Blog Archive

ಕೇಂದ್ರ ಸರ್ಕಾರ, ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ : ಪ್ರಿಯಾಂಕ್ ಖರ್ಗೆ

Friday, August 30th, 2019
priyank-kharge

ಕಲಬುರಗಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡು ಬಂದಿಲ್ಲ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿರವಾಗುತ್ತಿದೆ. ಹೀಗಾಗಿ ಪ್ರತಿಪಕ್ಷಗಳನ್ನು ನಿಯಂತ್ರಣದಲ್ಲಿ ಇಡಬೇಕೆಂದು ಈ ರೀತಿ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿ‌ಪಕ್ಷಗಳ ವಿರುದ್ಧ ಜಾರಿ ನಿರ್ದೆಶನಾಲಯ‌ ಹಾಗೂ ಇತರ ಸಂಸ್ಥೆಗಳು ಅಸ್ತ್ರ‌ ಬಳಸಿಕೊಳ್ಳುತ್ತಿದೆ‌. ಕರ್ನಾಟಕದಲ್ಲೂ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು […]

ಮಂಗಳೂರು ಏರ್​ಪೋರ್ಟ್​ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

Tuesday, December 11th, 2018
ಮಂಗಳೂರು ಏರ್​ಪೋರ್ಟ್​ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

ಮಂಗಳೂರು: ಕೇಂದ್ರ ಸರ್ಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು‌ ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ವಿಮಾನ ನಿಲ್ದಾಣದ ಕಾರ್ಮಿಕರ ಒಕ್ಕೂಟದಿಂದ ಇಂದಿನಿಂದ ಮೂರು ದಿನಗಳ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ ಕಾರ್ಮಿಕಾಧಿಕಾರಿಗಳ ಒಕ್ಕೂಟಗಳ ಶಾಖಾ ಕಾರ್ಯದರ್ಶಿ ಶ್ರವಣ್ ಕುಮಾರ್ ಧರಣಿಯನ್ನು ಉದ್ಘಾಟಿಸಿದರು. ಈ ಸಂದರ್ಭ ಭೇಟಿ ನೀಡಿದ್ದ ಕಾಸರಗೋಡಿನ ಸಂಸದ ಪಿ.ಕರುಣಾಕರನ್ ಮಾತನಾಡಿ, ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವೆ ಎಂದು ಹೇಳಿದ್ರು. ವಿಮಾನ ನಿಲ್ದಾಣ ಕಾರ್ಮಿಕಾಧಿಕಾರಿಗಳ ಒಕ್ಕೂಟಗಳ ಶಾಖಾ ಅಧ್ಯಕ್ಷ […]

ರಫೆಲ್ ಹಗರಣ ಮುಚ್ಚಿಹಾಕಲು ಕೇಂದ್ರ ಸರ್ಕಾರ ಸಂಚು: ಯು.ಟಿ. ಖಾದರ್

Saturday, November 3rd, 2018
u-t-khader-2

ಮಂಗಳೂರು: ರಫೆಲ್ ಹಗರಣವನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರವು ಸಿಬಿಐನ ಮುಖ್ಯಸ್ಥರನ್ನು ರಾತ್ರೋರಾತ್ರಿ ಅನಿರ್ಧಿಷ್ಟಾವಧಿ ರಜೆ ನೀಡಿ ಕಳುಹಿಸಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಕಿಡಿಕಾರಿದ್ದಾರೆ. ನಗರಲಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಬಿಐ ಡೈರೆಕ್ಟರ್ನ್ನು ಯಾವುದೇ ಕಾರಣವಿಲ್ಲದೆ ಅನಿರ್ಧಿಷ್ಟಾವಧಿ ರಜೆಗೆ ಕಳುಹಿಸಿರುವುದರ ಬಗ್ಗೆ ದೇಶದ ಜನತೆಗೆ ಕೇಂದ್ರ ಸರ್ಕಾರ ಉತ್ತರಿಸಬೇಕು. ಸಿಬಿಐ ಮುಖ್ಯಸ್ಥರನ್ನು ಯಾಕಾಗಿ ರಜೆಗೆ ಕಳುಹಿಸಿದ್ದಾರೆ? ಅದರ ಉದ್ದೇಶವೇನು? ರಾತ್ರಿ ಎರಡು ಗಂಟೆಗೆ ಪ್ರಧಾನಮಂತ್ರಿ ಕಚೇರಿಯಿಂದ ಆದೇಶ ಬರಲು […]

ಕೇಂದ್ರ ಸರ್ಕಾರಕ್ಕೆ 4ರ ಸಂಭ್ರಮ: ಮಂಗಳೂರಲ್ಲಿ ‌ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Saturday, May 26th, 2018
protest

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ‌.ಖಾದರ್, ಮೋದಿ‌ ಅಧಿಕಾರಕ್ಕೆ ಬಂದಾಗ ತಾನು ದೇಶದ ಗೇಟ್ ಕೀಪರ್ ಆಗುತ್ತೇನೆ ಎಂದರು. ಆದರೆ ಇವರ‌ ಜೊತೆ ಫೋಟೋ ತೆಗೆಸಿಕೊಂಡು ಕೆಲವರು ಸಾವಿರಾರು ಕೋಟಿ ಸಮೇತ ವಿದೇಶಕ್ಕೆ ಹಾರಿದ್ದಾರೆ. […]

‘ನಮ್ಮಷ್ಟು ಹಿಂದೂಪರ ಕೆಲಸ ಯಾರೂ ಮಾಡಿಲ್ಲ: ಪ್ರಮೋದ್ ಮಧ್ವರಾಜ್

Thursday, February 8th, 2018
udupi-pramod

ಉಡುಪಿ:‘ಕಾಂಗ್ರೆಸ್ ಸರ್ಕಾರ ಮಾಡಿದಷ್ಟು ಹಿಂದೂಪರವಾದ ಕೆಲಸವನ್ನು ಬೇರೆ ಯಾವ ಸರ್ಕಾರವೂ ಮಾಡಿಲ್ಲ’ ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ‘ಮೊದಲು ದೇವಸ್ಥಾನಗಳಿಗೆ ಕೇವಲ 15 ಸಾವಿರ ಮಾತ್ರ ತಸ್ತೀಕ್ ನೀಡಲಾಗುತ್ತಿತ್ತು, ಆದರೆ ನಮ್ಮ ಸರ್ಕಾರ ಅದನ್ನು 48 ಸಾವಿರಕ್ಕೆ ಏರಿಕೆ ಮಾಡಿದೆ. ಮಠಗಳನ್ನು ಸರ್ಕಾರ ಸ್ವಾಧೀನಕ್ಕೆ ಪಡೆಯುವ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಧಾರ್ಮಿಕ ದತ್ತಿ ಕಾಯ್ದೆಯನ್ನು ಪುನರ್ […]

ಆಡಿಟರ್‌ ಜೊತೆ ಚರ್ಚಿಸಿ ಇಡಿ ನೋಟಿಸ್‌ಗೆ ಉತ್ತರ: ರೋಷನ್‌ ಬೇಗ್‌

Tuesday, January 16th, 2018
Roshan-baig

ಬೆಂಗಳೂರು: ವಿದೇಶಿ ವಿನಿಯಮ ಕಾಯ್ದೆ ಉಲ್ಲಂಘನೆ ಆರೋಪದಡಿ ಜಾರಿ ನಿರ್ದೇಶನಾಲಯ ತಮ್ಮ ಕುಟುಂಬಕ್ಕೆ ನೀಡಿರುವ ನೋಟಿಸ್‌ಗೆ ಆಡಿಟರ್ ಜೊತೆ ಚರ್ಚಿಸಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ನನ್ನ ಕೈಗೆ ಇನ್ನು ಸಿಕ್ಕಿಲ್ಲ. ಅದಾಗಲೇ ಇಡಿ ನೋಟಿಸ್ ನೀಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿದೆ. ಇದನ್ನ ಜನರೇ ಅರ್ಥ ಮಾಡಿಕೊಳ್ಳಬೇಕು ಎಂದು ಮಾಧ್ಯಮಗಳ ವರದಿಗೆ ಅಸಮಾಧಾನ ವ್ಯಕ್ತಪಡಿಸಿದರು. ನನಗೆ ನೋಟಿಸ್ […]

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ವಿವಾದಕ್ಕೆ ತೆರೆ

Tuesday, January 9th, 2018
National-Anthem

ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ವಿವಾದಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಚಿತ್ರಮಂದಿರಗಳಲ್ಲಿನ ಯಾವುದೇ ಚಲನಚಿತ್ರ ಪ್ರಸಾರವಾಗುವುದಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಗಾಯನ ಕಡ್ಡಾಯವಾಗಿತ್ತು. ಆದರೆ, ಈ ಬಗ್ಗೆ ತೀವ್ರ ಪರ-ವಿರೋಧ ಚರ್ಚೆ ನಡೆದ ಹಿನ್ನಲೆಯಲ್ಲಿ ಸುಪ್ರೀಂ ತನ್ನ ಆದೇಶದಲ್ಲಿ ಬದಲಾವಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿ ಪರಿಗಣಿಸಿದ ಸರ್ವೋಚ್ಛ ನ್ಯಾಯಾಲಯ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಮತ್ತು ಆಗ ಪ್ರೇಕ್ಷಕರು ಎದ್ದು […]

ಹೆಚ್ಚಿನ ಬೆಲೆಗೆ ಮಿನರಲ್‌‌ ವಾಟರ್‌‌ ಮಾರಿದ್ರೆ ಜೈಲೂಟ ಗ್ಯಾರಂಟಿ!

Tuesday, December 12th, 2017
minaral-water

ನವದೆಹಲಿ: ಮಿನರಲ್‌‌ ವಾಟರ್‌‌ ಬಾಟಲ್‌ಗಳ ಎಂಆರ್‌‌ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರೇ ಎಚ್ಚರ. ಯಾಕಂದರೆ, ಎಂಆರ್‌‌ಪಿಗಿಂತ ಮಿನರಲ್‌‌ ವಾಟರ್‌‌ ಬಾಟಲ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಿದರೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತಿದೆ. ಹೌದು, ಮಿನರಲ್‌‌ ವಾಟರ್‌‌ ಬಾಟಲ್‌ಗಳನ್ನು ಎಂಆರ್‌‌ಪಿಗಿಂತ ಹೆಚ್ಚಿನ ಬೆಲೆಗೆ ಮಾರುವ ಹೋಟೆಲ್‌‌, ರೆಸ್ಟೋರೆಂಟ್‌ ಹಾಗೂ ಮಲ್ಟಿಪ್ಲೆಕ್ಸ್‌‌ನವರಿಗೆ ಜೈಲು ಶಿಕ್ಷೆ ವಿಧಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ. ಮಿನರಲ್‌‌ ವಾಟರ್‌‌ ಬಾಟಲ್‌ಗಳ ಸಂಬಂಧ ಎಫ್‌‌ಹೆಚ್‌‌ಆರ್‌ಐ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಇಂದು ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಹೋಟೆಲ್‌‌, […]

ಕೇಂದ್ರ ಸರ್ಕಾರದ ‘ಸ್ವಚ್ಛತಾ ದರ್ಪಣ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆ

Monday, October 2nd, 2017
Dr-ravi

ಮಂಗಳೂರು: ಕೇಂದ್ರ ಸರ್ಕಾರದಿಂದ ಸ್ವಚ್ಛತೆಗಾಗಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿರುವ ‘ಸ್ವಚ್ಛತಾ ದರ್ಪಣ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆಯಾಗಿದೆ. ಪ್ರಶಸ್ತಿಗಾಗಿ ರ್ಯಂಕಿಂಗ್ನಲ್ಲಿರುವ ದೇಶದ ನಾನಾ ರಾಜ್ಯಗಳ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಹಾಗೂ ನೆರೆಯ ಉಡುಪಿ ಜಿಲ್ಲೆ ಕೂಡ ಸೇರಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ ಎಂ.ಆರ್. ರವಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ  ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

ಡಿ.ಕೆ.ಶಿವಕುಮಾರ್ ಮೇಲೆ ಐ.ಟಿ. ದಾಳಿ ಕೇಂದ್ರ ಸರ್ಕಾರದ ಹೀನ ಕೆಲಸ : ಪೂಜಾರಿ

Wednesday, August 2nd, 2017
BJ poojary

ಮಂಗಳೂರು: ರಾಜ್ಯ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿ, ಮತ್ತು ಸಂಭಂದಿಕರ ಮೇಲೆ ನಡೆದಿರುವ ಐ.ಟಿ. ದಾಳಿ ಕೇಂದ್ರ ಸರ್ಕಾರದ ಹೀನ ಕೆಲಸ ಎಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ  ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಐಟಿ ಇಲಾಖೆ ಯಾವ ಪಕ್ಷ, ವ್ಯಕ್ತಿಗೆ ಸೇರಿದ ಇಲಾಖೆ ಅಲ್ಲ. 39 ಕಡೆ ಸಿಆರ್‌ಪಿಎಫ್ ಜೊತೆ ದಾಳಿ ನಡೆಸಿದೆ. ಅದನ್ನು ತಮ್ಮಿಚ್ಛೆಯಂತೆ ಬಳಸುತ್ತಿರುವುದು ಸರಿಯಲ್ಲ, ಇದರಿಂದ ಸಿಆರ್‌ಪಿಎಫ್ ಮಾನ ಮರ್ಯಾದೆ ಕೂಡ ಹಾಳಾಗಿದೆ ಎಂದರು. […]