Blog Archive

ಕೆದೂರು : ರೈಲ್ವೆ ಹಳಿ ಮೇಲೆ ಮಹಿಳೆಯ ಶವ ಪತ್ತೆ

Thursday, October 10th, 2019
kedoru

ಕೆದೂರು : ಕೆದೂರಿನ ರೈಲ್ವೆ ಹಳಿ ಮೇಲೆ ಮಹಿಳೆಯ ಶವವೊಂದು ಪತ್ತೆಯಾಗಿದ್ದು. ರಾತ್ರಿ ವೇಳೆ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಅನುಮಾನ ವ್ಯಕ್ತವಾಗಿದೆ. ಮೃತ ಮಹಿಳೆ ಸುಮಾರು 50 ವರ್ಷ ವಯಸ್ಸಿನ ಮೇಲ್ಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತಿಸದ ಸ್ಥಿತಿಯಲ್ಲಿದೆ. ನೀಲಿ ಬಣ್ಣದ ಸೀರೆ ಧರಿಸಿದ್ದು ಉಳ್ತೂರು ಪರಿಸರದವರು ಎಂಬ ಅನುಮಾನವೂ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಕುಂದಾಪುರ ಶವಗಾರದಲ್ಲಿ ಮೃತದೇಹ ಇರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗುತ್ತಿದೆ.  

ಚಿಕ್ಕಮಗಳೂರು : ನೆರೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರೈತ ಆತ್ಮಹತ್ಯೆ

Thursday, October 3rd, 2019
chandre-gawda

ಚಿಕ್ಕಮಗಳೂರು : ಪ್ರವಾಹದಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸ ಸಮೀಪ ನಡೆದಿದೆ. ಚಂದ್ರೇಗೌಡ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಭಾರಿ ಮಳೆಯಿಂದ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದ ಚಂದ್ರೇಗೌಡ ಅವರ ಅರ್ಧ ಎಕರೆ ಭತ್ತದ ಗದ್ದೆ, ಅರ್ಧ ಎಕರೆ ಕಾಫಿ ತೋಟ ಹಾಳಾಗಿತ್ತು. ತೋಟ ಸರಿಪಡಿಸಲೆಂದು ಅವರು ಕೈ ಸಾಲ ಮಾಡಿದ್ದರು. ಆದರೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ […]

ಪ್ರವಾಹದಿಂದ ಬೆಳೆ ಹಾನಿ : ಮನನೊಂದ ರೈತ ಆತ್ಮಹತ್ಯೆ

Tuesday, October 1st, 2019
raitha

ಬೆಳಗಾವಿ : ಜಿಲ್ಲೆಯಲ್ಲಿ ಅಪ್ಪಳಿಸಿದ ಭೀಕರ ಪ್ರವಾಹದಿಂದ ಬೆಳೆ ಹಾನಿ ಆಗಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಅಂಬೇವಾಡಿ ಗ್ರಾಮದ ಮಾರುತಿ ನಾರಾಯಣ ರಾಕ್ಷೆ(60) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಲದಲ್ಲಿ ಭತ್ತ ಹಾಗೂ ಆಲೂಗಡ್ಡೆ ಬೆಳೆದಿದ್ದನು. ಕಳೆದ ಎರಡು ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಮಲಪ್ರಭೆ ನದಿಯಲ್ಲಿ ನೆರೆ ಬಂದಿತ್ತು. ಹೀಗಾಗಿ ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಸರ್ಕಾರದಿಂದ ಬೆಳೆ ಪರಿಹಾರವೂ ಇಲ್ಲ, ಬೆಳೆಯೂ […]

ಸುಬ್ರಹ್ಮಣ್ಯ : ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Wednesday, September 18th, 2019
Bhavish

ಸುಬ್ರಹ್ಮಣ್ಯ : ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮನೆ ಪಕ್ಕದಲ್ಲಿನ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಭವಿಷ್ ಪಿ.ಪಿ ಎಂದು ಗುರುತಿಸಲಾಗಿದೆ. ಗ್ರಾಮದ ಪರಮಲೆ ಜಾಲು ನಿವಾಸಿ ಪುರುಷೋತ್ತಮ ಗೌಡರ ಪುತ್ರ . ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನ ಅಂತಿಮ ಬಿ.ಕಾಂ ವಿಭಾಗದ ವಿದ್ಯಾರ್ಥಿ. ಮಂಗಳವಾರ ಪರೀಕ್ಷೆ ಬರೆದು ಮನೆಗೆ ಮರಳಿದ್ದ ಆತ, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಬ್ರಮಣ್ಯ ಪೊಲೀಸ್ […]

ಪಾಂಡೇಶ್ವರ : ಯುವಕನೋರ್ವ ಆತ್ಮಹತ್ಯೆ

Wednesday, September 11th, 2019
Arun-Raj

ಮಂಗಳೂರು : ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದ ಘಟನೆ ಪಾಂಡೇಶ್ವರದಲ್ಲಿ ನಡೆದಿದೆ. ಮೃತ ಯುವಕನನ್ನು ಅರುಣ್ ರಾಜ್ (31) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ದಿನಗಳ ಹಿಂದೆಯೆ ನಾಪತ್ತೆಯಾಗಿದ್ದ. ಈತ ಮೂಲತಃ ಮೂಡುಬಿದ್ರೆಯನಾಗಿದ್ದು ಯುವಕನ ತಂದೆ ಸಾಗರದಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮನೆಯವರು ಈತ ತಂದೆ ಇದ್ದಲ್ಲಿ ತೆರಳಿರಬಹುದು ಅಂದುಕೊಂಡು ಸುಮ್ಮನಾಗಿದ್ದರು. ಆದರೆ ಈ ನಡುವೆ ಅರುಣ್ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಅರುಣ್ ಯಾರು ವಾಸವಿರದ ತನ್ನ ಪಾಂಡೇಶ್ವರದಲ್ಲಿರುವ ಅಜ್ಜಿಮನೆಗೆ […]

ಪಿಲಿಕುಳ ನಿಸರ್ಗಧಾಮದ ಪ್ರಾಣಿ ಪಾಲಕ ಆತ್ಮಹತ್ಯೆ

Monday, September 9th, 2019
zookeeper

ಮಂಗಳೂರು : ಪಿಲಿಕುಳ ನಿಸರ್ಗಧಾಮದ ಪ್ರಾಣಿ ಸಂಗ್ರಹಾಲಯದ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಶೋಕ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅಶೋಕ ಸುಮಾರು 6 ವರ್ಷಗಳಿಂದ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪಿಲಿಕುಳದ ತನ್ನ ಕ್ವಾರ್ಟರ್ಸ್‌ನ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ಮಂಗಳೂರು : 50 ವರ್ಷದ ಗುತ್ತಿಗೆದಾರ ಬಾವಿಗೆ ಹಾರಿ ಆತ್ಮಹತ್ಯೆ

Saturday, September 7th, 2019
jaya-alwa

ಮಂಗಳೂರು : ನಗರದ ಕೊಟ್ಟಾರದಲ್ಲಿ 50 ವರ್ಷದ ಗುತ್ತಿಗೆದಾರರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.6 ರಂದು ಶುಕ್ರವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಟ್ಟಾರ ನಿವಾಸಿ ಜಯಕರ ಆಳ್ವಾ (50) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಪತಿ ಶನಿವಾರ ಬೆಳಗ್ಗೆ ನಾಪತ್ತೆಯಾಗಿರುವುದನ್ನು ಗಮನಿಸಿ ಹುಡುಕಾಟ ಆರಂಭಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 6 ರಂದು ರಾತ್ರಿ ಮನೆಮಂದಿ ಮಲಗಿದ್ದ ಸಂದರ್ಭ ಜಯ ಆಳ್ವಾ ಮನೆಯ ಹಿಂಬಾಗಿಲಿನಿಂದ ಹೊರಗೆ ಹೋಗಿ ತಮ್ಮ ಮನೆಯ ಸನಿಹವಿರುವ ಬಾವಿಗೆ […]

ಪ್ರೇಯಸಿ ಜೊತೆ ವಿವಾಹಿತ ಆತ್ಮಹತ್ಯೆ

Tuesday, April 16th, 2019
Kiran-Sangeetha

ಮಂಗಳೂರು: ವಿವಾಹಿತ ಯುವಕನೊಬ್ಬ ಪ್ರೇಯಸಿಯ  ಜೊತೆಗೆ ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸುದಮುಗೇರಿ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಣ್ಸೇಕಟ್ಟೆ ನಿವಾಸಿ ಕಿರಣ್ (30), ಲಾಯಿಲ ನಿವಾಸಿ ಸಂಗೀತ (15) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ . ಕಿರಣ್ಗೆ ಎರಡು ಮದುವೆಯಾಗಿದ್ದು, ಪ್ರೇಯಸಿಯನ್ನು ಅಪ್ರಾಪ್ತೆ ಎನ್ನಲಾಗಿದೆ.  ಕಿರಣ್ ಆಕೆಯ ಜೊತೆಗೆ ಪ್ರೇಮ ಸಂಬಂಧ ಹೊಂದಿದ್ದ ಎನ್ನಲಾಗುತ್ತಿದೆ.  ಇನ್ನು ಕಿರಣ್ ಪಿಟ್ಟರ್ ಕೆಲಸ ನಿರ್ವಹಿಸುತ್ತಿದ್ದ. ಬಾಲಕಿ ಹತ್ತನೇ ತರಗತಿಯನ್ನು ಅರ್ಧದಲ್ಲಿ ಬಿಟ್ಟಿದ್ದಳು‌. […]

ಅವಳಿ ಮಕ್ಕಳನ್ನು ನೇಣಿಗೆ ಹಾಕಿ, ಮಹಿಳೆ ಆತ್ಮಹತ್ಯೆಗೆ ಶರಣು

Tuesday, February 5th, 2019
Baby

ಮಂಗಳೂರು :  ಅವಳಿ ಮಕ್ಕಳನ್ನು ನೇಣಿಗೆ ಹಾಕಿ ಮಹಿಳೆಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ-ಬೆಳಾಲು ರಸ್ತೆಯ ಓಡಲದ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಿವಮೊಗ್ಗ ಮೂಲದ ಮಹಿಳೆ ಬೇಬಿ (23) ಸಾವನ್ನಪ್ಪಿದ್ದವರು. ಇನ್ನು ಅಸ್ವಸ್ಥರಾಗಿದ್ದ ಎರಡು ವರ್ಷ ಪ್ರಾಯದ ಅವಳಿ ಮಕ್ಕಳಾದ ಅಕ್ಷರ ಹಾಗೂ ಅಪ್ಪರಾ ಅವರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಬಿ ಅವರ ಗಂಡ ಪ್ರವೀಣ್ ಉಜಿರೆಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. […]

ನಾಪತ್ತೆಯಾದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ..!

Thursday, July 12th, 2018
kundapur

ಕುಂದಾಪುರ: ನಾಪತ್ತೆಯಾದ ಮಹಿಳೆ ಇಂದು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಿಲ್ವಿಯಾ ಮಂಗಳವಾರದಂದು ನಾಪತ್ತೆಯಾಗಿದ್ದರು. ಇಂದು ಖಾಸಗಿ ತೋಟದಲ್ಲಿರುವ ಬಾವಿಯಲ್ಲಿ ಶವ ಪತ್ತೆಯಾಗಿದ್ದಾರೆ. ಕುಂದಾಪುರ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದ್ದು, ಆತ್ಮಹತ್ಯೆ ಮಾಡಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.