Blog Archive

ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರವನ್ನ ನಿರ್ಮಾಣ ಮಾಡಲಾಗುವುದು: ಯೋಗಿ ಆದಿತ್ಯನಾಥ

Saturday, November 10th, 2018
yogi-adityanath

ಛತ್ತೀಸ್ಗಢ: ಈಗಾಗಲೇ ಛತ್ತೀಸ್ಗಢದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರವನ್ನ ನಿರ್ಮಾಣ ಮಾಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗಾಗಿ ಪ್ರಚಾರ ಕಾರ್ಯ ಕೈಗೊಂಡಿರುವ ಅವರು, ಇಂದು ಛತ್ತೀಸ್ಗಢದ ಲೊರ್ಮಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗುವುದು. ಅಂತೆಯೇ ಛತ್ತೀಸ್ಗಢದಲ್ಲಿ ಈಗಾಗಲೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ ಎಂದು ನೆನಪಿಸಿಕೊಂಡರು. ಇದೇ ವೇಳೆ, ಪಕ್ಷ ಮತ್ತೆ ದಿಗ್ವಿಜಯ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಛತ್ತೀಸ್ಗಢದ […]

ಅಯೋಧ್ಯ ವಿವಾದದ ತೀರ್ಪು ಮುಂದಕ್ಕೆ : ಜಿಲ್ಲಾಡಳಿತ ಹೊರಡಿಸಿರುವ ಆದೇಶ ರದ್ದು

Thursday, September 23rd, 2010
ಅಯೋಧ್ಯೆ

ಮಂಗಳೂರು : ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವು ತಡೆಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ಪ್ರಕಟವಾಗಬೇಕಿದ್ದ ತೀರ್ಪು ಸೆಪ್ಟೆಂಬರ್ 28 ಕ್ಕೆ ಮುಂದೂಡಲಾಗಿದೆ. ರಮೇಶ್ ಚಂದ್ರ ತ್ರಿಪಾಠಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಲಕ್ನೋ ವಿಶೇಷ ಪೀಠವು ಶುಕ್ರವಾರ ಅಪರಾಹ್ನ ಪ್ರಕಟಿಸ ಬೇಕಿದ್ದ ತೀರ್ಪನ್ನು ಮುಂದೂಡಿದೆ. ತ್ರಿಪಾಠಿಯ  ಅರ್ಜಿಯನ್ನು ಮತ್ತೊಂದು ಪೀಠವು ವಿಚಾರಣೆ ನಡೆಸಲಿದ್ದು.  ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ನ್ಯಾಯಾಲಯ ಮುಂದೂಡಿ, ಆ ತನಕ ಅಲಹಾಬಾದ್ ಹೈಕೋರ್ಟ್ ತೀರ್ಪು […]