‘ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಸಂದೇಶ ರವಾನೆ ವಿರುದ್ಧ ಕ್ರಮ’
Thursday, June 14th, 2018ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾವನೆಗೆ ಧಕ್ಕೆ ತರುವ ಯಾವುದೇ ಸಂದೇಶಗಳನ್ನು ಬೇರೆಯವರಿಗೆ ಕಳುಹಿಸಿದರೆ ಕಾನೂನು ವಿರೋಧಿ ಕ್ರಮವಾಗುತ್ತದೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ವಿಪುಲ್ಕುಮಾರ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಶಾಂತಿಸಭೆಯಲ್ಲಿ ಸಾರ್ವಜನಿಕರೋರ್ವರು, ‘ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಫೋಟೋ-ಮಾಹಿತಿಗಳ ವಿರುದ್ಧ ಎಚ್ಚರಿಕೆ ವಹಿಸಬೇಕು ಎಂಬ ಪ್ರಶ್ನೆಗೆ ಆಯುಕ್ತರು ಪ್ರತಿಕ್ರಿಯಿಸಿದರು. ಇತ್ತೀಚೆಗೆ ನಡೆದ ಇಂತಹ ಎರಡು ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ […]