Blog Archive

ಸಾಲಬಾಧೆ ತಾಳಲಾರದೆ ಕೇಬಲ್ ಆಪರೇಟರ್ ವಿಷ ಸೇವಿಸಿ ಆತ್ಮಹತ್ಯೆ

Friday, July 6th, 2018
suicide

ಮೈಸೂರು: ಸಾಲಬಾಧೆ ತಾಳಲಾರದೆ ಕೇಬಲ್ ಆಪರೇಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಜಿ.ಆರ್ ಬಾಬು ಎಂದು ತಿಳಿದು ಬಂದಿದೆ. ಇವರು ಮೈಸೂರು ನಗರದ ಕೆ.ಆರ್ ಮೊಹಲ್ಲಾ ನಿವಾಸಿಯಾಗಿದ್ದು, ಸಾಲಕ್ಕೆ ಹೆದರಿ ನಿನ್ನೆ ಸಂಜೆ ನಂಜನಗೂಡಿನ ರಿಂಗ್ ರಸ್ತೆಯಲ್ಲಿರುವ ಲಾಡ್ಜ್ ಗೆ ಹೋಗಿ ರೂಂ ಪಡೆದು ಅಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಎಷ್ಟೊತ್ತಾದರೂ ರೂಂನಿಂದ ಹೊರಬರದ ಕಾರಣ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದು […]

ತಾಯಿಯ ಸಾವಿನಿಂದ ನೊಂದ ಮಗ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ

Tuesday, January 16th, 2018
sathish

ಮೈಸೂರು: ತಾಯಿಯ ಸಾವಿನಿಂದ ನೊಂದ ಮಗ ಸೆಲ್ಫಿ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ವಾಜಮಂಗಲದಲ್ಲಿ ನಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ವಾಜಮಂಗಲದ ರತ್ನಮ್ಮ (45) ನಿಧನರಾಗಿದ್ದರು. ತಾಯಿ ಅಗಲಿಕೆ ನೋವಿನಿಂದ ಮಗ ಸತೀಶ್ (29) ಕೂಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಸತೀಶ್ ಎರಡೂವರೆ ಗಂಟೆಯ ವಿಡಿಯೋ ರೆಕಾರ್ಡ್‌ ಮಾಡಿಟಿದ್ದಾರೆ. ‘ನನ್ನ ಎಲ್ಲ ಸ್ನೇಹಿತರಿಗೆ ಕಡೆಯ ನಮಸ್ಕಾರಗಳು. ನನ್ನ ತಾಯಿ ತೀರಿಕೊಂಡ ಕಾರಣ ನಾನು ಕೂಡ ಅವರ ಜೊತೆ ಹೋಗಬೇಕೆಂದು ನಿರ್ಧರಿಸಿದ್ದೇನೆ. […]

ಕದ್ರಿ ಸಂಚಾರ ವಿಭಾಗದ ಪೊಲೀಸ್ ಪೇದೆಯ ಪತ್ನಿ ಆತ್ಮಹತ್ಯೆ

Thursday, November 2nd, 2017
kadri

ಮಂಗಳೂರು: ಪೊಲೀಸ್ ವಸತಿ ಗೃಹದಲ್ಲಿ ನಗರದ ಕದ್ರಿ ಪೊಲೀಸ್ ಠಾಣೆ ಸಂಚಾರ ವಿಭಾಗದ ಪೊಲೀಸ್ ಪೇದೆ ಚಿನ್ನಪ್ಪಎಂಬವರ ಪತ್ನಿ ಉಮಾ (26)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ. ಶಕ್ತಿ ನಗರದಲ್ಲಿ ಇರುವ ಪೊಲೀಸ್ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಚಿನ್ನಪ್ಪ ಹಾಗೂ ಇಬ್ಬರೂ ಮಕ್ಕಳನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಕನಾಡಿ: ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ

Thursday, October 5th, 2017
Bhasheer

ಮಂಗಳೂರು: ರಿಕ್ಷಾ ಚಾಲಕನೊಬ್ಬ ಕಂಕನಾಡಿ ಬಳಿ ನೇತ್ರಾವತಿ ನದಿಯ ಸೇತುವೆ ಮೇಲಿಂದ ಜಿಗಿದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಅಶೋಕನಗರದ ಬಶೀರ್ ಅಹಮ್ಮದ್ ಎಂಬ ರಿಕ್ಷಾ ಚಾಲಕ ಆತ್ಮಹತ್ಯೆಗೈದ ವ್ಯಕ್ತಿ ಎಂದು ತಿಳಿದು ಬಂದಿದೆ.ರಿಕ್ಷಾ ನಿಲ್ಲಿಸಿ ಕೂಡಲೇ ನದಿಗೆ ಹಾರಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಕಿರುಕುಳ ತಾಳಲಾರದೆ ಯುನಿಟಿ ಆಸ್ಪತ್ರೆ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

Wednesday, September 13th, 2017
unity hospital

ಮಂಗಳೂರು : ಆಸ್ಪತ್ರೆಯ ಆಡಳಿತ ಮಂಡಳಿ ನಿರಂತರ ಕಿರುಕುಳ ನೀಡುತಿದ್ದರ ಪರಿಣಾಮ ಯುನಿಟಿ ಆಸ್ಪತ್ರೆ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದ ಸ್ಪೂರ್ತಿ ಆಸ್ಪತ್ರೆಯ ಇನ್ಷೂರೆನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸೊಮೇಶ್ವರದ ಉಚ್ಚಿಲ ನಿವಾಸಿ ಸ್ಪೂರ್ತಿ (21 )ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ ಒಂದುವರೆ ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದ ಸ್ಪೂರ್ತಿ ಗೆ ಆಸ್ಪತ್ರೆಯಲ್ಲಿ ಕಿರುಕುಳ ನೀಡುತ್ತಿದ್ದರು. ಆಸ್ಪತ್ರೆಯ ಆಡಳಿತ ಮಂಡಳಿ ನಿರಂತರ ಕಿರುಕುಳ ನೀಡುತಿದ್ದರ ಬಗ್ಗೆ ಸ್ಪೂರ್ತಿ […]

ತುಳು ಧಾರಾವಾಹಿ ನಿರ್ಮಾಪಕ ಪ್ರವೀಣ್ ಕುಮಾರ್ ಆತ್ಮಹತ್ಯೆ

Saturday, July 22nd, 2017
Praveen B

ಉಳ್ಳಾಲ : ತುಳು ಧಾರಾವಾಹಿ ನಿರ್ಮಾಪಕ ಪ್ರವೀಣ್ ಕುಮಾರ್ ಬಿ(51) ಎಂಬವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ತಡರಾತ್ರಿ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ. ಪ್ರವೀಣ್ ಅವರು ಬುಧವಾರ ತಡರಾತ್ರಿ ಮೂರುಕಟ್ಟೆಯ ತನ್ನ ಮನೆಯಲ್ಲಿ ಪತ್ನಿ ಮತ್ತು ಮೂವರು ಮಕ್ಕಳು ಇರುವಾಗಲೇ ಕೋಣೆಯೊಳಗೆ ಬಾಗಿಲು ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ಹೊತ್ತಾದರೂ ಪ್ರವೀಣ್ ಅವರು ಕೋಣೆಯಿಂದ ವಾಪಾಸಾಗದೇ ಇದ್ದಾಗ ಅನುಮಾನಗೊಂಡು ಮನೆಮಂದಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ತಿಳಿದು […]

ಪಡುಬೆಳ್ಳೆಯಲ್ಲಿ ಸೈನಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Thursday, July 13th, 2017
Padubelle suicide

ಉಡುಪಿ : ಸೈನಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ತಾಲೂಕಿನ ಪಡುಬೆಳ್ಳೆಯಲ್ಲಿ ನಡೆದಿದೆ. ಬುಧವಾರ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿಗಳಾದ ಶಂಕರ ಆಚಾರ್ಯ (50), ಅವರ ಪತ್ನಿ ನಿರ್ಮಲಾ ಆಚಾರ್ಯ( 44) ಹಾಗೂ ಪುತ್ರಿಯರಾದ ಶ್ರೇಯಾ( 22), ಶೃತಿ (23) ಆತ್ಮಹತ್ಯೆಗೆ ಶರಣಾದವರು. ಪಡುಬೆಳ್ಳೆಯಲ್ಲಿ ಜ್ಯುವೆಲ್ಲರಿ ನಡೆಸುತ್ತಿದ್ದ ಶಂಕರ್ ಆಚಾರ್ಯ ಅವರು ಬುಧವಾರ ರಾತ್ರಿ ಜುವೆಲ್ಲರಿ ಶಾಪ್ ಮುಚ್ಚಿ ಮೆನೆಗೆ ಬಂದ […]

ವಿಟ್ಲದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ

Saturday, February 11th, 2017
Siddiq

ಮಂಗಳೂರು: ಯುವಕನೊಬ್ಬ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಶನಿವಾರ ಪತ್ತೆಯಾಗಿದೆ. ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ಮೃತರನ್ನು ಪುತ್ತೂರು ತಾಲೂಕಿನ ಕುಂಬ್ರ ನಿವಾಸಿ ಸಿದ್ದೀಕ್(42) ಎಂದು ಗುರುತಿಸಲಾಗಿದೆ. ವಿಟ್ಲ ಸಮೀಪದ ವೀರಕಂಬ ಗ್ರಾಮದ ಮಜ್ಜೋನಿ ಗಾಮದವರು ಎನ್ನಲಾಗಿದೆ. ಇವರು ವಿಟ್ಲದ ಅಡಿಕೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ ಸಿದ್ದೀಕ್, ರಸ್ತೆ ಬದಿಯ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ […]

ಎಂಡೋ ಸಂತ್ರಸ್ತ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ

Thursday, January 5th, 2017
belthangady

ಬೆಳ್ತಂಗಡಿ: ಎಂಡೋ ಸಂತ್ರಸ್ತ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕ ಗ್ರಾಮದಲ್ಲಿ ನಡೆದಿದೆ. ಕೊಕ್ಕ ಗ್ರಾಮದ ನಿವಾಸಿಗಳಾದ ಬಾಬು ಗೌಡ (62), ಪತ್ನಿ ಗಂಗಮ್ಮ (55), ಮಗ ಸದಾನಂದ (32) ಹಾಗೂ ಮತ್ತೊಬ್ಬ ಮಗ ನಿತ್ಯಾನಂದ (30) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಮನೆಯಲ್ಲಿನ ಇಬ್ಬರು ಮಾರಕ ಎಂಡೋ ಸಲ್ಫಾನ್‌ ಅಡ್ಡಪರಿಣಾಮದಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. […]

ಪಿಯು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

Tuesday, August 23rd, 2016
Shifan

ಮಂಗಳೂರು: ಪಿಯು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ತೊಕ್ಕೊಟ್ಟುವಿನ ಲಚ್ಚಿಲ್‌‌ನ ಮನೆಯೊಂದರಲ್ಲಿ ನಡೆದಿದೆ. ಶಿಫಾನ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ತೊಕ್ಕೊಟ್ಟು ಸಂತ ಸೆಬೆಸ್ಟಿಯನ್ ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ವಿದ್ಯಾರ್ಥಿ ಶಿಫಾನ್ ಲಚ್ಚಿಲ್‌‌ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.