ಬೆಳ್ತಂಗಡಿ ಶಾಸಕ ರ ಕಾರು ಚಾಲಕನಿಗೆ ನಿಂದಿಸಿ, ತಲವಾರು ತೋರಿಸಿದ ಪ್ರಕರಣ ಸಿಐಡಿಗೆ

Tuesday, October 18th, 2022
Harish-Poonja

ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಫಳ್ನೀರ್‌ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. […]

ಆ್ಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದೆ ಸತಾಯಿಸಿದ ಕಾರು ಚಾಲಕನ ಬಂಧನ

Thursday, January 20th, 2022
Monish

ಮಂಗಳೂರು : ನಗರದಿಂದ ಭಟ್ಕಳಕ್ಕೆ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದೆ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೋನಿಶ್ ಎಂದು ಗುರುತಿಸಲಾಗಿದೆ. ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಯು ಎಸ್ 279 ಐಪಿಸಿ ಮತ್ತು 184 ಐಎಂವಿ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ. ಇದೇ ಕಾರಿನ ಚಾಲಕನು ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಆ್ಯಂಬುಲೆನ್ಸ್‌ಗೆಕಿರುಕುಳ ನೀಡಿದ್ದಾನೆ ಎಂಬ ಆರೋಪವೂ ವ್ಯಕ್ತವಾಗಿದೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ರೋಗಿಯನ್ನು ಬುಧವಾರ […]

ಮಂಗಳೂರು ಪುರಭವನದ ಬಳಿ ಹೊತ್ತಿ ಉರಿದ ಇಂಡಿಕಾ ಕಾರು

Wednesday, January 12th, 2022
Car Fire

ಮಂಗಳೂರು : ಕಾರು ಚಾಲಕರೊಬ್ಬರು ಮಂಗಳೂರು ಪುರಭವನದ ಬಳಿ ನಿಲ್ಲಿಸಿದ್ದ ಕಾರು ಧಗಧಗನೆ ಉರಿದು ಕಾರಿನ ಇಂಜಿನ ಸಮೇತ ಮುಂಭಾಗ ಬೆಂಕಿಗೆ ಆಹುತಿಯಾಯಿತು. ಬುಧವಾರ ಸಂಜೆ ಕೊಣಾಜೆ ದಾಸರ ಮೂಳೆಯ ಕೃಷ್ಣಪ್ಪ ದಾಸ್ ಎಂಬವರು ಕಾರು ನಿಲ್ಲಿಸಿ ಆಸ್ಪತ್ರೆಗೆ ಹೋಗಿದ್ದರು. ಅಷ್ಟರಲ್ಲೇ ಅವರ ಇಂಡಿಕಾ ಐಸಿಎಸ್ ಬೆಂಕಿಗೆ ಆಹುತಿಯಾಗಿದೆ. ಈ ಸಂದರ್ಭ ಕಾರಿನಲ್ಲಿ ಯಾರು ಇರದೇ ಇದ್ದುದರಿಂದ ಯಾವುದೇ ಅಪಾಯ ಉಂಟಾಗಿಲ್ಲ. ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಹೋಗಿದೆ. ಪಾಂಡೇಶ್ವರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ […]

ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಬುದ್ದಿಮಾತು ಹೇಳಿದ ಕಾರು ಚಾಲಕನ ಕೊಲೆ

Tuesday, July 14th, 2020
Raghuveer Circle

ನವದೆಹಲಿ: ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಹಾಗೆ ಮಾಡಬೇಡಿ ಎಂದಿದ್ದಕ್ಕೆ ಮೂವರು ಹುಡುಗರು ಸೇರಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಬುದ್ದಿಮಾತು ಹೇಳಿದ 25 ವರ್ಷದ ಯುವಕನ ಮೇಲೆ ಮೂವರು ಹುಡುಗರು ಹಲ್ಲೆ ಮಾಡಿ ಸಾಯಿಸಿರುವ ಘಟನೆ ಪಶ್ಚಿಮ ದೆಹಲಿಯ ರಘುಬಿರ್ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮನೀಶ್ ಎಂದು ಗುರುತಿಸಲಾಗಿದ್ದು ಈತ ಖಾಸಗಿ ಕಾರು ಚಾಲಕನಾಗಿದ್ದ. ಈತನನ್ನು ಕೊಂದ ಮೂವರು ಹುಡುಗರು 16-17 ವರ್ಷದವರಾಗಿದ್ದು ಅವರನ್ನು ಬಂಧಿಸಲಾಗಿದೆ. ಘಟನೆ ನಡೆದಿದ್ದು ಜುಲೈ 8ರಂದು. ಮೂವರೂ ಮನೀಶ್ […]

ಪುತ್ತೂರು : ಕಾರು ಚಾಲಕ ಮೃತ್ಯು ; ಬಸ್ ಪುಡಿಗೈದ ಆಕ್ರೋಶಿತರು

Monday, August 12th, 2019
Puttur-Accident

ಪುತ್ತೂರು : ಪುತ್ತೂರಿನ ಕಬಕದ ಸಮೀಪ ಖಾಸಗಿ ಬಸ್ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಆ. 12 ರ ಸೋಮವಾರ  ಪೊಲ್ಯದಲ್ಲಿ ನಡೆದಿದೆ. ಮಂಗಳೂರು – ಪುತ್ತೂರು ನಡುವೆ ಸಂಚರಿಸುವ ಧರಿತ್ರಿ ಬಸ್ ಕಾರಿಗೆ ಢಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಕಾರು ಚಾಲಕ ಹಕೀಮ್ ಸಾವನ್ನಪ್ಪಿದ್ದಾರೆ. ಹಕೀಮ್ ಪುತ್ತೂರಿನ ಈಶ್ವರಮಂಗಲದ ನಿವಾಸಿಯಾಗಿದ್ದಾರೆ. ಘಟನೆ ನಡೆದ ತಕ್ಷಣ ಆಕ್ರೋಶಗೊಂಡ ಸ್ಥಳೀಯರೂ ಬಸ್ ಪುಡಿಗೈದಿದ್ದಾರೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

Monday, October 3rd, 2016
baskar-shetty-murder-case

ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ಸಾಕ್ಷ್ಯನಾಶ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಶ್ರೀನಿವಾಸ ಭಟ್ಟ ಮತ್ತು ರಾಘವೇಂದ್ರ ಎಂಬುವವರು ಕೊಲೆ ಪ್ರಕರಣದ ಸಾಕ್ಷ್ಯನಾಶ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದರು. ಭಾನುವಾರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಶ್ರೀನಿವಾಸ್ ಭಟ್‌‌ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿರುವ ನಿರಂಜನ್ ಭಟ್‌‌ ಅವರ ತಂದೆಯಾಗಿದ್ದಾರೆ.ಇನ್ನು ರಾಘವೇಂದ್ರ ನಿರಂಜನ್ ಭಟ್‌‌ನ […]

ಬಿಎಸ್ಸ್ ಡಬ್ಲ್ಯೂನಲ್ಲಿ ಕಲಿಯುತ್ತಿರುವ ದಲಿತ ವಿದ್ಯಾರ್ಥಿನಿಯನ್ನು ಕಾಡೋಂಮ್ ಹಾಕಿ ರೇಪ್ ಮಾಡಿದ ಕಾರು ಚಾಲಕ

Saturday, July 27th, 2013
Prasanth Shetty

ಮಂಗಳೂರು: ಕಾರ್ ಡ್ರೈವರ್ ಒಬ್ಬ ರೋಶನಿ ನಿಲಯದ ಬಿಎಸ್ಸ್ ಡಬ್ಲ್ಯೂನಲ್ಲಿ ಕಲಿಯುತ್ತಿರುವ ದಲಿತ ವಿದ್ಯಾರ್ಥಿನಿಯೋರ್ವಳನ್ನು ತನ್ನ ಮನೆಗೆ ಕರೆಸಿ ಅತ್ಯಾಚಾರ ನಡೆಸಿ, ಕೊಲೆ ಬೆದರಿಕೆ ಹಾಕಿದ ಘಟನೆ ನೀರುಮಾರ್ಗದ ಪಾಲ್ದಾನೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ತನಗಾದ ನೋವನ್ನು ತನ್ನ ತಾಯಿಯಲ್ಲಿ ಹೇಳಿದ್ದಳು. ತಾಯಿ ತನ್ನ ಮಗಳೊಂದಿಗೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಜುಲೈ 25ರಂದು ಘಟನೆಯ ಬಗ್ಗೆ ದೂರು ನೀಡಿದರು. ಪ್ರಶಾಂತ್ ಶೆಟ್ಟಿ (30)ಅತ್ಯಾಚಾರ ನಡೆಸಿದ ವ್ಯಕ್ತಿ. ಎರಡು ತಿಂಗಳುಗಳಿಂದ ಕೆಲಸವಿಲ್ಲದೆ ಮನೆಯಲ್ಲಿ ಕುಳಿತಿದ್ದ, ಈತನಿಗೆ ಮದುವೆಯಾಗಿದ್ದು, 2 […]