Blog Archive

ಕಾಂಗ್ರೆಸ್​ಗೆ ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

Tuesday, March 10th, 2020
jyothiradhithya

ನವದೆಹಲಿ : ಕಳೆದೆರಡು ದಿನಗಳಿಂದ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಗೆ ತಲೆನೋವಾಗಿದ್ದು, ಕಮಲ್ನಾಥ್ ನೇತೃತ್ವದ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳುವ ಸಾಧ್ಯತೆಯಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿದ್ದ ಮತ್ತೊಬ್ಬ ನಾಯಕ ಕಾಂಗ್ರೆಸ್ ತೊರೆದಿದ್ದಾರೆ. ಜತೆಗೆ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಮಿತ್ ಶಾ […]

ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಬರುತ್ತಾರೆ, ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ : ಡಿಸಿಎಂ ಅಶ್ವಥ್ ನಾರಾಯಣ್

Monday, February 24th, 2020
DCM

ಕಲಬುರಗಿ : ಬಿಜೆಪಿಯ 32 ಶಾಸಕರು ಶೀಘ್ರ ರಾಜೀನಾಮೆ ಎನ್ನುವ ಸಿಎಂ ಇಬ್ರಾಹಿಂ ಹೇಳಿಕೆಗೆ  ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ 32 ಶಾಸಕರು ಬಿಜೆಪಿಗೆ ಬರ್ತಾರೆ ಅಂತ ಸಿಎಂ ಇಬ್ರಾಹಿಂ ಹೇಳಿರಬೇಕು. ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ. ಮೂರು ವರ್ಷ ಮೂರು ತಿಂಗಳು ಕಾಲ ಆಡಳಿತ ಪೂರ್ಣಗೊಳಿಸುತ್ತೇವೆ ಎಂದರು. ರಾಜ್ಯದಲ್ಲಿ ಮತ್ತೆ 2023ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸರಕಾರ ಅವಧಿ […]

ಮೀಸಲಾತಿ ಗೊಂದಲ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Monday, February 17th, 2020
cog.pratibhatane

ಮಡಿಕೇರಿ : ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಇದ್ದ ಮೀಸಲಾತಿಯ ಹಕ್ಕನ್ನು ದುರ್ಬಲಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀಸಲಾತಿ ಪ್ರತಿಪಾದನೆ ಕುರಿತು ಸರ್ಕಾರ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ […]

ಸಂಸದ ಅನಂತಕುಮಾರ್ ಹೆಗ್ಡೆ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Saturday, February 8th, 2020
congress-protest

ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಆಶ್ರಮಗಳಿಗೆ ನೀಡಲಾಗುತ್ತಿದ್ದ ದಾಸೋಹದ ಧಾನ್ಯಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ರಚಿಸಿ, ಅನಂತಕುಮಾರ್ ಹೆಗ್ಡೆ, ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ […]

ಶೇ99 ರಷ್ಟು ಮಂದಿ ಕಾಯ್ದೆಯ ಪರವಾಗಿದ್ದಾರೆ : ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್

Saturday, January 18th, 2020
ravi-kumar

ಮಡಿಕೇರಿ : ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ ಶೇ.1 ರಷ್ಟಿರುವ ಸುಶಿಕ್ಷಿತ ಅನಾಗರೀಕರು ಪೌರತ್ವ ಕಾಯ್ದೆಯನ್ನು ವಿರೋಧಿಸುತ್ತಿದ್ದು, ಶೇ.99 ರಷ್ಟು ಮಂದಿ ಕಾಯ್ದೆಯ ಪರವಾಗಿದ್ದಾರೆ ಎಂದರು. ಭಾರತದ ಪಕ್ಕದ ರಾಷ್ಟ್ರಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಆರು ಧರ್ಮದವರಿಗೆ ದೇಶದಲ್ಲಿರಲು ಅವಕಾಶ ಕಲ್ಪಿಸುವುದಕ್ಕಾಗಿ ಪೌರತ್ವವನ್ನು ನೀಡುವ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಪಘಾನಿಸ್ತಾನದಲ್ಲಿರುವ ಮುಸಲ್ಮಾನರ ಮೇಲೆ ಧಾರ್ಮಿಕ ಶೋಷಣೆ ನಡೆಯುತ್ತಿದೆಯೇ ಎಂದು ಅವರು ಪ್ರಶ್ನಿಸಿದರು. […]

ಬಳ್ಳಾರಿ : ಶಾಸಕ ಜಿ.ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಜಿಲ್ಲಾ ಮುಖಂಡರ ಒತ್ತಾಯ

Monday, January 6th, 2020
ballari

ಬಳ್ಳಾರಿ : ಪ್ರಚೋದನಕಾರಿ ಭಾಷಣ ಮಾಡಿದ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಮುಖಂಡರು ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಎಸ್ಪಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾಗೆ ಸೋಮವಾರ ಮನವಿ ಸಲ್ಲಿಸಿದರು. ಬಳ್ಳಾರಿಯಲ್ಲಿ ಹಿಂದು ಮುಸ್ಲಿಮರು ಸಹೋದರರಂತೆ ಇದ್ದು, ರೆಡ್ಡಿ ಪ್ರಚೋದನಕಾರಿ ಹೇಳಿಕೆ ನೀಡಿ ಕಿಡಿ ಹೊತ್ತಿಸಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಕೂಡಲೇ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಪ ಸದಸ್ಯ ಕೆ.ಸಿ. […]

ನಾಳೆ ಪಂಪ್‌ವೆಲ್ ಮೇಲ್ಸೇತುವೆ ಅಣಕು ಉದ್ಘಾಟನೆ : ಕಾಂಗ್ರೆಸ್

Tuesday, December 31st, 2019
pumpwell

ಮಂಗಳೂರು : ಹತ್ತು ವರ್ಷಗಳ ಹಿಂದೆ ಆರಂಭಗೊಂಡ ಪಂಪ್‌ವೆಲ್ ಮೇಲ್ಸೇತುವೆ (ಫ್ಲೈಓವರ್) ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಇರುವ ಹಿನ್ನೆಲೆಯಲ್ಲಿ ಜನವರಿ 1ರಂದು ಸಂಜೆ ಇದರ ಅಣಕು ಉದ್ಘಾಟನೆ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ. ಫ್ಲೈಓವರ್ ಕಾಮಗಾರಿ ಪ್ರಗತಿಯ ಬಗ್ಗೆ ಪರಿಶೀಲಿಸಲು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ ದ.ಕ. ಜಿಲ್ಲಾ ಕಾಂಗ್ರೆಸ್‌ನ ಸತ್ಯಶೋಧನಾ ಸಮಿತಿಯಲ್ಲಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಜನವರಿ ಪ್ರಥಮ ವಾರದಲ್ಲಿ ಫ್ಲೈಓವರ್ ಲೋಕಾರ್ಪಣೆಯಾಗುತ್ತದೆ ಎಂದು […]

ಕಾಂಗ್ರೆಸ್ ಅಮಾಯಕ ಮುಸ್ಲಿಂ ರಿಗೆ ಚಿತಾವಣೆ ಕೊಟ್ಟು ಗಲಭೆ ಮಾಡುತ್ತಿದೆ : ಪ್ರತಾಪ್ ಸಿಂಹ

Saturday, December 21st, 2019
pratapa-simha

ಮೈಸೂರು : ಕೇಂದ್ರ ಸರ್ಕಾರ ಪಾಕ್, ಅಪ್ಘಾನ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದ ಅಲ್ಪ ಸಂಖ್ಯಾತರಿಗೆ ಇಲ್ಲಿನ ನಾಗರಿಕತ್ವ ನೀಡುವ ಸಲುವಾಗಿ ಸಿಎಎ ಜಾರಿಗೆ ತಂದಿದೆಯೇ ಹೊರತು ಇಲ್ಲಿರುವ ಮುಸ್ಲಿಂ ಬಂಧುಗಳನ್ನು ನೀವು ಭಾರತೀಯರೇ ಹೌದಾ ಅಲ್ಲವಾ ಎಂದು ಸಾಬೀತು ಪಡಿಸಲು, ಅಥವಾ ಇಲ್ಲಿಂದ ಹೊರದಬ್ಬಲು ಅಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟ ಪಡಿಸಿದ್ದಾರೆ. ಜಲದರ್ಶನಿ ಅತಿಥಿ ಗೃಹದ ಎದುರು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ತುಳಿತಕ್ಕೊಳಗಾದವರಿಗೆ ನಾವು ಆಶ್ರಯ ನೀಡುತ್ತಿದ್ದೇವೆ. ಕಾಂಗ್ರೆಸ್ ನವರು ಅದನ್ನು […]

ಕಾಂಗ್ರೆಸ್ ವಿರುದ್ಧ ಸಚಿವ ಸಿ.ಟಿ.ರವಿ ಗಂಭೀರ ಆರೋಪ

Monday, December 16th, 2019
CT-Ravi

ತುಮಕೂರು : “ಕಾಂಗ್ರೆಸ್ನವರು ತಾಲಿಬಾನಿಗಳಿಗೆ ಸಹಕಾರ ನೀಡುತ್ತಿದ್ದಾರೆ. ಪೌರತ್ವ ಕಾಯ್ದೆ ವಿಚಾರವಾಗಿ ಒಂದು ಪಿತೂರಿ ನಡೆಯುತ್ತಿದೆ. ಆ ಪಿತೂರಿಯಲ್ಲಿ ತಾಲಿಬಾನಿಗಳು, ಕಾಂಗ್ರೆಸ್ಸಿಗರು, ಕಮ್ಯೂನಿಸ್ಟರು ಒಟ್ಟಾಗಿ ಪಿತೂರಿ ಭಾಗ ಆಗಿರೋದು ದುರದೃಷ್ಟಕರ,” ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಾಕಿಸ್ತಾನದಿಂದ ಆಫ್ಘಾನಿಸ್ತಾನದಿಂದ ಧಾರ್ಮಿಕ ಕಾರಣಕ್ಕೆ, ಭಯೋತ್ಪಾದಕ ಕಾರಣಕ್ಕೆ ಬಂದವರು ನಿರಾಶ್ರಿತರು. ಅವರಿಗಿದ್ದಿದ್ದು ಮೂರೇ ದಾರಿ ಸಾವು, ಮತಾಂತರ, ಪೂರ್ವಜನರನ್ನ ತೊರೆಯುವುದು. ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಿಂದ ಮತೀಯ ಕಾರಣಕ್ಕೆ ಬಂದವರು ನಿರಾಶ್ರಿತರು. […]

ನಾನು ಮೊದಲೇ ಈ ಫಲಿತಾಂಶ ಹೇಳಿದ್ದೆ, ಅವರು ಗಮನ ಕೊಡಲಿಲ್ಲ : ಜರ್ನಾದನ ಪೂಜಾರಿ

Monday, December 9th, 2019
poojary

ಮಂಗಳೂರು : ಜನರ ಅಭಿಪ್ರಾಯಗಳಿಗೆ ಬೆಲೆ ನೀಡಬೇಕು, ಕಾಂಗ್ರೆಸ್ ನ ಕೆಲವು ನಾಯಕರು ದುರಹಂಕಾರ ಬಿಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಜರ್ನಾದನ ಪೂಜಾರಿ ಹೇಳಿದ್ದಾರೆ. ರಾಜ್ಯದ ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ  ಅವರು, ನಾನು ಮೊದಲೇ ಹೇಳಿದ್ದೆ ಕಾಂಗ್ರೆಸ್ ನ ಕೆಲವರ ದುರಹಂಕಾರದಿಂದ ರಾಜ್ಯದ ಉಪ ಚುನಾವಣೆಯಲ್ಲಿ ಸೋಲಾಗುತ್ತದೆ ಎಂದು. ನನ್ನ ಭವಿಷ್ಯ ನಿಜವಾಗಿದೆ ಎಂದು ಅವರು ಹೇಳಿದರು. ಮತ್ತೆ ಗೆಲುವು ಸಾಧಿಸಬೇಕಾದರೆ ದುರಹಂಕಾರವನ್ನು ಕೆಲವು ನಾಯಕರು ಬಿಡಬೇಕು ಎಂದು ಸಲಹೆ ನೀಡಿದರು . ಪಕ್ಷವನ್ನು ಸರಿಪಡಿಸಿ ತಪ್ಪುಗಳನ್ನು ತಿದ್ದಿಕೊಂಡು […]