Blog Archive

ವ್ಯಾಪ್ತಿ ಮೀರಿ ಸೇವೆ ನೀಡುತ್ತಿರುವ ಆಸ್ಪತ್ರೆ

Thursday, January 11th, 2018
Hospital

ಮೂಲ್ಕಿ : ಜಿಲ್ಲೆ ಬದಲಾಯ್ತು, ತಾಲೂಕು ಬದಲಾಯ್ತು ಆದರೆ ಪಶುಸಂಗೋಪನಾ ಇಲಾಖೆಯ ಪಶು ವೈದ್ಯಾಲಯ ಮಾತ್ರ ಅದೇ ಇದೆ. ಹೌದು ಸುಮಾರು ಆರು ದಶಕಗಳ ಹಿಂದೆ ಅವಿಭಜಿತ ದ.ಕ. ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದ ಮೂಲ್ಕಿ ಸಮೀಪದ ಕಾರ್ನಾಡಿನಲ್ಲಿದ್ದ ಪಶು ಸಂಗೋಪನಾ ಇಲಾಖೆಯ ಪಶು ವೈದ್ಯಾಲಯ ಮಂಗಳೂರು ತಾಲೂಕು ಹಾಗೂ ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿದ್ದರೂ, ಉಡುಪಿ ಜಿಲ್ಲೆಯ ಜನರಿಗೆ ಸೇವೆಯನ್ನು ಒದಗಿಸುತ್ತಿದೆ. ಉಡುಪಿ ಜಿಲ್ಲೆಯ ಪಡುಬಿದ್ರಿ, ಹೆಜಮಾಡಿ ಮತ್ತು ಪಲಿಮಾರು ಪ್ರದೇಶದ ಜನರು ತಮ್ಮ ಸಾಕು ಪ್ರಾಣಿ, ಜಾನುವಾರುಗಳಿಗೆ ಚಿಕಿತ್ಸೆ […]

ಅಪ್ರಾಪ್ತ ಬಾಲಕನ ಮೇಲೆ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್‌ನಿಂದ ಲೈಂಗಿಕ ದೌರ್ಜನ್ಯ

Thursday, July 20th, 2017
Security

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ತಾಯಿಯನ್ನು ನೋಡಿಕೊಳ್ಳಲು ಬಂದಿದ್ದ ಬಾಲಕನಿಗೆ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್‌ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿದ್ದು, ಈ ಬಗ್ಗೆ ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗೋಳ್ತಮಜಲಿನ ಸೀತಾರಾಮ ಶೆಟ್ಟಿ (35) ಬಂಧಿತ ಆರೋಪಿ. ಸುರತ್ಕಲ್‌ ಕೃಷ್ಣಾಪುರ ಮೂಲದ ಮಹಿಳೆಯೋರ್ವರು ಅಪಘಾತಕ್ಕೊಳಗಾಗಿ ಕಳೆದ 5-6 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರನ್ನು ನೋಡಿಕೊಳ್ಳಲು ಮಂಗಳವಾರ ಅವರ ಅಪ್ರಾಪ್ತ ವಯಸ್ಕ ಪುತ್ರ ಆಸ್ಪತ್ರೆಗೆ ಬಂದಿದ್ದ. ರಾತ್ರಿ ವೇಳೆ ಆತನಿಗೆ ಮಲಗಲು […]

ಚರಂಡಿಯಲ್ಲಿ ಸಿಲುಕಿದ್ದ ಶವವನ್ನು ಜೆಸಿಬಿ ಯಂತ್ರದ ಮೂಲಕ ಆಸ್ಪತ್ರೆವರೆಗೆ ಸಾಗಿಸಿದ ಪೊಲೀಸರು

Tuesday, July 30th, 2013
Dead Body in JCB

ಲಖನೌ : ಫಿರೋಜಾಬಾದ್ ಪಟ್ಟಣದ ನಳಬಂದನ್ ಪ್ರದೇಶದಲ್ಲಿ ಭಾನುವಾರ ಚರಂಡಿಯೊಂದರಲ್ಲಿ ಸಿಲುಕಿದ್ದ ಶವವನ್ನು ಜೆಸಿಬಿ ಯಂತ್ರದ ಮೂಲಕ ಹೊರ ತೆಗೆದು, ನಂತರ ಅದರಲ್ಲೇ ಆಸ್ಪತ್ರೆವರೆಗೆ ಸಾಗಿಸಿದ ಪ್ರಕರಣವೊಂದು ಉತ್ತರ ಪ್ರದೇಶದದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೋಲಿಸರನ್ನು ಅಮಾನತು ಮಾಡಲಾಗಿದೆ. ತ್ಯಾಜ್ಯ ತುಂಬಿದ್ದ ದೊಡ್ಡ ಚರಂಡಿಯಲ್ಲಿ 18 ವರ್ಷದ ಯುವಕನ ನಗ್ನ ಶವವೊಂದು ಇರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು, ತ್ಯಾಜ್ಯ ಹೊರತೆಗೆಯುವ ಜೆಸಿಬಿ ಯಂತ್ರಕ್ಕಾಗಿ ನಗರ ಪಾಲಿಕೆಗೆ ಮನವಿ ಸಲ್ಲಿಸಿದರು. […]

ಮಲ್ಪೆ ಬೀಚ್‌ ನಲ್ಲಿ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Sunday, July 21st, 2013
Dog fighting

ಮಲ್ಪೆ: ಮಲ್ಪೆ ಬೀಚ್‌ ಕಡಲತೀರದಲ್ಲಿ ಮೀನು ಹಿಡಿಯುವುದನ್ನು ನೋಡಲು ಹೋಗಿದ್ದ ಬಾಲಕಿಯೊರ್ವಳ ಮೇಲೆ ಏಳೆಂಟು ನಾಯಿಗಳು ದಾಳಿ ನಡೆಸಿ ಗಂಭೀರಗಾಯಗೊಳಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಬಾಲಕಿಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಕೊಳದಲ್ಲಿ ವಾಸವಾಗಿರುವ ಪ್ರಕಾಶ್‌ ಅವರ ಮಗಳು ಸೌಂದರ್ಯ (6) ನಾಯಿ ದಾಳಿಗೆ ಒಳಗಾದ ಮಗು. ತಾಯಿಯ ಹಿಂದೆ ನಡೆದು ಹೋಗುತ್ತಿದ್ದ ಮಗುವಿನ ಮೇಲೆ ಸುಮಾರು 7-8 ನಾಯಿಗಳು ಏಕಾಏಕಿ  ದಾಳಿ ನಡೆಸಿ ಬೆನ್ನು, ತೊಡೆ ಮತ್ತು ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿದೆ. ಈ […]

ಮೊಲೆ ಕಚ್ಚಿದ ಕಂದಮ್ಮನಿಗೆ 90 ಬಾರಿ ಇರಿದ ಮಹಾತಾಯಿ

Friday, July 12th, 2013
Breast Feeding

ಬೀಜಿಂಗ್ : ಮೊಲೆ ಕಚ್ಚಿದ ಕಂದಮ್ಮನಿಗೆ ಸಿಟ್ಟಿಗೆದ್ದ ಮಹಾತಾಯಿಯೊಬ್ಬಲು ಬರೋಬ್ಬರಿ 90 ಬಾರಿ ಮೂತಿ-ಮುಖ ನೋಡದೆ ಇರಿದು ಬಿಟ್ಟಿದ್ದಾಳೆ. ಮಗು ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಅಮ್ಮನ ಹಾಲು ಅಮೃತಕ್ಕೆ ಸಮಾನ, ಹುಟ್ಟಿದ ಮಗುವಿಗೆ ಸ್ತನ್ಯಪಾನದಷ್ಟು ಮಹತ್ವದ ಆಹಾರ ಇನ್ನೊಂದಿಲ್ಲ. ಆರು ತಿಂಗಳು ಮಗುವಿಗೆ ಯಾವುದೇ ಬೇರೆ ಆಹಾರ ನೀಡದೆ ಮೊಲೆ ಹಾಲು ಮಾತ್ರ ನೀಡಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದೊಂದು ಪ್ರಕರಣ ಇದಕ್ಕೆ ವಿರುದ್ದವಿದೆ. ಪೂರ್ವ ಚೀನಾದ ಜ್ಹುಹೂನ ಜಿಯಾಂಗ್ಸು ಪ್ರದೇಶದಲ್ಲಿ  ಜ್ಹೈವೋ ಬಾಯೋ(Xiao Bao) […]

ಕಾಯಿಸಿದ ಮೀನು ತಿಂದು ಪಿಯುಸಿ ವಿದ್ಯಾರ್ಥಿನಿ ಸಾವು

Monday, August 8th, 2011
Fish Fry/ ಕಾಯಿಸಿದ ಮೀನು

ಮಂಗಳೂರು : ಮಂಗಳೂರು ಹೊರವಲಯ ಪಚ್ಚನಾಡಿ ದೇವಿ ನಗರದಲ್ಲಿ ಕಾಯಿಸಿದ ಮೀನು ತಿಂದು ಯುವತಿಯೋರ್ವಳು ಅಸ್ವಸ್ಥಳಾಗಿ ಬಳಿಕ ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ. ಪಚ್ಚನಾಡಿ ದೇವಿ ನಗರದ ಮಂಜುನಾಥ ಅವರ ಪುತ್ರಿ ಸುಶ್ಮಿತಾ (17) ಸಾವನ್ನಪ್ಪಿದ ಯುವತಿ. ಈಕೆ‌ ವಾಮಂಜೂರಿನ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಶನಿವಾರ ರಾತ್ರಿ ಸುಶ್ಮಿತಾ ಅವರು ಮನೆಯಲ್ಲಿ ರಿಫೈನ್‌ ಆಯಿಲ್‌ನಲ್ಲಿ ಮೀನು ಕಾಯಿಸಿದ್ದರು. ಅದರಲ್ಲಿ ಎರಡು ಮೀನುಗಳನ್ನು ಆಕೆ ತಿಂದಿದ್ದು, ಕೆಲವೇ ಹೊತ್ತಿನಲ್ಲಿ ಆಕೆಗೆ ಸ್ಮೃತಿ ತಪ್ಪಿತ್ತು. ಕೂಡಲೇ ಆಕೆಯನ್ನು ಸಮೀಪದ […]