Blog Archive

ರಮಾನಾಥ ರೈಯವರು ಕಾಂಗ್ರೆಸ್​​ನಲ್ಲಿ‌ ಈಗ ಸಕ್ಕರೆ ಇಲ್ಲದ ಚಹಾದಂತಾಗಿದ್ದಾರೆ: ಹರಿಕೃಷ್ಣ ಬಂಟ್ವಾಳ

Friday, November 16th, 2018
harikrishna

ಮಂಗಳೂರು: ರಮಾನಾಥ ರೈಯವರು ಕಾಂಗ್ರೆಸ್ನಲ್ಲಿ‌ ಈಗ ಸಕ್ಕರೆ ಇಲ್ಲದ ಚಹಾದಂತಾಗಿದ್ದಾರೆ. ಅಧಿಕಾರ ಇಲ್ಲದೆ ಚಡಪಡಿಸುವ ಸ್ಥಿತಿಯಲ್ಲಿದ್ದಾರೆ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ನಡೆದ ಸಭೆಯಲ್ಲಿ ವ್ಯಂಗ್ಯವಾಡಿದರು. ರಮಾನಾಥ ರೈ ಅವರು ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರಲ್ಲಿ ಸಂಸದ ನಳಿನ್‌ಕುಮಾರ್ ಕಟೀಲು ಸತ್ತ ಹಾಗೆ. ಇನ್ನು ಅವರ ಶವ ಸಂಸ್ಕಾರ ಬಾಕಿ ಇದೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಒಬ್ಬ ಜನಪ್ರತಿನಿಧಿಯ ಶವ ಸಂಸ್ಕಾರವನ್ನು‌ ನೋಡಬೇಕೆಂಬ ಹಸಿವು ಇರುವ ರಮಾನಾಥ ರೈ ಅವರು ಜಿಹಾದಿ […]

ಕಾಂಗ್ರೆಸ್ ತನ್ನ ಅಂತ್ಯ ಕಾಲದಲ್ಲಿ ಟಿಪ್ಪು ಜಯಂತಿಯಂತಹ ಕಾರ್ಯಕ್ರಮಗಳನ್ನು ಮಾಡುತ್ತಿದೆ: ಡಿ.ವಿ.ಸದಾನಂದ ಗೌಡ

Saturday, November 10th, 2018
sadananda-gowda

ಮಂಗಳೂರು: ಕಾಂಗ್ರೆಸ್ ತನ್ನ ಅಂತ್ಯ ಕಾಲದಲ್ಲಿ ಟಿಪ್ಪು ಜಯಂತಿಯಂತಹ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು. ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆಗೆ ವರಿಷ್ಠರು ನಿರ್ಧರಿಸಿದ್ದಾರೆ. […]

ಸೋತ ಮಾತ್ರಕ್ಕೆ ಕೈ ಕಟ್ಟಿ ಕೂರಲ್ಲ, ನಾವೇನು ಎಂದು ತೋರಿಸಲಿದ್ದೇವೆ: ಬಿ.ಎಸ್.ಯಡಿಯೂರಪ್ಪ

Tuesday, November 6th, 2018
yedyurappa

ಬೆಂಗಳೂರು: ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿದೆ ಎಂದು ಕೈಕಟ್ಟಿ ಕೂರುವುದಿಲ್ಲ. ನಾವು ಸೋತದ್ದು ಬಳ್ಳಾರಿ ಮಾತ್ರ. ನಮ್ಮ ಸೋಲನ್ನು ಆತ್ಮಾವಲೋಕನ ಮಾಡಿಕೊಂಡು ಮುಂದಿನ 2019ರ ಚುನಾವಣೆಯನ್ನು ಗೆಲ್ಲುವತ್ತ ನಮ್ಮ ದೃಷ್ಟಿಯನ್ನು ಹರಿಸುತ್ತೇವೆ. ನಾವೇನು ಎಂದು ಮುಂದೆ ತೋರಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 5 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ನನ್ನ ಅಭಿನಂದನೆ ಮತ್ತು ವಂದನೆಗಳು. 5 ಕ್ಷೇತ್ರಗಳ ಮತದಾರರ ತೀರ್ಪನ್ನು ನಾನು ಮತ್ತು ನಮ್ಮ ಪಕ್ಷ ಸ್ವೀಕರಿಸುತ್ತದೆ. ಸತ್ಯಸಂಗತಿ […]

ಜಮಖಂಡಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಆನಂದ್​ ನ್ಯಾಮಗೌಡ ಗೆಲುವು

Tuesday, November 6th, 2018
anand

ಬಾಗಲಕೋಟೆ: ಜಮಖಂಡಿ ವಿಧಾನಸಭೆ ಉಪ ಚುನಾವಣೆ ಮತ ಎಣಿಕೆ ನೆಡೆದಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಇನ್ನೂ ಹನ್ನೆರಡು ಸುತ್ತು ಮತ ಎಣಿಕೆ ಬಾಕಿ ಇರುವಾಗಲೇ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಶುರುವಾಗಿದೆ. ಪಟಾಕಿ ಸಿಡಿಸಿ, ಬಣ್ಣ ಎರಚಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸುತ್ತಿದ್ದಾರೆ. ಮತ ಎಣಿಕೆ ಕೇಂದ್ರದತ್ತ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇನ್ನೂ ಸುಳಿದಿಲ್ಲ.

ಸಮಾರಂಭದಲ್ಲಿ ರೇವಣ್ಣನ ಹಾಡಿ ಹೊಗಳಿದ ಜಯಮಾಲ

Monday, November 5th, 2018
jayamala

ಹಾಸನ: ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಯನ್ನು ಜೈನಕಾಶಿಯ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀಯವರಿಗೆ ಪ್ರದಾನ ಮಾಡಲಾಯ್ತು. ಕರ್ನಾಟಕ ಸರ್ಕಾರದ ಪರವಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಜಯಮಾಲಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಸೇರಿ ಹಲವು ಗಣ್ಯರು ಪ್ರಶಸ್ತಿಯನ್ನ ಪ್ರಧಾನ ಮಾಡಿದರು. ಈ ವೇಳೆ ಸಚಿವೆ ಜಯಮಾಲಾ ರೇವಣ್ಣನನ್ನ ಹಾಡಿ ಹೊಗಳಿದ ಘಟನೆ ಕೂಡಾ ನಡೆಯಿತು. ಹೆಚ್.ಡಿ.ರೇವಣ್ಣನವರು ಹಿಡಿದ ಕೆಲಸವನ್ನ ಎಂದು ಬಿಡುವವರಲ್ಲ. ಅದು ಯಾವುದೇ ಸರ್ಕಾರವಿದ್ರು ಕೂಡಾ […]

ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿರುವ ಚಂದ್ರಶೇಖರ್ ತೀರ್ಮಾನವನ್ನು ಸ್ವಾಗತಿಸುತ್ತೇನೆ: ಡಿ.ಕೆ.ಸುರೇಶ್

Thursday, November 1st, 2018
d-k-suresh

ಬೆಂಗಳೂರು: ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿರುವ ಚಂದ್ರಶೇಖರ್ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ರಾಮನಗರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಅವರನ್ನು ತಮ್ಮ ಸದಾಶಿವನಗರದ ನಿವಾಸದಲ್ಲಿ ಪಕ್ಷಕ್ಕೆ ಮರಳಿ ಬರಮಾಡಿಕೊಂಡು ನಂತರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಚಂದ್ರಶೇಖರ್ ಮೂಲತಃ ಕಾಂಗ್ರೆಸ್ ನವರು. ಬಿಜೆಪಿ ನಾಯಕರ ಧೋರಣೆಯಿಂದ ನೊಂದಿದ್ದಾರೆ. ಪಕ್ಷದ ಬಾವುಟ ಕೊಟ್ಟು ಹೋದವರು ಮತ್ತೆ ಏನಾಯ್ತು ಅಂತ ನೋಡಿಲ್ಲ ಎಂದು ಆರೋಪಿಸಿದರು. ಮಂಡ್ಯದಲ್ಲಿ ಚುನಾವಣೆ ಮಾಡುವ ಆಸಕ್ತಿ ಅವರಿಗಿದೆ. ಶಿವಮೊಗ್ಗದಲ್ಲಿ ಪುತ್ರ ಇರೋದ್ರಿಂದ ಕೆಲಸ ಮಾಡ್ತಿದ್ದಾರೆ. ಬಳ್ಳಾರಿಯಲ್ಲೂ […]

ಕಾಂಗ್ರೆಸ್ ಕಛೇರಿ ಸಹಾಯಕಿ ಶ್ರೀಮತಿ ರಾಜೀವಿಯವರ ನಿಧನಕ್ಕೆ ಶ್ರೀ ಬಿ.ರಮಾನಾಥ ರೈ ಸಂತಾಪ

Saturday, October 27th, 2018
ramanth-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕಳೆದ ೩೫ ವರ್ಷಗಳಿಂದ ಕಛೇರಿ ಸಹಾಯಕಿಯಾಗಿ ಕಾರ್ಯನಿರ್ವಹಿಸಿದ ಶ್ರೀಮತಿ ರಾಜೀವಿಯವರು ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಇತ್ತೀಚಿನ ದಿನಗಳಲ್ಲಿ ತೀವ್ರ ಅನಾರೋಗ್ಯದಲ್ಲಿ ಬಳಲುತ್ತಿದ್ದರು. ಇವರಿಗೆ 57 ವರ್ಷ ಆಗಿರುತ್ತದೆ. ಇವರು ೩ ಗಂಡು ಹಾಗೂ 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಾಜಿ ಸಚಿವರಾದ ಶ್ರೀ ಬಿ.ರಮಾನಾಥ ರೈಯವರು ಸಂತಾಪ ಸೂಚಿಸಿದರು. ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಮ.ನ.ಪಾ ಮುಖ್ಯ ಸಚೇತಕ […]

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್​​ಗೆ ಶರಣಾಗಿದೆ: ಯಡಿಯೂರಪ್ಪ

Friday, October 19th, 2018
yedyurappa

ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಾಡಿರುವುದು ಮೈತ್ರಿಯಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ಗೆ ಶರಣಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿಯಲ್ಲಿ ಬಿಜೆಪಿಗೆ ಯಾವುದೇ ಪ್ರಾಬ್ಲಂ ಇಲ್ಲ. ರಾಮನಗರ ಮತ್ತು ಮಂಡ್ಯದಲ್ಲಿ ಫೈಟ್ ಇದೆ ಎಂದು ಹೇಳಿದರು. ಸಿದ್ದರಾಮಯ್ಯ ಅವರ ಚುನಾವಣಾ ರಾಜಕೀಯ ನಿವೃತ್ತಿಯು ಅವರ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಬಿಎಸ್ವೈ ತಿಳಿಸಿದರು.

ಕ್ರಿಕೆಟರ್​ ಪತ್ನಿ ಹಸಿನ್ ಜಹಾನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ..!

Wednesday, October 17th, 2018
mohammed-shami

ಮುಂಬೈ: ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಪತ್ನಿ ಹಸಿನ್ ಜಹಾನ್ ಇಂದು ಮುಂಬೈ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಸಂಜಯ್ ನಿರುಪಮ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಮೊಹಮ್ಮದ್ ಶಮಿ ವಿರುದ್ಧ ಸರಣಿ ಆರೋಪ ಮಾಡುತ್ತಲೇ ಸುದ್ದಿಕೇಂದ್ರಕ್ಕೆ ಬಂದಿದ್ದ ಹಸಿನ್ ಜಹಾನ್ ಅವರ ಏಕಾಏಕಿ ರಾಜಕೀಯ ಎಂಟ್ರಿ ಕುತೂಹಲಕ್ಕೆ ಕಾರಣವಾಗಿದೆ. ಶಮಿ ತನಗೆ ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಜೊತೆಗೆ ಅಕ್ರಮ ಸಂಬಂಧವನ್ನೂ ಹೊಂದಿದ್ದಾರೆ ಎಂದು ಪತಿ ಶಮಿ ಮೇಲೆ ಹಸಿನ್ ಆರೋಪ ಮಾಡಿದ್ದಳು. […]

ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್​​ನಿಂದ ಮ್ಯಾರಥಾನ್​ ಸಭೆ

Tuesday, October 9th, 2018
congress

ಬೆಂಗಳೂರು: ರಾಜ್ಯದ ಐದು ಉಪ ಚುನಾವಣೆಗಳಿಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷ ಇಂದು ಮ್ಯಾರಥಾನ್ ಸಭೆ ನಡೆಸಲಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ಮೈತ್ರಿ, ಎಲ್ಲೆಲ್ಲಿ ಕೈ ಅಭ್ಯರ್ಥಿಗಳನ್ನು […]