ಶಾಲೆ ಎದುರು ಬಿಯರ್ ಬಾಟಲಿ, ಪ್ರಶ್ನಿಸಿದ ಯುವಕನನ್ನು ಹತ್ಯೆಗೈದ ಕುಡುಕರು

Thursday, December 14th, 2023
Beer-Bottol

ಉಳ್ಳಾಲ : ಕುಡುಕರಿಬ್ಬರು ಸೇರಿ ಯುವಕನೊಬ್ಬನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಕೊಲ್ಯ ಸಾರಸ್ವತ ಕಾಲನಿ ನಿವಾಸಿ ವರುಣ್ ಗಟ್ಟಿ(28) ಎಂದು ಗುರುತಿಸಲಾಗಿದೆ. ಮೃತ ಯುವಕ ಶಾಲೆ ಎದುರು ಬಿಯರ್ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆಗೈಯ್ಯಲಾಗಿದೆ ಎಂದು ಹೇಳಲಾಗಿದೆ. ಶಾಲೆಯ ಮುಂಭಾಗದ ಕಟ್ಟೆಯೊಂದರಲ್ಲಿ ಕುಳಿತು ಸೂರಜ್ ಮತ್ತು ರವಿರಾಜ್ ಬಿಯರ್ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದರೆನ್ನಲಾಗಿದೆ. […]