Blog Archive

ಮುಜುರಾಯಿ ಅರ್ಚಕರ ಮೇಲೆ ಪೋಲೀಸ್ ಹಲ್ಲೆ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಘಟನೆ, ಪೇದೆ ಅಮಾನತು

Sunday, March 29th, 2020
priest

ಸುಳ್ಯ :  ಕುಕ್ಕೆ ಸುಬ್ರಹ್ಮಣ್ಯದ ಅರ್ಚಕ ಶ್ರೀನಿವಾಸ್ ಶನಿವಾರ ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಶಂಕರ್ ಎನ್ನುವ ಕಾನ್ಸ್ ಟೇಬಲ್ ಅವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅರ್ಚಕರನ್ನು ಬೈಯ್ದದಲ್ಲದೆ , ಅರ್ಚಕರು ತಾನು ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತ ಇರುವುದಾಗಿ ದೇವಳದ ಕೀಯನ್ನ ತೋರಿಸಿ ಹೇಳಿದರೂ ಬಿಡದ ಈ ಪೋಲೀಸ್ ಸಿಬ್ಬಂದಿ ಅರ್ಚಕರ ಮೇಲೆ ತನ್ನ ಕೈಯಲ್ಲಿದ್ದ ಕೋಲಿನಿಂದ ಬಾಸುಂಡೆ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್.ಕೆ. ಕೃಷ್ಣಮೂರ್ತಿ ನೇಮಕ

Monday, September 30th, 2019
krishnamurthy

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಷನರ್ ಆದ ಹೆಚ್.ಕೆ. ಕೃಷ್ಣಮೂರ್ತಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಕುಕ್ಕೆಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ರವೀಂದ್ರ ಅವರಿಗೆ ಈ ಹಿಂದೆಯೇ ವರ್ಗಾವಣೆ ಪ್ರಕ್ರಿಯೆ ಆಗಿದ್ದರೂ, ಇದೀಗ ಆದೇಶ ಜಾರಿಯಾಗಿದೆ. ಹೆಚ್.ಕೆ. ಕೃಷ್ಣಮೂರ್ತಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.    

ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ, ಜೂನ್ 10 ಕ್ಕೆ ಮತ್ತೆ ಸಭೆ

Saturday, June 8th, 2019
Kukke-Math

ಮಂಗಳೂರು : ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂನ್ 7ರ ಸಂಜೆ ಭೇಟಿ ನೀಡಿ ಎರಡೂ ಕಡೆಯಿಂದ ಅಭಿಪ್ರಾಯ ಸಂಗ್ರಹಿಸಿದರೂ ಮತ್ತೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಜೂನ್ 10ರ ಒಳಗೆ ಮತ್ತೊಮ್ಮೆ ಸಭೆ ಕರೆಯಲು ಸ್ವಾಮೀಜಿ ನಿರ್ಧರಿಸಿದ್ದಾರೆ. ದಕ್ಷಿಣ ಭಾರತದ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನದ ನಡುವಿನ ತಿಕ್ಕಾಟ ಮುಂದುವರಿದಿದೆ. ಸರ್ಪ ಸಂಸ್ಕಾರ ವಿಚಾರದಲ್ಲಿ ಹಲವಾರು ವರ್ಷಗಳ ಕಾಲದ ಸಂಘರ್ಷಕ್ಕೆ ಮಂಗಳ ಹಾಡಲು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಹಿರಿಯ ಯತಿ ಪೇಜಾವರ […]

ಚೈತ್ರಾಗೆ ಜಾಮೀನು ಮಂಜೂರು, ನಿಮ್ಮ ನಾಟಕ ಎಲ್ಲ ಬೇಡ ಎಂದ ನ್ಯಾಯಾಧೀಶ

Wednesday, November 7th, 2018
chaitra

ಸುಳ್ಯ: ಸೋಮವಾರ ಬೆಳಗ್ಗೆ ಕೋರ್ಟಿಗೆ ಹಾಜರಾದ ಚೈತ್ರಾ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ಚೈತ್ರಾಳ ಆರೋಗ್ಯ ವಿಚಾರಿಸಿದರು. ಈ ವೇಳೆ ಆಕೆಗೆ ಬುದ್ಧಿವಾದ ಹೇಳಿದ ನ್ಯಾಯಾಧೀಶರು, “ನಿಮ್ಮ ನಾಟಕ ಎಲ್ಲ ಬೇಡ. ಉತ್ತರ ಕನ್ನಡದ ನಾಟಕ ಯಕ್ಷಗಾನ, ತಾಳಮದ್ದಳೆ ಎಲ್ಲವನ್ನು ನಾನು ಕಂಡಿದ್ದೇನೆ. ನ್ಯಾಯಾ ಲಯಕ್ಕೆ ಹಾಜರಾಗುವ ಮೊದಲ ದಿನ ಆರೋಗ್ಯವಾಗಿಯೇ ಇದ್ದ ನಿಮಗೆ ತತ್‌ಕ್ಷಣ ಏನಾಯಿತು? ನಿಯತ್ತಿನಿಂದ ಜಾಮೀನು ಪಡೆಯಲು ಪ್ರಯತ್ನಿಸಿ. ಬದಲಿ ಸುಳ್ಳು ಹೇಳಿ ಆಸ್ಪತ್ರೆ ಸೇರಿಕೊಂಡು ತಪ್ಪಿಸಿಕೊಳ್ಳಬೇಡಿ’ ಎಂದರು. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ […]

ಸರ್ಪ ಸಂಸ್ಕಾರ ವಿಚಾರದಲ್ಲಿ ಹಲ್ಲೆ ಆರೋಪ: ಕುಕ್ಕೆ ಸುಬ್ರಹ್ಮಣ್ಯ ಬಂದ್

Thursday, October 25th, 2018
subramanya

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ವಿಚಾರದಲ್ಲಿ ನಡೆದ ವಾದ ವಿವಾದದಲ್ಲಿ ಚೈತ್ರಾ ಕುಂದಾಪುರ ಮತ್ತು ತಂಡ ನಿನ್ನೆ ಹಿಂದೂ ಜಾಗರಣ ವೇದಿಕೆಯ ಮುಖಂಡನಿಗೆ ನಡೆಸಿದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ ಆಚರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಿನ್ನೆ ಸಂಜೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಮತ್ತು ಇತರರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಡೆದಾಟ: ಚೈತ್ರಾ ಕುಂದಾಪುರ ಸಹಿತಾ ಏಳು ಮಂದಿ ಪೊಲೀಸರ ವಶಕ್ಕೆ

Thursday, October 25th, 2018
chaitra-kundapura

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ಪೂಜೆಯೊಂದಕ್ಕೆ ಸಂಬಂಧಪಟ್ಟಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಯೊಂದರ ನಾಯಕಿ ಚೈತ್ರಾ ಕುಂದಾಪುರ ತಂಡದ ನಡುವೆ ನಡೆದ ಘರ್ಷಣೆಯಿಂದ ಓರ್ವ ಗಾಯಗೊಂಡಿದ್ದು, ಚೈತ್ರಾ ಕುಂದಾಪುರ ಸಹಿತಾ ಆಕೆಯ ಬೆಂಬಲಿಗರೆನ್ನಲಾದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂದು ಹೆಸರಿಸಲಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ […]

ಭಕ್ತರ ಭಯ ದೂರ ಮಾಡುವ ಅಭಯಗಣಪ

Friday, September 14th, 2018
ganapathi

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಭಯ ದೂರ ಮಾಡುವ ಅಭಯಗಣಪಕ್ಷೇತ್ರದಂತೆ ಅಭಯ ಗಣಪತಿ ದೇವಸ್ಥಾನವೂ ಪ್ರಸಿದ್ಧಿ ಪಡೆದಿದೆ. ನೇಪಾಳಿ ಶೈಲಿಯಲ್ಲಿ ಕಟ್ಟಿರುವ ದೇವಸ್ಥಾನದಲ್ಲಿ 21 ಅಡಿ ಎತ್ತರದ ಏಕಶಿಲಾ ಗಣಪತಿ ವಿಗ್ರಹ ಆಕರ್ಷಕವಾಗಿದೆ. ಭಾದ್ರಪದ ಶುಕ್ಲ ಚೌತಿಯಂದು ಈ ಗಣಪತಿಗೆ ವಿಶೇಷ ಪೂಜೆ ಸಲ್ಲುತ್ತದೆ. ಕುಕ್ಕೆ ಕ್ಷೇತ್ರ ತಲುಪುವ ಕುಮಾರಧಾರಾ – ಕಾಶಿಕಟ್ಟೆ ಮಾರ್ಗಮಧ್ಯೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪಕ್ಕದಲ್ಲೆ ಈ ಅದ್ಭುತ ಗಣಪತಿ ವಿಗ್ರಹವಿದೆ. ಕುಕ್ಕೆಯ ಭಕ್ತರಾದ ಬೆಂಗಳೂರು ಎಚ್‌.ಡಿ. ಕೋಟೆ ಮೂಲದ ಕೃಷ್ಣಮೂರ್ತಿ […]

ಕುಕ್ಕೆ ಮಠದಲ್ಲಿಯೂ ಸರ್ಪ ಸಂಸ್ಕಾರ ಸೇವೆ ಮಾಡಬಹುದು, ಅದು ಮಾತ್ರ ಶಾಸ್ತ್ರೋಕ್ತ: ಪ್ರಮೋದ್ ಮುತಾಲಿಕ್

Saturday, September 1st, 2018
pramod-muthalik

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ, ಆಶ್ಲೇಷಾ ಪೂಜೆ ಸೇರಿದಂತೆ ನಡೆಯುವ ಸೇವೆಗಳು ಶಾಸ್ತ್ರೋಕ್ತವಲ್ಲ. ಸುಬ್ರಹ್ಮಣ್ಯ ಮಠದಲ್ಲಿ ನಡೆಯುವ ಸೇವೆಗಳು ಮಾತ್ರ ಶಾಸ್ತ್ರೋಕ್ತವಾದವು ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯಶ್ಚಿತವಾಗಿ ಮಾಡುವ ಸರ್ಪ ಸಂಸ್ಕಾರ, ಆಶ್ಲೇಷಾ ಪೂಜೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕವಾಗಿ ಮಾಡಲಾಗುತ್ತದೆ. ಸಾಮೂಹಿಕವಾಗಿ ಸತ್ಯನಾರಾಯಣ ಪೂಜೆ ಮೊದಲಾದವುಗಳನ್ನು ಮಾಡುವುದು ಜಾಗೃತಿಗಾಗಿ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಡುವ ಸಾಮೂಹಿಕ ಪೂಜೆ ಶಾಸ್ತ್ರೋಕ್ತವಲ್ಲ. ಮಠದಲ್ಲಿ ನಡೆಯುವ ಸೇವೆಗಳು […]

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ನೆರೆ ಪರಿಹಾರ ನಿಧಿಗೆ 2 ಕೋಟಿ ರೂ.

Monday, August 20th, 2018
subramanya

ಸುಬ್ರಹ್ಮಣ್ಯ : ಅತಿವೃಷ್ಟಿ ಕಡಿಮೆಯಾಗಿ ಪ್ರಕೃತಿ ಶಾಂತಗೊಂಡು ಜನರು, ಪಶು ಪಕ್ಷಿ ಸಂಕುಲ ಶಾಂತಿಯುತವಾಗಿ ಸುಖ, ನೆಮ್ಮದಿಯಿಂದ ಜೀವನ ನಡೆಸಲು ಕೃಪೆ ತೋರುವಂತೆ ಕುಕ್ಕೆ ದೇವರ ಸಾನ್ನಿಧ್ಯದಲ್ಲಿ ಭಾನುವಾರ ಪ್ರಾರ್ಥಿಸಲಾಯಿತು. ಈ ಪ್ರಾರ್ಥನೆಯ ಪ್ರಕಾರ ಸುಬ್ರಹ್ಮಣ್ಯ ದೇವರಿಗೆ 108 ಸೀಯಾಳಾಭಿಷೇಕ ಸೇವೆಯನ್ನು ಆ.21ರಂದು ಬೆಳಗ್ಗೆ 5 ಗಂಟೆಗೆ ನಡೆಸಲಾಗುವುದು. ಅಭಿಷೇಕಕ್ಕೆ ಸೀಯಾಳ ಒದಗಿಸುವ ಭಕ್ತರು ಸೋಮವಾರ ಸಂಜೆಯ ಒಳಗೆ ಶ್ರೀ ದೇವಳದ ಕಚೇರಿಗೆ ಸೀಯಾಳ ಒದಗಿಸಬಹುದು ಎಂದು ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ […]

ನಾಡಿನೆಲ್ಲೆಡೆ ಭಕ್ತರಿಂದ ಸಂಭ್ರಮದ ನಾಗರಪಂಚಮಿ ಆಚರಣೆ..!

Wednesday, August 15th, 2018
Nagarapanchami (17)

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ದೇವಸ್ಥಾನಗಳಲ್ಲಿ ನಾಗರಪಂಚಮಿಯನ್ನು ಬುಧವಾರ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಿದರು. ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮುಂಜಾನೆಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ನಾಗ ದೇವರಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಗರಪಂಚಮಿಯನ್ನು ಆಚರಿಸಿದರು. ಕುಡುಪು ದೇವಸ್ಥಾನದಲ್ಲಿ  ಪ್ರಧಾನ ಆರ್ಚಕರ ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, […]