Blog Archive

ನಿರ್ಮಾಪಕ ಕಪಾಲಿ ಮೋಹನ್ ಆತ್ಮಹತ್ಯೆಗೂ ಮುನ್ನ ಬಿಚ್ಚಿಟ್ಟ ಸತ್ಯ – ವಿಡಿಯೋ

Monday, March 23rd, 2020
Kapali-mohan

ಉಡುಪಿ : ಉದ್ಯಮಿ, ಸಿನಿಮಾ ಫೈನಾನ್ಶಿಯರ್ ಕಪಾಲಿ ಮೋಹನ್ ಪೀಣ್ಯ ಬಸವೇಶ್ವರ ಬಸ್ ಸ್ಟ್ಯಾಂಡ್ ಗೆ ಅತಿ ಹೆಚ್ಚು ಬಿಡ್ ಮೂಲಕ ಟೆಂಡರ್ ಪಡೆದು ತನ್ನ ಮನೆ ಮಠ ಕಳೆದುಕೊಂಡು ಆತ್ಮ ಹತ್ಯೆಗೆ ಶರಣಾಗಿರುವ ಬಗ್ಗೆ ಇರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಉಡುಪಿ ಜಿಲ್ಲೆಯ ವಕ್ವಾಡಿ ಯವರಾಗಿದ್ದ ಮೋಹನ್  ಡಾ.ರಾಜ್ ಕುಟುಂಬದೊಂದಿಗೆ ಸಾಕಷ್ಟು ಒಡನಾಟ ಇಟ್ಟುಕೊಂಡಿದ್ದರು, ಪೀಣ್ಯ ಬಳಿಯ ಖಾಸಗಿ ಹೋಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ವ್ಯಾಪಾರದಲ್ಲಿ ತೊಂದರೆ, ನಷ್ಟ ಅನುಭವಿಸಿ ಮಾನಸಿಕವಾಗಿ ನೊಂದಿದ್ದರು […]

ಮೈಸೂರು : ಸ್ನೇಹಿತರಿಗೆ ಕರೆ​​ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

Wednesday, March 11th, 2020
basavanna

ಮೈಸೂರು : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರಿಗೆ ಫೋನ್ ಮಾಡಿ ಹೇಳಿ ಕೆರೆಗೆ ಹಾರಿದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಭುಗತಗಳ್ಳಿ ನಿವಾಸಿ ಬಸವಣ್ಣ(28) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಂಗಳವಾರ ಸಂಜೆ 5 ಗಂಟೆಗೆ ತನ್ನ ಗೆಳೆಯರಿಗೆ ಕರೆ ಮಾಡಿ, ಜೀವನದಲ್ಲಿ ನನಗೆ ತುಂಬಾ ಬೇಸರವಾಗಿದೆ. ನಾನು ಬದುಕುವುದಿಲ್ಲ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದನಂತೆ. ಆದರೆ, ಈತ ತಮಾಷೆ ಮಾಡುತ್ತಿದ್ದಾನೆ ಎಂದು ಭಾವಿಸಿದ್ದ ಸ್ನೇಹಿತರಿಗೆ, ಬಸವಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಭಾರೀ […]

ಬಂಟ್ವಾಳ : ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ವವಿತ್ತು; ಪತ್ರ ಬರೆದಿಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

Saturday, March 7th, 2020
nandan

ಬಂಟ್ವಾಳ : ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ. ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ ಬಂಟ್ವಾಳ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿ ನಂದನ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಎಸೆಸ್ಸೆಲ್ಸಿಯಲ್ಲಿ ಶೇ. 94 ಅಂಕ ಪಡೆದಿದ್ದ. ಪಿಯುಸಿಯಲ್ಲೂ ಅಷ್ಟೇ ಪ್ರತಿಭಾವಂತನಾಗಿದ್ದ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಭೌತಶಾಸ್ತ್ರ ಪರೀಕ್ಷೆ ಬರೆದಿದ್ದ. […]

ಮಂಗಳೂರು : ರೈಲಿನಡಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

Friday, February 28th, 2020
sammad

ಮಂಗಳೂರು : ಬೆಳಗಾವಿ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಂಗಳೂರಿಗೆ ಬಂದು ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಬೆಳಗಾವಿ ನಿವಾಸಿ ಸಮ್ಮದ್ ರಾಯಗೌಡ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾಯಗೌಡ ಬಿ.ಇ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ರಾಯಗೌಡ ಮಂಗಳೂರಿನ ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ರೈಲು ಬರುವ ಮೊದಲೇ ಬಂದು ಕೂತಿದ್ದನು. ನಂತರ ರೈಲು ಬರುತ್ತಿದ್ದಂತೆ ಹಳಿಗೆ ಹಾರಿ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಉಳ್ಳಾಲ […]

ಕುಟುಂಬದ ಆರು ಮಂದಿಯನ್ನು ಹತ್ಯೆಗೈದಿದ್ದ ಸೈನೈಡ್ ಕಿಲ್ಲರ್ ಆತ್ಮಹತ್ಯೆಗೆ ಯತ್ನ

Thursday, February 27th, 2020
tiruvantapuram

ತಿರುವನಂತಪುರಂ : ಕುಟುಂಬದ ಆರು ಮಂದಿಯನ್ನು ಕೊಲೆ ಮಾಡಿ ಜೈಲುಪಾಲಾದ ಕೇರಳದ ಸೈನೈಡ್ ಕಿಲ್ಲರ್ ಜ್ಯೂಲಿ ಕೈ ಕೊಯ್ದುಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗುರುವಾರ ನಸುಕಿನ ಜಾವ ಜ್ಯೂಲಿ ಥಾಮಸ್ ತನ್ನ ಕೈ ಕೊಯ್ದುಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಜ್ಯೂಲಿಯ ಈ ಸ್ಥಿತಿ ನೋಡಿದ ಪೊಲೀಸರು ತಕ್ಷಣ ಆಕೆಯನ್ನು ಕೋಯಿಕೋಡ್ ನ ಮೆಡಿಕಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳೆದ ವರ್ಷ ಕೇರಳದ ಕೋಯಿಕೋಡ್ ಜಿಲ್ಲೆಯಲ್ಲಿ ಪೊಲೀಸರು ಹಂತಕಿ ಜ್ಯೂಲಿಯ ಜೊತೆಗೆ 2ನೇ ಪತಿ ಹಾಗೂ ಮತ್ತೊಬ್ಬನನ್ನು ಕೂಡ […]

ಸರ್ಕಾರಿ ಶಾಲೆಯ ಶಿಕ್ಷಕ ಕ್ಲಾಸ್​ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Wednesday, February 26th, 2020
lal-bhagh

ಉತ್ತರಪ್ರದೇಶ : ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿಕ್ಷಕನೊಬ್ಬ ಶಾಲೆಯ ಕ್ಲಾಸ್ ರೂಮಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಲಾಲ್ಬಾಗ್ನಲ್ಲಿ ನಡೆದಿದೆ. ರವೀಂದ್ರ ಕುಮಾರ್ ಶುಕ್ಲಾ(49) ಹೆಸರಿನ ಶಿಕ್ಷಕ ಕೆಲವು ವರ್ಷಗಳಿಂದ ಲಾಲ್ಬಾಗ್ನ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳವಾರದಂದು ಸರಿಯಾದ ಸಮಯಕ್ಕೆ ಶಾಲೆಗೆ ಬಂದಿದ್ದ ಅವರು ಪ್ರತಿದಿನದಂತೆ ತರಗತಿಗಳನ್ನು ನಡೆಸಿ, ಕೊನೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದಾರೆ. ವಿದ್ಯಾರ್ಥಿಗಳೆಲ್ಲ ಮನೆಗೆ ತೆರಳಿದ ನಂತರ ತರಗತಿಗಳ ಬಾಗಿಲನ್ನು ಹಾಕಿ ಬಂದಿದ್ದಾರೆ. ಆದರೆ ಮತ್ತೆ ತರಗತಿಯೊಳಗೆ […]

ಮನೆಯಲ್ಲಿ ಪ್ರೀತಿಗೆ ವಿರೋಧ : ಹಾರಂಗಿ ಜಲಾಶಯದ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳು ಆತ್ಮಹತ್ಯೆ

Saturday, February 15th, 2020
madikeri

ಮಡಿಕೇರಿ : ಮನೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ, ಬೇರೆ ಹುಡುಗನೊಂದಿಗೆ ವಿವಾಹ ನಿಶ್ಚಯಿಸಿದ ಕಾರಣ ಪ್ರೇಮಿಗಳ ದಿನದಂದೇ ಹಾರಂಗಿ ಜಲಾಶಯದ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳು ಮಾಡಿಕೊಂಡ ಘಟನೆ ಹಾರಂಗಿಯ ಇಡಿಸಿಎಲ್‌ ಘಟಕ ಸಮೀಪ ನಡೆದಿದೆ. ಮೃತರನ್ನು ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ನಾಗರಾಜುಗೌಡ ಎಂಬವರ ಪುತ್ರ ಸಚಿನ್‌(21) ಯಮಗುಂಬ ಗ್ರಾಮದ ಜಲೇಂದ್ರ ಎಂಬವರ ಪುತ್ರಿ ಸಿಂಧುಶ್ರೀ(19) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಹುಣಸೂರು ಸರಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಒಂದು ವರ್ಷದಿಂದ […]

ಉಡುಪಿಯ ಖ್ಯಾತ ಉದ್ಯಮಿ ಅಲೆಕ್ಸ್ ಲೂವಿಸ್ ಬೆಂಗಳೂರಿನಲ್ಲಿ ಆತ್ಮಹತ್ಯೆ

Thursday, January 23rd, 2020
Alex-Lewis

ಉಡುಪಿ : ಖ್ಯಾತ ಉದ್ಯಮಿ, ಕ್ರಿಕೆಟ್ ಪಟು ಮತ್ತು ಸಂಘಟಕ ಅಲೆಕ್ಸ್ ಲೂವಿಸ್ (45) ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಉದ್ಯಾವರದ ಬೋಳಾರ್ ಗುಡ್ಡೆ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದು ಡಿಎನ್ಎ ಹೋಂ ಥಿಯೇಟರ್ ಉದ್ಯಮವನ್ನು ನಡೆಸುತ್ತಿದ್ದರು. ಕಳೆದ ಹಲವಾರು ದಿನಗಳಿಂದ ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದ, ಅಲೆಕ್ಸ್ ಲುವಿಸ್ ಇಂದು ಸಂಜೆ ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಖ್ಯಾತ ಕ್ರಿಕೆಟ್ ಪಟು ಆಗಿದ್ದ ಇವರು, ಹಲವಾರು ಕ್ರಿಕೆಟ್ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ್ದರು. ಕೆಲವು ವರ್ಷಗಳ […]

ಮೊದಲನೇ ವಿವಾಹ ವಾರ್ಷಿಕೋತ್ಸವದಂದೇ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

Friday, January 17th, 2020
chandighad

ಚಂಡೀಗಢ್ : ಮೊದಲನೇ ವಿವಾಹ ವಾರ್ಷಿಕೋತ್ಸವದಂದೇ ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಹರಿಯಾಣದ ರಾಜೀವ್ ಕಾಲೋನಿಯಲ್ಲಿ ನಡೆದಿದೆ. 21 ವರ್ಷದ ಫೈಝಾನ್ ತನ್ನ ಪತ್ನಿ ಶಾಬ್-ಇ-ನೂರ್ ನನ್ನು ಕೊಲೆ ಮಾಡಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬುಧವಾರ ಫೈಝಾನ್ ಹಾಗೂ ಶಾಬ್‍ನ ಮೊದಲನೇ ವಿವಾಹ ವಾರ್ಷಿಕೋತ್ಸವವಿತ್ತು. ಈ ನಡುವೆ ಇಬ್ಬರ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತೆರಳಿ ಫೈಝಾನ್ ತನ್ನ ಪತ್ನಿಯನ್ನು ಮೊಬೈಲ್ ಚಾಜಿಂಗ್ ವೈರ್ ಯಿಂದ ಕತ್ತು […]

ಮಡಿಕೇರಿಯಲ್ಲಿ ಕಾರು ಚಾಲಕ ಆತ್ಮಹತ್ಯೆಗೆ ಶರಣು

Monday, January 6th, 2020
Dakshath

ಮಡಿಕೇರಿ : ನಗರದಲ್ಲಿ ಟ್ಯಾಕ್ಸಿ ಚಾಲಕ ವೃತ್ತಿ ನಿರ್ವಹಿಸುತ್ತಿದ್ದ ಯುವಕನೊಬ್ಬ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತೈ ಮಾಡಿಕೊಂಡ ಘಟನೆ ನಡೆದಿದೆ. ಹಾಕತ್ತೂರು ನಿವಾಸಿ ದಕ್ಷತ್(28) ಎಂಬಾತನೇ ನೇಣಿಗೆ ಶರಣಾದ ಕಾರು ಚಾಲಕ. ಶುಕ್ರವಾರ ಸಂಜೆ ದಕ್ಷತ್ ಲಾಡ್ಜ್‌ನ ರೂಂ ಬುಕ್ ಮಾಡಿದ್ದ. ಬಳಿಕ ವಾಟ್ಸಪ್ ಟ್ಟೇಟಸ್‌ನಲ್ಲಿ ತಂದೆ ತಾಯಿಯ ಫೋಟೊ ಹಾಕಿ ಮಿಸ್ ಯು ಡ್ಯಾಡಿ ಅಮ್ಮ ಎಂದು ಬರೆದುಕೊಂಡಿದ್ದ. ರಾತ್ರಿ 9 ಗಂಟೆಯ ವೇಳೆಗೆ ದಕ್ಷತ್‌ನ ಗೆಳೆಯನೊಬ್ಬ ಲಾಡ್ಜ್‌ಗೆ ಬಂದು ರೂಂನ ಬಾಗಿಲು ಬಡಿದರೂ, ದಕ್ಷತ್ […]