Blog Archive

ಕೊರೋನ ಸೋಂಕು ಆಗಸ್ಟ್ 12 : ದಕ್ಷಿಣ ಕನ್ನಡ 229 , ಉಡುಪಿ 263

Wednesday, August 12th, 2020
coronavirus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ದಂದು 229 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ 498 ಮಂದಿ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ. ‘ಪಾಂಡೆಮಿಕ್’ ಕಿರು ಚಿತ್ರ ಆಗಸ್ಟ್ 15 ರಂದು ಮೆಗಾ ಮೀಡಿಯಾ ನ್ಯೂಸ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ  ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7825ಕ್ಕೆ ಏರಿಕೆಯಾಗಿದೆ. ಈ ಪೈಕಿ 5232 ಮಂದಿ ಒಟ್ಟು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 2349 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರದಂದು ಮತ್ತೆ 7 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು […]

ಕೋಯಿಕ್ಕೋಡ್‌ನಲ್ಲಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಅವಘಡ 11 ಮಂದಿ ಮೃತ, 125 ಮಂದಿ ಆಸ್ಪತ್ರೆಗೆ ದಾಖಲು

Friday, August 7th, 2020
AirIndia crash

ಕೋಯಿಕ್ಕೋಡ್‌:  ಕೇರಳದ ಕೋಯಿಕ್ಕೋಡ್‌ನ ಕರಿಪುರ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡುವ ವೇಳೆ ದುಬೈ–ಕೋಯಿಕ್ಕೋಡ್‌ ನಡುವಿನ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (ಐಎಕ್ಸ್‌–1344 B737) ಅವಘಡಕ್ಕೀಡಾಗಿದೆ. ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, 126 ಮಂದಿಗೆ ಗಾಯಗಳಾಗಿವೆ. 15 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮಲಪುರಂ ಎಸ್‌ಪಿ ತಿಳಿಸಿ ದ್ದಾರೆ. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ತಲುಪಿದ್ದು ರಕ್ಷಣಾ ಕಾರ್ಯಗಳು ನಡೆಯುತ್ತಿವೆ. 125 ಕ್ಕಿಂತಲೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 7.45ರಲ್ಲಿ ಅಪಘಾತ ಸಂಭವಿಸಿದೆ ಎಂದು ಕೊಂಡೋಟ್ಟಿ ಪೊಲೀಸರು ತಿಳಿಸಿದ್ದಾರೆ. ವಿಮಾನದಲ್ಲಿ ಒಟ್ಟು 190 ಪ್ರಯಾಣಿಕರು, […]

ಹುಬ್ಬಳ್ಳಿಯ ರೌಡಿ ಷೀಟರ್‌ ಫ್ರೋಟ್ ಇರ್ಫಾನ್‍ ಆಸ್ಪತ್ರೆಯಲ್ಲಿ ಮೃತ

Friday, August 7th, 2020
irfan

ಹುಬ್ಬಳ್ಳಿ:  ಬೀಗರನ್ನು ಬೀಳ್ಕೊಡಲು  ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಗುಂಡಿನ ಸುರಿಮಳೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹುಬ್ಬಳ್ಳಿಯ ರೌಡಿ ಷೀಟರ್‌ ಫ್ರೋಟ್ ಇರ್ಫಾನ್‍ (52) ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಇರ್ಫಾನ್ ಹೊಟ್ಟೆಪಾಡಿಗಾಗಿ ಧಾರವಾಡಕ್ಕೆ ಬಂದು ಅಲ್ಲಿಯೇ ನೆಲೆಯೂರಿ ತನ್ನ ಅಪರಾಧ ಜಗತ್ತನ್ನು ವಿಸ್ತಾರ ಮಾಡಿಕೊಂಡು ಡಾನ್ ಆಗಿದ್ದ. ಮಗನ ಮದುವೆ ಮುಗಿಸಿ ಅತಿಥಿಗಳನ್ನು ಕಳುಹಿಸಲು ರಸ್ತೆ ಬದಿಯಲ್ಲಿ ಬಂದು ನಿಂತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ಗುಂಡಿನ ಮಳೆಗರೆದಿದ್ದರು. ಇರ್ಫಾನ್ ತಮ್ಮ ಮಗನ ಮದುವೆ […]

ಕೋವಿದ್ ಇದೆ ಎಂದು ಸುಳ್ಳು ವರದಿ ನೀಡಿ 89 ಸಾವಿರ ಬಿಲ್! ಕರ್ ಕೊಂಡು ಹೋದವರಿಗೂ 21 ಸಾವಿರ ಬಿಲ್ ವಸೂಲಿ ಮಾಡಿದ ಮಂಗಳೂರಿನ ಆಸ್ಪತ್ರೆ

Tuesday, July 28th, 2020
dinesh adkar

ಮಂಗಳೂರು : ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅದೇ ಸಂದರ್ಭದಲ್ಲಿ ಅವರನ್ನು ಕೊವಿಡ್ ತಪಾಸಣೆ ಮಾಡಿ ನಿಮಗೆ ಪಾಸಿಟೀವ್ ಇದೆ ಎಂದು ವರದಿಕೊಟ್ಟಿದ್ದಾರೆ. ಸಂಶಯಗೊಂಡ ಅವರು ಮರುದಿನ ಬೇರೆ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ನೆಗೆಟೀವ್ ಬಂದಿದೆ. 89 ಸಾವಿರ ಬಿಲ್ಲಿನ ಜೊತೆಗೆ ಅವರನ್ನು ನೋಡಿಕೊಳ್ಳಲು ಬಂದವರಿಗೂ  ಕೋವಿದ್ ತಪಾಸಣೆಯ ನೆಪದಲ್ಲಿ 21 ಸಾವಿರ ಬಿಲ್ ಹಾಕಿದ ಪ್ರಕರಣವೊಂದು ನಡೆದಿದೆ. ಸುಳ್ಯದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮಾಲಕ ದಿನೇಶ್ ಅಡ್ಕಾರ್ ಎಂಬವರು ಜುಲೈ 21 ನೇ ತಾರೀಕಿನಂದು […]

ಕೊರೋನ ಪ್ರಕರಣ ಜುಲೈ 22 : ದಕ್ಷಿಣ ಕನ್ನಡ ಜಿಲ್ಲೆ162, ಉಡುಪಿ ಜಿಲ್ಲೆ281, ಕಾಸರಗೋಡು ಜಿಲ್ಲೆ101

Wednesday, July 22nd, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 162 ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ಕೊರೋನ ಸೋಂಕು ಪೀಡಿತರ ಸಂಖ್ಯೆ 3,996ಕ್ಕೆ ಏರಿದೆ. ಕೋವಿಡ್‌ಗೆ ಮತ್ತೆ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 92ಕ್ಕೆ ಏರಿದೆ. ಜಿಲ್ಲೆಯಲ್ಲಿ ಬುಧವಾರ  ಪತ್ತೆಯಾದ ಪ್ರಕರಣಗಳಲ್ಲಿ ಶೀತ ಲಕ್ಷಣ ಹೊಂದಿರುವವರ ಸಂಖ್ಯೆಯೇ ಅಧಿಕ ಮಟ್ಟದಲ್ಲಿದೆ. ಶೀತ-70, ಸೋಂಕಿನ ಮೂಲ ಪತ್ತೆಯಾಗದ 60, ತೀವ್ರ ಉಸಿರಾಟ-18, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 13, ವಿದೇಶದಿಂದ ಆಗಮಿಸಿದ್ದ ಓರ್ವನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ […]

ಕೊರೊನಾ ಸೋಂಕು ಜುಲೈ 21 : ದಕ್ಷಿಣ ಕನ್ನಡ ಜಿಲ್ಲೆ 149, ಉಡುಪಿ ಜಿಲ್ಲೆ 84

Wednesday, July 22nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಜುಲೈ 21ರಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 84 […]

ಆಯುಷ್ಮಾನ್ ಭಾರತ ಯೋಜನೆ ಅಡಿ 9 ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರರ ನೇಮಕ ನಕಲಿ -ವಿಡಿಯೋ

Tuesday, July 21st, 2020
ivan-d-souza

ಮಂಗಳೂರು  :  ಆಯುಷ್ಮಾನ್ ಭಾರತ ಯೋಜನೆ ಅಡಿ 9 ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರರ ನೇಮಕ ನಕಲಿ.  ಅಸಲಿ ಆರೋಗ್ಯ ಮಿತ್ರರ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನೀಡಿ ಇಲ್ಲವೇ ಆಡಳಿತ ಬಿಟ್ಟು ತೊಲಗಿ ಎಂದು  ಜಿಲ್ಲಾಡಳಿತಕ್ಕೆ ಮತ್ತು  ಜನಪ್ರತಿನಿಧಿಗಳಿಗೆ ಐವನ್ ಡಿಸೋಜಾ ಸವಾಲು ಹಾಕಿದ್ದಾರೆ. ಇಂದು ಪತ್ರಿಕೆಗಳಲ್ಲಿ ಪ್ರಕಟಣೆಗೊಂಡ ಆರೋಗ್ಯ ಮಿತ್ರ ನೇಮಕ ಮತ್ತು ಅವರ ನೀಡಿದ ಮೊಬೈಲ್ ಸಂಖ್ಯೆಗೆ ಸಂಬಂಧವೇ ಇಲ್ಲ ಒಬ್ಬರು ಇನ್ಸೂರೆನ್ಸ್ ಏಜೆಂಟ್ ಇನ್ನೊಂದು ನಂಬರ್ ಆಸ್ಪತ್ರೆಯ ಕಾರ್ಮಿಕ, ಕೆಲವು ನಂಬರ್ ಗಳು ಹಿಂದಿ […]

ಕೋರೊನಾ ಸೋಂಕಿತರ ಜತೆ ವೈದ್ಯರ ಬ್ಯಾಡ್ಮಿಂಟನ್

Tuesday, July 21st, 2020
badminton

ಹುಬ್ಬಳ್ಳಿ: ಕೊರೊನಾ ವೈರಸ್ ರೋಗಿಗಳನ್ನು ಕೊವಿಡ್ ಕೇಂದ್ರಗಳಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಅನೇಕ ಘಟನೆಗಳು ನಡೆದಿವೆ. ಇಂತಹದ ನಡುವೆ ಕೊವಿಡ್ ರೋಗಿಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುತ್ತಿರುವ ವೈದ್ಯರು ಹಾಗೂ ಆಸ್ಪತ್ರೆಗಳ ಸಹ ಗಮನ ಸೆಳೆಯುತ್ತಿದೆ. ಹುಬ್ಬಳ್ಳಿಯ ಕೊರೊನಾ ಆಸ್ಪತ್ರೆಯಲ್ಲಿ ಕೊವಿಡ್ ರೋಗಿಗಳ ಜೊತೆ ಸ್ವತಃ ವೈದ್ಯರು ಬ್ಯಾಡ್ಮಿಂಟನ್ ಆಟ ಆಡುತ್ತಿದ್ದಾರೆ. ಕೊವಿಡ್ ರೋಗಿಗಳು ಮತ್ತು ವೈದ್ಯರು ಬ್ಯಾಡ್ಮಿಂಟನ್ ಆಡುತ್ತಿರುವ ಫೋಟೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ಕೊವಿಡ್ […]

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊವೀಡ್ -19 ಸೋಂಕು ದೃಢ

Tuesday, July 21st, 2020
Sugunendra Thirtha swamy

ಉಡುಪಿ :  ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಸೋಮವಾರ ರಾತ್ರಿ  ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ 91, ಉಡುಪಿ ಜಿಲ್ಲೆ 72

Wednesday, July 15th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ. ಮಂಗಳವಾರ 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ 985 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 1414 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 22677 ಮಂದಿಯ ವರದಿ ನೆಗೆಟಿವ್ ಆಗಿದೆ. ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 29 ಮಂದಿಯಲ್ಲಿ ಐಎಲ್‌‌ಐ ಪ್ರಕರಣ ಪತ್ತೆಯಾಗಿದೆ. 5 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ […]