ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

Friday, April 21st, 2023
ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

ಬೆಂಗಳೂರು : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಶಗಳು ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ […]

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚೀಂದ್ರ

Wednesday, August 17th, 2022
Akshay-Machindra

ಉಡುಪಿ : ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚೀಂದ್ರ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರ. ಉಡುಪಿಯ ಮಾಜಿ ಎಸ್ಪಿ ಎನ್.ವಿಷ್ಣುವರ್ಧನ್ ಅವರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದೇನೆ. ಉಡುಪಿಯು ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹೆಸರುವಾಸಿಯಾದ ಜಿಲ್ಲೆಯಾಗಿದೆ. ಉಡುಪಿಯಲ್ಲಿ ಸೇವೆ ಸಲ್ಲಿಸುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ ಎಂದು ಅಕ್ಷಯ್ ಮಚೀಂದ್ರ ಹೇಳಿದರು. ಇನ್ನು ರಾಜ್ಯ ಮತ್ತು ಜಿಲ್ಲಾ ಪೊಲೀಸರು […]

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಐವರು ರಾಜ್ಯಕ್ಕೆ ಟಾಪರ್

Thursday, May 19th, 2022
SSLC Result

ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟಾರೆ ಈ ಬಾರಿ 85.63% ಫಲಿತಾಂಶ ದಾಖಲಾಗಿದ್ದು, 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದ 17 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದರೆ, ಉಡುಪಿಯ ಐವರು ಅದೇ ಸಾಧನೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ. ಉಡುಪಿ ಬಾಲಕಿಯರ ಸರಕಾರಿ ಪ್ರೌಡಶಾಲೆಯ ವಿದ್ಯಾರ್ಥಿನಿ ಗಾಯತ್ರಿ, ಉಡುಪಿ ಮಲ್ಪೆ ಸರಕಾರಿ ಪ್ರೌಡಶಾಲೆಯ ಪುನೀತ್ ನಾಯ್ಕ್, ಕುಂದಾಪುರ ಕಾಳಾವರ ಸರಕಾರಿ […]

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮಾ ರಾವ್ ಎಂ ಅಧಿಕಾರ ಸ್ವೀಕಾರ

Wednesday, September 1st, 2021
Kurma-Rao

ಉಡುಪಿ : ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮಾ ರಾವ್ ಎಂ. ಮಂಗಳವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೂರ್ಮಾ ರಾವ್, ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಲಾಗುವುದು ಮತ್ತು ಜಿಲ್ಲೆಯಲ್ಲಿ ಹೆಚ್ಚು ಪ್ರವಾಸ ಮಾಡವುದರೊಂದಿಗೆ ಕೆಳ ಹಂತದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅವರುಗಳ ಅವಶ್ಯಕತೆಗಳನ್ನು ಅರಿತು ಅವುಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು. ಉಡುಪಿ ಜಿಯಲ್ಲಿ ವಿಕೇಂಡ್ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದರ ಪಾಲನೆ ಬಗ್ಗೆ ಎಲ್ಲರ […]

ರವಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಹೆಚ್ಚು 410 ಕೊರೊನಾ ಸೋಂಕು ಪತ್ತೆ, 6 ಮಂದಿ ಸಾವು, ಉಡುಪಿ ಜಿಲ್ಲೆ 162

Sunday, August 1st, 2021
corona virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ರವಿವಾರ ಪತ್ತೆಯಾದ ಕೇಸುಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆಯಲ್ಲಿ ಅತಿಹೆಚ್ಚು (410) ಪಾಸಿಟಿವ್ ಪ್ರಕರಣ ವರದಿಯಾಗಿವೆ. ದ.ಕ. ಜಿಲ್ಲೆಯಲ್ಲಿ ರವಿವಾರ 410 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದೇ ವೇಳೆ 6 ಮಂದಿ ಸಾವನ್ನಪ್ಪಿದ್ದು, 264 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,943 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,00,780 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1,430 ಮಂದಿ ಸಾವನ್ನಪ್ಪಿದ್ದಾರೆ. 96,407 ಮಂದಿ ಗುಣಮುಖ ರಾಗಿದ್ದಾರೆ. ಒಟ್ಟು […]

ಉಡುಪಿ ಜಿಲ್ಲೆ ಸೋಮವಾರ ಅನ್‌ಲಾಕ್, ಮಾರ್ಗಸೂಚಿಗಳ ವಿವರ ಇಲ್ಲಿದೆ ನೋಡಿ

Saturday, June 12th, 2021
Udupi DC

ಉಡುಪಿ  :  ರಾಜ್ಯದ ಆನ್ ಲಾಕ್ ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆಯೂ ಒಂದಾಗಿದೆ.  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತೋಟಿಗೆ ಬಂದಿದ್ದು ಜೂನ್ 14ರಿಂದ ಅನ್‌ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಶನಿವಾರ ಜಿಲ್ಲೆಯ ತಹಶೀಲ್ದಾರ್ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ […]

ಕೊರೋನ ಸೋಂಕು ಜೂನ್ 12 : ದ.ಕ. ಜಿಲ್ಲೆ 618 – 4 ಸಾವು, ಉಡುಪಿ ಜಿಲ್ಲೆ 258 – 2 ಸಾವು, ಕಾಸರಗೋಡು ಜಿಲ್ಲೆ – 475

Saturday, June 12th, 2021
corona-virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ  618 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.92 ಇದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 83,311ಕ್ಕೇರಿದೆ. ಶನಿವಾರ 4 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 976ಕ್ಕೇರಿದೆ.   ಶನಿವಾರ 524 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 75,273ಕ್ಕೇರಿದೆ. ಜಿಲ್ಲೆಯಲ್ಲಿ 7,062 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರಗೆ 8,92,095 ಮಂದಿಯ ದ್ರವ […]

ದ.ಕ. ಜಿಲ್ಲೆಯಲ್ಲಿ4 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ

Saturday, June 5th, 2021
black fungus

ಮಂಗಳೂರು : ಕೊರೋನಾ ಸೋಂಕು ಸಕ್ರಿಯವಾಗಿರುವಾಗಲೇ ಮತ್ತೊಂದು ಅಪಾಯಕಾರಿ ರೋಗ ಬ್ಲ್ಯಾಕ್ ಫಂಗಸ್ ಜನರನ್ನು ಕಾಡುತ್ತಿದೆ.  ಗುರುವಾರ ದ.ಕ. ಜಿಲ್ಲೆಯಲ್ಲಿ4 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ದ.ಕ. ಜಿಲ್ಲೆಯ ಒಬ್ಬರು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳದ ತಲಾ ಒಬ್ಬರಿಗೆ ಈ ರೋಗ ತಗುಲಿದೆ. ಪ್ರಸ್ತುತ ದ.ಕ.ಜಿಲ್ಲೆಯಲ್ಲಿ ಸದ್ಯ 43 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದೆ. ಇದರಲ್ಲಿ 9 ದ.ಕ.ಜಿಲ್ಲೆಗೆ ಮತ್ತು 34 ಪ್ರಕರಣಗಳು ಹೊರಜಿಲ್ಲೆಗೆ ಸಂಬಂಧಿಸಿ ದ್ದಾಗಿದೆ. ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. […]

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪಡಿತರದಾರರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ಸರಬರಾಜು : ಉಮೇಶ್ ಕತ್ತಿ

Friday, May 28th, 2021
UmeshKatti

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನ ಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ – 258, ಸಾವು 9, ಉಡುಪಿ ಜಿಲ್ಲೆ – 158, ಸಾವು 3, ಕಾಸರಗೋಡು -257

Sunday, October 4th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 258 ಮಂದಿಗೆ ಕೊರೊನಾ ದೃಢಪಟ್ಟಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 566 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,019 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 344 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 17,709 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 5,744 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,361 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 5,30,885 ದಂಡ ವಸೂಲಿ […]