Blog Archive

ಅತ್ಯಾಚಾರಿಗಳನ್ನು ಬಂಧಿಸದೆ ನಿರ್ಲಕ್ಷ್ಯ : ಪೊಲೀಸ್ ಠಾಣೆಯೆದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

Tuesday, December 24th, 2019
Lacknow

ಲಕ್ನೋ : ತನ್ನ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರ ನಿರ್ಲಕ್ಷ್ಯ ಧೋರಣೆಗೆ ಬೇಸತ್ತ ಅಪ್ರಾಪ್ತ ಯುವತಿ ತನ್ನ ತಂದೆ-ತಾಯಿಯೊಂದಿಗೆ ವಾರಾಣಸಿಯ ಪೊಲೀಸ್ ಅಧಿಕಾರಿಯಕಚೇರಿಯ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಮೂವರನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ವಾರಾಣಸಿಯ ಪೊಲೀಸ್ ಅಧಿಕಾರಿಯ ಆಫೀಸ್ ಎದುರು ವಿಷಯ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಯುವತಿ ತನ್ನ ಮೇಲಾದ ಸಾಮೂಹಿಕ ಅತ್ಯಾಚಾರದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಹಲವು ಬಾರಿ ಪೊಲೀಸ್ ಠಾಣೆಗೆ […]

ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Friday, December 6th, 2019
Pratham

ಉಪ್ಪಿನಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮೆ ಮನೆ ನಿವಾಸಿ ಪ್ರಥಮ್ ಕೊಂಡೆ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇವರು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿದ್ದ ಇವರು ಬೆಳಗ್ಗೆ ಮನೆಯ ಬಳಿಯ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ […]

ಮಂಗಳೂರು : ಕುಂಜತ್ತಬೈಲ್​​​​ನಲ್ಲಿ‌ ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

Friday, December 6th, 2019
Athmahatye

ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡ ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಂಜತ್ತಬೈಲ್ನಲ್ಲಿ‌ ನಡೆದಿದೆ. ಹರಿಯಾಣ ಮೂಲದ ಪ್ರಸ್ತುತ ಕುಂಜತ್ತ್‌ಬೈಲ್ನಲ್ಲಿ ವಾಸವಾಗಿರುವ ಪವನ್‌ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡವರು. ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಪವನ್‌ ಕೌಟುಂಬಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಾರೆಂದು ತಿಳಿದು ಬಂದಿದೆ. ಕೆಲವು ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಇವರು, ನಿನ್ನೆ ಬೆಳಗ್ಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದು, ಮೃತದೇಹದ […]

ಮಂಗಳೂರು : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ

Thursday, November 28th, 2019
Druvi

ಮಂಗಳೂರು : ಮನೆಯಲ್ಲಿ ಓದಲು ಹೇಳಿದ್ದಕ್ಕೆ 5ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಕಿನ್ನಿಗೋಳಿಯ ಐಕಳ ಎಂಬಲ್ಲಿ ನಡೆದಿದೆ. 5ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಧ್ರುವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಕಮ್ಮಾಜೆ ನಿವಾಸಿ ಗೋವಿಂದ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ.‌ ಶಾಲೆಗೆ ರಜೆ ಇದ್ದ ಕಾರಣ ಬಾಲಕಿ ಅಜ್ಜಿಯೊಂದಿಗೆ ಟಿವಿ ನೋಡುತ್ತಿದ್ದಳಂತೆ. ಆಗ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಬಾಲಕಿಗೆ ಅಜ್ಜಿ ಓದಿಕೊಳ್ಳುವಂತೆ ಸೂಚಿಸಿದ್ದಾರೆ. ಇದರಿಂದ ಅಸಮಾಧಾನಗೊಂಡು ಕೋಣೆಗೆ ಹೋದ […]

ಕಡಬ : ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ

Wednesday, November 27th, 2019
Kadaba

ಕಡಬ : ಕಡಬದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಸವಿತ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮಂಗಳವಾರ ವಿಷ ಸೇವಿಸಿದ್ದಳು. ನಂತರ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇನ್ನು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ […]

ಬೆಂಗಳೂರು : ಪ್ರಿಯತಮೆಯನ್ನು ಇರಿದು ಆತ್ಮಹತ್ಯೆಗೆ ಯತ್ನ

Tuesday, November 12th, 2019
Hans-Raj

ಬೆಂಗಳೂರು : ಪ್ರೀತಿಸುತ್ತಿದ್ದ ಯುವತಿ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಚೂರಿ ಯಿಂದ ಇರಿದು ಕೊಲೆಗೆ ಯತ್ನಿಸಿರುವ ಪ್ರಿಯಕರ, ಬಳಿಕ ತಾನು ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜ್ಯೋತಿನಗರದಲ್ಲಿ ವಾಸವಿದ್ದ ದೆಹಲಿ ಮೂಲದ ಪಾಲಗಾವ್ ಥೆನ್ಸಿಂಗ್ (28) ಹಲ್ಲೆಗೊಳಗಾದ ಯುವತಿ. ಜಾರ್ಖಂಡ್ ಮೂಲದ ಹನ್ಸ್ರಾಜ್ (32) ಚಾಕುವಿನಿಂದ ಇರಿದ ಟೆಕ್ಕಿ. ಗಾಯಗೊಂಡಿರುವ ಇಬ್ಬರನ್ನು ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯುವಕನ ವಿರುದ್ಧ ಕೊಲೆ ಯತ್ನಪ್ರಕರಣ ದಾಖಲಿಸಲಾಗಿದೆ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ. ಯುವತಿ […]

ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಾಯಿ, ಮಗಳು ಆತ್ಮಹತ್ಯೆ

Tuesday, November 5th, 2019
Mysuru

ಮೈಸೂರು : ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿ ಮತ್ತು ಆಕೆಯ ಹನ್ನೊಂದು ವರ್ಷದ ಮಗಳು ಒಂದೇ ನೇಣಿನ ಕುಣಿಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯನಗರ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ತಾಯಿ ಜಯಾ(35) ಮಗಳು ಪ್ರಿಯಾ(11) ಎಂದು ಗುರುತಿಸಲಾಗಿದೆ. ಪ್ರಿಯಾ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಲಿಫ್ಟ್ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರಿನ ಸುಧಾಕರ್ ಅವರು ಶಿವಮೊಗ್ಗದ ಜಯಾ ಅವರನ್ನು 12ವರ್ಷಗಳ ಹಿಂದೆ ವಿವಾಹವಾಗಿದ್ದರು. ಇವರು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕೆಟ್ಟು […]

ಕಾಲೇಜಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್​ ವಿದ್ಯಾರ್ಥಿ

Monday, October 21st, 2019
harsha

ಆನೇಕಲ್ : ಈತ ನಾಲ್ಕನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ. ಪ್ರತಿಷ್ಠಿತ ಕಂಪನಿಯೊಂದರ ಕ್ಯಾಂಪಸ್ ಇಂಟರ್ವ್ಯೂನಲ್ಲಿ ಆಯ್ಕೆಯಾಗಿದ್ದ. ವರ್ಷಕ್ಕೆ 14 ಲಕ್ಷ ರೂಪಾಯಿ ಸಂಬಳ ಬರುವ ಕೆಲಸ ಅದಾಗಿತ್ತು. ಕಂಪನಿ ಕಾಲ್ ಲೆಟರ್ನ್ನೂ ಕೊಟ್ಟಿತ್ತು. ಇಷ್ಟೆಲ್ಲ ಆದ ಮೇಲೆ ಈಗ ಆ ಯುವಕ ತಾನು ಓದುತ್ತಿದ್ದ ಇಂಜಿನಿಯರಿಂಗ್ ಕಾಲೇಜಿನ ಏಳನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮೃತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ. ಹರ್ಷ ಮೃತ ವಿದ್ಯಾರ್ಥಿ. ಈತನನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿತ್ತು. ಅಷ್ಟೇ ಅಲ್ಲದೆ […]

ಪ್ರಿಯತಮೆ ಬೇರೊಬ್ಬನನ್ನು ಮದ್ವೆಯಾಗಿದ್ದಕ್ಕೆ ಯುವಕ ನೇಣು ಬಿಗಿದು ಆತ್ಮಹತ್ಯೆ

Friday, October 11th, 2019
sucide

ಹೈದರಾಬಾದ್ : ತಾನು ಪ್ರೀತಿಸಿದಾಕೆ ಬೇರೊಬ್ಬನನ್ನು ಮದುವೆಯಾದಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಬಂದಸೋಮರಂ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು 22 ವರ್ಷದ ಸುಧೀರ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷದಿಂದ ಇದೇ ಗ್ರಾಮದಲ್ಲಿ ಕೋಳಿ ಫಾರ್ಮ್ ನಲ್ಲಿ ಕೆಲಸ ಮಾಡಿಕೊಂಡಿದ್ದನು. ಇಲ್ಲಿಯೇ ಇತ್ತೀಚೆಗೆ ಯುವತಿ ಹಾಗೂ ಆಕೆಯ ಸಹೋದರಿ, ಸಹೋದರ ಕೂಡ ಕೆಲಸಕ್ಕೆ ಸೇರಿಕೊಂಡಿದ್ದರು. ಸಹೋದ್ಯೋಗಿಗಳಾಗಿದ್ದ ಸುಧೀರ್ ಮತ್ತು ಯುವತಿಯ ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ 25 […]

ಕೆದೂರು : ರೈಲ್ವೆ ಹಳಿ ಮೇಲೆ ಮಹಿಳೆಯ ಶವ ಪತ್ತೆ

Thursday, October 10th, 2019
kedoru

ಕೆದೂರು : ಕೆದೂರಿನ ರೈಲ್ವೆ ಹಳಿ ಮೇಲೆ ಮಹಿಳೆಯ ಶವವೊಂದು ಪತ್ತೆಯಾಗಿದ್ದು. ರಾತ್ರಿ ವೇಳೆ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಅನುಮಾನ ವ್ಯಕ್ತವಾಗಿದೆ. ಮೃತ ಮಹಿಳೆ ಸುಮಾರು 50 ವರ್ಷ ವಯಸ್ಸಿನ ಮೇಲ್ಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತಿಸದ ಸ್ಥಿತಿಯಲ್ಲಿದೆ. ನೀಲಿ ಬಣ್ಣದ ಸೀರೆ ಧರಿಸಿದ್ದು ಉಳ್ತೂರು ಪರಿಸರದವರು ಎಂಬ ಅನುಮಾನವೂ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಕುಂದಾಪುರ ಶವಗಾರದಲ್ಲಿ ಮೃತದೇಹ ಇರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗುತ್ತಿದೆ.