Blog Archive

ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ: ರಾಹುಲ್​ ಗಾಂಧಿ

Saturday, December 15th, 2018
rahul-gandhi

ನವದೆಹಲಿ: ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೃಢಪಡಿಸಿದ್ದಾರೆ. ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದಕ್ಕೆ ಬದ್ಧರಿರುವುದಾಗಿ ಹೇಳಿದ ಅವರು, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಮತಯಾಚನೆ ಮಾಡಿತ್ತು. ಚುನಾವಣೆ […]

ಕಮಲ್​ನಾಥ್​ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆ: ಅಧಿಕೃತ ಪ್ರಕಟಣೆ ಅಷ್ಟೇ ಬಾಕಿ..!

Thursday, December 13th, 2018
kamalnath

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಗೆಲುವು ದಾಖಲಿಸಿರುವ ಕಾಂಗ್ರೆಸ್ ಈಗ ಮುಖ್ಯಮಂತ್ರಿಗಳ ಅಂತಿಮ ಆಯ್ಕೆ ಪ್ರಕಟಿಸಲಿದೆ. ಮಧ್ಯಪ್ರದೇಶದಲ್ಲಿ ಈಗಾಗಲೇ ಕಮಲ್ನಾಥ್ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸಿವೆ. ಮೂಲಗಳ ಪ್ರಕಾರ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ನಾಥ್ ಅವರನ್ನು ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ಗುರುವಾರ ಅಧಿಕೃತ ಪ್ರಕಟಣೆ ಹೊರಬರಬೇಕಿದೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ವಿವೇಕ್ ಟಂಖಾ ಅವರು ಈಗಾಗಲೇ ಗವರ್ನರ್ ಆನಂದಿ ಬೇನ್ ಪಟೇಲ್ ಅವರನ್ನು […]

ಕಾಂಗ್ರೆಸ್‌ನ ವಿಜಯವು ದ್ವೇಷ ರಾಜಕಾರಣದ ವಿರುದ್ದ ಸಾಧಿಸಲಾಗಿರುವ ಗೆಲುವಾಗಿದೆ: ರಾಹುಲ್‌ ಗಾಂಧಿ

Wednesday, December 12th, 2018
rahul-gandhi

ಹೊಸದಿಲ್ಲಿ: ಪಂಚರಾಜ್ಯ ಚುನಾವಣಾ ಫ‌ಲಿತಾಂಶದಿಂದ ಜನರಿಗೆ ಪ್ರಧಾನಿ ಮೋದಿ ಅವರಲ್ಲಾಗಲೀ ಬಿಜೆಪಿಯಲ್ಲಾಗಲೀ ಈಗ ವಿಶ್ವಾಸ ಉಳಿದಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ವಿಜಯ ಸಾಧಿಸಿದ್ದು ಈ ಮೂರೂ ಹಿಂದಿ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಕಾಂಗ್ರೆಸ್‌ ಗೆ ಮೂರು ಪ್ರಮುಖ ರಾಜ್ಯಗಳಲ್ಲಿ ದೊರಕಿರುವ ಯಶಸ್ಸು 2019ರ ಲೋಕಸಭೆ ಚುನಾವಣೆಗೆ ಹೊಸ ಹುಮ್ಮಸ್ಸು, ಧೈರ್ಯವನ್ನು ತುಂಬಿದೆ. ವಿರೋಧ ಪಕ್ಷಗಳೆಲ್ಲ ಒಗ್ಗಟ್ಟಿನಿಂದ ಕೈಜೋಡಿಸಿದರೆ ಬಿಜೆಪಿಯನ್ನು ಹಣಿಯಲು […]

ವಿಧಾನಪರಿಷತ್ ಸಭಾಪತಿಯಾಗಿ ಕಾಂಗ್ರೆಸ್ ನ ಪ್ರತಾಪ್‍ಚಂದ್ರ ಶೆಟ್ಟಿ

Wednesday, December 12th, 2018
prathap-chandra

ಉಡುಪಿ: ವಿಧಾನಪರಿಷತ್ ಹಿರಿಯ ಸದಸ್ಯರಾದ ಕಾಂಗ್ರೆಸ್ ನ ಪ್ರತಾಪ್‍ಚಂದ್ರ ಶೆಟ್ಟಿ ಮೇಲ್ಮನೆ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 12ಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಸಚಿವ ಜಮೀರ್ ಅಹಮ್ಮದ್ ಖಾನ್, ಮೇಲ್ಮನೆ ಸದಸ್ಯರಾದ ರವಿ, ಐವಾನ್ ಡಿಸೋಜಾ ಇನ್ನಿತರರೊಡನೆ ಆಗಮಿಸಿದ .ಪ್ರತಾಪ್‍ಚಂದ್ರ ಶೆಟ್ಟಿ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಪ್ರತಾಪ್‍ಚಂದ್ರ ಶೆಟ್ಟಿ ಹೊರತಾಗಿ ಇನ್ನಾರೂ ಸಭಾಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಅವರು ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಅಧಿಕಾರಾವಧಿ 2022ರವರೆಗೆ […]

ಪಂಚರಾಜ್ಯಗಳ ಚುನಾವಣೆ: ದೇಶದಲ್ಲಿ ಅಲೆ ಎಬ್ಬಿಸಿದ್ದ ಬಿಜೆಪಿಗೆ ಕಾಂಗ್ರೆಸ್​ ಚಾಟಿ ಏಟು..!

Tuesday, December 11th, 2018
congress

ನವದೆಹಲಿ: ಜನರ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಈಗಾಗಲೇ ಮಹತ್ವದ ಘಟ್ಟ ತಲುಪಿದೆ. ದೇಶದಲ್ಲಿ ಅಲೆ ಎಬ್ಬಿಸಿದ್ದ ಬಿಜೆಪಿಗೆ ಕಾಂಗ್ರೆಸ್ ಚಾಟಿ ಏಟು ನೀಡುತ್ತಿದೆ. ಚುನಾವಣೆಯಲ್ಲಿ ಬಲ ಸಾಧಿಸುತ್ತಿರುವ ಕೈ ಪಾಳಯಕ್ಕೆ ಇಂದು ಮತ್ತೊಂದು ಖುಷಿ ಇದೆ. ರಾಹುಲ್ ಗಾಂಧಿ ಎಐಸಿಸಿಯ ಅಧ್ಯಕ್ಷ ಪಟ್ಟಕ್ಕೇರಿ ಇಂದಿಗೆ ಒಂದು ವರ್ಷ ಸಂದಿದೆ. ಅಧ್ಯಕ್ಷರಾದಾಗಿನಿಂದ ಸದಾ ಟೀಕೆಗೆ ಒಳಗಾಗುತ್ತಿದ್ದ ರಾಹುಲ್ ಈ ಬಾರಿ ಡಬಲ್ ಖುಷಿ ಅನುಭವಿಸುತ್ತಿದ್ದಾರೆ. ವರ್ಷ ಪೂರ್ಣಗೊಂಡ ಬೆನ್ನಲ್ಲೆ ಚುನಾವಣೆ ಫಲಿತಾಂಶದಲ್ಲಿ ಮುನ್ನಡೆಯೂ ಅವರಿಗೆ ಅಪಾರ […]

ನನ್ನನ್ನು ಕೊಲ್ಲುವುದರಿಂದ ತೃಪ್ತಿ ಸಿಗುವುದಾದರೆ ಕೊಲ್ಲಲಿ: ಜನಾರ್ದನ ಪೂಜಾರಿ

Monday, December 10th, 2018
janardhan-poojary

ಮಂಗಳೂರು: ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದು, ಈ ಹೇಳಿಕೆ ವಿರೋಧಿಸಿ ನನ್ನನ್ನು ಎನ್ಕೌಂಟರ್ ಮಾಡಿ ಸಾಯಿಸಬೇಕು ಎಂದು ವ್ಯಕ್ತಿ ಒಬ್ಬ ಹೇಳಿದ್ದಾನೆ. ಆತನಿಗೆ ಅದರಿಂದ ತೃಪ್ತಿ ಸಿಗುವುದಾದರೆ ನನ್ನನ್ನು ಕೊಲ್ಲಲ್ಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ವೃದ್ಧಾಶ್ರಮದಲ್ಲಿ ಸೋನಿಯಾ ಗಾಂಧಿ ಜನ್ಮ ದಿನಾಚರಣೆಯ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ರಾಮನನ್ನು ನಂಬಿ ಎಂದು ಹಿಂದುಗಳಿಗೆ, ಮೊಹಮ್ಮದ್ […]

ಜನಾರ್ದನ ಪೂಜಾರಿ ಗಡಿಪಾರು ಮಾಡಿ ಎಂದವನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್​ ನಾಯಕರ ಮನವಿ

Friday, December 7th, 2018
j-r-lobo

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಗಡಿಪಾರು ಮಾಡಬೇಕೆಂದು ಆಡಿಯೋ ಸಂದೇಶ ಕಳುಹಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಮಾಜಿ ಶಾಸಕರುಗಳ ನೇತೃತ್ವದಲ್ಲಿ ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಲಾಯಿತು. ಪೂಜಾರಿ ಅವರು ರಾಮಮಂದಿರ ನಿರ್ಮಾಣ ಕುರಿತಂತೆ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವ್ಯಕ್ತಿವೋರ್ವ ಅವರನ್ನು ಎನ್ಕೌಂಟರ್ ಮಾಡಬೇಕು, ಗಡಿಪಾರು ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಸಂದೇಶ ಕಳುಹಿಸಿದ್ದ. ಮಾಜಿ ಶಾಸಕರಾದ ಜೆ ಆರ್ ಲೋಬೋ, ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ನ ನಾಯಕರು […]

ಚುನಾವಣೆ ಬಂದಾಗ ಮಾತ್ರ ರಾಹುಲ್​ರಿಂದ ರಾಮ ನಾಮ ಜಪ: ಸ್ಮೃತಿ ಇರಾನಿ

Wednesday, December 5th, 2018
smriti-irani

ಹೈದರಾಬಾದ್: ಚುನಾವಣೆಗಾಗಿ ಮಾತ್ರ ರಾಹುಲ್ ಗಾಂಧಿ ರಾಮ ನಾಮ ಜಪಿಸುತ್ತಾರೆ, ಅಲ್ಲದೆ ಶಿವ ಭಕ್ತರೂ ಆಗ್ತಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದರು. ರಾಮಗುಂಡಂನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇನ್ನೆಷ್ಟು ದಿನಗಳ ಕಾಲ ನೀವು (ಕಾಂಗ್ರೆಸ್) ಧರ್ಮದ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತೀರಿ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿ ರಾಮ ಇರಲೇ ಇಲ್ಲ ಎಂದು ವಾದಿಸಿದ್ದರು. ಈಗ ಚುನಾವಣೆಗಾಗಿ ಅವರು ರಾಮ ನಾಮ ಮಾತ್ರ ಜಪಿಸುತ್ತಿಲ್ಲ, ಜತೆಗೆ […]

ಟಿಆರ್​ಎಸ್​ ಹಾಗೂ ಕಾಂಗ್ರೆಸ್​ ಫ್ರೆಂಡ್ಲಿ ಮ್ಯಾಚ್​ ಆಡುತ್ತಿವೆ: ನರೇಂದ್ರ ಮೋದಿ

Tuesday, November 27th, 2018
narendra-modi

ನಿಜಾಮಾಬಾದ್: ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಹಾಗೂ ಕಾಂಗ್ರೆಸ್ ಫ್ರೆಂಡ್ಲಿ ಮ್ಯಾಚ್ ಆಡುತ್ತಿವೆ. ಎರಡೂ ಪಕ್ಷಗಳು ಕುಟುಂಬ ಆಳ್ವಿಕೆಯಲ್ಲಿವೆ. ಹಾಗಾಗಿ ಅವು ಅಭಿವೃದ್ಧಿಗೆ ಪೂರಕವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ನಿಜಾಮಾಬಾದ್ನಲ್ಲಿ ನಡೆದ ಬಿಜೆಪಿ ಚುನಾವಣಾ ರಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಟಿಆರ್ಎಸ್ ಒಂದೇ ನಾಣ್ಯದ ಎರಡು ಮುಖಗಳಿಂದ್ದಂತೆ. ಎರಡೂ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿವೆ. ಅವೆರಡರ ಸಿದ್ಧಾಂತಗಳಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಪ್ರಧಾನಿ ಕುಟುಕಿದರು. ಇಲ್ಲಿನ ಮುಖ್ಯಮಂತ್ರಿ […]

ಹಾಸ್ಪಿಟಲ್ ಸೇರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಹುದ್ದೆ ತೊರೆಯಲು ನಿರ್ಧರಿಸಿದ್ದರು: ವಿಜಯ್ ಸರ್ದೇಸಾಯಿ

Friday, November 23rd, 2018
manohar-parrikar

ಪಣಜಿ: ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್, ಹಾಸ್ಪಿಟಲ್ ಸೇರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಹುದ್ದೆ ತೊರೆಯಲು ನಿರ್ಧರಿಸಿದ್ದರು ಎಂದು ಗೋವಾ ಕೃಷಿ ಸಚಿವ ವಿಜಯ್ ಸರ್ದೇಸಾಯಿ ಹೇಳಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ವೇಳೆ ಪರಿಕ್ಕರ್ ಸಿಎಂ ಹುದ್ದೆ ಜೊತೆಗೆ ತಮ್ಮಲ್ಲಿರುವ ಎಲ್ಲ ಅಧಿಕಾರವನ್ನೂ ಹಸ್ತಾಂತರ ಮಾಡಲು ಇಚ್ಛಿಸಿದ್ದರು. ಆದರೆ ಬಳಿಕ ಹಲವಾರು ಘಟನೆಗಳು ಸಂಭವಿಸಿದವು. ಬಿಜೆಪಿ ಹೈಕಮಾಂಡ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಹುದ್ದೆ ತೊರೆಯದಂತೆ ಪರಿಕ್ಕರ್ಗೆ ಆದೇಶಿಸಿತ್ತು ಎಂದು ಸರ್ದೇಸಾಯಿ ಹೇಳಿದ್ದಾರೆ. ಮನೋಹರ್ ಪರಿಕ್ಕರ್ […]