Blog Archive

ರಾಜ್ಯದ ಅಭಿವೃದ್ಧಿಯ ಬಗ್ಗೆ ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

Monday, June 18th, 2018
rahul-gandhi

ಹೊಸದಿಲ್ಲಿ: ರಾಜ್ಯದಲ್ಲಿ ಐದು ವರ್ಷಗಳ ಕಾಲ ಸುಭದ್ರವಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಸರಕಾರವನ್ನು ಮುನ್ನಡೆಸಿಕೊಂಡು ಹೋಗುವ ಬಗ್ಗೆ, ರಾಜ್ಯದ ಅಭಿವೃದ್ಧಿಯ ಬಗ್ಗೆ ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದಾಗಿ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಹೊಸದಿಲ್ಲಿಯಲ್ಲಿರುವ ಅವರ ನಿವಾಸದಲ್ಲಿಂದು ಭೇಟಿಯಾದ ಬಳಿಕ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ರಾಹುಲ್ ಅವರೊಂದಿಗೆ ಸೌಹಾರ್ದಯುತ ಮಾತುಕತೆಗಾಗಿ ಭೇಟಿಯಾಗಿದ್ದೇನೆ. ಈ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಹಲವು ಕ್ರಮಗಳ ಬಗ್ಗೆ ಚರ್ಚಿಸಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. […]

ನಾನು ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾದರೆ ಒಂದು ಕ್ಷಣವೂ ಅಧಿಕಾರದಲ್ಲಿರುವುದಿಲ್ಲ: ಎಚ್ ಡಿ ಕುಮಾರಸ್ವಾಮಿ

Tuesday, June 12th, 2018
kumarswamy

ಬೆಂಗಳೂರು: ‘ನಾನು ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾದರೆ ಒಂದು ಕ್ಷಣವೂ ಅಧಿಕಾರದಲ್ಲಿರುವುದಿಲ್ಲ’ ಎಂದು ಮುಖ್ಯಮಮತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಸಾಕಷ್ಟಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಜೂನ್ 11 ರಂದು ಮಾತನಾಡುತ್ತಿದ್ದ ಅವರು, ‘ಭ್ರಷ್ಟಾಚಾರದ ಬೇರು ತುಂಬಾ ಆಳವಾಗಿದೆ. ಅದನ್ನು ಸ್ವಚ್ಛಗೊಳಿಸಬೇಕು ಎಂದರೂ ಸಾಧ್ಯವಾಗುತ್ತಿಲ್ಲ. ಭ್ರಷ್ಟಾಚಾರವನ್ನು ನಿರ್ಮೂಲನೆಗೊಳಿಸಲು ಪ್ರಯತ್ನಿಸಿದರೆ ನನಗೇ ಅಪಾಯ’ ಎಂದು ಅವರು ಕಳವಳ ವ್ಯಕ್ತಪಡಿಸಿದರು. ವಿಧಾನಸೌಧದ ಕಾರಿಡಾರ್ ಗಳಲ್ಲಿ ಮಧ್ಯವರ್ತಿಗಳು ಅಡ್ಡಾಡುತ್ತಾ ಜನರಿಂದ […]

ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಬಿಎಸ್ವೈ ವಿರುದ್ಧ ಡಿಜಿಪಿಗೆ ದೂರು

Saturday, May 26th, 2018
yedyurappa-pr

ಬೆಂಗಳೂರು: ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ. ಎಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡುವ ವೇಳೆ ಯಡಿಯೂರಪ್ಪ ಭಾಷಣ ಮಾಡುತ್ತಿದ್ದರು. ಭಾಷಣದ ಕೊನೆಯಲ್ಲಿ ಕೋಪಗೊಂಡ ಅವರು ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಕರೆ ಕೊಟ್ಟಿದ್ದರು. ಆದರೆ ಇಂದು ರೈತರೇ ಪ್ರತಿಭಟನೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಬಂದ್ […]

ಕಾಂಗ್ರೆಸ್ ಜೊತೆ ಮೈತ್ರಿಯಲ್ಲಿ ನಾನೊಬ್ಬ ‘ಸಾಂದರ್ಭಿಕ ಶಿಶು’ ಎಚ್‌.ಡಿ.ಕುಮಾರಸ್ವಾಮಿ

Wednesday, May 23rd, 2018
Kumara Swamy

ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ಮೈತ್ರಿಯಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ನಾನೊಬ್ಬ ‘ಸಾಂದರ್ಭಿಕ ಶಿಶು’ ಆಗಿದ್ದೇನೆ ಎಂದು ಬುಧವಾರ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯಾಗುವಂತೆ ಮನವೊಲಿಸಿದರು. ಆದ ಕಾರಣ ನನ್ನ ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ಅಧಿಕಾರ ವಹಿಸಿಕೊಂಡೆ. ಹಾಗಾಗಿ ಈಗ ನಾನು ‘ಸಾಂದರ್ಭಿಕ ಶಿಶು’ವಾಗಿದ್ದೇನೆ ಎಂದರು. ಚುನಾವಣೆಯಲ್ಲಿ ನಮಗೆ ಸ್ಪಷ್ಟ ಬಹುಮತ ಬರದೆ ಇದ್ದರೆ ನಾವು ವಿರೋಧ […]

ರಾಜ್ಯದ 25ನೇ ಸಿಎಂ ಆಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ!

Wednesday, May 23rd, 2018
pramana-vachana

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ವಿಧಾನಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನೂತನ ಸರ್ಕಾರದ ಪದಗ್ರಹಣವಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳಯದಲ್ಲಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬಂದಿತ್ತು. ಮಳೆಯ ಕಣ್ಣಾಮುಚ್ಚಾಲೆಯ ನಡುವೆ ಕಿವಿಗಡಕಿಚ್ಚಿನ ಶಬ್ದ, […]

ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗಬೇಡಿ; BJP ಹೈಕಮಾಂಡ್

Tuesday, May 22nd, 2018
amit-shah

ಬೆಂಗಳೂರು: ಬುಧವಾರ ಸಂಜೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಶಾಸಕರು ಹೋಗಬಾರದು ಎಂದು ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ. ನಾಳೆ ಸಂಜೆ 4.30ಕ್ಕೆ ಶಕ್ತಿ ಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸಿದ್ಧಪಡಿಸಿದ ಬೃಹತ್ ವೇದಿಕೆಯಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಏತನ್ಮಧ್ಯೆ ಹೈಕಮಾಂಡ್ ರವಾನಿಸಿರುವ ಸಂದೇಶವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಶಾಸಕರಿಗೆ ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಎಚ್ ಡಿಕೆ ಪ್ರಮಾಣವಚನ ಸಮಾರಂಭಕ್ಕೆ […]

ವಿಶ್ವಾಸಮತಯಾಚಿಸದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟ ಬಿಎಸ್ ಯಡಿಯೂರಪ್ಪ

Saturday, May 19th, 2018
politics

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚಿಸದೇ ಸದನದಲ್ಲಿ ವಿದಾಯ ಭಾಷಣ ಮಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ರಾಜಿನಾಮೆ ನೀಡಿ ಹೊರ ನಡೆದಿದ್ದಾರೆ. ಯಡಿಯೂರಪ್ಪನವರಿಗೆ ಮೂರೇ ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂಥ ಮತ್ತು ಬಿಜೆಪಿಗೆ ಬಹುಮತ ಬರದಿರುವಂಥ ಪರಿಸ್ಥಿತಿ ಬರಲು ಕಾರಣಗಳೇನು? ಇದಕ್ಕೆ ಯಡಿಯೂರಪ್ಪನವರೇ ಸ್ವತಃ ಕಾರಣರಾದರೆ. ಸದನದಲ್ಲಿ ಸುದೀರ್ಘ ಭಾಷಣ ಮಾಡಿದ ಯಡಿಯೂರಪ್ಪ, ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ನಮಗೆ ನೀರಾವರಿ ಯೋಜನೆ ಪೂರ್ಣ ಮಾಡಲು ಆಗಲಿಲ್ಲ. ಕುಡಿಯುವ ನೀರು ಕೊಡಲು ಆಗಲಿಲ್ಲ. […]

ಕಾಂಗ್ರೆಸ್ಸಿನದೇನಿದ್ದರೂ ಹಣ ಹೊಡೆಯುವ ಭಾಗ್ಯ: ಎಚ್ ಡಿಕೆ ವ್ಯಂಗ್ಯ

Saturday, April 28th, 2018
kumaraswamy

ಮೈಸೂರು: “ಕಾಂಗ್ರೆಸ್ ಪ್ರಣಾಳಿಕೆ ಕೇವಲ ಬೋಗಸ್. 5 ವರ್ಷಗಳಲ್ಲಿ ಈಡೇರಿಸಲಾಗದ್ದನ್ನು ಕಾಂಗ್ರೆಸ್ಸಿಗರು ಮುಂದೆ ಈಡೇರಿಸುತ್ತಾರಾ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ. ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆಯ ನಿಮಿತ್ತ ಮೈಸೂರಿನಲ್ಲಿ ಪ್ರಚಾರ ನಡೆಸುತ್ತಿರುವ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಏ.27 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದರು. “ಕಾಂಗ್ರೆಸ್ ನ ಭಾಗ್ಯಗಳು ಬರಿ ಹಣ ಹೊಡೆಯುವ ಭಾಗ್ಯಗಳು. ಭಾಗ್ಯಗಳ ಹೆಸರಲ್ಲಿ ಹಣ ಲೂಟಿ […]

ಡಿ.10ರಂದು ತುಮಕೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ

Thursday, December 7th, 2017
jds

ಮಂಗಳೂರು :  ತುಮಕೂರಿನ ಸರಕಾರಿ ಶಾಲಾ ಮೈದಾನದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಡಿ.10ರಂದು ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎಂ.ಕೆ. ಅಬ್ದುಲ್ ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು. ಸಮಾವೇಶದಲ್ಲಿ ಸುಮಾರು ಮೂರು ಲಕ್ಷ ಜೆಡಿಎಸ್ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ದ.ಕ. ಮತ್ತು ಉಡುಪಿ […]

ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಕಚ್ಚಾಟದಿಂದ ಅಭಿವೃದ್ದಿ ಕುಂಠಿತವಾಗಿದೆ : ಕುಮಾರಸ್ವಾಮಿ

Sunday, July 30th, 2017
hdk

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಇಲ್ಲಿನ ಅಭಿವೃದ್ದಿಗಿಂತ ಹೆಚ್ಚಾಗಿ ಧರ್ಮ ಹಾಗೂ ಭಾವನಾತ್ಮಕ ವಿಷಯಗಳಿಗೆ ಆದ್ಯತೆ ನೀಡುತ್ತಿವೆ. ಇಲ್ಲಿ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡುತ್ತಿದ್ದರೆ ಮಂಗಳೂರು ನಗರ ಬೆಂಗಳೂರು ನಗರಕ್ಕೆ ಸಮಾನವಾಗಿ ಬೆಳೆಯುತ್ತಿತ್ತು. ಆದರೆ ಇವರು ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡದೆ ಜನ ಸಾಮಾನ್ಯರು ಆತಂಕದಲ್ಲಿ ಜೀವನ ನಡೆಸುವಂತೆ ಮಾಡುತ್ತಿದ್ದಾರೆ. ಹೀಗಾಗಿ ಕರಾವಳಿಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆ ಆಳ್ವಾಸ್ ಕಾಲೇಜಿನ […]