪೋಷಕರು ಹೃದಯವಂತಿಕೆ ಮೆರೆದಿದ್ದಾರೆ. ನಗರದ ಹೊರವಲಯದ ಪಚ್ಚನಾಡಿಯ ನಿವಾಸಿ ಬಜರಂಗದಳದ ಸಕ್ರಿಯ ಕಾರ್ಯಕರ್ತ ಹಾರ್ದಿಕ್ ರಾಜ್ ಕೊಟ್ಟಾರಿ (24) ಕಳೆದ ಜುಲೈ 24ರಂದು ಪಚ್ಚನಾಡಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಯುವಕನನ್ನು ನಗರದ ಏ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೋಮಾಕ್ಕೆ ಜಾರಿದ್ದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಪೋಷಕರು ಅಂಗಾಂಗ ದಾನ ಮಾಡಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಅವರ […]

ಕಾಸರಗೋಡು ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು

Wednesday, July 6th, 2016
kasargod

ಕುಂಬಳೆ : ಮಳೆಗಾಲ ಬಿರುಸುಗೊಳ್ಳುತ್ತಿದ್ದಂತೆ ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಲವಡೆ ಬೃಹತ್ ಹೊಂಡಗಳು ಬಾಯ್ದೆರೆದುಕೊಂಡಿದೆ. ಕುಂಬಳೆ ಯಿಂದ ಕಾಸರಗೋಡು ಹೊಸ ಬಸ್ಸು ನಿಲ್ದಾಣ ತನಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ಡಾಂಬರು ಎದ್ದು ಹೋಗಿ ಹೊಂಡಗಳು ಉಂಟಾಗಿದ್ದು , ಮಳೆಗೆ ನೀರು ತುಂಬಿರುವುದರಿಂದ ವಾಹನ ಚಾಲಕರ ಗಮನಕ್ಕೆ ಬರದೆ ವಾಹನಗಳು ಅಪಘಾತಕ್ಕೀಡಾಗುತ್ತಿದೆ. ಹೊಂಡ ತಪ್ಪಿಸುವ ಭರದಲ್ಲಿ ಹಲವು ವಾಹನಗಳು ಎದುರಿನಿಂದ ಬರುವ ವಾಹನಗಳಿವೆ ಡಿಕ್ಕಿ ಹೊಡೆದ ಹಲವು ಘಟನೆಗಳು ನಡೆದಿದೆ. ಅಡ್ಕತ್ತಬೈಲ್ , ಕರಂದಕ್ಕಾಡ್ ನಲ್ಲಿ […]