Blog Archive

ಕುಂದಾಪುರ ಚುನಾವಣಾ ಅಖಾಡದಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಯುದ್ಧ

Tuesday, January 30th, 2018
kundapur

ಉಡುಪಿ: ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕುಂದಾಪುರ ವಿಧಾನಸಭಾ ಕ್ಷೇತ್ರ ಹೆಚ್ಚು ಕುತೂಹಲ ಮೂಡಿಸಿದೆ. ಜಿಲ್ಲೆಯಲ್ಲಿ ಸ್ವಲ್ಪವಾದರೂ ಕೃಷಿ ಜೀವಂತವಾಗಿರುವ ತಾಲೂಕು ಕುಂದಾಪುರ. ಇಲ್ಲಿನ ಸುಂದರ ಪ್ರಕೃತಿ ಮಡಿಲು, ಮರವಂತೆಯ ಕಡಲಿನ ಸೌಂದರ್ಯ ಎಲ್ಲವೂ ಚಿತ್ತಾಕರ್ಷಕ. ಪ್ರಕೃತಿಯ ಸೌಂದರ್ಯದ ನಡುವೆಯೂ ಇಲ್ಲಿ ಆಗಾಗ ನಕ್ಸಲರ ಗುಂಡಿನ ಸದ್ದು ಜಿಲ್ಲಾಡಳಿತವನ್ನು ಕಂಗೆಡಿಸುತ್ತಿದೆ. ಕುಂದಗನ್ನಡದ ಕಡಲತಡಿಯ ನಗರ ಕುಂದಾಪುರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆಯೇ ಇಲ್ಲಿಯವರೆಗೆ ಪೈಪೋಟಿ ನಡೆಯುತ್ತಾ ಬಂದಿದೆ. ಇಲ್ಲಿ ಜೆಡಿಎಸ್ ಆಟಕ್ಕೂಂಟು ಲೆಕ್ಕಕ್ಕಿಲ್ಲದ […]

ಜನಾರ್ದನ ಪೂಜಾರಿ ಆತ್ಮಕಥೆ ‘ಸಾಲಮೇಳದ ಸಂಗ್ರಾಮ’ ಬಿಡುಗಡೆ

Saturday, January 27th, 2018
salamela

ಮಂಗಳೂರು: ಹಿರಿಯ ಕಾಂಗ್ರೆಸಿಗ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಆತ್ಮಕಥೆ ‘ಸಾಲಮೇಳದ ಸಂಗ್ರಾಮ’ ಶುಕ್ರವಾರ ಲೋಕಾರ್ಪಣೆಗೊಂಡಿತು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು. ತಮ್ಮ ಸುದೀರ್ಘ 45 ವರ್ಷಗಳ ರಾಜಕೀಯ ಜೀವನವನ್ನು ತಮ್ಮ ಈ ಆತ್ಮಕಥೆಯಲ್ಲಿ ಪೂಜಾರಿ ದಾಖಲಿಸಿದ್ದಾರೆ. ಬಿಡುಗಡೆ ದಿನದ ಪ್ರಯುಕ್ತ 300 ರೂ. ಪುಸ್ತಕ 50 ರೂ.ಗೆ ವಿತರಣೆ ಮಾಡಲಾಯಿತು. ಪುಸ್ತಕ ಕೊಳ್ಳಲು ಜನಾರ್ದನ ಪೂಜಾರಿಯವರ ನೂರಾರು ಅಭಿಮಾನಿಗಳು ಮುಗಿಬಿದ್ದಿದ್ದು ಕಂಡು ಬಂತು. ಕಾರ್ಯಕ್ರಮದಲ್ಲಿ […]

ಶಾ ಧಮ್ಕಿಗೆ ಹೆದರೋಕೆ ನಾವು ಕೈಗೆ ಬಳೆ ತೊಟ್ಟಿಲ್ಲ: ತನ್ವೀರ್‌ ಸೇಠ್ ಗುಡುಗು

Friday, January 26th, 2018
amit-shah

ರಾಯಚೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯಕ್ಕೆ ಧಮ್ಕಿ ಹಾಕೋಕೆ ಬರುತ್ತಾರೆ. ಅವರ ಧಮ್ಕಿಗೆ ಯಾರು ಹೆದರುವವರಿಲ್ಲ. ಇಲ್ಲಿ ಯಾರು ಕೈಗೆ ಬಳೆ ಹಾಕಿಕೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ಸೇಠ್ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಭ್ರಷ್ಟಾಚಾರ ರಹಿತ ಆಡಳಿತವನ್ನು ಕಾಂಗ್ರೆಸ್ ನೀಡಿದೆ. ಬಿಜೆಪಿಯವರು ಕಾಂಗ್ರೆಸ್‌ ಸರ್ಕಾರದ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಯಚೂರು ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರವಾಗಿ ನನಗೆ ಇನ್ನೂ ಯಾವುದೇ […]

ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಹಮೀದ್‌ ಕಂದಕ್‌ ಚಿಕಿತ್ಸೆ ಫಲಿಸದೆ ಸಾವು

Thursday, January 25th, 2018
abdul-hameed

ಮಂಗಳೂರು: ರಾಜಕೀಯ, ಸಾಮಾಜಿಕ ಮುಖಂಡ ಹಮೀದ್ ಕಂದಕ್ (68) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೋಟೆಲ್‌ ವುಡ್‌ಲ್ಯಾಂಡ್‌ನಲ್ಲಿ ನಡೆದ ಅಹಿಂದ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಅವರನ್ನು ತಕ್ಷಣ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹಲವಾರು ವರ್ಷಗಳಿಂದ ಜೆಡಿಎಸ್‌ನಲ್ಲಿದ್ದ ಅವರು, ಮುಸ್ಲಿಂ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳಲ್ಲೂ ಪ್ರಮುಖ ಜವಾಬ್ದಾರಿಗಳನ್ನು ಹೊಂದಿದ್ದರು. ಹಲವು ವರ್ಷಗಳ ಕಾಲ ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಟ್ರಾವೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಹಾಜಿ ಹಮೀದ್ ಕಂದಕ್ ಪ್ರಸ್ತುತ ಕಾಂಗ್ರೆಸ್ […]

ಸಹ್ಯಾದ್ರಿ ಸಂಚಯದಿಂದ ಅಭ್ಯರ್ಥಿಗಳು ಕಣಕ್ಕೆ: ದಿನೇಶ್‌ ಹೊಳ್ಳ

Wednesday, January 24th, 2018
Nethravathi

ಮಂಗಳೂರು: ಕರಾವಳಿಗರ ಜೀವನದಿ ನೇತ್ರಾವತಿಯನ್ನು ಬರಿದುಗೊಳಿಸುವ ಎತ್ತಿನಹೊಳೆಯಂತಹ ಮಾರಕ ಯೋಜನೆಗಳನ್ನು ಭವಿಷ್ಯದಲ್ಲಿ ಜಾರಿಗೊಳಿಸುವ ಜನಪ್ರತಿನಿಧಿಗಳಿಗೆ ಪಾಠ ಕಲಿಸಬೇಕು. ಅದಕ್ಕಾಗಿ ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸಲು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಹ್ಯಾದ್ರಿ ಸಂಚಯ ಮುಂದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಚಯದ ಸಂಚಾಲಕ ದಿನೇಶ್ ಹೊಳ್ಳ, ಸೂಕ್ತ ಅಭ್ಯರ್ಥಿ ದೊರೆಯದಿದ್ದಲ್ಲಿ ನೋಟಾ ಅಭಿಯಾನದ ಮೂಲಕ ಪ್ರತಿರೋಧ ಒಡ್ಡಲಾಗುವುದು. ನಮ್ಮ ಅಭಿಯಾನದ ಫಲವಾಗಿ ಕಳೆದ ಸಂಸತ್ ಚುನಾವಣೆಯಲ್ಲಿ 7800 ನೋಟಾ ಮತಗಳು ಚಲಾವಣೆಯಾಗಿದ್ದವು. ಕಳೆದ ಪಂಚಾಯತ್ ಚುನಾವಣೆಯಲ್ಲಿ 28 […]

ಜ. 26: “ಸಾಲ ಮೇಳದ ಸಂಗ್ರಾಮ” ಅನಾವರಣ

Tuesday, January 23rd, 2018
autobiography

ಮಂಗಳೂರು: ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗುವ ಸಾಧ್ಯತೆಯುಳ್ಳ, ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಆತ್ಮಕಥೆ “ಸಾಲ ಮೇಳದ ಸಂಗ್ರಾಮ’ ಜ. 26ರಂದು ಸಂಜೆ 5.30ಕ್ಕೆ ಕುದ್ರೋಳಿ ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಬಿಡುಗಡೆಗೊಳ್ಳಲಿದೆ. ಸೋಮವಾರ ಕುದ್ರೋಳಿ ಕ್ಷೇತ್ರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಬಿ. ಜನಾರ್ದನ ಪೂಜಾರಿ ಅವರು, ಪುಸ್ತಕ ಬಿಡುಗಡೆ ಮಾಡು ವಂತೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೋರಿ ಕೊಂಡಿದ್ದೆವು. ಆದರೆ […]

ಬಿಲ್ಲವರ ಬಗ್ಗೆ ಮಾತನಾಡುವ ನೈತಿಕತೆ ವಿನಯರಾಜ್‌ಗೆ ಇಲ್ಲ: ಹರಿಕೃಷ್ಣ ತಿರುಗೇಟು

Saturday, January 20th, 2018
harikrishna

ಮಂಗಳೂರು: ಬಿಲ್ಲವ ಸಮುದಾಯದ ಬಗ್ಗೆ ಮಾತನಾಡಲು ಬಿಲ್ಲವ ಸಂಘ ಇದೆ. ಹಾಗಿರುವಾಗ ಬಿಲ್ಲವರ ಬಗ್ಗೆ ಮಾತನಾಡಲು ನೀವು ಯಾರು, ನಿಮಗೆ ಯಾವ ನೈತಿಕತೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಸಿ. ವಿನಯರಾಜ್ ಅವರಿಗೆ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಷ್ಟು ಮಂದಿ ಬಿಲ್ಲವರಿಗೆ ಪದಾಧಿಕಾರಿಯಾಗಲು ಅವಕಾಶ ನೀಡಿದೆ ಎಂಬ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ. ರಾಜ್ಯ ಬಿಜೆಪಿಯಲ್ಲಿ 12 ಮಂದಿ ಬಿಲ್ಲವ ಪದಾಧಿಕಾರಿಗಳಿದ್ದರೆ, ಕಾಂಗ್ರೆಸ್ ಕೇವಲ […]

ಸಾಧನೆ ಜನರಿಗೆ ತಿಳಿಸಿ ಕಾಂಗ್ರೆಸ್‌ ಗೆಲ್ಲಿಸಿ: ಶಾಸಕಿ ಶಕುಂತಳಾ ಶೆಟ್ಟಿ

Friday, January 19th, 2018
shankuntala-shetty

ಪುತ್ತೂರು: ವಿಧಾನಸಭಾ ಕ್ಷೇತ್ರವೊಂದರ ಅಭಿವೃದ್ಧಿಗೆ 800 ಕೋಟಿ ರೂ. ಅನುದಾನ ತರಿಸುವ ಸಾಧನೆ ಮಾಡಿದ್ದು, ಪಕ್ಷದ ನರ-ನಾಡಿಗಳನ್ನು ಅರಿತಿರುವ ಕಾರ್ಯಕರ್ತರು ಮುಂದಿನ ಬಾರಿಯೂ ಕಾಂಗ್ರೆಸ್‌ ಗೆಲುವಿಗೆ ತಮ್ಮ ಶ್ರಮವನ್ನು ತೋರ್ಪಡಿಸಬೇಕು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ವಿನಂತಿಸಿದರು. ಸುಭದ್ರಾ ಸಭಾಂಗಣದಲ್ಲಿ ಗುರುವಾರ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್‌ ವ್ಯಾಪ್ತಿಯ ಬೂತ್‌ ಪ್ರತಿನಿಧಿಗಳ ತರಬೇತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು. ರಾಜ್ಯ ಸರಕಾರದ ಸಾಧನಾ ಸಮಾವೇಶಕ್ಕೆ ಪುತ್ತೂರಿನಲ್ಲಿ ದಾಖಲೆಯ […]

ಕಾಂಗ್ರೆಸ್‌ ವಿರುದ್ಧ ಸೆಣಸಲು ಅಭ್ಯರ್ಥಿ ಹುಡುಕುತ್ತಿದೆ ಬಿಜೆಪಿ

Friday, January 19th, 2018
udupi

ಉಡುಪಿ: ಶ್ರೀ ಕೃಷ್ಣನ ನಾಡು ಉಡುಪಿಯಲ್ಲಿ ರಾಜಕೀಯ ಲೆಕ್ಕಾಚಾರ ಬಿರುಸುಗೊಂಡಿದೆ. ಉಡುಪಿಯಲ್ಲಿ ಪರ್ಯಾಯ ಮಹೋತ್ಸವದ ಸಂಭ್ರಮ ಒಂದೆಡೆಯಾದರೆ ಇನ್ನೊಂದೆಡೆ ರಾಜಕೀಯ ಪಕ್ಷಗಳು ಚುನಾವಣಾ ಅಖಾಡಕ್ಕಿಳಿಯಲು ಸಜ್ಜಾಗುತ್ತಿವೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ಯಾರು ಎಂಬ ಲೆಕ್ಕಾಚಾರ ಬಿರುಸಿನಿಂದ ಸಾಗಿದೆ. ಉಡುಪಿ ರಾಜಕೀಯಕ್ಕೆ ತನ್ನದೇ ಆದ ಇತಿಹಾಸವಿದೆ. ವಿ.ಎಸ್. ಆಚಾರ್ಯ, ಯು.ಆರ್. ಸಭಾಪತಿ , ಮನೋರಮಾ ಮಧ್ವರಾಜ್ ಯಂತಹ ಘಟಾನುಘಟಿ ರಾಜಕಾರಣಿಗಳು ಈ ಜಿಲ್ಲೆಯಿಂದ ಗೆದ್ದು ಇತಿಹಾಸ […]

ಕಾಂಗ್ರೆಸ್‌ v/s ಬಿಜೆಪಿ ನೇರ ಹಣಾಹಣಿ

Wednesday, January 17th, 2018
j-r-lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಕೆರೆಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇಲ್ಲಿ ನೇರಾನೇರ ಸ್ಪರ್ಧೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಜೆ.ಆರ್.ಲೋಬೋ. ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಕ್ಷೇತ್ರದ ಟಿಕೆಟ್‌ಗೆ ಪ್ರಯತ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು ಅವರಾದರೂ ಜೆ.ಆರ್.ಲೋಬೋಗೆ ಟಿಕೆಟ್ ನಿರಾಕರಿಸಲು ಕಾರಣಗಳು ಇಲ್ಲ. ಬಿಜೆಪಿ ಕ್ಷೇತ್ರದಿಂದ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂಬುದು ಸದ್ಯದ ಸುದ್ದಿ. ಉದ್ಯಮಿಗಳಾದ […]