Blog Archive

ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ಅವ್ಯಹಾರ, ಆರೋಪಿತರಿಗೆ ಜಾಮೀನು

Sunday, July 19th, 2020
kateelu

ಮೂಡಬಿದ್ರೆ  : ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆಯುತ್ತಿದೆ, ವಿಶೇಷ ಪೂಜೆ, ಯಕ್ಷಗಾನ ಮೇಳದ ಹೆಸರಲ್ಲಿ ಹಣ ವಸೂಲಿ,  ಚಿನ್ನದ ರಥ ಸೇವೆಗೆ ಹಣ ವಸೂಲಿ, ಚಂಡಿಕಾ ಯಾಗ.  ಹೋಮದ  ಹೆಸರಲ್ಲಿ ಹಣ ವಸೂಲಿ ನೆಡೆಯುತ್ತಿದೆ ಎಂದು  ಅಲ್ಲದೆ ಸಾರ್ವಜನಿಕರ ದುಡ್ಡು ದೇವರ ಹೆಸರಲ್ಲಿ ಅಸ್ರಣ್ಣ ಕುಟುಂಬದ ಮನೆ ಸೇರುತ್ತದೆ.  ಸರಕಾರೀ ದೇವಸ್ಥಾನದಲ್ಲಿ ವಸೂಲಿ ಒಂದು ಕಡೆಯಾದರೆ ಅದಕ್ಕೆ ರಶೀದಿ ಬೇರೆಯೇ ತೋರಿಸಲಾಗುತ್ತಿತ್ತು ಎಂದು ತನಿಖಾ ವರದಿ ಮಾಡಲಾಗಿತ್ತು. ಈ ಬಗ್ಗೆ ಅಸ್ರಣ್ಣ ಕುಟುಂಬಸ್ಥರು ನ್ಯಾಯಾಲಯದಲ್ಲಿ ಒಂದು ಕೋಟಿ […]

ಕುಖ್ಯಾತ ಕಳವು ಆರೋಪಿಗಳ ಕಾರು ಮಗುಚಿಬಿದ್ದು ಗಾಯಾಳುಗಳು ಆಸ್ಪತ್ರೆಯಿಂದ ಪರಾರಿ

Friday, July 22nd, 2016
Kumbale

ಕುಂಬಳೆ: ಕುಖ್ಯಾತ ಕಳವು ಆರೋಪಿ ಹಾಗೂ ತಂಡ ಸಂಚರಿಸಿದ ಕಾರು ನಿಯಂತ್ರಣ ತಪ್ಪಿ ಮನೆಯ ಮೇಲೆ ಮಗುಚಿಬಿದ್ದ ಘಟನೆ ಬುಧವಾರ ಮಧ್ಯರಾತ್ರಿ ಕುಂಬಳೆ ಸಮೀಪದ ಶಾಂತಿಪಳ್ಳದಲ್ಲಿ ನಡೆದಿದೆ. ಈವೇಳೆ ನಾಗರಿಕರು ಆಸ್ಪತ್ರೆಗೆ ತಲುಪಿಸಿದ ಗಾಯಾಳುಗಳ ಪೈಕಿ ಇಬ್ಬರು ಆಸ್ಪತ್ರೆಯಿಂದ ಪರಾರಿಯಾ ಗಿದ್ದಾರೆ. ಮೂವರು ಅಪಘಾತ ತಕ್ಷಣವೇ ಪರಾರಿಯಾಗಿದ್ದಾರೆ. ಇನ್ನೋರ್ವ ಗಾಯಗೊಂಡ ಸ್ಥಿತಿಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯಾತ್ರಿ ೧.೪೫ರ ವೇಳೆ ಕುಂಬಳೆ-ಬದಿಯಡ್ಕ ರಸ್ತೆಯ ಶಾಂತಿಪಳ್ಳ ತಿರುವಿನಲ್ಲಿ ಅಬಕಾರಿ ಕಚೇರಿಯ ಸಮೀಪ […]

ರಿಕ್ಷಾ ಚಾಲಕ, ಪಡೀಲ್ ನಿವಾಸಿ ಮುಖೇಶ್ ಮೇಲೆ ಹಲ್ಲೆ

Thursday, July 7th, 2016
Mukhesh

ಮಂಗಳೂರು: ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಪಡೀಲ್ ಭಜರಂಗದಳದ ಸದಸ್ಯನೂ ಆಗಿರುವ ಯುವಕನೋರ್ವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ನಿನ್ನೆ ಸಂಜೆ ನಗರದ ಫೈಸಲ್‍ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಪಡೀಲ್ ನಿವಾಸಿ ಮುಖೇಶ್ ಎಂದು ಗುರುತಿಸಲಾಗಿದೆ. ಮುಖೇಶ್ ತನ್ನ ರಿಕ್ಷಾದಲ್ಲಿ ಫೈಸಲ್‍ನಗರಕ್ಕೆ ಬಾಡಿಗೆಗೆ ತೆರಳಿದ್ದ. ಈ ವೇಳೆ ರಸ್ತೆಯಲ್ಲಿ ಶೇಖರಣೆಯಾಗಿದ್ದ ಕೆಸರು ನೀರು ರಸ್ತೆ ಬದಿ ನಿಂತಿದ್ದ ಯುವಕನೋರ್ವನ ಮೇಲೆ ಎರಚಿದೆ. ಇದನ್ನೇ ನೆಪವಾಗಿರಿಸಿದ ಸ್ಥಳೀಯ ಯುವಕರು ಮುಖೇಶ್‍ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳಕ್ಕೆ […]

ಕೊಲೆಯತ್ನ : ಆರು ಮಂದಿ ಆರೋಪಿಗಳ ಬಂಧನ

Tuesday, February 9th, 2016
6accused

ಮಂಗಳೂರು: ಮಸೀದಿಯೊಂದರ ವಿಷಯಕ್ಕೆ ಸಂಬಂದಿಸಿ ಯುವಕನೋರ್ವನ ಕೊಲೆಗೆ ಯತ್ನಿಸಿದ ಆರು ಮಂದಿ ಆರೋಪಿಗಳ ತಂಡವೊಂದನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಕಾಪ್ರಿಗುಡ್ಡೆ ನಿವಾಸಿ ಸಿ.ಅಬ್ದುಲ್ ಹಮೀದ್ (20), ಅತ್ತಾವರ ನಿವಾಸಿ ಎಂ.ಇಸ್ಮಾಯಿಲ್ ರಿಹಾನ್ (20), ಬೋಳಾರ ನಿವಾಸಿ ಉನೀಝ್ ಅಹಮ್ಮದ್ (20), ಅತ್ತಾವರ ನಿವಾಸಿ ಶಾಬಾನ್ ಮಿಷಾಬ್ (23), ಕುದ್ರೋಳಿ ನಿವಾಸಿ ನೌಫಲ್ (20) ಮತ್ತು ಕಾಸರಗೋಡಿನ ನಿವಾಸಿ ಸೊಹೈಲ್ ಎಂ.ಪಿ. ಬಂದಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಮೊಹಮ್ಮದ್ ಫೈಝಿಲ್ ಮತ್ತು ಆತನ ತಂದೆ ಹಾಗೂ ಆರೋಪಿ […]

ಪ್ರಶಾಂತ್ ಕೊಲೆ ಆರೋಪಿಗಳ ಬಂಧನಕ್ಕೆ ಮುನೀರ್ ಕಾಟಿಪಳ್ಳ ಆಗ್ರಹ

Thursday, October 15th, 2015
prashanth Murder

ಮಂಗಳೂರು : ಭಜರಂಗದಳದ ಕಾರ್ಯಕರ್ತ, ಮೂಡಬಿದ್ರೆಯ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ. ನಡುಬೀದಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆಯಾದ ವಾರದ ನಂತರವೂ ಪತ್ತೆ ಹಚ್ಚಲು ಸಾಧ್ಯವಾಗದಿರುವುದು ನಾಗರಿಕ ವಲಯದಲ್ಲಿ ಭೀತಿಯ ವಾತಾವರಣವನ್ನು ಉಂಟು ಮಾಡಿದೆ. ಈ ಹಿಂದೆಯೂ ಕೋಮುದ್ವೇಷದಿಂದ ಎನ್ನಲಾದ ಸರಣಿ ಪ್ರತೀಕಾರದ ಕೊಲೆಗಳು ನಡೆದಿತ್ತು. ಆಗೆಲ್ಲ ಪ್ರಕರಣದ ಆಳಕ್ಕಿಳಿದು ಸೂತ್ರಧಾರಿಗಳನ್ನು ಕಂಡುಹಿಡಿಯುವಲ್ಲಿ ಪೊಲೀಸ್ ಇಲಾಖೆ ವಿಫಲವಾದುದರಿಂದ ಜಿಲ್ಲೆಯ ಜನತೆ ಅಪಾರವಾದ […]

ಕೊಲೆ ಮಾಡಿ, ದೇಹವನ್ನು ಇಂಗುಗುಂಡಿಯಲ್ಲಿ ಮುಚ್ಚಿಟ್ಟಿದ್ದ ಆರೋಪಿಗಳಿಗೆ ಜಾಮೀನು

Saturday, July 20th, 2013
Karkala Murder

ಮಂಗಳೂರು : ಕಾರ್ಕಳ ತಾಲೂಕು ರೆಂಜಾಳ ಗ್ರಾಮದಲ್ಲಿ ಜೂ.3ರಂದು ಕೊಲೆಯಾದ ಪೂರ್ಣಿಮಾ ಶೆಟ್ಟಿ ಪ್ರಕರಣದ ಆರೋಪಿಗಳಾದ ಅಮರೀಶ್, ಸುಧಾಕರ್ ಶೆಟ್ಟಿ, ಗುರುಪ್ರಸಾದ್, ಭಾಸ್ಕರ್ ಪೂಜಾರಿ ಹಾಗೂ ಪ್ರವೀಣ್ ತೌರು ಇವರಿಗೆ ಮೂಡುಬಿದರೆ ನ್ಯಾಯಾಲಯ ಜಾಮೀನು ನೀಡಿದೆ. ತನ್ನ ಸ್ನೇಹಿತರ ಸಹಕಾರದೊಂದಿಗೆ ಪ್ರಭಾಕರ್ ಶೆಟ್ಟಿ ಪೂರ್ಣಿಮಾಳನ್ನು ಕೊಲೆ ಮಾಡಿ, ದೇಹವನ್ನು ಬಟ್ಟೆಯಲ್ಲಿ ಸುತ್ತಿ ಮಾಸ್ತಿಕಟ್ಟೆಯ ಇಂಗುಗುಂಡಿಯಲ್ಲಿ ಹೂತು ಹಾಕಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದ ಆರೋಪಿ ಯೋಗೀಶ್ ಡಿಸ್ಚಾರ್ಜ್, ಬಂಧನ

Thursday, July 11th, 2013
Yogish Manipal

ಉಡುಪಿ : ಜೂನ್ 20ರ ರಾತ್ರಿ ಮಣಿಪಾಲದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ನನ್ನು ಮಣಿಪಾಲ ಪೋಲೀಸರು ಗುರುವಾರ ಬಂಧಿಸಿದ್ದಾರೆ.  ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಯೋಗೀಶ್ ಡಿಸ್ಚಾರ್ಜ್ ಆದಾಗ ಪೋಲೀಸರು ಬಂಧಿಸಿದರು. ಯೋಗೀಶ್ ನನ್ನು ಇಂದು ಸಂಜೆ 4 ಗಂಟೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಜೂನ್ 27ರಂದು ಐಜಿಪಿ ಪ್ರತಾಪ್ ರೆಡ್ಡಿ ಅವರಿಗೆ ಕರೆ ಮಾಡಿದ್ದ ಯೋಗೀಶ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಣಿಪಾಲ […]