Blog Archive

ಉಪಚುನಾವಣೆ ಹಿನ್ನೆಲೆಯಲ್ಲಿ ಹುಣಸೂರಿನಲ್ಲಿ ಹಂಚಲು ತಂದಿದ್ದ 30 ಸಾವಿರ ಸೀರೆ ವಶ

Saturday, November 16th, 2019
ಉಪಚುನಾವಣೆ ಹಿನ್ನೆಲೆಯಲ್ಲಿ ಹುಣಸೂರಿನಲ್ಲಿ ಹಂಚಲು ತಂದಿದ್ದ 30 ಸಾವಿರ ಸೀರೆ ವಶ

ಮೈಸೂರು : ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್ ಗೆ  ಮತ ನೀಡಿ ಎನ್ನುವ ಕರಪತ್ರಗಳಿವೆ. ಈ ಕುರಿತು ಸಿ.ಪಿ.ಯೋಗೇಶ್ವರ್ ಚುನಾವಣೆ ಮೊದಲೇ ಸಭೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ […]

ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಲಿದ್ದಾರೆ : ಸಚಿವ ಸಿ.ಟಿ.ರವಿ

Monday, November 11th, 2019
C-T-Ravi

ಚಿಕ್ಕಮಗಳೂರು : ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೊಸ ಬಾಂಬ್ ಸಿಡಿಸಿದ್ದು, ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಅಚ್ಚರಿಯ ಮಾಹಿತಿ ಹೊರ ಹಾಕಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪೂರ್ವದಲ್ಲಿ ಹಾಗೂ ಚುನಾವಣಾ ನಂತರ ಮತ್ತಷ್ಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ. ಈಗಾಗಲೇ ಕೈ ಶಾಸಕರು ಬಿಜೆಪಿಯೊಂದಿಗೆ ಬರುವ ಅಶಯ ಹೊರಹಾಕಿದ್ದಾರೆ. ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಜನ ಬರಲಿದ್ದಾರೆ ಎಂದು […]

ಉಪಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಇಡುಗಂಟೂ ಸಿಗುವುದಿಲ್ಲ : ಸಚಿವ ಡಿ.ವಿ.ಸದಾನಂದಗೌಡ

Monday, November 11th, 2019
sadnanda-gowda

ಮಂಗಳೂರು : ಅನರ್ಹ ಶಾಸಕರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಕೆಲವು ಕ್ಷೇತ್ರಗಳಲ್ಲಿ ಇಡುಗಂಟು ಸಿಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ನಡೆದ ವಿದ್ಯಮಾನಗಳಿಂದ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಶಿಷ್ಯರೇ ಅವರ ಮೇಲೆ ಸಿಟ್ಟಾಗಿ ದೂರ ಹೋಗಿದ್ದಾರೆ. ಒತ್ತಡ ಏರಿ ಪ್ರತಿಪಕ್ಷದ ನಾಯಕ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್, ವಲಸೆ ಕಾಂಗ್ರೆಸ್ ಎಂಬ ಕಂದಕ ಸೃಷ್ಟಿಯಾಗಿದೆ. ಈ ಕಂದಕ […]

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಗೆ ಬಹುಮತ, ಸಿಎಂ ಹುದ್ದೆಗೆ ಸೇನೆ ಪಟ್ಟು

Friday, October 25th, 2019
shivasene

ಮುಂಬೈ : ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಬಹುಮತ ಪಡೆದುಕೊಂಡು ರಾಜ್ಯದಲ್ಲಿ ಅಧಿಕಾರ ಉಳಿಸಿಕೊಂಡಿದ್ದರೂ ನಿರೀಕ್ಷಿಸಿದಷ್ಟು ಪ್ರಚಂಡ ಬಹುಮತ ಸಿಕ್ಕಿಲ್ಲ. ಸರಳ ಬಹುಮತಕ್ಕಿಂತ ತುಸು ಹೆಚ್ಚಿನ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿ ಸೋಲು ಕಂಡಿದ್ದರೂ, ಎರಡೂ ಪಕ್ಷಗಳು ಕಳೆದ ಚುನಾವಣೆಗಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಇದು ಆಡಳಿತಾರೂಢ ಬಿಜೆಪಿ, ಶಿವಸೇನೆಗೆ ಎಚ್ಚರಿಕೆ ಗಂಟೆಯಾಗಿದೆ. ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆ, ಬಿಜೆಪಿ 100 ಕ್ಷೇತ್ರಗಳಲ್ಲಿ ಜಯಶಾಲಿಯಾಗಿದ್ದು, 5ರಲ್ಲಿ ಮುನ್ನಡೆಯಲ್ಲಿದೆ. ಶಿವಸೇನೆ 56 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. […]

ಡಿಕೆಶಿಗೆ ಜಾಮೀನು : ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ; ಸಚಿವ ಶ್ರೀನಿವಾಸ ಪೂಜಾರಿ

Thursday, October 24th, 2019
SKShi

ಉಡುಪಿ : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಲಭಿಸಿದ್ದು, ಆದರೆ ಅವರಿಗೆ ಜಾಮೀನು ಲಭಿಸುವುದರಿಂದ ಉಪಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನೂರು ವರ್ಷಕ್ಕೂ ಮೀರಿದ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ತನ್ನ ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ. ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದ್ದು, ಕಾಂಗ್ರೆಸ್ ಜವಾಬ್ದಾರಿ ರಹಿತ ನಡವಳಿಕೆ ತೋರಿಸುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದ […]

ಗುಜರಾತ್​ ಉಪಚುನಾವಣೆಯ ಮತ ಎಣಿಕೆ : ತಲಾ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್, ಬಿಜೆಪಿ

Thursday, October 24th, 2019
gujarat

ಅಹಮದಾಬಾದ್ : ಗುಜರಾತ್ನ ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಗುರುವಾರ ಪ್ರಕಟವಾಗುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ತಲಾ ಮೂರರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುನ್ನಡೆ ಕಾಯ್ದುಕೊಂಡಿವೆ. ಪಟನ್ ಜಿಲ್ಲೆಯ ರಾಧಾನ್ಪುರ ಕ್ಷೇತ್ರದಲ್ಲಿ ಒಬಿಸಿ ನಾಯಕ ಬಿಜೆಪಿ ಅಭ್ಯರ್ಥಿ ರಘು ದೇಸಾಯಿ ಕಾಂಗ್ರೆಸ್ನ ಅಲ್ಪೇಶ್ ಠಾಕೂರ್ ವಿರುದ್ಧ 3,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಅರಾವಳಿಯ ಬಯಾಡ್ನಲ್ಲಿ ಬಿಜೆಪಿ ಅಭ್ಯರ್ಥಿ ಧವಲಸಿಂಗ್ ಝಲಾ ಅವರು ಕಾಂಗ್ರೆಸ್ ಅಭ್ಯರ್ಥಿ […]

ಮಂಜೇಶ್ವರ : ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಮತದಾನ ಆರಂಭ

Monday, October 21st, 2019
Manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಮೊದಲ ಗಂಟೆಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಸರತಿ ಸಾಲು ಕಂಡುಬರುತ್ತಿದೆ. ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ ನಡೆಯುತ್ತಿದೆ. ಮೊದಲ ಬಾರೀ ಮಂಜೇಶ್ವರ ಉಪಚುನಾವಣೆಗೆ ವೇದಿಕೆಯಾಗುತ್ತಿದ್ದು, ತ್ರಿಕೋನ ಸ್ಪರ್ಧೆಯ ಮೂಲಕ ಗಮನ ಸೆಳೆಯುತ್ತಿದೆ. 2017ರಲ್ಲಿ ನಡೆದ ಚುನಾವಣೆಯಲ್ಲಿ ಯುಡಿಎಫ್ ನ ಪಿ.ಬಿ.ಅಬ್ದುರ್ರಝಾಕ್ ರವರು ಬಿಜೆಪಿಯ ಕೆ.ಸುರೇಂದ್ರನ್ ವಿರುದ್ಧ ಕೇವಲ 89 ಮತಗಳಿಂದ ಗೆಲುವು ಸಾಧಿಸಿದ್ದರು. ಇದೇ ಕಾರಣಕ್ಕೆ ಈ ಬಾರಿಯ ಚುನಾವಣೆ ರಾಷ್ಟ್ರ […]

ಯಾವ ಚುನಾವಣೆ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

Saturday, October 19th, 2019
dinesh-gundu-rao

ಮಂಡ್ಯ : ಉಪಚುನಾವಣೆಯಾಗಲಿ, ಸಾರ್ವತ್ರಿಕ ಚುನಾವಣೆ ಬರಲಿ, ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಕಾರ್ಯನಿಮಿತ್ತ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ನಗರದಲ್ಲಿ ಕಾಂಗ್ರೆಸ್ಸಿಗರಿಂದ ಸ್ವಾಗತ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕಟ್ಟಲು ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರದಿಂದ ಜನರಲ್ಲಿ ಭ್ರಮನಿರಸನ ಆಗಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಸಿಎಂಗೆ ಏನು ಕೇಳಿದರೂ ನನ್ನ ಹತ್ತಿರ ಹಣವಿಲ್ಲ, ನಡೆಸಲು ಆಗುತ್ತಿಲ್ಲ ಎನ್ನುತ್ತಿದ್ದಾರಲ್ಲ ಏನು ಹೇಳಬೇಕು. ಚುನಾವಣೆ ಬಂದರೆ […]

ಮಂಜೇಶ್ವರ : ಉಪಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Monday, September 30th, 2019
manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರಮುಖ ಅಭ್ಯರ್ಥಿಗಳು ಸೆ. 30 ರ ಸೋಮವಾರ ನಾಮಪತ್ರ ಸಲ್ಲಿಸಿದರು. ಯು ಡಿ ಎಫ್ ಅಭ್ಯರ್ಥಿ ಎಂ . ಸಿ ಖಮರುದ್ದೀನ್ ಸೋಮವಾರ ಬೆಳಿಗ್ಗೆ ಮಂಜೇಶ್ವರ ಬ್ಲಾಕ್ ಅಭಿವೃದ್ಧಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಉಪ್ಪಳದ ಮುಸ್ಲಿಂ ಲೀಗ್ ಕಚೇರಿಯಿಂದ ಮುಖಂಡರು ಕಾರ್ಯಕರ್ತರ ಜೊತೆ ಆಗಮಿಸಿದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದರು. ಎಲ್ ಡಿ ಎಫ್ ಅಭ್ಯರ್ಥಿ ಎಂ . ಶಂಕರ ರೈ ಬೆಳಿಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ […]

15 ಅನರ್ಹ ಶಾಸಕರಿಗೆ ಉಪಚುನಾವಣೆ ಟಿಕೆಟ್ : ಬಿ ಎಸ್ ಯಡಿಯೂರಪ್ಪ

Monday, September 30th, 2019
BSY

ಶಿವಮೊಗ್ಗ : 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ‌ ಸಿಎಂ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ಎಲ್ಲಾ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತೇವೆ. ಇದಕ್ಕೆ ಅಮಿತ್ ಶಾ ಕೂಡಾ ಒಪ್ಪಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ. ಅನರ್ಹ ಶಾಸಕರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕಳೆದ ಬಾರಿ […]