Blog Archive

ವಿಟ್ಲದ ಹಾಳೆತಟ್ಟೆ ಕಂಪನಿಯ 9ನೌಕರರಿಗೆ ಕೊರೊನಾ ಸೋಂಕು ದೃಡ, ಕಂಪೆನಿ ಸೀಲ್ ಡೌನ್

Wednesday, July 29th, 2020
Vitla Factory

ವಿಟ್ಲ : ಕೊಡಂಗಾಯಿ ಬಲಿಪಗುಳಿಯಲ್ಲಿರುವ ಇಕೋ-ಬ್ಲಿಝ್  ಕಂಪನಿಯ 9ನೌಕರರಿಗೆ ಕೊರೊನಾ ಸೋಂಕು ದೃಡ ವಾಗಿದ್ದು,  ಸುಮಾರು  300ಕ್ಕೂ ಹೆಚ್ಚಿನ ಕಾರ್ಮಿಕರಲ್ಲಿ ಆತಂಕ ಮಡುಗಟ್ಟಿದೆ. ಹಾಳೆತಟ್ಟೆ ತಯಾರಿಕೆಯಲ್ಲಿ ಅಂತರ್ರಾಷ್ಟೀಯ ಮಾರುಕಟ್ಟೆ ಹೊಂದಿರುವ ಇಕೋ-ಬ್ಲಿಝ್ ಕಂಪೆನಿಯಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯಗಳ ಸಾಕಷ್ಟು ಜನ ಕಾರ್ಮಿಕರಿದ್ದಾರೆ. ಅದೇ ರೀತಿ ಸ್ಥಳೀಯರು ಕೂಡಾ ಸಾಕಷ್ಟು ಸಂಖ್ಯೆಯಲ್ಲಿ ದುಡಿಯುತ್ತಿದ್ದಾರೆ. ಇದೀಗ 9ಕಾರ್ಮಿಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಮಂಗಳವಾರ ಕಂಪೆನಿಗೆ ಆಗಮಿಸಿದ ಟಾಸ್ಕ್ ಫೋರ್ಸ್ ಅಧಿಕಾರಿಗಳ ತಂಡ ಸೀಲ್ ಡೌನ್ ಮಾಡಿದ್ದಾರೆ. ಮುನ್ನೆಚ್ಚರಿಕೆಯ […]

ಕೊರೊನಾ ಸೋಂಕು ಜುಲೈ 25 : ದಕ್ಷಿಣ ಕನ್ನಡ ಜಿಲ್ಲೆ 218, ಉಡುಪಿ ಜಿಲ್ಲೆ182, ಕಾಸರಗೋಡು ಜಿಲ್ಲೆ 105

Saturday, July 25th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಕೊರೊನಾ ಸೋಂಕು  ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಶನಿವಾರ  140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2127 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ […]

ಕೊರೊನಾ ಸೋಂಕು ಜುಲೈ 23 : ದಕ್ಷಿಣ ಕನ್ನಡ 218, ಉಡುಪಿ 160

Friday, July 24th, 2020
corona

ಮಂಗಳೂರು : ದಕ್ಷಿಣ ಕನ್ನಡ. ಜಿಲ್ಲೆಯಲ್ಲಿ ಗುರುವಾರ  218 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೆ, ಈ ದಿನ ಜಿಲ್ಲೆಯಲ್ಲಿ 118 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 2253 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಗುರುವಾರದಂದು ಜಿಲ್ಲೆಯಲ್ಲಿ 7 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಗುರುವಾರದಂದು ಹೊಸದಾಗಿ 160 ಕೊರೊನಾ ಪ್ರಕರಣ ಪತ್ತೆಯಾಗಿವೆ. ಇಂದಿನ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2846 ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಜಿಲ್ಲೆಯಲ್ಲಿ […]

ಕೊರೊನಾ ಸೋಂಕು ಜುಲೈ 21 : ದಕ್ಷಿಣ ಕನ್ನಡ ಜಿಲ್ಲೆ 149, ಉಡುಪಿ ಜಿಲ್ಲೆ 84

Wednesday, July 22nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಜುಲೈ 21ರಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 84 […]

ಆಟಿ ಅಮಾವಾಸ್ಯೆ ದೇವಸ್ಥಾನಗಳಲ್ಲಿ ತೀರ್ಥಸ್ನಾನ ಇಲ್ಲ, ಕೊರೊನಾ ಸೋಂಕಿನ ಹಿನ್ನೆಲೆ ಪಾಲೆ ಕಷಾಯಕ್ಕೆ ಬೇಡಿಕೆ

Monday, July 20th, 2020
palekashaya

ಬಂಟ್ವಾಳ: ಆಟಿ ಅಮಾವಾಸ್ಯೆಯ ದಿನ ಪಾಲೆ (ಹಾಲೆ) ಮರದಲ್ಲಿ ವಿಶೇಷ ರೋಗ ನಿರೋಧಕ ಶಕ್ತಿ ಇದೆ ಎಂಬ ನಂಬಿಕೆ ತಲತಲಾಂತರ ದಿಂದ ಬಂದಿದೆ. ಸೂರ್ಯೋದಯದ ಮೊದಲು ಅಂದರೆ ನಸುಕಿನಲ್ಲೇ ಕಲ್ಲಿನಿಂದ ಜಜ್ಜಿ ತಂದು ಕಷಾಯ ಮಾಡಿ ಸೇವಿಸುವುದು ರೂಢಿ. ಆಷಾಢ ತಿಂಗಳಲ್ಲಿ ಭಾರಿ ಮಳೆ. ಕ್ರಿಮಿ- ಕೀಟಬಾಧೆಯಿಂದ ಆರೋಗ್ಯದ ರಕ್ಷಣೆ, ರೋಗ ನಿರೋಧಕತೆಗಾಗಿ ಪಾಲೆ (ಹಾಲೆ) ಮರದ ತೊಗಟೆಯ ಕಷಾಯ ಮಾಡಿ ಕುಡಿದರೆ ಒಳ್ಳೆಯದಂತೆ. ಔಷಧೀಯವಾಗಿ ಈ ಕಷಾಯಕ್ಕೆ ಬಹಳಷ್ಟು ಮಹತ್ವವಿರುವುದರಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಬೇಡಿಕೆ ವ್ಯಕ್ತವಾಯಿತು. ಈ ಬಾರಿ ಲಾಕ್ ಡೌನ್ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ 91, ಉಡುಪಿ ಜಿಲ್ಲೆ 72

Wednesday, July 15th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ. ಮಂಗಳವಾರ 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ 985 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 1414 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 22677 ಮಂದಿಯ ವರದಿ ನೆಗೆಟಿವ್ ಆಗಿದೆ. ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 29 ಮಂದಿಯಲ್ಲಿ ಐಎಲ್‌‌ಐ ಪ್ರಕರಣ ಪತ್ತೆಯಾಗಿದೆ. 5 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ131, ಸಾವು 4, ಉಡುಪಿ ಜಿಲ್ಲೆಯಲ್ಲಿ 53 ಸೋಂಕು

Tuesday, July 14th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 62 ಮಂದಿ ಕೊರೊನಾ ಮುಕ್ತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ, ಸೋಂಕಿತರ ಸಂಖ್ಯೆ 2361ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ  844 ಮಂದಿ ಸೋಂಕಿತರು ಗುಣಮುಖರಾದಂರಾಗಿ 1467 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಲ್ಲಿಯ ತನಕ 22589 ಮಂದಿಯ ವರದಿ ನೆಗೆಟಿವ್ ಆಗಿದೆ. ಪ್ರಾಥಮಿಕ ಸಂಪರ್ಕದಿಂದ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 10 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ […]

ಬಂಟ್ವಾಳ ತಾಲೂಕಿನ ಅಕ್ಕ ಪಕ್ಕದ ಮನೆಯ 16 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

Friday, July 10th, 2020
Bantwal Covid

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ ಇಂದು ಒಂದೇ ದಿನ 16 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಗ್ರಾಮದ ಒಂದು ಮನೆಯ 12 ಜನರಿಗೆ ಹಾಗೂ ಇನ್ನೊಂದು ಮನೆಯ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಎರಡೂ ಮನೆಗಳ ಸದಸ್ಯರಿಗೆ ಸೋಂಕು ದೃಢಪಟ್ಟಿತ್ತು. ಇವರ ಸಂಪರ್ಕದ ಕಾರಣದಿಂದ ಸೋಂಕು ದೃಢವಾಗಿದೆ ಎನ್ನಲಾಗಿದೆ. ತಾಲೂಕಿನ ಉಳಿದ ಪ್ರಕರಣಗಳ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ತಾಲೂಕಿನಲ್ಲಿ ಜು. ಎಂಟರಂದು 12, […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ- 83, ಉಡುಪಿ ಜಿಲ್ಲೆ- 28, ಕಾಸರಗೋಡು – 13

Tuesday, July 7th, 2020
corona-district

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 83 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,359  ಕ್ಕೆ ಏರಿಕೆಯಾಗಿದೆ. ಮಂಗಳವಾರ ಓರ್ವ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 26 ಮಂದಿ ಸಾವನ್ನಪ್ಪಿದ್ದಾರೆ. 83 ಮಂದಿಯ ಪೈಕಿ 48 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, ಇಬ್ಬರಿಗೆ ದ್ವಿತೀಯ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದ್ದರೆ 20 ಐಎಲ್‌ಐ ಹಾಗೂ 1 ಎಸ್‌ಎಆರ್‌ಐ ಪ್ರಕರಣವಾಗಿದೆ. ಇಬ್ಬರು ಚಿಕ್ಕಮಗಳೂರು ಜಿಲ್ಲೆಗೆ ಹೋಗಿ […]

ಕೊರೊನಾ ಸೋಂಕು ಪ್ರಕರಣ : ದಕ್ಷಿಣ ಕನ್ನಡ ಜಿಲ್ಲೆ- 147, ಉಡುಪಿ ಜಿಲ್ಲೆ- 45

Sunday, July 5th, 2020
corona mangalore udupi

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ರವಿವಾರ ಒಂದೇ ದಿನ 147 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜೂನ್ 5 ರಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ರವಿವಾರದಂದು ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ರವಿವಾರದಂದು  ಆ ಮೂಲಕ 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 666 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]