Blog Archive

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ: ಜನಾರ್ದನ ಪೂಜಾರಿ

Thursday, December 29th, 2016
Janardana Poojary

ಮಂಗಳೂರು: ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತವೆಂದು ಕಾಂಗ್ರೆಸ್‌ನವರೇ ಆದ ಜನಾರ್ದನ ಪೂಜಾರಿ ಪಕ್ಷದ ವಿರುದ್ಧವೇ ಭವಿಷ್ಯ ನುಡಿದಿದ್ದಾರೆ. ನಂಜನಗೂಡು ಉಪಚುನಾವಣೆಗೆ ಕಾಂಗ್ರೆಸ್‌‌ನಿಂದ ಎಷ್ಟೇ ಒಳ್ಳೆಯ ಅಭ್ಯರ್ಥಿ ಹಾಕಿದರು ಪಕ್ಷ ಸೋಲುತ್ತದೆ. ಶ್ರೀನಿವಾಸ್ ಪ್ರಸಾದ್ ಪಕ್ಷದ ಮಾನ ಹರಾಜು ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಈಗಲಾದರು ಎಚ್ಚೆತ್ತುಕೊಳ್ಳಿ. ಜನರಿಂದ, ಕಾರ್ಯಕರ್ತರಿಂದ ನೀವು ಅಧಿಕಾರಕ್ಕೆ ಬಂದಿದ್ದೀರಾ. ಕಾಂಗ್ರೆಸ್‌ನಲ್ಲಿ ಗೊಂದಲ ಇರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಧೂಳಿಪಟವಾಗುವ ಎಲ್ಲ ಲಕ್ಷಣ ಗೋಚರಿಸುತ್ತಿದೆ ಎಂದು ಸ್ವಪಕ್ಷದ ವಿರುದ್ಧವೇ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ. ನನಗೆ […]

ನ್ಯಾಯಾಲಯದಲ್ಲಿ ಕೊಳೆಯುತ್ತಿರುವ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು: ಜನಾರ್ದನ ಪೂಜಾರಿ

Monday, December 26th, 2016
poojary

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆದ್ದು ಬಂದಾಗ ಐದು ವರ್ಷಗಳವರೆಗೆ ಆಸ್ತಿ ತೆರಿಗೆ ಹೆಚ್ಚಿಸುವುದಿಲ್ಲ ಎಂದು ಜನತೆಗೆ ವಾಗ್ದಾನ ಮಾಡಿತ್ತು. ಆದರೆ, ತನ್ನ ವಾಗ್ದಾನವನ್ನು ತಾನೇ ಮರೆತಿದೆ. ಪಾಲಿಕೆ ಸದಸ್ಯರ ಈ ತಪ್ಪಿನಿಂದಾಗಿ ಅಂದು ಪ್ರತಿಜ್ಞೆ ವಿಧಿ ಬೋಧಿಸಿದ ನಾನೇ ಜನರಲ್ಲಿ ಕ್ಷಮೆ ಕೋರುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ ಜನರಿಗೆ ಮಾಡುವ ಅತ್ಯಂತ ದೊಡ್ಡ ಮೋಸ. ಜನತೆಯ ವಿಶ್ವಾಸವನ್ನೇ ಧೂಳಿಪಟ ಮಾಡಲಾಗಿದೆ. ತಮ್ಮ […]

“ಆಕ್ರೋಶ್‌ ದಿವಸ್‌” ಕೇಂದ್ರದ ನಿರ್ಧಾರದ ವಿರುದ್ಧ ಪ್ರತಿಭಟನೆಯಷ್ಟೇ: ಕಾಂಗ್ರೆಸ್‌

Saturday, November 26th, 2016
congress

ಬೆಂಗಳೂರು: ಹಳೆ ನೋಟುಗಳ ನಿಷೇಧದ ವಿರುದ್ಧ ನ.28ರಂದು ಭಾರತ ಬಂದ್‌ ನಡೆಯಲಿದೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಇದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆಯಷ್ಟೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ. ಜೆಡಿಎಸ್‌ ಈ ಪ್ರತಿಭಟನೆಯಿಂದ ದೂರವಿರಲಿದ್ದು, ರಾಜ್ಯದಲ್ಲಿ ಎಡಪಕ್ಷಗಳ ಪ್ರಾಬಲ್ಯ ಇಲ್ಲದಿರುವುದರಿಂದ ಪ್ರತಿಭಟನೆಯು ಬಂದ್‌ನಂತಹ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿಲ್ಲ. ಇನ್ನು ಬಿಜೆಪಿ ಸಹಜವಾಗಿಯೇ ಈ ದಿನ ತಟಸ್ಥವಾಗಿರಲಿದೆ. ಕೇಂದ್ರ ಸರ್ಕಾರದ 500 ಮತ್ತು 1,000 ಮುಖಬೆಲೆ ನೋಟು ಚಲಾವಣೆ ಹಿಂಪಡೆದ ನಿರ್ಧಾರ ಖಂಡಿಸಿ ವಿಪಕ್ಷಗಳು […]

ಹಣ ಕೊಟ್ಟು ಪ್ರತಿಭಟನಾಕಾರರನ್ನು ಕರೆ ತಂದು ಮೋದಿ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಗೆ ಮಖಭಂಗ

Thursday, November 24th, 2016
Modi

ಬೆಳಗಾವಿ: 500, 1000 ರೂಪಾಯಿ ನೋಟು ನಿಷೇಧಿಸಿದ ಪ್ರಧಾನಿ ನರೇಂದ್ರ ಮೋದಿ ನಿರ್ಧಾರದ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಹಣ ಕೊಟ್ಟು ಪ್ರತಿಭಟನಾಕಾರರನ್ನು ಕರೆ ತಂದು ಮೋದಿ ವಿರುದ್ಧ ಪ್ರತಿಭಟನೆ ನಡೆಸಿ ಮಖಭಂಗಕ್ಕೀಡಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ಖಾಸಗಿ ಟಿವಿ ಚಾನೆಲ್ ವೊಂದರ ವರದಿ ತಿಳಿಸಿದೆ. ರೇಷನ್ ಕಾರ್ಡ್ ಕೊಡಿಸುವುದಾಗಿ ನಂಬಿಸಿ ಕಾಂಗ್ರೆಸ್ ಪಕ್ಷದವರು ಜನರನ್ನು ಕರೆತಂದಿದ್ದರು. ಆದರೆ ಸ್ಥಳಕ್ಕೆ ಬಂದಾಗ ನೋಟು ನಿಷೇಧಿಸಿದ್ದ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದಾಗ…ಜನರು ಗರಂ […]

ಕಾಂಗ್ರೆಸ್‌, ಮಹಿಳೆಯರಿಗೆ ಹೆಚ್ಚು ಗೌರವ ಹಾಗೂ ಮೀಸಲಾತಿ ಒದಗಿಸಿದೆ: ರಮಾನಾಥ ರೈ

Monday, November 7th, 2016
empower-women

ಮಂಗಳೂರು: ಮಹಿಳೆಯರ ಸಶಕ್ತೀಕರಣಕ್ಕೆ ಕಾಂಗ್ರೆಸ್‌ ಪಕ್ಷ ಮಾಡಿದಷ್ಟು ಕೆಲಸ ಇತರ ಯಾವುದೇ ಪಕ್ಷಗಳು ಮಾಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಪಟ್ಟರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಂಗಳೂರು ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದ ಶಾಂತಿ ನಿಲಯದಲ್ಲಿ ಆಯೋಜಿಸಲಾದ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ ಇತಿಹಾಸವುಳ್ಳ ಪಕ್ಷ. ಎಲ್ಲ ಜಾತಿ, ಧರ್ಮಗಳ ಜನರು ಈ ಪಕ್ಷದಲ್ಲಿದ್ದು, ಮಹಿಳೆಯರಿಗೆ ಹೆಚ್ಚು ಗೌರವ […]

ಕಾಂಗ್ರೆಸ್ ವಿರುದ್ಧ ಘೋಷಣೆ: ರಾಹುಲ್ ಗಾಂಧಿ ಪ್ರತಿಕೃತಿ ದಹನ

Saturday, October 8th, 2016
yuva-morcha

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಹೇಳಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ರಾಹುಲ್ ಗಾಂಧಿ ಪ್ರತಿಕೃತಿಯನ್ನು ದಹನ ಮಾಡಿದರು. ಜಗತ್ತಿನ ಎಲ್ಲಾ ದೇಶಗಳು ಇತ್ತೀಚೆಗೆ ನಡೆದಂತಹ ಸರ್ಜಿಕಲ್ ಸ್ಟ್ರೈಕ್ ಘಟನೆಯ ಬಗ್ಗೆ ಸಹಮತ ವ್ಯಕ್ತಪಡಿಸಿ ಅಮೆರಿಕಾ, ರಷ್ಯಾ, ಚೀನಾದಂತಹ ದೇಶಗಳೇ ಪ್ರಧಾನಿಯವರ ಬಗ್ಗೆ ಶ್ಲಾಘನೆ ಮಾಡಿದರೆ ರಾಹುಲ್ […]

ಶೀಘ್ರವೇ ಹೊರಬರಲಿದೆ ಜನಾರ್ದನ ಪೂಜಾರಿ ಆತ್ಮಕತೆ

Saturday, September 17th, 2016
janardana-poojary

ಮಂಗಳೂರು: ಪಕ್ಷದೊಳಗೆ ಇದ್ದುಕೊಂಡೇ ಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವ ಜನಾರ್ದನ ಪೂಜಾರಿಯವರ ವೈಖರಿ ಕೆಲವರಲ್ಲಿ ಇರಿಸು ಮುರಿಸು ಉಂಟುಮಾಡಿದರೆ, ಇನ್ನು ಕೆಲವರಲ್ಲಿ ಕುಟುಂಬದಲ್ಲಿ ಹಿರಿಯಣ್ಣನಿಗೆ ನೀಡಿದ ಗೌರವ, ನೇರ ನಡೆ, ಪಾರದರ್ಶಕ ನಿಲುವಿಗೆ ಹೆಸರಾದ ಪೂಜಾರಿ ಪಕ್ಷದ ಶಿಸ್ತಿನ ಸಿಪಾಯಿ. ಆದರೆ ಎಲ್ಲವನ್ನೂ ತನಗೆ ಹೇಳಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ಇದೆ ಎಂಬ ಅವರ ಮನದಾಳದ ಭಾವವನ್ನು ಅಕ್ಷರ ರೂಪಕ್ಕಿಳಿಸು ಜನಾರ್ದನ ಪೂಜಾರಿ ಸಿದ್ದರಾಗುತ್ತಿದ್ದಾರೆ. ಹೌದು, ಕೆಲವೇ ದಿನಗಳಲ್ಲಿ ಪೂಜಾರಿಯವರ ಆತ್ಮಚರಿತ್ರೆ ಹೊರಬರಲಿದೆ. ಎಲ್ಲವನ್ನೂ ಕಡ್ಡಿಮುರಿದಂತೆ ಹೇಳುವ ಪೂಜಾರಿಯವರಿಗೆ […]

ಸರ್ಕಿಟ್‌ ಹೌಸ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Monday, August 22nd, 2016
Amit-against-protest

ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಂದು ನಗರಕ್ಕೆ ಆಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಂಗಿದ್ದ ಸರ್ಕಿಟ್‌ ಹೌಸ್ ಮುಂದೆ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗೋ ಮಾತೆಯ ಹೆಸರಿನಲ್ಲಿ ನಕಲಿ ಗೋರಕ್ಷಕರು ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಶಾಂತಿ, ನೆಮ್ಮದಿಯಿಂದ ಇದ್ದ ಅವಿಭಜಿತ ದಕ್ಷಿಣ ಕನ್ನಡ […]

ಬದಿಯಡ್ಕ ಸಬ್ ರಿಜಿಸ್ಟ್ರಾರ್ ಕಛೇರಿಯ ಮುಂಭಾಗ ಕಾಂಗ್ರೆಸ್ ವತಿಯಿಂದ ಸ್ಟಾಂಪ್ ಪೇಪರ್ ಬೆಲೆಯೇರಿಕೆ ವಿರುದ್ಧ ಧರಣಿ

Friday, August 12th, 2016
Stamp-paper

ಬದಿಯಡ್ಕ : ಕಾರಡ್ಕ ಬ್ಲಾಕ್ ಕಾಂಗ್ರೆಸ್ ಕಮಿಟಿಯ ಆಶ್ರಯದಲ್ಲಿ ಪಾಲ್ಪಟ್ಟಿ ದೃಢಪತ್ರದ ಬೆಲೆಯೇರಿಕೆ ವಿರುದ್ಧ ಬದಿಯಡ್ಕ ಉಪನೋಂದಾವಣಾ ಕಚೇರಿಗೆ ನಡೆಸಿದ ಧರಣಿ ಸತ್ಯಾಗ್ರಹವನ್ನು ಕೇರಳ ಪ್ರದೇಶ್ ಕಾಂಗ್ರೆಸ್ಸ್ ಕಾರ್ಯದರ್ಶಿ ನೀಲಕಂಠನ್ ಉದ್ಘಾಟಿಸಿ, ಮಾತನಾಡಿ ಅಧಿಕಾರಕ್ಕೆ ಬಂದು 2 ತಿಂಗಳಲ್ಲೇ ಜನತೆಯನ್ನು ವಂಚಿಸಲು ಈ ಸರಕಾರ ಹೊರಟಿದೆ. ಸ್ಟಾಂಪ್ ಪೇಪರ್‌ನ ಬೆಲೆ ಹೆಚ್ಚಳವು ಜನಸಾಮಾನ್ಯರಿಗೆ ದೊಡ್ಡ ಹೊಡೆತವಾಗಿದೆ ಎಂದರು. ಈ ತೀರ್ಮಾನವನ್ನು ಕೂಡಲೇ ಹಿಂತೆಗೆದು ಸಾರ್ವಜನಿಕರಿಗಾಗುವ ತೊಂದರೆಯನ್ನು ನಿವಾರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು. ಕಾರಡ್ಕ ಬ್ಲಾಕ್ ಅಧ್ಯಕ್ಷ ವಾರಿಜಾಕ್ಷನ್ ಅಧ್ಯಕ್ಷತೆ […]

ಕಾರ್ಮಿಕರ ಸಮಸ್ಯೆ ಆಲಿಸದ ಸರಕಾರ ಎಂಥದ್ದು ಎಂದು ಪ್ರಶ್ನಿಸಿದ ಜನಾರ್ದನ ಪೂಜಾರಿ

Wednesday, July 27th, 2016
Janardhana-poojary

ಮಂಗಳೂರು: ಸಿದ್ದರಾಮಯ್ಯ ಆಡಳಿತದಲ್ಲಿ ಕಾಂಗ್ರೆಸ್ ಅವನತಿಯಂಚಿನಲ್ಲಿದೆ. ಅವರ ಉಡಾಫೆ ಮಾತಿನಿಂದ ಕಾಂಗ್ರೆಸ್ ಶಕ್ತಿ ಕಳೆದುಕೊಂಡು ಬಲಹೀನವಾಗುತ್ತಿದೆ. ಕಾಂಗ್ರೆಸ್‍ಗೆ ಕೆಟ್ಟ ಹೆಸರು ತರುತ್ತಿದ್ದಾರೆ. ಜನ ಬೀದಿಯಲ್ಲಿ ನಿಂತು ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ಸಿಗ ಬಿ.ಜನಾರ್ದನ ಪೂಜಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಮೂರು ವರ್ಷಗಳಿಂದ ಯಾವುದೇ ಅಭ್ಯುದಯಕಾರಿ ಕಾರ್ಯಕ್ರಮ ನೀಡಿಲ್ಲ. ಪೊಲೀಸ್ ಅಧಿಕಾರಿಗಳು ತಮ್ಮ ಮೇಲಾಧಿಕಾರಿಗಳಿಂದ ಬೇಸತ್ತು ಆತ್ಮಹತ್ಯೆ ಹಾಗೂ ಆತ್ಮಹತ್ಯೆ ಯತ್ನ ನಡೆಸುತ್ತಿದ್ದರೆ […]