ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿ ಮನೆ ಸಂಪೂರ್ಣ ಜಲಾವೃತ

Thursday, July 4th, 2024
Adyar-dota

ಮಂಗಳೂರು : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿನ ಮನೆ ಸಂಪೂರ್ಣ ಜಲಾವೃತಗೊಂಡಿದೆ. ವಿಕ್ರಮ್ ಶೆಟ್ಟಿ ಎಂಬುವರಿಗೆ ಸೇರಿದ ಒಂದು ಅಂತಸ್ತಿನ ಮನೆ ಯಾಗಿದ್ದು, ಕಳೆದ ಮೂರು ವರ್ಷಗಳಿಂದ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೋಂಡಾ ಫ್ಯಾಕ್ಟರಿಗೆ ಹೋಗುವ ರಸ್ತೆಯೂ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮುಳುಗಡೆಯಾಗುತ್ತಿದ್ದು, ರಸ್ತೆಯುದ್ದಕ್ಕೂ ಜಲಾವೃತವಾಗಿದೆ. ಆ ಪ್ರದೇಶದಲ್ಲಿ ಹಲವಾರು ಮನೆಗಳು ಮತ್ತು ಶಾಲೆಗಳಿದ್ದರೂ ಅವುಗಳಿಗೆ ಹೋಗುವ ರಸ್ತೆಯು ಅಸಮರ್ಪಕ ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದರಿಂದ ಸಂಪೂರ್ಣವಾಗಿ […]

ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತೊಕ್ಕೊಟ್ಟಿನಲ್ಲಿ ಪ್ರತಿಭಟನೆ

Thursday, November 14th, 2013
BJP-YM

ಮಂಗಳೂರು: ಮಂಗಳೂರು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತೊಕ್ಕೊಟ್ಟು-ಬಬ್ಬುಕಟ್ಟೆವರೆಗಿನ ರಸ್ತೆಯ ದುರಸ್ತಿಯನ್ನು ಖಂಡಿಸಿ  ಬುಧವಾರ ನಗರದ ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜಯರಾಂ ಶೆಟ್ಟಿ ಮಾತನಾಡಿ, ಒಳಚರಂಡಿ ಕಾಮಗಾರಿಗಾಗಿ ತೊಕ್ಕೊಟ್ಟಿನಿಂದ ಬಬ್ಬುಕಟ್ಟೆವರೆಗೆ ಅಗೆಯಲಾಗಿರುವ ರಸ್ತೆ ದುರಸ್ಥಿಪಡಿಸುವಂತೆ ಒತ್ತಾಯಿಸಿ , ರಾಜ್ಯ ಸರಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ತೊಕ್ಕೊಟ್ಟಿ ನಿಂದ ಬಬ್ಬುಕಟ್ಟೆವರೆಗಿನ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ಆರು ತಿಂಗಳ ಹಿಂದೆಯೂ ನಡೆದಂತಹ ಪ್ರತಿಭಟನೆ ವೇಳೆ ಅಧಿಕಾರಿಗಳು ನೀಡಿ ರುವ ಭರವಸೆಗಳು ಇನ್ನೂ ಈಡೇರಿಲ್ಲ. ಎಡಿಬಿಯಿಂದ ಲೋಕೋಪಯೋಗಿ ಇಲಾಖೆಗೆ […]