ರಮಾನಾಥ ರೈಯವರು ಕಾಂಗ್ರೆಸ್ನಲ್ಲಿ ಈಗ ಸಕ್ಕರೆ ಇಲ್ಲದ ಚಹಾದಂತಾಗಿದ್ದಾರೆ: ಹರಿಕೃಷ್ಣ ಬಂಟ್ವಾಳ
Friday, November 16th, 2018ಮಂಗಳೂರು: ರಮಾನಾಥ ರೈಯವರು ಕಾಂಗ್ರೆಸ್ನಲ್ಲಿ ಈಗ ಸಕ್ಕರೆ ಇಲ್ಲದ ಚಹಾದಂತಾಗಿದ್ದಾರೆ. ಅಧಿಕಾರ ಇಲ್ಲದೆ ಚಡಪಡಿಸುವ ಸ್ಥಿತಿಯಲ್ಲಿದ್ದಾರೆ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ನಡೆದ ಸಭೆಯಲ್ಲಿ ವ್ಯಂಗ್ಯವಾಡಿದರು. ರಮಾನಾಥ ರೈ ಅವರು ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರಲ್ಲಿ ಸಂಸದ ನಳಿನ್ಕುಮಾರ್ ಕಟೀಲು ಸತ್ತ ಹಾಗೆ. ಇನ್ನು ಅವರ ಶವ ಸಂಸ್ಕಾರ ಬಾಕಿ ಇದೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಒಬ್ಬ ಜನಪ್ರತಿನಿಧಿಯ ಶವ ಸಂಸ್ಕಾರವನ್ನು ನೋಡಬೇಕೆಂಬ ಹಸಿವು ಇರುವ ರಮಾನಾಥ ರೈ ಅವರು ಜಿಹಾದಿ […]