Blog Archive

ಎತ್ತಿನಹೊಳೆ ಯೋಜನೆಯನ್ನು ಕೈಬಿಡುವಂತೆ ಬಿಜೆಪಿಯವರು ವಿಧಾನಸಭೆ, ವಿಧಾನ ಪರಿಷತ್‌‌ನಲ್ಲಿ ನಿಲುವಳಿ ಮಂಡಿಸಲಿ: ರಮಾನಾಥ ರೈ

Saturday, December 10th, 2016
ramanatha-rai

ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ಕೈಬಿಡುವಂತೆ ಬಿಜೆಪಿಯವರು ವಿಧಾನಸಭೆ, ವಿಧಾನ ಪರಿಷತ್‌‌ನಲ್ಲಿ ನಿಲುವಳಿ ಮಂಡಿಸಲಿ. ಆ ಬಳಿಕವೂ ಯೋಜನೆ ಕೈಬಿಡಲು ಸಾಧ್ಯವಾಗದಿದ್ದಲ್ಲಿ ನಾನು ರಾಜಕೀಯದಿಂದಲೇ ಹೊರಬರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ವಿರುದ್ಧ ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಕೈಬಿಡುವಂತೆ ನಿಲುವಳಿ ಮಂಡಿಸಲಿ. ಆ ಬಳಿಕ ಮುಖ್ಯಮಂತ್ರಿಯವರ ಕೈಕಾಲು ಹಿಡಿದಾದರೂ ಯೋಜನೆಯನ್ನು ನಿಲ್ಲಿಸುತ್ತೇನೆ. ಇಲ್ಲದಿದ್ದಲ್ಲಿ […]

ನೇತ್ರಾವತಿಯನ್ನು ಉಳಿಸಲು ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ :ವಿಜಯಕುಮಾರ್ ಶೆಟ್ಟಿ

Tuesday, December 6th, 2016
NRSS

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಮತ್ತೆ ಕಾವೇರಿದೆ. ಎಷ್ಟೇ ಮೊರೆ ಹೋದರೂ ಸರ್ಕಾರದ ಮನ ಕರಗುತ್ತಿಲ್ಲ. ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಉಳಿಸಲು ಮಾಡುತ್ತಿರುವ ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎತ್ತಿನಹೊಳೆ ಸಂಯುಕ್ತ ಹೋರಾಟ ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ವಿಜಯಕುಮಾರ್ ಶೆಟ್ಟಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ರಥಯಾತ್ರೆ ನಡೆಯಲಿದೆ. ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರೆ […]

ಎತ್ತಿನಹೊಳೆ ಯೋಜನೆ ಹಗರಣದಲ್ಲಿ ಶಾಮೀಲಾಗಿರುವ ಮೂವರು ಸಚಿವರನ್ನು ಕೈ ಬಿಡಬೇಕು: ಜನಾರ್ದನ ಪೂಜಾರಿ

Wednesday, November 30th, 2016
Janardhana-Poojary

ಮಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಂಡ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಕಪ್ಪುಹಣ ವ್ಯಯ ಮಾಡಲಾಗಿದೆ ಎಂದು ಪೂಜಾರಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಸಮಾವೇಶದಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಲ್ಲ ಎಂಬುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಂದು ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು. ಅಮಿತ್ ಶಾ ರಾಜ್ಯಕ್ಕೆ ಬರುವಾಗ ಕಪ್ಪು ಹಣ ಬಿಳಿಯಾಗಿದೆ. ಯಡಿಯೂರಪ್ಪ ಅವರಂತಹ ನಾಯಕ ರಾಜ್ಯದಲ್ಲಿಲ್ಲ. ಅವರು ಸ್ವಚ್ಛ […]

ಎತ್ತಿನಹೊಳೆ ಯೋಜನೆ ಜಾರಿಯಿಂದ ಪಶ್ಚಿಮ ಘಟ್ಟಕ್ಕೆ ಅಪಾರ ಹಾನಿಯಾಗುವ ಸಾಧ್ಯತೆ: ವಿಸ್ತೃತ ಅಧ್ಯಯನ ನಡೆಸಲು ಸೂಚನೆ

Friday, November 18th, 2016
NRSS

ಮಂಗಳೂರು: ಎತ್ತಿನಹೊಳೆ ಯೋಜನೆ ಜಾರಿಯಿಂದ ಪಶ್ಚಿಮ ಘಟ್ಟಕ್ಕೆ ಅಪಾರ ಹಾನಿಯಾಗುವ ಸಾಧ್ಯತೆಯಿದೆ. ಆದ್ದರಿಂದ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ನಿರ್ಧರಿಸಲು ವಿಸ್ತೃತ ಅಧ್ಯಯನ ನಡೆಸಬೇಕೆಂದು ದೆಹಲಿಯ ಹಸಿರು ಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ನ.11ರಂದು ಹಸಿರು ಪೀಠದಲ್ಲಿ ಎತ್ತಿನಹೊಳೆ ಯೋಜನೆ ವಿಚಾರಣೆ ಕುರಿತಂತೆ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ದೂರಿನ ವಿಚಾರಣೆ ನಡೆಸಿ ಈ ನಿರ್ದೇಶನವನ್ನು ನೀಡಿದೆ ಎಂದು ಸಮಿತಿಯ ಸಂಚಾಲಕ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ನಿನ್ನೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಮಿತಿ […]

“ಬಣ್ಣ ಬಣ್ಣದ ಬದುಕು” ಕನ್ನಡ ಚಲನ ಚಿತ್ರದ ಧ್ವನಿಸುರುಳಿ ಬಿಡುಗಡೆ

Friday, October 7th, 2016
banna-bannada-baduku

ಮಂಗಳೂರು: ಕುಡಿಯುವ ನೀರು ಕೊಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಕೊಡುವಾಗ ನಮ್ಮಲ್ಲಿ ಇದೆಯಾ ಎಂಬುದು ಈಗಿನ ಪ್ರಶ್ನೆ. ಕಾವೇರಿ ವಿಷಯದಲ್ಲಿ ಕಾಡಿದ ಈ ಪ್ರಶ್ನೆ ನಮ್ಮ ನೆಲದ ನೇತ್ರಾವತಿಗೂ ಅನ್ವಯಿಸಬೇಕು. ನಮಗೇ ನೀರಿಲ್ಲದ ಪರಿಸ್ಥಿತಿ ಸೃಷ್ಟಿಸುವ ಎತ್ತಿನಹೊಳೆ ಯೋಜನೆ ಕುರಿತು ಕರಾವಳಿ ಜನತೆ ಎಚ್ಚೆತ್ತುಕೊಳ್ಳುವ ದಿನಗಳು ಎದುರಾಗಿವೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಮುತ್ತುರಾಮ್‌ ಕ್ರಿಯೇಷನ್ಸ್‌ ಕಾರ್ಕಳ ಲಾಂಛನದಲ್ಲಿ ತಯಾರಾದ ಕೃಷ್ಣ ನಾಯ್ಕ ಕಾರ್ಕಳ ನಿರ್ಮಾಣ ಹಾಗೂ ಇಸ್ಮಾಯಿಲ್‌ ಮೂಡುಶೆಡ್ಡೆ ನಿರ್ದೇಶನದ […]

ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಅ 6 ರಂದು ರಸ್ತಾ ರೋಕೋ

Monday, October 3rd, 2016
sarva-college

ಮಂಗಳೂರು: ಎತ್ತಿನಹೊಳೆ ಯೋಜನೆಗೆ ವಿರೋಧಿಸುತ್ತಿರುವ ಕರಾವಳಿ ಜನರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸದೆ ಇರುವುದನ್ನು ಖಂಡಿಸಿ ಜಿಲ್ಲೆಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಅ 6 ರಂದು ರಸ್ತಾ ರೋಕೋ ನಡೆಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ದಿನಕರ ಶೆಟ್ಟಿ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ ಬೆಸೆಂಟ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗು ವುದು ಎಂದು ಎಚ್ಚರಿಸಿದರು. ಜಿಲ್ಲೆಯ ಬಗ್ಗೆ ಸರ್ಕಾರ, ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವರ್ತನೆ […]

ಎತ್ತಿನಹೊಳೆ ಯೋಜನೆಗೆ ವಿರುದ್ಧವಾಗಿ ತೀರ್ಪು ಬರಲೆಂದು ಪ್ರಾರ್ಥನೆ

Thursday, September 15th, 2016
yetthinahole-project

ಮಂಗಳೂರು: ದೆಹಲಿಯ ರಾಷ್ಟ್ರೀಯ ಹಸಿರು ಪೀಠದಲ್ಲಿ ಸೆ. 21ರಂದು ನೇತ್ರಾವತಿ ನದಿ ತಿರುವು ಯೋಜನೆ ಕುರಿತು ವಿರುದ್ಧವಾಗಿ ತೀರ್ಪು ಬರಲೆಂದು ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಸದಸ್ಯರು ನಗರದ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಆರಂಭದಲ್ಲಿ ಕದ್ರಿ ಮಂಜುನಾಥ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲೆಯವರು ಶಾಂತ ಸ್ವಭಾವದವರು. ಈವರೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಸರ್ಕಾರ ಇದನ್ನು ಅರ್ಥಮಾಡಿಕೊಂಡಿಲ್ಲ. ಸರ್ಕಾರ ಕಿವಿಗೊಡದೆ ಹೋದಾಗ […]

ಸಿದ್ದರಾಮಯ್ಯ,ಡಿವಿಎಸ್‌ ಮತ್ತು ಮೊಯ್ಲಿ ಅವರಿಗೆ ಕ್ರೀಡಾಪಟುಗಳಿಗೆ ನೀಡುವ ಖೇಲ್‌ ರತ್ನ ಪ್ರಶಸ್ತಿ ಕೊಡಬೇಕು: ಪೂಜಾರಿ

Saturday, September 3rd, 2016
Janardana-poojary

ಮಂಗಳೂರು : ಕಾಂಗ್ರೆಸ್‌ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮತ್ತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ. ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಸಿ ಮಾತನಾಡಿದ ಪೂಜಾರಿ ಅವರು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಂಸದ ವೀರಪ್ಪ ಮೊಯ್ಲಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು. ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಬದ್ಧರಾಗಿರುವ ಸಿದ್ದರಾಮಯ್ಯನವರು ಯೋಜನೆಗೆ ಅಡ್ಡ ಬಂದರೆ ಅವರನ್ನು ನನ್ನ ಬಳಿ ಕಳುಹಿಸಿ […]

ಎತ್ತಿನಹೊಳೆ ಯೋಜನೆ ಕುರಿತು ಸರಕಾರಕ್ಕೆ ತಜ್ಞರಿಂದ ಮಾಹಿತಿ ನೀಡಿ ಗೊಂದಲ ನಿವಾರಿಸಲಿ: ವೀರೇಂದ್ರ ಹೆಗ್ಗಡೆ

Monday, August 29th, 2016
Heggade

ಬೆಳ್ತಂಗಡಿ: ಎತ್ತಿನಹೊಳೆ ಯೋಜನೆ ಕುರಿತು ದ.ಕ. ಜನರಲ್ಲಿ ಸಾಕಷ್ಟು ತಾಂತ್ರಿಕ ಗೊಂದಲಗಳಿದ್ದು, ಸರಕಾರ ಇವುಗಳ ಕುರಿತು ತಜ್ಞರಿಂದ ಮಾಹಿತಿ ಕೊಡಿಸಬೇಕಿತ್ತು. ಈ ಬಗ್ಗೆ ಸಾಕಷ್ಟು ಬಾರಿ ಪ್ರತಿಭಟನೆ, ಮನವಿ ಮಾಡಿದ್ದರೂ ಸರಕಾರ ಸ್ಪಂದಿಸಲಿಲ್ಲ. ಇನ್ನಾದರೂ ಮಾಹಿತಿ ನೀಡಿ ಗೊಂದಲ ನಿವಾರಿಸಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ರವಿವಾರ ಶ್ರೀ ಕ್ಷೇತ್ರದಲ್ಲಿ ಎತ್ತಿನಹೊಳೆ ಹೋರಾಟ ಸಮಿತಿಯ ಜಿಲ್ಲಾ ನಿಯೋಗ ತಮ್ಮನ್ನು ಭೇಟಿ ಮಾಡಿದಾಗ ಮಾತನಾಡಿದರು. ಮಾಹಿತಿ ನೀಡಿ ಗೊಂದಲ ನಿವಾರಿಸಿ ಒಂದೇ […]

ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ತುಳು ಸಮ್ಮೇಳನ

Tuesday, August 16th, 2016
Heggade

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಪ್ರಧಾನಿ ಜೊತೆ ಮಾತನಾಡಲು ಕೇಂದ್ರ ಸಚಿವರ ಮೂಲಕ ಪ್ರಯತ್ನಿಸುತ್ತಿದ್ದು, ಆ.17ರ ನಂತರ ಭೇಟಿಗೆ ಸಮಯ ನಿಗದಿ ಪಡಿಸುವ ಸಾಧ್ಯತೆಯಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ 2 ದಿನ ನಡೆದ ತುಳುವ ಐಸಿರಿದ ಐಸ್ರ ತುಳು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ನೇತ್ರಾವತಿ ನದಿ ತಿರುವು ಯೋಜನೆಯ ಹೆಸರನ್ನು ಬದಲಾಯಿಸಿದೆ. ಘಟ್ಟ ಪ್ರದೇಶದಲ್ಲಿ ಎತ್ತಿನಹೊಳೆ […]