Blog Archive

ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಕೇಂದ್ರ ನಯಾಪೈಸೆ ಕೊಟ್ಟಿಲ್ಲ: ಯು ಟಿ ಖಾದರ್

Monday, December 10th, 2018
u-t-khader

ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಉಂಟಾಗಿ ಸಾವಿರಾರು ಕೋಟಿ ರೂಪಾಯಿ ನಷ್ಟವಾದರೂ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆ ಕೊಟ್ಟಿಲ್ಲವೆಂದು ಸಚಿವ ಯು ಟಿ‌ ಖಾದರ್ ಹೇಳಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್‌ಡಿಆರ್ಎಫ್ ನಿಂದ ರಾಜ್ಯದ 8 ಜಿಲ್ಲೆಗಳಿಗೆ 546 ಕೋಟಿ ರೂಪಾಯಿ ನೀಡಲಾಗಿದೆ. ಸರಾಸರಿ ಲೆಕ್ಕ ಹಾಕಿದರೆ ಒಂದು ಜಿಲ್ಲೆಗೆ 60 ಕೋಟಿ ಸಿಗುತ್ತದೆ. 60 ಕೋಟಿಯಲ್ಲಿ ಸಂಪಾಜೆ ರಸ್ತೆ ಸರಿಮಾಡಲಾದರೂ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಕೊಡಗು ಜನತೆ ಮನೆ ಮಠ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರ […]

ಕೊಡಗು ಸಭೆಯಲ್ಲಿ ಪ್ರವಾದಿ ನಿಂದನೆ  ನವೆಂಬರ್ 16 ರಂದು ಮಂಗಳೂರಲ್ಲಿ ಪ್ರತಿಭಟನೆ

Saturday, November 10th, 2018
asraf k

ಮಂಗಳೂರು  : ಇತ್ತೀಚೆಗೆ ಕೊಡಗುವಿನ ಗೋಣಿ ಕೊಪ್ಪಲುವಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಒಂದರಲ್ಲಿ ಸಂತೋಷ ತಮ್ಮಯ್ಯ ಎಂಬ ಅಂಕಣಕಾರರೊಬ್ಬರು ಪ್ರವಾದಿ ಮಹಮ್ಮದ್ ರವರ ಜೀವನವನ್ನು ಪ್ರಸ್ತಾವಿಸಿ ಪ್ರವಾದಿವರ್ಯರು ಧಾರ್ಮಿಕ ಭಯೋತ್ಪಾದನೆಗೆ ಉತ್ತೇಜಿಸಿರುವುದಾಗಿ ಅವಹೇಳನಕಾರಿ ಹೇಳಿಕೆ ನೀಡಿ ಮತೀಯ ಉದ್ವಿಗ್ನತೆ ಸೃಷ್ಟಿಸಿ ಕೋಮುಗಲಭೆಯನ್ನುಂಟು ಮಾಡುವ ಹೀನ ಕೃತ್ಯವನ್ನು ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಮತ್ತು ಕೃತ್ಯಕ್ಕೆ ಕಾರಣವಾದ ವ್ಯಕ್ತಿಯನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದ.ಕ ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟ, […]

ಕೊಡಗಿನ ಯುವಕ ಗೋವಾದಲ್ಲಿ ಶವವಾಗಿ ಪತ್ತೆ… ಕೊಲೆ ಶಂಕೆ

Tuesday, October 16th, 2018
kodagu

ಕೊಡಗು: ಉದ್ಯೋಗ ಅರಸಿ ಗೋವಾಕ್ಕೆ ತೆರಳಿದ್ದ ಕೊಡಗಿನ ಯುವಕನೋರ್ವ ಅಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತನ ಬಳಿಯಿದ್ದ ಹಣಕ್ಕಾಗಿ ಅಪರಿಚಿತರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಪಟ್ಟಣದ ವಿಜ್ನೇಶ್ ಮೃತ ಯುವಕ. ತಮಿಳುನಾಡು ಸೇರಿದಂತೆ ವಿವಿಧೆಡೆ ಮರಕೆಲಸ ಮತ್ತು ಪೇಂಟಿಂಗ್ ಮಾಡುತ್ತಿದ್ದ. ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ ಎನ್ನಲಾಗ್ತಿದೆ. ಬಡಗಾಂವ್ ಕೊಂಕಣ್ ಎನ್ನುವಲ್ಲಿ ರೈಲಿನಿಂದ ಆಯತಪ್ಪಿ ಬಿದ್ದು ಸಾವನಪ್ಪಿದ್ದಾನೆ ಎನ್ನಲಾಗುತ್ತಿದ್ದರೂ, ಮೃತ ದೇಹದ ಬಳಿ ಆತನಿಗೆ ಸೇರಿದ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹೀಗಾಗಿ ಈತನ […]

ಕೊಡಗಿನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟ NDRF ತಂಡ

Friday, September 14th, 2018
kodagu

ಕೊಡಗು: ನಿರಂತರವಾಗಿ ಸುರಿದ ಮಳೆ ಪರಿಣಾಮ ಮಡಿಕೇರಿ ಮತ್ತು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹಾನಿಯಾಗಿತ್ತು. ಈ ರಸ್ತೆ ನಿರ್ಮಾಣ ಮಾಡಲು ಇನ್ನೂ ಆರು ತಿಂಗಳು ಬೇಕಾಗಲಿದೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದರು. ಕೊಡಗಿಗೆ ಭೇಟಿ ನೀಡಿದ್ದ ಸಂದರ್ಭ ಭರವಸೆ ನೀಡಿ ಹೋದರೇ ವಿನಾ ಕಾಮಗಾರಿ ಕೈಗೊಳ್ಳಲು ಮುಂದಾಗಿರಲಿಲ್ಲ. ಆದರೆ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಸರ್ಕಾರದ NDRF ತಂಡ ಕೇವಲ 20 ದಿನಗಳಲ್ಲಿ ಸುದೀರ್ಘ ಕಾರ್ಯ ನಡೆಸಿ ತಾತ್ಕಾಲಿಕವಾಗಿ ರಸ್ತೆ ಮೇಲೆ ಓಡಾಟಕ್ಕೆ ಅನುಕೂಲ […]

ಜೋಡುಪಾಲ ದುರಂತ ಪ್ರದೇಶಕ್ಕೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ

Monday, August 20th, 2018
u-t-khader

ಮಂಗಳೂರು: ಕೊಡಗು ಜಿಲ್ಲೆಯ ಜೋಡುಪಾಲ ದುರಂತ ಪ್ರದೇಶಕ್ಕೆ ಹಾಗೂ ಸಂತ್ರಸ್ತರು ಆಶ್ರಯ ಪಡೆದಿರುವ ಸ್ಥಳಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ ನೀಡಿದ್ದರು. ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮೊದಲು ಜೋಡುಪಾಲ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವರು, ಘಟನಾ ಸ್ಥಳವನ್ನು ವೀಕ್ಷಿಸಿದರು. ಬಳಿಕ ಸಂತ್ರಸ್ತರು ಆಶ್ರಯ ಪಡೆದಿರುವ ಸಂಪಾಜೆ ಸರ್ಕಾರಿ ಶಾಲೆ, ಕಲ್ಲುಗುಂಡಿ ಸರ್ಕಾರಿ ಶಾಲೆ ಹಾಗೂ ಅರಂತೋಡು ತೆಕ್ಕಿಲ್ ಹಾಲ್ಗೆ ಭೇಟಿ ನೀಡಿದ್ದರು. ಸಂತ್ರಸ್ತರು ತಂಗಿರುವ ಎಲ್ಲಾ ಕೊಠಡಿಗಳಿಗೂ ಭೇಟಿ […]

ಬಿಬಿಎಂಪಿಯಿಂದ ಕೊಡಗು-ಕೇರಳಕ್ಕೆ ಮೂರುವರೆ ಕೋಟಿ ರೂ. ಸಹಾಯಧನ

Saturday, August 18th, 2018
bengaluru

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೊಡಗು ಹಾಗೂ ಕೇರಳಕ್ಕೆ ಅಗತ್ಯ ವಸ್ತುಗಳು, ಶೆಡ್ ನಿರ್ಮಾಣ ಸೇರಿದಂತೆ ಹಣದ ರೂಪದಲ್ಲಿ ಸಹಾಯ ಮಾಡಲು ಮುಂದಾಗಿದೆ. ಬಿಬಿಎಂಪಿ ವತಿಯಿಂದ 2 ಕೋಟಿ ಪರಿಹಾರ ನಿಧಿ, ಹಾಗೂ ಪಾಲಿಕೆ ಸದಸ್ಯರ ಒಂದು‌ ತಿಂಗಳ ಗೌರವಧನ, ನೌಕರರ ಒಂದು ದಿನದ ವೇತನ ನೀಡಲು ತೀರ್ಮಾನಿಸಿದ್ದು ಒಟ್ಟು ಮೂರುವರೇ ಕೋಟಿ ರುಪಾಯಿ ನೀಡಲು ಬಿಬಿಎಂಪಿ ಮುಂದಾಗಿದೆ. ಇದರಲ್ಲಿ ಕೇರಳಕ್ಕೆ ಒಂದು ಕೋಟಿ, ಕೊಡಗಿಗೆ ಎರಡೂವರೆ ಕೋಟಿ ನೀಡಲು ತೀರ್ಮಾನಿಸಲಾಗಿದೆ. ಇನ್ನು ಪಾಲಿಕೆ ಕೇಂದ್ರ […]

ಕೊಡಗು : ಮಳೆಯ ಆರ್ಭಟಕ್ಕೆ 600ಕ್ಕೂ ಹೆಚ್ಚು ಮಂದಿ ರಕ್ಷಣೆಗೆ ಮೊರೆ

Friday, August 17th, 2018
Kodagu

ಮಡಿಕೇರಿ : ಕಾವೇರಿಯ ತವರು ಕೊಡಗು ಜಿಲ್ಲೆ ಮಳೆಯ ಆರ್ಭಟಕ್ಕೆ ಅಕ್ಷರಶಃ ನಲುಗಿ ಹೋಗಿದೆ. ಅಲ್ಲಲ್ಲಿ ಗುಡ್ಡಗಳು ಕುಸಿಯುತ್ತಿದ್ದು ಶಿರಂಗಲಾ, ಮಾಂದಾಲ್ ಪಟ್ಟಿ, ಮುಕ್ಕೊಡ್ಲು,  ಹತ್ತಿಹೊಳೆ, ಕಲ್ಲೂರು, ಮುವತೊಕ್ಲು ಮೊದಲಾದ  ಗುಡ್ಡಪ್ರದೇಶದ ಜನರು  ಜಿಲ್ಲೆಯ ನಡುವೆ ಸಂಪರ್ಕ ಕಡಿತಗೊಂಡಿದ್ದು, ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಪ್ರತಿಕೂಲ ಹವಾಮಾನದಿಂದ ಹೆಲಿಕಾಪ್ಟರ್‌ ಕಾರ್ಯಾಚರಣೆ ವಿಳಂಬವಾಗಿದ್ದು, ಜಿಲ್ಲೆಯ ವಿವಿಧೆಡೆ ಅಂದಾಜು 600ಕ್ಕೂ ಹೆಚ್ಚು ಮಂದಿ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ. ಹಲವರು ಮಣ್ಣಿನ ಅಡಿ ಹಾಗೂ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಸಾವು– ನೋವು […]

ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 5 ದಿನ ಧಾರಕಾರ ಮಳೆ‌..ಹವಾಮಾನ ಇಲಾಖೆ ಮುನ್ನೆಚ್ಚರಿಕೆ!

Saturday, August 11th, 2018
mangaluru

ಮಂಗಳೂರು: ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್15 ರವರಗೆ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ‌ ತೆರಳುವಂತೆ ಸೂಚನೆ ನೀಡಲಾಗಿದೆ. ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಕರಾವಳಿ ಭಾಗದಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳೂ ಸೇರಿದಂತೆ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ಈ ಭಾಗದ ಜಲಾಶಯಗಳು […]

ನಾನು ಕೊಡಗು, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಎಲ್ಲಾ ಜಿಲ್ಲೆಗಳ ಮುಖ್ಯಮಂತ್ರಿ: ಕುಮಾರಸ್ವಾಮಿ

Saturday, July 14th, 2018
kumarswamy

ಬೆಂಗಳೂರು : ನಾನು ಜನರ ಮಧ್ಯೆ ಬದುಕುವ ಸಿಎಂ, ವಿಧಾನಸೌದದ ಮೂರನೇ ಮಹಡಿಯಲ್ಲಿ ಕೂರುವವನಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ವಿಕಲಚೇತನರ ಸೇವಾಸಂಸ್ಥೆಗಳ ಒಕ್ಕೂಟದಿಂದ ಆಯೋಜನೆಗೊಂಡಿರು ಮೈಸೂರು ಬ್ಯಾಂಕ್ ಸರ್ಕಲ್ನ ಕಾವೇರಿ ಭವನದಲ್ಲಿ ನಡೆಯುತ್ತಿರುವ ಸ್ಪಂದನ 2018 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಹಾಗೂ ಜನರ ಮಧ್ಯೆ ಎತ್ತಿಕಟ್ಟಲು ನೋಡಬೇಡಿ ಯಾರು ಬೇಕಾದರೂ ಬಂದು ನನ್ನ ಬಳಿ ಸಮಸ್ಯೆ ಹೇಳಿಕೊಳ್ಳಬಹುದು. ನನ್ನ ಶರ್ಟ್ ಹಿಡಿದು ಕೇಳಲಿ ಏನಾದರೂ ಅಗತ್ಯ ಇದ್ದರೆ. 86% ಅಂಕದೊಂದಿಗೆ […]

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗಿನ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸದ ಅನುಭವ..!

Monday, July 9th, 2018
earthqueke

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗಿನ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸದ ಅನುಭವವಾಗಿದೆ. ಮಧ್ಯಾಹ್ನ 12.50 ರ ಸಮಯದಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ, ಹರಿಹರಪಲ್ಲತಡ್ಕ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕೆಲವು ಸೆಕೆಂಡುಗಳ ಕಾಲ‌ ಭೂಮಿ ಕಂಪಿಸಿದ ಅನುಭವ ಜನರಿಗಾಗಿದೆ ಎಂದು ತಿಳಿದುಬಂದಿದೆ. ಇನ್ನು ಕೊಡಗು ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ. ಮಧ್ಯಾಹ್ನ 12.55ರ ವೇಳೆಗೆ ಕೆಲ ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವ ಆಗಿದೆ. ಮಡಿಕೇರಿ, ಸೋಮವಾರಪೇಟೆ ಸೇರಿದಂತೆ ಹಲವೆಡೆ […]