Blog Archive

ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಚುನಾಯಿಸಿದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಕೃತಜ್ಞತೆಗಳು : ಮಂಜುನಾಥ ಭಂಡಾರಿ

Tuesday, December 14th, 2021
Manjunatha-Bhandary

ಮಂಗಳೂರು : ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯನಾಗಿ ಆರಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ನನ್ನ ಮೇಲೆ ಅಭಿಮಾನ ಮತ್ತು ನಂಬಿಕೆ ಇಟ್ಟು ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ನನ್ನ ಗೆಲುವಿಗೆ ಸಹಕರಿಸಿದ  ಪಕ್ಷದ ಎಲ್ಲಾ ನಾಯಕರುಗಳಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ನಾಯಕರು ನನ್ನ ಮೇಲಿಟ್ಟ ನಂಬಿಕೆ ಮತ್ತು ಅಭಿಮಾನ […]

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

Tuesday, December 7th, 2021
cm Bommai

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಗದಗ ಜಿಲ್ಲೆಯಲ್ಲಿ ಭಾಜಪದ ವತಿಯಿಂದ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. 7 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿ ಕೆಲವೇ ದಿನಗಳ ನಂತರ ಅದನ್ನು 4 ಕೆಜಿಗೆ ಇಳಿಸಿದರು. 5 ವರ್ಷದ ಅವಧಿಯಲ್ಲಿ 3 ವರ್ಷ 4ಕೆಜಿ ಅಕ್ಕಿ ಮಾತ್ರ ನೀಡಿದ್ದಾರೆ. ಚುನಾವಣೆಗೆ ಒಂದು ವರ್ಷವಿದ್ದಾಗ ಪುನ: 7 ಕೆಜಿಗೆ ಏರಿಸಿದರು. ಕಾಂಗ್ರೆಸ್ ಸರ್ಕಾರ […]

ಕಾಂಗ್ರೆಸ್ ನವರು ಭಯಭೀತರಾಗಿ ಹತಾಶರಾಗಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ ಆರೋಪ

Sunday, October 24th, 2021
Sindgi

ಕನ್ನೋಳಿ: ಸಿಂದಗಿ: ಕಾಂಗ್ರೆಸ್ ಪಕ್ಷದ ನಾಯಕರಿಗೆ ಪ್ರಾಚರಕ್ಕೆ ವಿಷಯಗಳೇ ಸಿಗುತ್ತಿಲ್ಲ. ಸೋತಮೇಲೆ ನೀಡುವಂತಹ ಹೇಳಿಕೆಗಳನ್ನು ಚುನಾವಣಾ ಆರಂಭದಲ್ಲೇ ನೀಡುತ್ತಿದೆ.‌ ಕಾಂಗ್ರೆಸ್ ಸಂಪೂರ್ಣವಾಗಿ ಹತಾಶವಾಗಿ ಇಂತಹ ಹೇಳಿಕೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಗೆ ಅದ್ಭುತವಾದ ಬೆಂಬಲವನ್ನು ನೋಡಿ ಕಾಂಗ್ರೆಸ್ ಪಕ್ಷ ಭಯ ಗೊಂಡಿದೆ. ಸೋಲಿನ ಅನುಭವ ಆರಂಭದಲ್ಲಿ ಆಗಿರುವುದರಿಂದ ಚುನಾವಣಾ ನಂತರದ ಹೇಳಿಕೆಗಳನ್ನು ಈಗಲೇ ಆ ಪಕ್ಷದ ನಾಯಕರು ನೀಡುತ್ತಿದ್ದಾರೆ ಎಂದರು. ಅವರು ಸಿಂದಗಿ ವಿಧಾನಸಭೆ ಕ್ಷೇತ್ರದ ಕನ್ನೊಳಿ ಗ್ರಾಮದ ಪ್ರಚಾರದ ಸಂದರ್ಭದಲ್ಲಿ […]

ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ, ಇಲ್ಲಿದೆ ನೋಡಿ ಫಲಿತಾಂಶ

Tuesday, September 7th, 2021
Belagavi

ಬೆಂಗಳೂರು :  ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಕಲಬುರಗಿ ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅತಂತ್ರವಾಗಿವೆ. ಬೆಳಗಾವಿ ಮಹಾನಗರ ಪಾಲಿಕೆ ಫಲಿತಾಂಶ (58 ವಾರ್ಡ್ ಗಳು) ಬಿಜೆಪಿ- 35, ಕಾಂಗ್ರೆಸ್-10, ಜೆಡಿಎಸ್-00, ಎಂಇಎಸ್-01, ಪಕ್ಷೇತರರು-12 ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ (55 ವಾರ್ಡ್ ಗಳು) ಬಿಜೆಪಿ-23, ಕಾಂಗ್ರೆಸ್-27, ಜೆಡಿಎಸ್-04, ಪಕ್ಷೇತರರು-01 ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ […]

ಹು-ಧಾ ಪಾಲಿಕೆ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳನ್ನು ಬೆಂಬಲಿಸಿ : ದೀಪಕ ಶಿರೋಲಿಕರ

Tuesday, August 24th, 2021
deepaka

ಹುಬ್ಬಳ್ಳಿ : ಸದ್ಯ ನಡೆಯುತ್ತಿರುವ ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 82 ವಾರ್ಡ್‌ ನ ಅಭ್ಯರ್ಥಿಗಳನ್ನು ಆಯಾ ವಾರ್ಡ್‌ ಗಳಲ್ಲಿರುವ ನನ್ನ ಬೆಂಬಲಿಗರೊಂದಿಗೆ ಪ್ರಚಾರಕ್ಕಿಳಿದು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ಮಹಾನಗರ ಜಿಲ್ಲಾ ಕಾಂಗ್ರೆಸ್‌ ಜಂಟಿ ಕಾರ್ಯದರ್ಶಿ, ಆರ್ಟಿಐ ಕಾರ್ಯಕರ್ತ, ಹಿರಿಯ ಸಮಾಜ ಸೇವಕ ದೀಪಕ ಶಿರೋಲಿಕರ ಹೇಳಿದ್ದಾರೆ. ಈ ಹಿಂದೆ‌, ಈಗಿನ ಮಹಾನಗರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ್‌ ಪಾಟೀಲ ಅವರು ಕಾಂಗ್ರೆಸ್‌ ಪಕ್ಷದಿಂದ ಹು-ಧಾ ಮೇಯರ್‌ ಆಗಿದ್ದ ಸಂದರ್ಭದಲ್ಲಿ ಅವಳಿ ನಗರಗಳಲ್ಲಿ ಸಾಕಷ್ಟು […]

ಮುದ್ರಾಡಿ ಕಾಂಗ್ರೆಸ್ ಪ್ರಮುಖರು ಬಿಜೆಪಿ ಸೇರ್ಪಡೆ

Friday, July 16th, 2021
Karkala

ಕಾರ್ಕಳ : ಕಳೆದ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ  ವಿವಿಧ ಪಕ್ಷಗಳಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸರದಿ ಮುಂದುವರಿದಿದ್ದು ಮುದ್ರಾಡಿ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ 4 ಬಾರಿ ಆಯ್ಕೆಯಾಗಿದ್ದ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶೋಧ ಶೆಟ್ಟಿ ರವರು ಶಾಸಕರ ಕಛೇರಿ ವಿಕಾಸದಲ್ಲಿ ಶಾಸಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಮುದ್ರಾಡಿಯಲ್ಲಿ ಕಾಂಗ್ರೆಸ್‌ನವರ ದಬ್ಬಾಳಿಕೆಯನ್ನು ವಿರೋದಿಸಿ ಮತ್ತು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತು, ಶಾಸಕರ […]

ದೇಶ ದ್ರೋಹಿಗಳ ಸಮರ್ಥನೆ – ಕಾಂಗ್ರೆಸ್‌ನ ನಿಜ ಬಣ್ಣ ಬಯಲು : ವಿ ಸುನಿಲ್ ಕುಮಾರ್

Friday, July 9th, 2021
Sunil Kumar

ಕಾರ್ಕಳ : ಈ ದೇಶವನ್ನು ಬಹಳಷ್ಟು ವರ್ಷ ಆಳಿದ ರಾಜಕೀಯ ಪಕ್ಷವಾದ ಕಾಂಗ್ರೆಸ್ ದೇಶದ ಭದ್ರತೆಯ ವಿಚಾರ ಬಂದಾಗ, ಸೈನಿಕರ ವಿಚಾರ ಬಂದಾಗ ಪಾಕಿಸ್ತಾನವನ್ನು ಪರೋಕ್ಷವಾಗಿ ಬೆಂಬಲಿಸುವ ಹೇಳಿಕೆಗಳನ್ನು ರಾಷ್ಟೀಯ ಮಟ್ಟದಿಂದ ಹಿಡಿದು ತಳಮಟ್ಟದ ನಾಯಕರುಗಳು ನೀಡುತ್ತಿರುವುದು ಅಂಧಃಪತನದ ಪ್ರತೀಕ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಭಿವೃದ್ದಿ ಚಟುವಟಿಕೆಗಳನ್ನು ಸಹಿಸದೆ ಅನೇಕ ಅಪಪ್ರಚಾರ, ಸುಳ್ಳಿನ ಅಂತೆ-ಕAತೆಗಳನ್ನು ಸೃಷ್ಠಿಸಿ ಪ್ರಚಾರ ಪಡೆಯುತ್ತಿರುವುದರ ಜೊತೆಗೆ ಇದೀಗ ತನ್ನ ಕಾರ್ಯಕರ್ತರ […]

“ಕಾಂಗ್ರೆಸ್ ನಾಲ್ಕು ಗುಂಪುಗಳನ್ನು ಹೊಂದಿರುವ ಒಂದೇ ಪಕ್ಷ” ಕಂದಾಯ ಸಚಿವ ಆರ್ ಅಶೋಕ್

Monday, June 28th, 2021
Kempe gowda

ಬೆಂಗಳೂರು  :  ನಮ್ಮಲ್ಲಿ ಒಂದೇ ಬಾಗಿಲು ಒಬ್ಬರೇ ನಾಯಕರು, ಕಾಂಗ್ರೆಸ್‍ನಲ್ಲಿ ಒಂದೇ ಮನೆ ನಾಲ್ಕು ಬಾಗಿಲು” ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ, ನಮ್ಮಲ್ಲಿ ಬಿದ್ದಿರುವ ನೊಣದ ಬಗ್ಗೆ ಕಾಂಗ್ರೆಸ್‍ನವರು ಮಾತನಾಡುತ್ತಾರೆ. ಮೊದಲು ನಿಮ್ಮ ತಟ್ಟೆಯನ್ನು ಗಂಜಲ ಹಾಕಿ ಶುದ್ದಿ ಮಾಡಿ. ಆಮೇಲೆ ಬೇರೆಯವರನ್ನು ಟೀಕೆ ಮಾಡಬಹುದು” ಎಂದರು. ದಲಿತರು ಸಿಎಂ ಆಗಬೇಕು ಅಂತ ಒಂದು ಬಾಗಿಲು, ಒಕ್ಕಲಿಗರು ಆಗಬೇಕು ಅಂತ ಒಂದು […]

ಕಾಂಗ್ರೆಸ್ ಹೇಳೋರು ಕೇಳೋರು ಇಲ್ಲದ ಪಕ್ಷ, ಅವರು ಪಾಕಿಸ್ತಾನದ ಪರ ಮಾತಾಡ್ತಾರೆ : ಕೆ.ಎಸ್. ಈಶ್ವರಪ್ಪ ಆರೋಪ

Tuesday, June 15th, 2021
ks-eshwarappa

ಶಿವಮೊಗ್ಗ: ಕಾಂಗ್ರೆಸ್ ಹೇಳೋರು ಕೇಳೋರು ಇಲ್ಲದ ಪಕ್ಷ ಹಾಗಾಗಿ ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್‍ ರವರುಗಳು ಪಾಕಿಸ್ತಾನದ ಪರ  ಮಾತಾಡ್ತಾರೆ  ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಈ ದೇಶದ ಗೋವಿನ ಬಗ್ಗೆ, ದೇಶದ ಭೂಮಿ ಕಾಶ್ಮೀರದ ಬಗ್ಗೆ ಗೌರವವಿಲ್ಲದ ಜನ ಕಾಂಗ್ರೆಸ್‍ನವರು. ಹೀಗಾಗಿಯೇ ಅವರು ಏನು ಬೇಕಾದರೂ ಹೇಳುತ್ತಾರೆ. ಆದರೆ ಬಿಜೆಪಿಯವರಿಗೆ ಹೇಳೋರು ಕೇಳೋರು ಇದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವುಗಳನ್ನು ಪೂಜೆ ಮಾಡುತ್ತೇವೆ. ಅದೇ ರೀತಿ […]

ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿತ್ತು, ಮನೆಮನೆಗೆ ಕಿಟ್ ಹೋಗುತ್ತಿತ್ತು : ಮಾಜಿ ಸಚಿವ ರಮಾನಥ ರೈ

Tuesday, May 18th, 2021
Ramanatha Rai

ಮಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಇದೊಂದು ರಾಷ್ಟ್ರೀಯ ವಿಪತ್ತು. ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಾ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆ ಸಿಗುತ್ತಿಲ್ಲ. ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿರುವವರ ಕೆಲಸ. ಎರಡನೇ ಡೋಸ್ ಯಾವಾಗ ಕೊಡಬೇಕೂಂತ ಸಿಎಂಗೆ ಗೊತ್ತಿಲ್ಲ. ಆಕ್ಸಿಜನ್, ಐಸಿಯು, ಚಿಕಿತ್ಸೆ […]