Blog Archive

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಸಂಪೂರ್ಣವಾಗಿ ಜಲಾವೃತ

Wednesday, July 19th, 2017
subrahmanya

ಮಂಗಳೂರು :  ನಿರಂತರವಾಗಿ  ಸುರಿಯುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಸಂಪೂರ್ಣವಾಗಿ ಜಲಾವೃತವಾಗಿದ್ದು, ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನದಿಯ ಮೇಲ್ಭಾಗದಲ್ಲಿ ತೀರ್ಥ ಸ್ನಾನ ಪೂರೈಸುತ್ತಿದ್ದಾರೆ. ಕರ್ನಾಟಕ ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿದೆ ಭಾರೀ ಮಳೆ ಅಲ್ಲದೆ ಘಟ್ಟ ಪ್ರದೇಶದಲ್ಲಿ ಇದೇ ರೀತಿ ನಿರಂತರ ಮಳೆಯಾದರೆ ಕುಮಾರಧಾರಾ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಸೇತುವೆ ಮಟ್ಟದಲ್ಲಿ ನದಿ ನೀರು ಹರಿಯುತ್ತಿದೆ ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ಪಂಜ, ಬಳ್ಪ, […]

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಪ್ತ ಸಹಾಯಕ ಕುಕ್ಕೆ ಭೇಟಿ

Tuesday, June 13th, 2017
kukke Subrahmanya

ಸುಬ್ರಹ್ಮಣ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಆಪ್ತ ಸಹಾಯಕ ಶಕುಂತ್ ಆಪ್ಟೆ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಇವರೊಂದಿಗೆ ಪುಣೆಯ ಸಾಂಗ್ಲಿಯ ಲೋಕಸಭಾ ಸದಸ್ಯ ಸಂಜಯ್ ರಾಮಚಂದ್ರ ಪಾಟಿಲ್ ಹಾಗೂ ಜ್ಯೋತಿ ಸಂಜಯ್ ಪಾಟೀಲ್ ಮತ್ತು ಮಂಜುಶ್ರೀ ಆಗಮಿಸಿದ್ದರು. ಮಂಗಳವಾರ ಕ್ಷೇತ್ರಕ್ಕೆ ಆಗಮಿಸಿದ ಆಪ್ಟೆ ಮತ್ತು ಸಂಜಯ್ ಪಾಟೀಲ್ ಮಹಾಪೂಜೆಗೆ ಸಂಕಲ್ಪ ನೆರವೇರಿಸಿದರು. ವೇದಮೂರ್ತಿ ಮಧುಸೂಧನ ಕಲ್ಲೂರಾಯ ಸಂಕಲ್ಪ ವಿದಿ ವಿಧಾನ ನೆರವೇರಿಸಿದರು. ಬಳಿಕ ಆಪ್ಟೆ ಅವರು ಮಹಾಪೂಜೆ ಸೇವೆ ನೆರವೇರಿಸಿದರು. ಅಲ್ಲದೆ […]

ಕುಕ್ಕೆ ಸುಬ್ರಹ್ಮಣ್ಯದ ಚಂಪಾ ಷಷ್ಟಿ ಉತ್ಸವ

Monday, December 5th, 2016
Kukke-rathothsava

ಮಂಗಳೂರು: ಸಂಭ್ರಮ ಸಡಗರದಿಂದ ನಡೆದ ಕುಕ್ಕೆ ಸುಬ್ರಹ್ಮಣ್ಯದ ಚಂಪಾ ಷಷ್ಟಿ ಉತ್ಸವಕ್ಕೆ ಸಾವಿರಾರು ಭಕ್ತಾದಿಗಳು ಸಾಕ್ಷಿಯಾದರು. ಬೆಳಗ್ಗೆ 6.55 ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮ ರಥದಲ್ಲಿ ಹಾಗೂ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದರು. ವಿಶೇಷ ಪೂಜೆ ನಡೆದ ಬಳಿಕ ಭಕ್ತಾದಿಗಳು ರಥವನ್ನು ಎಳೆಯುವುದರ ಮುಖಾಂತರ ದೇವರ ಕೃಪೆಗೆ ಪಾತ್ರರಾದರು.

ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಲಕ್ಷದೀಪೋತ್ಸವ

Monday, November 28th, 2016
subramanya lakshadeepothsava

ಸುಬ್ರಹ್ಮಣ್ಯ: ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಲಕ್ಷದೀಪೋತ್ಸವ ನೆರವೇರಲಿದೆ. ಲಕ್ಷ ದೀಪೋತ್ಸವದೊಂದಿಗೆ ರಥಬೀದಿಯಲ್ಲಿ ಶ್ರೀ ದೇವರ ರಥೋತ್ಸವ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಲಕ್ಷ ದೀಪೋತ್ಸವದಂದು ಲಕ್ಷ ಹಣತೆ ಬೆಳಗಿಸಲಾಗುತ್ತದೆ. ಶ್ರೀ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಕೆಲವು ಹಣತೆ ದೀಪಗಳನ್ನು ಹಚ್ಚಲಾಗುತ್ತಿತ್ತು. ಈ ಬಾರಿ ಕ್ಷೇತ್ರದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಲಕ್ಷ ಹಣತೆಗಳನ್ನು ಹಚ್ಚುವ ವ್ಯವಸ್ಥೆ ಮಾಡಲಾಗಿದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಣ್ಣಿನ […]

ಸುಬ್ರಹ್ಮಣ್ಯದಲ್ಲಿ ಉಚಿತವಾಗಿ ಊಟ ಮತ್ತು ಉಪಹಾರ ನೀಡಿದ ಹೋಟಲ್‌ಗಳು

Thursday, November 10th, 2016
Kukke

ಸುಬ್ರಹ್ಮಣ್ಯ: ಎಲ್ಲೆಡೆ 500 ಮತ್ತು 1000 ಮುಖಬೆಲೆಯ ನೋಟುಗಳ ಚಲಾವಣೆಗೆ ಸಂಕಷ್ಟ ಬಂದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಸಮಸ್ಯೆ ಕಂಡುಬರಲಿಲ್ಲ. ಭಕ್ತರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತಾದಿಗಳ ಸೇವಾ ರಶೀದಿಗಳಿಗೆ 500 ಮತ್ತು 1000 ರೂಪಾಯಿ ಮುಖ ಬೆಲೆಯ ನೋಟುಗಳನ್ನು ಸ್ವೀಕರಿಸಿ ಸೇವೆಗಳ ರಶೀದಿ ನೀಡಲಾಯಿತು. ಈ ಮೂಲಕ ಭಕ್ತರಿಗೆ ಸೇವೆ ನೆರವೇರಿಸಲು ಶ್ರೀ ದೇವಳದ ಆಡಳಿತವು ವಿಶೇಷ ಅನುಕೂಲತೆ ಮಾಡಿಕೊಟ್ಟಿತು. ನ. 11ರವರೆಗೆ ಈ ನೋಟುಗಳು ಚಲಾವಣೆಯಲ್ಲಿರುವ […]

ಮುಜರಾಯಿ ಇಲಾಖೆಯ ಕಾಯಕಲ್ಪಕ್ಕೆ ಆಧ್ಯತೆ: ಸಚಿವ ಲಮಾಣಿ

Friday, October 28th, 2016
Mujarayi Ilakhe

ಸುಬ್ರಹ್ಮಣ್ಯ: ರಾಜ್ಯದಲ್ಲಿ ಮುಜರಾಯಿ ಇಲಾಖೆಯ ಅಡಿಯಲ್ಲಿ 60ಕ್ಕೂ ಮಿಕ್ಕಿ ದೇವಸ್ಥಾನಗಳಲ್ಲಿ ವ್ಯವಸ್ಥಾಪನಾ ಸಮಿತಿಯು ರಚನೆಯಾಗಿದೆ. ಮುಜರಾಯಿ ಇಲಾಖೆ ತುಂಬಾ ಮುಜುಗರ ಇರುವ ಇಲಾಖೆಯಾಗಿದೆ. ಹೆಚ್ಚಿನ ದೇವಸ್ಥಾನಗಳಲ್ಲಿ ಸಿಬ್ಬಂಧಿ ಸೇರಿದಂತೆ ಮೂಲಭೂತ ಸೌಕರ್ಯದ ಕೊರತೆಯಿದೆ. ನಾನು ಈ ಖಾತೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ರಾಜ್ಯದ ಎಲ್ಲಾ ದೇವಸ್ಥಾನಗಳಿಗೆ ಕಾಯಕಲ್ಪ ನೀಡಲು ಆಧ್ಯತೆ ನೀಡುತ್ತೇನೆ ಎಂದು ಜವುಳಿ ಮತ್ತು ಮುಜರಾಯಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು. ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. […]

ಕುಕ್ಕೆ:ಚಂಪಾಷಷ್ಠಿ ಸಾಂಗವಾಗಿ ನಡೆದ ಎಡೆಸ್ನಾನ ಸೇವೆ

Tuesday, December 15th, 2015
Ede Snana

ಸುಬ್ರಹಣ್ಯ: ಚಂಪಾಷಷ್ಠಿ ಜಾತ್ರ ದಿನವಾದ ಮಂಗಳವಾರ ಚೌತಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ 124 ಮಂದಿ ಎಡೆಸ್ನಾನ ಸೇವೆಗೈದರು. ದೇವಳದ ಪೂಜೆಯ ಬಳಿಕ ಪ್ರಸಾದವನ್ನು ಗೋವುಗಳಿಗೆ ತಿನ್ನಲು ಕೊಟ್ಟು ನಂತರ ಆ ಎಲೆಯ ಮೇಲೆ ಭಕ್ತರು ಹೊರಾಂಗಣದಲ್ಲಿ ಉರುಳು ಸೇವೆ ನಡೆಸುವ ಮೂಲಕ ಎಡೆಸ್ನಾನ ಹರಕೆ ಸಲ್ಲಿಸಿದರು. ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತ ವೆ.ಮೂ. ಎಸ್ ರಾಜಗೋಪಾಲ ಹಾಗೂ ಪಾಂಚರಾತ್ರ ಪಂಡಿತ ವೆ.ಮೂ. ವಿಜಯಕುಮಾರ್ ಅವರು ಸ್ಥಳದಲ್ಲಿದ್ದು ಎಡೆಸ್ನಾನದ ಕುರಿತು ಮಾರ್ಗದರ್ಶನ ನೀಡಿದರು. ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ […]

ಚಲನಚಿತ್ರ ನಟ ಅರ್ಜುನ್ ಸರ್ಜ ಕುಟುಂಬಸ್ಥರಿಂದ ಕುಕ್ಕೆಯಲ್ಲಿ ಸೇವೆ ಸಲ್ಲಿಕೆ

Thursday, November 5th, 2015
Arjun Sharja

ಸುಬ್ರಹ್ಮಣ್ಯ: ಬಹು ಭಾಷಾ ನಟ ಅರ್ಜುನ್ ಸರ್ಜ ಹಾಗೂ ಕುಟುಂಬಸ್ಥರು ಬುಧವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಹಾಗೂ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಕನ್ನಡ ಬಹು ನಿರೀಕ್ಷಿತ ಚಲನಚಿತ್ರ ಗೇಮ್ ಇದೇ ತಿಂಗಳ 27 ರಂದು ರಾಜ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ತಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದು ಮನೀಷಾ ಕೊಯಿರಾಲ ನಾಯಕಿಯಾಗಿ ಅಭಿನಯಿಸಿದ್ದಾರೆ.ಖ್ಯಾತ ನಿರ್ಮಾಪಕ ಎ ಎಮ್ ಆರ್ ರಮೇಶ ಈ ಚಿತ್ರ […]

ಮಡೆ ಸ್ನಾನವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ : ಶಿವರಾಮು

Thursday, December 5th, 2013
K-S-Shivaram

ಮಂಗಳೂರು : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನವನ್ನು ವಿರೋಧಿಸಿ ಮತ್ತು ಈ ಕೂಡಲೇ ರಾಜ್ಯ ಸರ್ಕಾರ ಈ ಸಂಪ್ರದಾಯಕ್ಕೆ ತಡೆ ನೀಡ ಬೇಕೆಂದು ಒತ್ತಾಯಿಸಿ ಬರುವ ಡಿಸೆಂಬರ್ 7ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ  ಬುಧವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದ್ದಾರೆ. ಶಿವರಾಮು ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಸಂಪ್ರದಾಯ, ನಂಬಿಕೆಯ ಹೆಸರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಇತರೆ ದೇವಸ್ಥಾನಗಳಲ್ಲಿ ನಡೆಯುತ್ತಿರುವ ಮಡೆ ಸ್ನಾನ ಅಮಾನವೀಯವಾಗಿದೆ. […]

ಮಡೆಸ್ನಾನ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Wednesday, December 19th, 2012
Made Snana

ಮಂಗಳೂರು :ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಡೆಸ್ನಾನ ಸೇವೆಗೆ ಸಂಬಧಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಮಡೆಸ್ನಾನವನ್ನು ಬೆಂಬಲಿಸುತ್ತಿದ್ದ ವರ್ಗದ ಕಾನೂನು ಹೋರಾಟ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಈ ಹಿಂದೆ ಕೆಲ ಪ್ರಗತಿಪರ ಹೋರಾಟಗಾರರು ಹಾಗೂ ಬುದ್ಧಿಜಿವಿಗಳು ಈ ಪದ್ಧತಿಯನ್ನು ವಿರೋಧಿಸಿದ್ದರು ಮತ್ತು ನಿಷೇಧಿಸುವಂತೆ ಕೇಳಿಕೊಂಡಿದ್ದರು ಅಲ್ಲದೆ ಇತ್ತೀಚೆಗಷ್ಟೇ ಮಡೆಸ್ನಾನವನ್ನು ತಾತ್ಕಾಲಿಕವಾಗಿ ನಿಷೇಧಿಸುವಂತೆ ಹೈಕೋರ್ಟ್ ನಿಂದ ಆದೇಶ ತರುವಲ್ಲಿ ಯಶಸ್ವಿಯಾಗಿದ್ದರು. ಆದರೆ ರಾಜ್ಯ ಹೈಕೋರ್ಟ್ ನೀಡಿದ ಆದೇಶದ […]