Blog Archive

ಎರಡನೇ ಹಂತದ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಿಸಿದ ಸರಕಾರ

Friday, May 21st, 2021
BS Yedyurappa

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯ ಎರಡನೇ ಹಂತದ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ದಿನಗಳ ಕಾಲ ವಿಸ್ತರಿಸಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಹಿಂದೆ ಜಾರಿಗೊಳಿಸಿರುವ ಮಾರ್ಗಸೂಚಿಯೇ ಅನ್ವಯವಾಗಲಿದೆ ಎಂದು ಸಿಎಂ ಬಿ.ಎಸ್. […]

ಇವಳ ಗಂಡನ ನೀವು ಎಲ್ಲಿಯಾದರೂ ಕಂಡಿರಾ? 

Friday, May 14th, 2021
Ambika

ಕೋಲಾರ: ಕೊರೋನಾ ಅಲೆಯಲ್ಲಿ ಬೀದಿ ಬೀದಿಗಳು ನಿರ್ಜನ. ಕಾಲೇಜು, ಕಚೇರಿಗಳೂ ಬಂದಾಗಿ ನಿಂತ ದೃಶ್ಯ. ಒಬ್ಬರನೊಬ್ಬರ ಮುಖ ನೋಡಲೂ ಅಳುಕುವ ಪರಿಸ್ಥಿತಿ. ಸಾರಿಗೆ ಸಂಚಾರವೂ ಇಲ್ಲ. ಮಾತನಾಡಲು ಇನ್ನೊಬ್ಬ ಎದುರು ಕಾಣ ಸಿಗುತ್ತಿಲ್ಲ. ಕೊರೋನಾ ಸೋಂಕಿನ ಭೀತಿಯಲ್ಲಿ ಮನುಜ ತನ್ನ ಸರಿಸಾಟಿ ಮನುಜನನ್ನೇ ದೂರ ಇಟ್ಟು ಬಿಟ್ಟಿರುವ ದುರಂತ ಪರಿಸ್ಥಿತಿ! ಆದರೆ ಇಂಥ ಅತ್ಯಂತ ಕ್ಲಿಷ್ಟ ದಿನಗಳಲ್ಲಿಯೂ ಇಲ್ಲೊಬ್ಬಾಕೆ ತನ್ನ ಗಂಡನನ್ನು ಹುಡುಕಿಕೊಂಡು ಊರೂರು ಅಲೆಯುತ್ತಿರುವ ಕತೆ ಅತ್ಯಂತ ವಿಧ್ರಾವಕ ಎನಿಸುತ್ತದೆ. ಸ್ವಯಂಕೃತ ಅಪರಾಧಕ್ಕೆ ಶಿಕ್ಷೆಯನ್ನೂ ತಾನೇ […]

‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಎಂದು ಹೇಳಿ, ಸರಕಾರ ಈಗ ಮಾಡುತ್ತಿರುವುದೇನು ?

Friday, April 23rd, 2021
Market Bundh

ಮಂಗಳೂರು : ಕೊರೋನಾ ಮಾರ್ಗ ಸೂಚಿ ಪ್ರಕಾರ ಸರಕಾರ ಕ್ಷಣಕ್ಕೊಂದು ನಿರ್ಧಾರ ತಳೆದು ಜನರನ್ನು ಸಂಪೂರ್ಣ ಗೊಂದಲ ಹಾಗೂ ಭಯಭೀತ ಗೊಳಿಸಿದ್ದು, ಸರಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಹೇಳಿದ್ದು, ಇದೀಗ ಹಿಂಬಾಗಿಲ ಮೂಲಕ ಸಾರ್ವಜನಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಸಂಪೂರ್ಣ ಲಾಕ್ ಡೌನ್ ಸ್ಥಿತಿಗೆ ತಂದಿದೆ. ಕೊರೋನಾ ನಿಯಂತ್ರಣ ಇರುವ ಪ್ರದೇಶದಲ್ಲಿ ಕೂಡ ವ್ಯವಹಾರ ಮಳಿಗೆಗಳನ್ನು ಏಕಾಏಕಿ ಬಲವಂತ ಮುಚ್ಚಲು ಆರಂಭಿಸಿದೆ. ಸರಕಾರದ ಈ ಕ್ರಮ ಮುಂದಿನ […]

10 ಸಾವಿರ ರೂಪಾಯಿಗೆ ಕೊರೋನಾ ನಕಲಿ ಇಂಜೆಕ್ಷನ್

Friday, April 16th, 2021
corona Injection

ಬೀದರ್ : ಮಾರುಕಟ್ಟೆಯಲ್ಲಿ ಕೊರೋನಾ ನಕಲಿ ಇಂಜೆಕ್ಷನ್ ಬಂದಿದ್ದು, 10 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ ಎಂಬುದಾಗಿಯೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣ ಕ್ರಮ ಕುರಿತಂತೆ ಚರ್ಚಿಸಲು ಸಿಎಂ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಅಲ್ಲಿ ಏನ್ ಚರ್ಚೆ ಮಾಡ್ತಾರೋ ನೋಡೋಣ. ತಮ್ಮ ತಪ್ಪು ಮರೆ ಮಾಚಲು ಅಷ್ಟೇ ಸರ್ವ ಪಕ್ಷಗಳ ಸಭೆ ಎಂದರು. ರಾಜ್ಯದಲ್ಲಿ ಜನರು ಕೊರೋನಾ ಸೋಂಕಿನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಔಷಧಿ […]

ಬಜೆಟ್ನಲ್ಲಿ ಕೊರೋನಾದ ಹೆಸರಲ್ಲಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ : ಯು.ಟಿ. ಖಾದರ್

Wednesday, February 10th, 2021
ut-khader

ಮಂಗಳೂರು : ಕೇಂದ್ರ ಸರಕಾರ ಮಂಡನೆ ಮಾಡಿರುವ ಬಜೆಟ್ನಲ್ಲಿ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಯಾವುದೇ ಯೋಜನೆಗಳಿಲ್ಲ. ಪ್ರಕೃತಿ ವಿಕೋಪಕ್ಕೆ ಯಾವುದೇ ಪರಿಹಾರ ನೀಡಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಸೇಲ್ ಇಂಡಿಯಾ, ಲೂಟ್ ಇಂಡಿಯಾ ಬಜೆಟ್ ಅನ್ನು ಕೇಂದ್ರ ಸರಕಾರ ಮಂಡಿಸಿದೆ.  ಕೊರೋನಾದ ಹೆಸರಲ್ಲಿ ಜನರಿಗೆ ತೆರಿಗೆ ಹಾಕಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಜೆಟ್ ನಲ್ಲಿ ಕರ್ನಾಟಕಕ್ಕೆ […]

ಕೊರೋನಾದ ನಡುವೆ ದೀಪಾವಳಿಯನ್ನು ಆಚರಿಸುವುದು ಹೇಗೆ ?

Friday, November 13th, 2020
shail ahet

ಮಂಗಳೂರು  : ಕೊರೋನಾದ ನಡುವೆ ದೀಪಾವಳಿಯನ್ನು ಆಚರಿಸುವುದರೊಂದಿಗೆ ಸರಳತೆ ಮತ್ತು ಎಚ್ಚರಿಕೆ ಪಾಠವನ್ನು ನಾವು ಕಲಿಯಬೇಕಿದೆ.  ಈ ಬಾರಿ ದೀಪಾವಳಿಯನ್ನು ಆಚರಿಸುವಾಗ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವುದರೊಂದಿಗೆ ಪರಿಸರಕ್ಕೆ ಹಾನಿಯಾಗದ ಹಸಿರು ಪಟಾಕಿಗಳನ್ನು ಸುಡಲು ಸರಕಾರ ಆದೇಶಿಸಿದೆ. ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ವರ್ಷ ದೀಪಾವಳಿಯನ್ನು ನವೆಂಬರ್‌ 14 ರಿಂದ 16 ರವರೆಗೆ  ಆಚರಿಸಲಾಗುತ್ತಿದೆ. ದೀಪಗಳ ಹಬ್ಬ ಎಂದು ಕರೆಯಲಾಗುವ ಈ ಹಬ್ಬವು ಚಂದ್ರಮಾನ ಪಂಚಾಂಗದ ಪ್ರಕಾರ ಕಾರ್ತಿಕ ಮಾಸದಲ್ಲಿ ಅಂದರೆ […]

ಮಗಳ ಪ್ರಯತ್ನಕ್ಕೆ ಸರ್ಕಾರ ಸ್ಪಂದಿಸಿ ದರೂ, ಕೊರೋನಾ ಆ ಶಿಕ್ಷಕಿಯ ಪ್ರಾಣವನ್ನೇ ಕಸಿದುಕೊಂಡಿತು

Friday, October 16th, 2020
Padamkshi

ಮೂಡಬಿದಿರೆ: ವಿವಿಧ ಸ್ಥಳಗಳಿಗೆ ಭೇಟಿ ನೀಡುವ ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತಿದ್ದ  ಪ್ರೌಢಶಾಲೆಯ  ಶಿಕ್ಷಕಿಯೊಬ್ಬರು  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

ವಾಟ್ಸಪ್ ಗ್ರೂಪ್ ನಲ್ಲಿ ಹರಿದಾಡುತ್ತಿದೆ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವಿನ ಸುದ್ದಿ

Friday, August 28th, 2020
Kalladka Prabhakara Bhat

ಮಂಗಳೂರು :  ಆರ್.ಎಸ್.ಎಸ್. ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಆರ್ ಎಸ್ ಎಸ್ ಟೆರರಿಸ್ಟ್ ಗ್ರೂಪ್ ಎಂಬ ಹೆಸರಿನ ವಾಟ್ಸಪ್ ಗ್ರೂಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ವಿದೇಶಿ ಮೂಲದ ಸಂಖ್ಯೆಯಲ್ಲಿ ಪ್ರಭಾಕರ ಭಟ್ ಸಾವು ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ  ಪ್ರತಿಕ್ರಿಯಿಸಿದ ಕಲ್ಲಡ್ಕ ಪ್ರಭಾಕರ ಭಟ್, ನಾನು ಆರೋಗ್ಯವಾಗಿದ್ದೇನೆ, ಯಾವುದೇ ತೊಂದರೆಯಿಲ್ಲ. ಪುತ್ತೂರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ, ಸುಳ್ಳು ಸುದ್ದಿ ಹಬ್ಬಿರುವ ಬಗ್ಗೆ ಮಿತ್ರರೊಬ್ಬರಿಂದ ಮಾಹಿತಿ ಸಿಕ್ಕಿತು. ಕೆಲವೊಂದು ಜನರಿಗೆ  ಇಂಥ ಕೆಲಸ […]

‘ಕೊರೋನಾ ದಂತಹ ಆಪತ್ಕಾಲದಲ್ಲಿ ‘ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ರಾತ್ರಿ 12 ಗಂಟೆಗೆ ಹೇಗೆ ಮಾಡಬೇಕು ?

Tuesday, August 11th, 2020
krishnanshtami

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ ವರ್ಷ ಕೊರೋನಾ ವಿಷಾಣುಗಳ ಸಂಕಟದಿಂದಾಗಿ ಸಂಚಾರ ಸಾರಿಗೆ ನಿರ್ಬಂಧವಿದ್ದುದರಿಂದ ಮನೆಯಿಂದ ಹೊರಗೆ ಬರಲು ಅನೇಕ ಬಂಧನಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಎಲ್ಲರೂ ಸೇರಿ ಈ ಉತ್ಸವವನ್ನು ಆಚರಿಸುವಲ್ಲಿ ಮಿತಿ ಬಂದಿದೆ. ಕೊರೋನಾ ವೈರಾಣುಗಳ ಹರಡುವಿಕೆಯಿಂದಾಗಿ […]