Blog Archive

ಕಾರು ಕೆರೆಗೆ ಬಿದ್ದು ಯುವಕ ಮೃತ್ಯು-ಸಹೋದರ ಪಾರು

Friday, January 22nd, 2016
Mulleria Accident

ಮುಳ್ಳೇರಿಯಾ: ಕಾರೊಂದು ಕೆರೆಗೆ ಬಿದ್ದು ಸಹೋದರರ ಪೈಕಿ ಓರ್ವ ಮೃತಪಟ್ಟು ಮತ್ತೋರ್ವ ಅದೃಷ್ಟವಶಾತ್ ಪಾರಾದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳ್ಳೂರು ಸಮೀಪದ ಬಜ ಎಂಬಲ್ಲಿ ನಡೆದಿದೆ. ಬಜ ಅಮರನಾಥ ರೈ ಯವರ ಪುತ್ರ ಸುಪ್ರೀತ್ ರೈ (33)ಮೃತಪಟ್ಟ ದುರ್ದೈವಿ.ಶುಕ್ರವಾರ ಬೆಳಿಗ್ಗೆ ಮನೆಯಂಗಳದಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಸಹೋದರ ಗುರು ಕಿರಣ ರೈ ಯನ್ನು ಕುಳ್ಳಿರಿಸಿ ಸ್ಟಾರ್ಟ್ ಮಾಡಿ ಮುಂದಕ್ಕೆ ಚಲಾಯಿಸುವಷ್ಟರಲ್ಲಿ ಅಂಗಳದಿಂದ 10ಮೀಟರ್ ದೂರದ ಕೆರೆಗೆ ಆಕಸ್ಮಿಕವಾಗಿ ಬಿದ್ದು ಅಪಘಾತ ನಡೆಯಿತು. ನೀರಲ್ಲಿ ಮುಳುಗಿದ ಕಾರನ್ನು ತಕ್ಷಣ ಸ್ಥಳೀಯರು […]

ಕೊಣಾಜೆ ನಾಟೆಕಲ್ ಬಳಿ ಅಕ್ರಮವಾಗಿ ದನ ಸಾಗಾಟದ ವಾಹನ ಪಲ್ತಿ, 10ದನಗಳ ಸಾವು

Friday, September 13th, 2013
cattle transport

ಮಂಗಳೂರು  : ಮುಡಿಪುವಿನಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದು ವಾಹನದಲ್ಲಿದ್ದ ಸುಮಾರು 18 ದನಗಳಲ್ಲಿ 10ದನಗಳು ಸಾವನ್ನಪ್ಪಿದ ರ್ದುಘಟನೆ ನಗರದ ಹೊರವಲಯದ ಕೊಣಾಜೆ ಸಮೀಪದ ನಾಟೆಕಲ್ ತಿರುವಿನಲ್ಲಿ ಗುರುವಾರ ರಾತ್ರಿ ಸಂಬವಿಸಿದೆ. ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಕೆ‌ಎ 20 6759 ನೋಂದಣಿ ಸಂಖ್ಯೆಯ ಪಿಕಪ್ ವಾಹನವು ಮುಡಿಪುವಿನಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದು ನಾಟೆಕಲ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿತ್ತು. ಅಪಘಾತದ ರಭಸಕ್ಕೆ ಪಿಕಪ್ ನಲ್ಲಿದ್ದ ದನಗಳು ವಾಹನದಡಿಗೆ […]

ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ; ಚಾಲಕ ಮೃತ್ಯು, ಮೂವತ್ತು ಪ್ರಯಾಣಿಕರಿಗೆ ಗಾಯ

Friday, July 26th, 2013
Kasaragod accident

ಕಾಸರಗೋಡು: ಗುರುವಾರ ಬೆಳಗ್ಗೆ 7.45 ರ ಸಮಯದಲ್ಲಿ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚೆರ್ಕಳ ಸಮೀಪ ಬೇವುಂಜೆಯಲ್ಲಿ ನಡೆದಿದೆ. ಅಫಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಹುಬ್ಬಳ್ಳಿ ನಿವಾಸಿ ನಾಗರಾಜ(29)  ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ ಮಾನಂತವಾಡಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ ಮತ್ತು ಎದುರಿನಿಂದ ಬಂದ ವಾಹನವನ್ನು ಓವರ್‌ಟೇಕ್‌ ಮಾಡಿ ಬಂದ  ಲಾರಿ ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಲಾರಿಯ ಎದುರು ಭಾಗ ಬಸ್ಸಿನ ಮುಂಭಾಗವನ್ನು […]

ಬೆಳ್ತಂಗಡಿ ತಾ.ಪಂ. ಮಾಜಿ ಅಧ್ಯಕ್ಷ ರಸ್ತೆ ಅಪಘಾತಕ್ಕೆ ಬಲಿ

Tuesday, July 9th, 2013
T G Joy

ಬೆಳ್ತಂಗಡಿ: ಬೆಳ್ತಂಗಡಿ ತಾ.ಪಂ. ಮಾಜಿ ಅಧ್ಯಕ್ಷ ಟಿ.ಜಿ. ಜೋಯ್(49) ಹಾಸನದ ಬೆಳ್ಳೂರು ಕ್ರಾಸ್ ಬಳಿ ಜುಲೈ 4ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯಿಂದ ಚೇತರಿಕೆ ಕಂಡು ಬಾರದೆ ಭಾನುವಾರ ರಾತ್ರಿ ಕೊನೆಯುಸಿರೆಳೆದರು. ಪತ್ನಿ, ತಾಯಿ, ಪುತ್ರನನ್ನು ಅಗಲಿದ್ದಾರೆ. ಸಿರಿಯನ್ ಕೆಥೋಲಿಕ್ ಸೊಸೈಟಿ ಅಧ್ಯಕ್ಷರಾಗಿದ್ದ ಜೋಯ್, ಮಲಯಾಳಿ ಕ್ರಿಶ್ಚಿಯನ್ ಅಸೋಶಿಯೇಶನ್ ಉಪಾಧ್ಯಕ್ಷರಾಗಿದ್ದರು. ತಾ.ಪಂ.ಮಾಜಿ ಅಧ್ಯಕ್ಷರಾಗಿ, ಎಪಿಎಂಸಿ […]

ಮಾಣಿ ಸಮೀಪದ ಕೊಡಾಜೆಯ ಬಳಿ ಅಪಘಾತ, ಇಬ್ಬರು ಗಂಭೀರ

Friday, May 24th, 2013
Bantwal serial accident

ಬಂಟ್ವಾಳ : ಮಂಗಳೂರಿನಿಂದ ಹೊರಟ ಬಸ್ಸೊಂದು ಮಾಣಿ ಸಮೀಪದ ಕೊಡಾಜೆಯ ಬಳಿ ಇನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಕಾರು ಹಿಂದಿನಿಂದ ಬರುತ್ತಿದ್ದ ಸಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಮಾಣಿ ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕೆಲ ತಾಸು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ 23  ಗುರುವಾರ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಉನೈದ್ ಹಾಗು ಕಸ್ತೂರಿ ಶಂಕರ್ ಈ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಚಿಕ್ಕ ಪುಟ್ಟ […]

ಪಡುಬಿದ್ರೆ : ರಾಷ್ಟ್ರೀಯ ಹೆದ್ದಾರಿ ಬೀಡಿನಕೆರೆ ಬಳಿ ಅಪಘಾತ ಮೂವರ ದುರ್ಮರಣ

Wednesday, May 22nd, 2013
car truck accident padubidri

ಪಡುಬಿದ್ರೆ : ಮಂಗಳವಾರ ಮದ್ಯಾಹ್ನ 2;30 ರ ಸುಮಾರಿಗೆ ಪಡುಬಿದ್ರೆ ಮತ್ತು ಕಾಪು ನಡುವಿನ ರಾಷ್ಟ್ರೀಯ ಹೆದ್ದಾರಿ  ಬೀಡಿನಕೆರೆ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ಒಟ್ಟು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಮಜೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ, ನಿಟ್ಟೆ ನಿವಾಸಿ ಅರುಣಾ ಸತೀಶ್ ರೈ(55), ಆಕೆಯ ಪತಿ ಸತೀಶ್ ರೈ(57) ಹಾಗು ಸತೀಶ ರೈ ರ ಗೆಳೆಯ, ಕಾರು ಚಾಲಕ ಸುರತ್ಕಲ್ ಕೃಷ್ಣಾಪುರ 7  ನೇ ಬ್ಲಾಕ್ ನಿವಾಸಿ […]

ರಾಜ್ಯ ಹೆದ್ದಾರಿ ಆಲಂಕಾರು ಬಳಿ ಅಪಘಾತ, ಬೈಕ್ ಸಹಸವಾರನ ಸಾವು, ಸವಾರ ಗಂಭೀರ

Tuesday, May 21st, 2013
Alankaru bike accident

ಪುತ್ತೂರು : ಸೋಮವಾರ ಮಧ್ಯಾಹ್ನ ಉಪ್ಪಿನಂಗಡಿ- ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪ ಮಾಯಿಲ್ಗ ಎಂಬಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸಹಸವಾರ ಮೃತಪಟ್ಟಿದ್ದು, ಬೈಕ್ ಸವಾರ ಗಂಬೀರವಾಗಿ ಗಾಯಗೊಂಡಿದ್ದಾರೆ. ಆಲಂಕಾರು ಗ್ರಾಮದ ಕೇಪುಳು ದಿ.ಕೃಷ್ಣಪ್ಪ ಪೂಜಾರಿ ಅವರ ಪುತ್ರ ದಿವಾಕರ (30) ಸಾವಿಗೀಡಾದ ದುರ್ದೈವಿಯಾಗಿದ್ದಾರೆ. ದಿವಾಕರ ಮತ್ತು ಅವರ ಸಹೋದರ ದಿನೇಶ  ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ಆಲಂಕಾರಿನಿಂದ ಕುಂತೂರು ಕಡೆ ಹೊರಟ್ಟಿದ್ದು ಬೈಕ್ ಮಾಯಿಲ್ಗ ಸಮೀಪದ ತಿರುವುನಲ್ಲಿಗೆ ತಲುಪುತ್ತಿದ್ದಂತೆ ಎದುರಿನಿಂದ […]

ಅಪಘಾತದಿಂದ ನೊಂದ ವ್ಯಕ್ತಿ ಆತ್ಮಹತ್ಯೆ

Wednesday, April 3rd, 2013
Man sucide at well

ಮಂಗಳೂರು : ಕೆಲ ತಿಂಗಳ ಹಿಂದೆ ನಡೆದ ಅಪಘಾತದಿಂದಾಗಿ ಖಿನ್ನತೆಗೆ ಒಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಗರದ ಬಿಕರ್ನಕಟ್ಟೆ ಬಳಿ ನಡೆದಿದೆ. ಕಳೆದ ಫೆಬ್ರವರಿ ೨೩ ರಂದು ವೆಲೇರಿ ಯನ್ ರೋಡ್ರಿಗಸ್ ಎಂಬವರು ಕಂಕನಾಡಿ ಬಳಿ ತನ್ನ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ೧೨ ವರ್ಷದ  ಬಾಲಕಿಯೊಬ್ಬಳು ಇವರ ಕಾರಿನಡಿಗೆ ಬಿದ್ದು ಮೃತಪಟ್ಟಿದ್ದಳು. ರಸ್ತೆ ದಾಟುವಾಗ ಈ ಅಪಘಾತ ನಡೆದಿತ್ತು. ಈ ಅಪಘಾತದಿಂದ ವೆಲೇರಿಯನ್ ರವರು ಸಾಕಷ್ಟು ನೊಂದಿದ್ದು ಇದೆ ಕಾರಣದಿಂದ ನಿನ್ನೆ ಬೆಳಿಗ್ಗೆ […]

ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಟಿಪ್ಪರ್ – ಟಾಟಾ ಏಸ್ ನ ನಡುವೆ ಅಪಘಾತ, ಇಬ್ಬರು ಗಂಭೀರ

Saturday, March 16th, 2013
Accsident near Jalady

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ತುಂಬಿದ ಟಿಪ್ಪರ್ ಹಾಗೂ ಟಾಟಾ ಏಸ್ ಪರಸ್ಪರ ಢಿಕ್ಕಿಯಾದ ಪರಿಣಾಮ ಟಾಟಾ ಏಸ್ ನ ವಾಹನ ಚಾಲಕ ಯಶವಂತಪುರ ಪೀಣ್ಯದ ಬಶೀರ್ ಹಾಗೂ  ಟಿ. ನರಸೀಪುರ ಮೂಲದ ಸಿದ್ಧ ಎಂಬುವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಬೆಂಗಳೂರಿನ ವೊಡಾಫೋನ್ ಕಂಪೆನಿಯ ಶ್ರೀ ವಿಘ್ನೇಶ್ವರ ಲಾಜಿಸ್ಟಿಕ್‌ಗೆ ಸೇರಿದ ಟಾಟಾ ಏಸ್ ವಾಹನವು ಬೆಂಗಳೂರಿನಿಂದ ವೊಢಾಫೋನ್ ಟವರ್‌ಗೆ ಸಂಬಂಧಿಸಿದ ಸಲಕರಣೆಗಳನ್ನು ಗೋಕರ್ಣದಲ್ಲಿ ಇಳಿಸಿ ವಾಪಾಸ್ಸಾಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ […]

ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ಬೈಕ್ ಸವಾರ ಗಂಭೀರ

Friday, March 15th, 2013
Bike Pickup accident at bantwal

ಬಂಟ್ವಾಳ : ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿಯ ನಾವೂರ ಗ್ರಾಮದ ಫರ್ಲಾದಲ್ಲಿ  ಪಿಕಪ್ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಬೈಕ್ ಸವಾರ ಮೂರ್ಜೆ ನಿವಾಸಿ ವೀರಪ್ಪ ಮೂಲ್ಯ(42) ಅವರು ಬಿಸಿ.ರೋಡ್ ನಿಂದ ಮೂರ್ಜೆ ಕಡೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಪಿಕಪ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ವೀರಪ್ಪ ಮೂಲ್ಯ ಬೈಕ್ ಸಹಿತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದರು. ಘಟನೆಯಿಂದ ತೀವ್ರ ಅಸ್ವಸ್ಥ ರಾದ ಅವರನ್ನು […]