Blog Archive

ಉಡುಪಿ , ಮಂಗಳೂರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

Thursday, February 21st, 2019
Laxman nimbargi

ಉಡುಪಿ : ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಲಕ್ಷ್ಮಣ ನಿಂಬರ್ಗಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೆಯೇ, ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಸರಕಾರ ನಿಯುಕ್ತಿಗೊಳಿಸಿದೆ. ಲಕ್ಷ್ಮಣ ನಿಂಬರ್ಗಿ ಅವರನ್ನು ಬೆಂಗಳೂರಿನ ಪೊಲೀಸ್ ವಯರ್ ಲೆಸ್ ಎಸ್.ಪಿ.ಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ನೂತನ ಎಸ್.ಪಿ.ಯಾಗಿ ನೇಮಕಗೊಂಡಿರುವ ನಿಶಾ ಜೇಮ್ಸ್ ಅವರು 2013ನೇ ಸಾಲಿನ ಐ.ಪಿ.ಎಸ್. ಅಧಿಕಾರಿಯಾಗಿದ್ದು, ಬೆಂಗಳೂರಿನಲ್ಲಿ ಕೆ.ಎಸ್.ಆರ್.ಪಿ.ಯ ನಾಲ್ಕನೇ ಬೆಟಾಲಿಯನ್ ನ ಕಮಾಂಡೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳೂರು […]

ಚರ್ಚ್ ನಾಶ ಮಾಡಿದ ಟಿಪ್ಪು ಜಯಂತಿಗೆ ಹೋಗದಂತೆ ದೇವರು ತಡೆದರು: ಪ್ರಮೋದ್ ಮಧ್ವರಾಜ್

Tuesday, December 18th, 2018
pramod

ಉಡುಪಿ: ಚರ್ಚ್ ನಾಶ ಮಾಡಿದ್ದಂತಹ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರೇ ನನ್ನನ್ನು ತಡೆದರು’ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾಡಿದ ಭಾಷಣ ದ ವಿಡಿಯೋ ವೈರಲ್ ಆಗಿದ್ದು ಸದ್ಯ ವಿವಾದಕ್ಕೆ ಕಾರಣವಾಗಿದೆ. ಡಿ.10ರಂದು ಬ್ರಹ್ಮಾವರ ಪೇತ್ರಿಯ ಸೇಂಟ್ ಪೀಟರ್ಸ್ ಚರ್ಚ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗಾ ವೈರಲ್ ಆಗಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ‘ವಿರೋಧವಿದ್ದರೂ ಕೂಡ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಿರುವುದು ಸರಿಯೋ ತಪ್ಪೋ ಗೊತ್ತಿಲ್ಲ. ಆದರೆ […]

ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ: ಪೋಕ್ಸೋ ಕಾಯ್ದೆಯಡಿ ಶಿಕ್ಷಕ ಅರೆಸ್ಟ್?

Friday, December 14th, 2018
lacturer

ಉಡುಪಿ: ಕಾರ್ಕಳದ ಖಾಸಗಿ ಶಾಲೆಯೊಂದರ ಶಿಕ್ಷಕ ಅದೇ ಶಾಲೆ ವಿದ್ಯಾರ್ಥಿಯೊಬ್ಬಳ ಜೊತೆ ಶಾಲಾ ಕೊಠಡಿಯಲ್ಲಿ ಅಶ್ಲೀಲವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಳೆದೆರಡು ದಿನಗಳ ಹಿಮ್ದೆ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ವ್ಯವಸ್ಥಾಪಕರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದ್ದು ಆರೋಪಿ ಶಿಕ್ಷಕ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನು ಈ ಶಿಕ್ಷಕ ವಿದ್ಯಾರ್ಥಿನಿಯನ್ನು ಕೆಟ್ಟದ್ದಾಗಿ ಬಳಸಿಕೊಂಡು ವಿಡಿಯೋ ಮಾಡಿದ್ದ ಎನ್ನಲಾಗಿದೆ. […]

ವಂಚನೆ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Saturday, December 8th, 2018
arrested

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ನಡೆದ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 10 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯೋರ್ವನನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಉಚ್ಚಿಲ ಉಡುಪಿಯ ಮೊಹಮ್ಮದ್ ರಫೀಕ್ ಬ್ಯಾರಿ (38) ದಸ್ತಗಿರಿಯಾದ ಆರೋಪಿ. ಮಂಗಳೂರು ನಗರದ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಂಜುನಾಥ ಶೆಟ್ಟಿಯವರ ನೇತೃತ್ವದಲ್ಲಿ ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ. ಮತ್ತು ಸಿಬ್ಬಂದಿ, ಪಣಂಬೂರು […]

ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ..!

Wednesday, November 21st, 2018
kambala

ಉಡುಪಿ: ಕಂಬಳ ಕ್ಷೇತ್ರದಲ್ಲಿ ಪದಕಗಳ ಮೇಲೆ ಪದಕ ಬಾಚಿ ಸಾಧನೆ ಮಾಡಿದ್ದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಕಂಬಳದ ಕೋಣ ಮೃತಪಟ್ಟಿದ್ದು, ಕರಾವಳಿಯ ಕಂಬಳ ಪ್ರಿಯರಿಗೆ ದುಃಖ ತಂದಿದೆ. ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು ಗೆದ್ದ ಹೆಗ್ಗಳಿಕೆ ಈ ರಾಕೆಟ್ ಮೋಡ ಕೋಣದ್ದಾಗಿತ್ತು. ಇದು ಮಾತ್ರವಲ್ಲದೆ, ಕಂಬಳ ಪ್ರಿಯರಿಗೆ ಇದು ಚಿರಪರಿಚಿತ ಕೋಣವಾಗಿತ್ತು. ಕೊಂಡೊಟ್ಟು ಮೋಡ, ರಾಕೆಟ್ ಮೋಡ […]

70 ಲಕ್ಷ ರೂ. ಮೌಲ್ಯದ ಗಾಂಜಾಗೆ ಬೆಂಕಿ ಹಚ್ಚಿ ಸುಟ್ಟ ನಗರ ಪೊಲೀಸರು

Saturday, October 27th, 2018
police

ಉಡುಪಿ: ಎಸ್ಪಿ ಕಚೇರಿ ಮುಂದೆ ಶುಕ್ರವಾರ ನಗರ ಪೊಲೀಸರು ಸುಮಾರು 18 ಕೆಜಿ ಗಾಂಜಾ ನಾಶಪಡಿಸಿದ್ದಾರೆ. ಸುಮಾರು 70 ಲಕ್ಷ ರೂಪಾಯಿ ಮೌಲ್ಯದ ಗಾಂಜಾದ ಎಲೆಗಳಿಗೆ ಪೊಲೀಸರು ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಜಿಲ್ಲೆಯಲ್ಲಿ 15 ಪ್ರಕರಣದಲ್ಲಿ ವಶ ಪಡಿಸಿಕೊಂಡ ಗಾಂಜಾವನ್ನು ಪೊಲೀಸರು ಸುಟ್ಟರು. ಉಡುಪಿ ಎಸ್ಪಿ ಲಕ್ಷ್ಮಣ ನಿಂಬರ್ಗಿ, ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಪ್ರಕ್ರಿಯೆ ನಡೆಯಿತು. ಉಡುಪಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಗಾಂಜಾ ಎಲೆಗಳಿಗೆ ಬೆಂಕಿ ಹಚ್ಚಿ ನಾಶ ಪಡಿಸಲಾಯಿತು.

ತೀವ್ರಗೊಂಡ ಮರಳಿಗಾಗಿ ಹೋರಾಟ: ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭ

Thursday, October 25th, 2018
shobha-karandlaje

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮರಳಿಗಾಗಿ ಹೋರಾಟ ತೀವ್ರಗೊಂಡಿದೆ. ಟಿಪ್ಪರ್ ಮಾಲೀಕರು ಜಿಲ್ಲೆಯಾದ್ಯಂತ ಹೋರಾಟ ಆರಂಭಿಸಿದ್ದು, ಅಕ್ಟೋಬರ್ 25 ರಿಂದ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭವಾಗಲಿದೆ. ಮಳೆಗಾಲದಿಂದಲೇ ಮರಳುಗಾರಿಗೆ ಸಂಪೂರ್ಣ ಸ್ಥಗಿತಗೊಂಡಿದ್ದು, ಕಾರ್ಮಿಕರು ಮತ್ತು ಟಿಪ್ಪರ್ ಚಾಲಕರು ಬೀದಿಗೆ ಬಿದ್ದಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಬಂದು ಮರಳುಗಾರಿಕೆ ಆರಂಭಿಸುವ ಭರವಸೆ ಕೊಟ್ಟರೂ ಅಧಿಕಾರಿಗಳು ಅವಕಾಶ ನೀಡಿಲ್ಲ ಎನ್ನುವುದು ಇವರ ಆಕ್ರೋಶವಾಗಿದೆ. ಹೋದಲ್ಲಿ ಬಂದಲ್ಲಿ ಉಡುಪಿ ಜಿಲ್ಲೆಯ ಮೂಲೆ ಮೂಲೆಯಲ್ಲಿ ಜನಪ್ರತಿನಿಧಿಗಳ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ. […]

60 ತಾಸುಗಳ ಬಳಿಕ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಉಪವಾಸ ಅಂತ್ಯ

Tuesday, October 16th, 2018
subramanya

ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ 60 ತಾಸುಗಳ ಬಳಿಕ ಸೋಮವಾರ ಉಪವಾಸ ಅಂತ್ಯಗೊಳಿಸಿದ್ದಾರೆ. ಶ್ರೀ ನರಸಿಂಹ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಎಳನೀರು ಸೇವನೆ ಮೂಲಕ ಉಪವಾಸ ಕೊನೆಗೊಳಿಸಿದರು. ಉಡುಪಿಯ ಪೇಜಾವರ ಶ್ರೀಗಳು, ಸುತ್ತೂರು ಶ್ರೀಗಳು, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಎಚ್‌.ಡಿ. ರೇವಣ್ಣ ದೂರವಾಣಿ ಕರೆ ಮಾಡಿ ದ್ದಲ್ಲದೇ, ಜಿಲ್ಲಾಡಳಿತ ಕೂಡ ಉಪವಾಸ ಕೈಬಿಡಲು ಕೋರಿತ್ತು. ಮಠದ ಪರಿವಾರವಲ್ಲದೇ, ಅನೇಕ ಮಂದಿ ಭಕ್ತರೂ ನನ್ನೊಂದಿಗೆ ಉಪವಾಸ ಮಾಡುವುದಾಗಿ ಹೇಳಿದ್ದರು. ನವರಾತ್ರಿಯ ಸಂದರ್ಭ ಯಾರಿಗೂ ನನ್ನಿಂದ […]

ಉಡುಪಿ SPಅನ್ನು ರಾಜಕೀಯ ಕಾರಣಕ್ಕೆ ವರ್ಗಾವಣೆ ಮಾಡಿದರೆ ಸಹಿಸುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ

Wednesday, October 3rd, 2018
srinivas-poojary

ಉಡುಪಿ: ಸುಸೂತ್ರ ಆಡಳಿತಕ್ಕೆ ನಮ್ಮ ಸಹಕಾರವಿದೆ. ಆದರೆ ಉಡುಪಿ ಜಿಲ್ಲಾ ಎಸ್ಪಿಯವರನ್ನು ರಾಜಕೀಯ ಕಾರಣಕ್ಕೆ ವರ್ಗಾವಣೆ ಮಾಡಿದರೆ ಅಹಿಸೋದಿಲ್ಲ..ಇದು ಎಚ್ಚರಿಕೆ ಎಂದು ಸರಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ ಟ್ವೀಟ್ ಇದು. ಕೆಲ ದಿನಗಳ ಹಿಂದೆ ನಡೆದ ಭಾರತ್ ಬಂದ್ ವೇಳೆ ಉಡುಪಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ವಾಗ್ವಾದ ನಡೆದಿತ್ತು. ಆ ಬಳಿಕ ಪೊಲೀಸ್ ವರಿಷ್ಟಾಧಿಕಾರಿಗಳ ಕಛೆರಿ ಎದುರು ಇತ್ತಂಡದವರು ಜಮಾಯಿಸಿದ್ದರು. ಈ ವಾಗ್ವಾದ ವಿಕೋಪಕ್ಕೆ ತಿರುಗಿ […]

ಚಿನ್ನಾಭರಣ, ನಗದು ಕಳೆದುಕೊಂಡಿದ್ದ ಮಹಿಳೆ:​ ಪ್ರಾಮಾಣಿಕನಿಂದ ವಾರಸುದಾರರ ಕೈಸೇರಿತು ಬ್ಯಾಗ್​

Thursday, September 27th, 2018
gold-bag

ಮಂಗಳೂರು: 105 ಗ್ರಾಂ ಚಿನ್ನಾಭರಣ, 32 ಸಾವಿರ ನಗದು ಮತ್ತು ಮೊಬೈಲ್ ಫೋನ್ ಕಳೆದುಕೊಂಡಿದ್ದ ಮಹಿಳೆಗೆ ವ್ಯಕ್ತಿಯ ಪ್ರಾಮಾಣಿಕತೆಯಿಂದ ಬ್ಯಾಗ್ ಕೈಸೇರಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿರುಪತಿ ದರ್ಶನ ಮುಗಿಸಿ ಬೆಂಗಳೂರಿನಿಂದ ಉಡುಪಿಗೆ ಖಾಸಗಿ ಬಸ್ನಲ್ಲಿ ಬಂದಿದ್ದ ಬೈಂದೂರಿನ ಕೋನೂರು ಪಡುವರಿ ಗ್ರಾಮದ ಪ್ರೇಮಾ ಎಂಬುವರು ಉಡುಪಿಯಲ್ಲಿ ಬಸ್ ಇಳಿದಾಗ ಅವರ ಬ್ಯಾಗ್ ನಾಪತ್ತೆಯಾಗಿತ್ತು. ಈ ಬಗ್ಗೆ ಹುಡುಕಾಟ ನಡೆಸುತ್ತಿದ್ದ ಕುಟುಂಬಸ್ಥರಿಗೆ ಪ್ರಾಮಾಣಿಕ ವ್ಯಕ್ತಿವೋರ್ವ ತನಗೆ ಸಿಕ್ಕಿದ್ದ ಬ್ಯಾಗ್ನ್ನು ಮರಳಿಸಿದ್ದಾರೆ. ಈ ಬ್ಯಾಗ್ […]