Blog Archive

ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ

Wednesday, September 16th, 2020
fire Udupi

ಉಡುಪಿ : ಇಲ್ಲಿನ  ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬುಧವಾರ  ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಈ ಅಗ್ನಿ ಅನಾಹುತದಿಂದಾಗಿ ಎರಡು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ಮಲಾಗಿದೆ. ಸ್ಥಳಕ್ಕೆ ನಗರ ಸಭಾ ಸದಸ್ಯರು ಮತ್ತು  ಅಧಿಕಾರಿಗಳು ಬೇಟಿ ನೀಡಿ ದ್ದಾರೆ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ, ಶ್ರೀಕೃಷ್ಣ ಲೀಲೋತ್ಸವ

Friday, September 11th, 2020
vitla pindi

ಉಡುಪಿ: ಸಂಪ್ರದಾಯದಂತೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋವಿಡ್ ನಿಯಮಾವಳಿಯಂತೆ ಭಕ್ತರಿಗೆ ರಥಬೀದಿಗೆ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಮಠದ ವೈದಿಕರು, ಗೊಲ್ಲರು, ಸಿಬ್ಬಂದಿಗಳು ಮಾತ್ರ ಸರಳವಾಗಿ ಸಾಂಪ್ರದಾಯಿಕವಾಗಿ ಆಚರಣೆ ನಡೆಸಿದರು. ಪರ್ಯಾಯ ಅದಮಾರು ಮಠಾಧೀಶರು ಕಡಗೋಲು ಕೃಷ್ಣನ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಪ್ರದಕ್ಷಿಣೆ ತರುವಾಗ ಮಠದ ಗೊಲ್ಲರು ಮೊಸರುಕುಡಿಕೆಗಳನ್ನು ಒಡೆಯುತ್ತಾ ಸಾಗಿದರು. ರಥಬೀದಿಯ ನಾಲ್ಕೂ ಪ್ರವೇಶ ದ್ವಾರಗಳನ್ನು ಪೊಲೀಸರು ಬಂದ್ ಮಾಡುವ ಮೂಲಕ ಪ್ರವೇಸಕ್ಕೆ ನಿರಾಕರಣೆ ಮಾಡಿದ್ದರು.    

ಕೊರೊನಾ ಸೋಂಕು : ದಕ್ಷಿಣ ಕನ್ನಡ 310, ಉಡುಪಿ 258, ಕಾಸರಗೋಡು 270

Wednesday, September 9th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,762 ಕ್ಕೆ ಏರಿಕೆಯಾಗಿದೆ. ಇಂದಿನ ಪ್ರಕರಣಗಳ ಪೈಕಿ  ಮಂಗಳೂರಿನಲ್ಲಿ 188, ಬಂಟ್ವಾಳದಲ್ಲಿ 27, ಪುತ್ತೂರಿನಲ್ಲಿ 25, ಸುಳ್ಯದಲ್ಲಿ 25, ಬೆಳ್ತಂಗಡಿಯಲ್ಲಿ 26 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 19 ಮಂದಿಗೆ ಪಾಸಿಟಿವ್‌ ಆಗಿದೆ. ಬುಧವಾರ ಜಿಲ್ಲೆಯಲ್ಲಿ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಐವರು ಮಂಗಳೂರಿನವರಾದರೆ ಒಬ್ಬರು ಇತರೆ ಜಿಲ್ಲೆಯವರಾಗಿದ್ದಾರೆ. ಈವರೆಗೆ […]

ಕೊರೋನಾ ಪಾಸಿಟಿವ್ : ದಕ್ಷಿಣ ಕನ್ನಡ 326, ಉಡುಪಿ 216, ಕಾಸರಗೋಡು 218

Sunday, September 6th, 2020
corona virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 326 ಮಂದಿಯಲ್ಲಿ ಕೊರೋನಾ  ಪಾಸಿಟಿವ್ ದೃಢಪಟ್ಟಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ 428, ಉಡುಪಿ 186 , ಕಾಸರಗೋಡು 236

Saturday, September 5th, 2020
corona

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ  428 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾಗೆ 7 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಮೃತಪಟ್ಟ 7 ಮಂದಿಯಲ್ಲಿ 4 ಮಂದಿ ಮಂಗಳೂರು ತಾಲೂಕು, ಒಬ್ಬರು ಪುತ್ತೂರು ತಾಲೂಕು ಮತ್ತು ಇಬ್ಬರು ಹೊರಜಿಲ್ಲೆಯವ ರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 391ಕ್ಕೆ ಏರಿಕೆಯಾಗಿದೆ. ಮಂಗಳೂರು ತಾಲೂಕಿನ 222 ಮಂದಿ, ಬಂಟ್ವಾಳ ತಾಲೂಕಿನ 61, ಪುತ್ತೂರು ತಾಲೂಕಿನ 54 , ಸುಳ್ಯ ತಾಲೂಕಿನ 45, ಬೆಳ್ತಂಗಡಿ ತಾಲೂಕಿನ 28 ಮತ್ತು ಹೊರಜಿಲ್ಲೆಯ 18 […]

ಕೊರೋನ ಸೋಂಕು ಸೆ .3 : ದಕ್ಷಿಣ ಕನ್ನಡ 316, ಸಾವು 3, ಉಡುಪಿ, 226, ಸಾವು 3, ಕಾಸರಗೋಡು 133

Thursday, September 3rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 316 ಮಂದಿಯಲ್ಲಿ ಕೊರೋನ ಸೋಂಕಿನ ಪಾಟಿಸಿವ್ ಪತ್ತೆಯಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಗುರುವಾರ ವರದಿಯಾದ 316 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,795 ಮಂದಿಗೆ ಕೊರೋನ ಸೋಂಕು ತಗುಲಿದೆ. ಗುರುವಾರ ಪಾಸಿಟಿವ್‌ಗೊಳಗಾದ 316 ಮಂದಿಯಲ್ಲಿ ಮಂಗಳೂರಿನ 190, ಬಂಟ್ವಾಳದ 40, ಪುತ್ತೂರಿನ 21, ಸುಳ್ಯದ 16, ಬೆಳ್ತಂಗಡಿಯ 16 ಮತ್ತು ಇತರ ಜಿಲ್ಲೆಯ 33 ಮಂದಿ ಸೇರಿದ್ದಾರೆ. ಮಂಗಳೂರು ತಾಲೂಕಿನ 2 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ ಜಿಲ್ಲೆಯಲ್ಲಿ ಗುರುವಾರ […]

ಕೊರೋನ ಸೋಂಕು ಸೆ.2 : ದಕ್ಷಿಣ ಕನ್ನಡ 414, ಸಾವು 6, ಉಡುಪಿ 167, ಸಾವು 3

Wednesday, September 2nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 414 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 6 ಮಂದಿ ಬಲಿಯಾಗಿದ್ದಾರೆ. ಬುಧವಾರ ಪಾಸಿಟಿವ್‌ಗೊಳಗಾದ 414 ಮಂದಿಯಲ್ಲಿ ಮಂಗಳೂರಿನ 222, ಬಂಟ್ವಾಳದ 64, ಪುತ್ತೂರಿನ 49, ಸುಳ್ಯದ 31, ಬೆಳ್ತಂಗಡಿಯ 28 ಮತ್ತು ಇತರ ಜಿಲ್ಲೆಯ 20 ಮಂದಿ ಸೇರಿದ್ದಾರೆ. ಬುಧವಾರ ವರದಿಯಾದ 414 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,479 ಮಂದಿಗೆ ಕೊರೋನ ಸೋಂಕು ತಗುಲಿದೆ. ಮಂಗಳೂರು ತಾಲೂಕಿನ 4, ಬೆಳ್ತಂಗಡಿ 1 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ […]

ಕೊರೊನಾ ಸೊಂಕು : ದಕ್ಷಿಣ ಕನ್ನಡ 334, ಉಡುಪಿ 254

Monday, August 31st, 2020
CORONA

ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರದಂದು 334 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12443ಕ್ಕೆ ಏರಿಕೆಯಾಗಿದೆ. ರವಿವಾರ ಮತ್ತೆ 213 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 9422ಕ್ಕೆ ಏರಿಕೆಯಾಗಿದೆ. ಇನ್ನು 2665 ಮಂದಿ ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಆ. 30ರಂದು ಮತ್ತೆ 6 ಮಂದಿ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 356ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 82770 […]

ಕೊರೊನಾ ಸೋಂಕು ಆಗಸ್ಟ್ 24 : ದಕ್ಷಿಣ ಕನ್ನಡ 201, ಉಡುಪಿ 103, ಕಾಸರಗೋಡು 118

Monday, August 24th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10531ಕ್ಕೆ ಏರಿಕೆಯಾಗಿದೆ. ಸೋಮವಾರ  ಪತ್ತೆಯಾದ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 49 ಮಂದಿಗೆ ಸೋಂಕು ತಗುಲಿದೆ. 70 ಐಎಲ್‌ಐ ಪ್ರಕರಣಗಳಾಗಿವೆ. 9 ಸಾರಿ ಪ್ರಕರಣಗಳು ದೃಢಪಟ್ಟಿವೆ. 72 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಆಗಸ್ಟ್ 24ರಂದು 241 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ […]

ಕೊರೋನ ಸೋಂಕು ಆಗಸ್ಟ್ 12 : ದಕ್ಷಿಣ ಕನ್ನಡ 229 , ಉಡುಪಿ 263

Wednesday, August 12th, 2020
coronavirus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ದಂದು 229 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ 498 ಮಂದಿ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ. ‘ಪಾಂಡೆಮಿಕ್’ ಕಿರು ಚಿತ್ರ ಆಗಸ್ಟ್ 15 ರಂದು ಮೆಗಾ ಮೀಡಿಯಾ ನ್ಯೂಸ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ  ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7825ಕ್ಕೆ ಏರಿಕೆಯಾಗಿದೆ. ಈ ಪೈಕಿ 5232 ಮಂದಿ ಒಟ್ಟು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 2349 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರದಂದು ಮತ್ತೆ 7 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು […]